AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Madikeri: ಅರಣ್ಯ ಸಿಬ್ಬಂದಿಯಿಂದಲೇ ಮರಗಳ್ಳತನ; ರಕ್ಷಕನೇ ಇಲ್ಲಿ ಭಕ್ಷಕ!

ಕೊಡಗಿನಲ್ಲಿ ಅರಣ್ಯ ಸಿಬ್ಬಂದಿಯೇ ಮರಗಳ್ಳತನದಲ್ಲಿ ತೊಡಗಿರುವುದು ಬಹಿರಂಗವಾಗಿದೆ. ಸೋಮವಾರಪೇಟೆ ಬಳಿ ಮೀಸಲು ಅರಣ್ಯದಲ್ಲಿ ಅಪಾರ ಬೆಲೆ ಬಾಳುವ ತೇಗದ ಮರಗಳನ್ನು ಕತ್ತರಿಸಿ ಸಾಗಿಸುವ ಯತ್ನ ನಡೆದಿತ್ತು. ಈ ವೇಳೆ ನಡೆದ ಇಲಾಖಾ ಕಾರ್ಯಾಚರಣೆಯಲ್ಲಿ ಆಘಾತಕಾರಿ ವಿಷಯ ಬಯಲಿಗೆ ಬಂದಿದೆ. ಪ್ರಕರಣ ಸಂಬಂಧ ಆರ್​​ಆರ್​​ಟಿ ಸಿಬ್ಬಂದಿ ಸಹಿತ ಆರು ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

Madikeri: ಅರಣ್ಯ ಸಿಬ್ಬಂದಿಯಿಂದಲೇ ಮರಗಳ್ಳತನ; ರಕ್ಷಕನೇ ಇಲ್ಲಿ ಭಕ್ಷಕ!
ವಶಪಡಿಸಿಕೊಳ್ಳಲಾಗಿರುವ ಮರದ ದಿಮ್ಮಿಗಳು.
Gopal AS
| Edited By: |

Updated on:Dec 23, 2025 | 6:25 PM

Share

ಮಡಿಕೇರಿ, ಡಿಸೆಂಬರ್​​ 23: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಕೊಡಗಿನಲ್ಲಿ ಅಕ್ಷರಶಃ ಸತ್ಯವಾಗಿದೆ. ಕಾಡಿನಲ್ಲಿರುವ ಅಪಾರ ಬೆಲೆ ಬಾಳುವ ಮರಗಳ ರಕ್ಷಣೆ ಕೆಲಸ ಮಾಡಬೇಕಿದ್ದ ಸಿಬ್ಬಂದಿಯೇ ಅವುಗಳ ಮಾರಣ ಹೋಮ ಮಾಡಿ ಕಳ್ಳತನ ನಡೆಸುತ್ತಿದ್ದ ಎಂಬ ಆಘಾತಕಾರಿ ವಿಷಯ ಇಲಾಖೆ ಕಾರ್ಯಾಚರಣೆ ವೇಳೆ ಬೆಳಕಿಗೆ ಬಂದಿದೆ.  ಮರಗಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಹಿಡಿಯಲು ಹೋದ ಅರಣ್ಯ ಇಲಾಖೆಯ ಸಿಬ್ಬಂದಿಯೇ ಘಟನೆಯಿಂದಾಗಿ ಶಾಕ್​​ ಆಗಿದ್ದಾರೆ.

ಘಟನೆ ಏನು?

ಮರಗಳ್ಳತನದ ಉದ್ದೇಶದಿಂದ ಗ್ಯಾಂಗೊಂದು ಸೋಮವಾರಪೇಟೆ ತಾಲೂಕಿನ ಕಾಜೂನು ಬಳಿ ಮೀಸಲು ಅರಣ್ಯದಲ್ಲಿ 7 ತೇಗದ ಮರ ಕಡಿದು ಉರುಳಿಸಿರೋದು ಗಸ್ತು ಸಂದರ್ಭದಲ್ಲಿ ಅರಣ್ಯ ಸಿಬ್ಬಂದಿ ಗಮನಕ್ಕೆ ಬಂದಿತ್ತು. ಹೀಗಾಗಿ ಆರೋಪಿಗಳ ಸೆರೆಗೆ ಸಿಬ್ಬಂದಿ 4 ದಿನಗಳ ಕಾಲ ಕಾದು ಕುಳಿತಿದ್ದರು. ಡಿಸೆಂಬರ್ 12ರಂದು ಮಧ್ಯರಾತ್ರಿ ಮರಗಳ್ಳರು ಅರಣ್ಯಕ್ಕೆ ಎಂಟ್ರಿಕೊಟ್ಟಿದ್ದು, ಮರಗಳ್ಳರನ್ನು ಹಿಡಿಯುವ ಸಂದರ್ಭದಲ್ಲಿ ಘರ್ಷಣೆಯಾಗಿತ್ತು. ಈ ವೇಳೆ ಅಧಿಕಾರಿ ಚಂದ್ರಶೇಖರ್ ಗಾಳಿಯಲ್ಲಿ 2 ಸುತ್ತು ಗುಂಡುಹಾರಿಸಿದ್ದರು. ಘಟನೆಯಲ್ಲಿ ಲೋಡರ್​​ ಸಂತೋಷ್​​ನನ್ನು ಸಿಬ್ಬಂದಿ ಬಂಧಿಸಿದ್ದರೆ, ಉಳಿದ ನಾಲ್ವರು ಆರೋಪಿಗಳು ಎಸ್ಕೇಪ್​​ ಆಗಿದ್ದಾರೆ. ಎಡವಾರೆ ಮೀಸಲು ಅರಣ್ಯದಲ್ಲಿ ಒಟ್ಟು 25 ತೇಗದ ಮರಗಳು ಕಳವಾಗಿದೆ ಎನ್ನಲಾಗಿದೆ. ಕತ್ತರಿಸಿದ್ದ 7 ತೇಗದ ಮರಗಳ ಜೊತೆ ಪಿಕ್​ಅಪ್ ವಾಹನ ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: ಚೆಂದುಳ್ಳಿ ಚೆಲುವೆಯ ಮಾತಿಗೆ ಮರುಳಾಗಿ ಹೋಗಿದ್ದವ ರಸ್ತೆಯಲ್ಲಿ ಬೆತ್ತಲಾಗಿ ನಿಂತ; ಆಗಿದ್ದೇನು?

ಬಂಧಿತ ಸಂತೋಷ್ ವಿಚಾರಣೆ ವೇಳೆ ಮರಗಳ್ಳರಿಗೆ ಸಹಕಾರ ನೀಡುತ್ತಿದ್ದ ಆರ್​ಆರ್​ಟಿ ಸಿಬ್ಬಂದಿ ವಿನೋದ್ ಪಾತ್ರ ಬಯಲಾಗಿದೆ. ಅರಣ್ಯದ ಬಳಿ ಬೈಕ್​ನಲ್ಲಿ ಓಡಾಡಿ ಈತ ಮಾಹಿತಿ ನೀಡುತ್ತಿದ್ದ ಎನ್ನಲಾಗಿದ್ದು, ಮರಗಳ್ಳತನ ಬಹಿರಂಗವಾಗ್ತಿದ್ದಂತೆ ವಿನೋದ್ ತಲೆಮರೆಸಿಕೊಂಡಿದ್ದಾನೆ. ಘಟನೆ ಸಂಬಂಧ ಆರ್​ಆರ್​ಟಿ ಸಿಬ್ಬಂದಿ ವಿನೋದ್ ಸೇರಿದಂತೆ 6 ಜನರ ವಿರುದ್ಧ FIR ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಅರಣ್ಯ ಇಲಾಖೆ ಸಿಬ್ಬಂದಿ ಶೋಧ ನಡೆಸುತ್ತಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 6:05 pm, Tue, 23 December 25

Follow Us
Gopal AS
Gopal AS
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?