AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Biodiversity Medicinal Park: ರಾಜ್ಯದ ಮೊದಲ ಜೀವವೈವಿಧ್ಯ ಔಷಧ ಉದ್ಯಾನ ಕೊಡಗಿನಲ್ಲಿ ಆರಂಭ

ಕರ್ನಾಟಕ ಜೀವ ವೈವಿಧ್ಯ ಮಂಡಳಿ ಹಾಗೂ ಅರಣ್ಯ ಇಲಾಖೆ ವತಿಯಿಂದ ಕೊಡಗು ಜಿಲ್ಲೆಯ ಹಾರಂಗಿಯಲ್ಲಿ ರಾಜ್ಯದ ಮೊದಲ ಜೀವವೈವಿಧ್ಯ ಔಷಧ ಉದ್ಯಾನ ನಿರ್ಮಾಣವಾಗುತ್ತಿದೆ. ಶುಕ್ರವಾರ ಉದ್ಯಾನ ಕಾಮಗಾರಿಗೆ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ಶಂಕುಸ್ಥಾಪನೆ ನೆರವೇರಿಸಿದರು.

Biodiversity Medicinal Park: ರಾಜ್ಯದ ಮೊದಲ ಜೀವವೈವಿಧ್ಯ ಔಷಧ ಉದ್ಯಾನ ಕೊಡಗಿನಲ್ಲಿ ಆರಂಭ
ರಾಜ್ಯದ ಮೊದಲ ಜೀವವೈವಿಧ್ಯ ಔಷಧ ಉದ್ಯಾನ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Mar 18, 2023 | 7:16 AM

Share

ಮುಖ್ಯಾಂಶಗಳು

  • ಕೊಡಗು ಜಿಲ್ಲೆಯ ಹಾರಂಗಿಯಲ್ಲಿ ರಾಜ್ಯದ ಮೊದಲ ಜೀವವೈವಿಧ್ಯ ಔಷಧ ಉದ್ಯಾನಕ್ಕೆ ಶಂಕುಸ್ಥಾಪನೆ
  • ಕರ್ನಾಟಕ ಜೀವ ವೈವಿಧ್ಯ ಮಂಡಳಿ ಹಾಗೂ ಅರಣ್ಯ ಇಲಾಖೆ ವತಿಯಿಂದ ನಿರ್ಮಾಣ ಕಾರ್ಯ ಆರಂಭ
  • ಶಂಕುಸ್ಥಾಪನೆ ನೆರವೇರಿಸಿದ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್

ಮಡಿಕೇರಿ: ಕರ್ನಾಟಕ ಜೀವ ವೈವಿಧ್ಯ ಮಂಡಳಿ ಹಾಗೂ ಅರಣ್ಯ ಇಲಾಖೆ ವತಿಯಿಂದ ಕೊಡಗು (Kodagu) ಜಿಲ್ಲೆಯ ಹಾರಂಗಿಯಲ್ಲಿ ರಾಜ್ಯದ ಮೊದಲ ಜೀವವೈವಿಧ್ಯ ಔಷಧ ಉದ್ಯಾನ (Biodiversity Medicinal Park) ನಿರ್ಮಾಣವಾಗುತ್ತಿದೆ. ನಿನ್ನೆ (ಮಾ.17) ಉದ್ಯಾನ ಕಾಮಗಾರಿಗೆ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ಶಂಕುಸ್ಥಾಪನೆ ನೆರವೇರಿಸಿದರು. ಔಷಧೀಯ ಸಸ್ಯಗಳನ್ನು ಬೆಳೆಸಿ, ಅವುಗಳ ಮಹತ್ವವನ್ನು ಸಾರ್ವಜನಿಕರು ಹಾಗೂ ಪ್ರವಾಸಿಗರಿಗೆ ತಿಳಿಸುವ ನಿಟ್ಟಿನಲ್ಲಿ 2.5 ಹೆಕ್ಟೇರ್ ಪ್ರದೇಶದಲ್ಲಿ ‘ಜೀವ ವೈವಿಧ್ಯ ಔಷಧ ಉದ್ಯಾನ’ ನಿರ್ಮಿಸಲು ಮಂಡಳಿ ಮುಂದಾಗಿದೆ.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಅಪ್ಪಚ್ಚು ರಂಜನ್ (MLA Appachu Ranja) ಉದ್ಯಾನವನ ನಿರ್ಮಾಣಕ್ಕೆ ಹಾರಂಗಿ ಉತ್ತಮವಾದ ಜಾಗವಾಗಿದೆ. ಭಾರತ ವಿವಿಧ ಔಷಧೀಯ ಗಿಡಮೂಲಿಕೆಗಳ ರಫ್ತು ಮಾಡುವ ದೇಶ. ಹೊಸ ಜೀವವೈವಿಧ್ಯ ಉದ್ಯಾನವನಿಂದ ಸಾಕಷ್ಟು ಅನುಕೂಲವಾಗಲಿದೆ. ಶೀಘ್ರದಲ್ಲೇ ಭಾಗಮಂಡಲದಲ್ಲಿಯೂ ಔಷಧೀಯ ಗಿಡಮೂಲಿಕೆಗಳ ಉದ್ಯಾನವನವನ್ನು ಸ್ಥಾಪಿಸಲಾಗುವುದು ಎಂದು ಹೇಳಿದರು.

ಮಾನವನಿಗೆ ಕಾಡುತ್ತಿರುವ ರೋಗಗಳನ್ನು ಗುಣಪಡಿಸಲು ಔಷಧೀಯ ಸಸ್ಯಗಳ ಬಳಕೆ ಅವಶ್ಯವಾಗಿದೆ. ಪ್ರತಿಯೊಬ್ಬರೂ ಹೆಚ್ಚು ಗಿಡಗಳನ್ನು ನೆಟ್ಟು ಸಂರಕ್ಷಿಸಬೇಕು. ಭಾರತೀಯರು ಪ್ರಕೃತಿ ಆರಾಧಕರು. ಈ ಮೊದಲೆಲ್ಲ ವಿದೇಶಿಗರು ನಮ್ಮ ಸಂಸ್ಕೃತಿಯನ್ನು ಲೇವಡಿ ಮಾಡಿಕೊಳ್ಳುತ್ತಿದ್ದರು. ಆದರೆ ಇಂದು ಪ್ರಕೃತಿ ಆರಾಧನೆಯ ಮಹತ್ವ ವಿದೇಶಿಗರಿಗೆ ಅರಿವಾಗಿದೆ. ಕೊಡಗಿನಲ್ಲಿ ಪ್ರತಿ ಊರಿನಲ್ಲೂ ದೇವರ ಕಾಡುಗಳು ಇವೆ. ಹಿಂದಿನಿಂದಲೂ ಆ ಕಾಡುಗಳನ್ನು ಸಂರಕ್ಷಿಸಿಕೊಂಡು ಬರಲಾಗುತ್ತಿದೆ. ಈ ಕಾಡುಗಳಲ್ಲೂ ಅಪಾರ ಔಷಧೀಯ ಗಿಡಗಳು, ಜೀವ ವೈವಿಧ್ಯಗಳಿವೆ ಎಂದು ತಿಳಿಸಿದರು.

ಇದನ್ನೂ ಓದಿ: ಇನ್ನು ಮನೆ ಬಾಗಿಲಿಗೇ ಬರಲಿದೆ ಭಗಂಡೇಶ್ವರ, ತಲಕಾವೇರಿ ದೇಗುಲಗಳ ಪ್ರಸಾದ

ಕೊಡಗಿನಲ್ಲಿ ಮಾದರಿ ಔಷಧ ಉದ್ಯಾನ ನಿರ್ಮಿಸಲು ಮಂಡಳಿ ಮಾಸ್ಟರ್ ಪ್ಲಾನ್ ಮಾಡಿದೆ. ಜಿಲ್ಲೆಯಲ್ಲಿ ಕಂಡುಬರುವ ಸಮೃದ್ಧ ಸಸ್ಯ ಸಂಕುಲವನ್ನು ಸಂರಕ್ಷಿಸಲು ಜಿಲ್ಲೆಯಲ್ಲಿ ಉದ್ಯಾನವನ ಆರಂಭಿಸಲಾಗುತ್ತಿದೆ ಎಂದು ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಹೇಳಿದರು.

ಜಿಲ್ಲೆಯ ಪ್ರತಿ ಪಂಚಾಯಿತಿಗಳಲ್ಲಿ ಜೈವಿಕ ವೈವಿಧ್ಯ ಉದ್ಯಾನವನಗಳನ್ನು ಸ್ಥಾಪಿಸಲು ಮಂಡಳಿ ಉದ್ದೇಶಿಸಿದೆ. ಕೂರ್ಗ್ ಮ್ಯಾಂಡರಿನ್ ಒಂದು ಕಾಲದಲ್ಲಿ ಜಿಲ್ಲೆಯ ವಿಶೇಷ ಸಸ್ಯವಾಗಿತ್ತು. ಆದರೆ, ಅಸ್ತಿತ್ವ ಕಳೆದುಕೊಂಡಿದ್ದು, ಈ ತಳಿಯನ್ನು ಉತ್ತೇಜಿಸಲು ಸಂಶೋಧನೆ ನಡೆಸಲಾಗುತ್ತಿದೆ ಎಂದರು.

ವಿಶ್ವದ ಹನ್ನೆರಡು ಜೀವವೈವಿಧ್ಯ ತಾಣಗಳಲ್ಲಿ ಪಶ್ಚಿಮಘಟ್ಟ ಪ್ರದೇಶವು ಪ್ರಮುಖ ಸ್ಥಳವಾಗಿದೆ. “ಪಶ್ಚಿಮ ಘಟ್ಟಗಳ ವ್ಯಾಪ್ತಿಯಲ್ಲಿ ಶೇ.70 ರಷ್ಟು ಔಷಧೀಯ ಸಸ್ಯಗಳಿವೆ. ಹಿಮಾಲಯ ಮತ್ತು ಪಶ್ಚಿಮ ಘಟ್ಟಗಳು ಇಲ್ಲದಿದ್ದರೆ ಭಾರತ ಮರುಭೂಮಿಯಾಗುತ್ತಿತ್ತು. ಅಲ್ಲದೇ ಪಶ್ಚಿಮಘಟ್ಟದಲ್ಲಿ ಹಲವು ನದಿಗಳು ಹುಟ್ಟಿಕೊಂಡಿವೆ” ಎಂದು ಕೊಡಗು ವಿಭಾಗದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬಿ.ಎನ್.ನಿರಂಜನ ಮೂರ್ತಿ ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:14 am, Sat, 18 March 23

Follow Us
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ