AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Biodiversity Medicinal Park: ರಾಜ್ಯದ ಮೊದಲ ಜೀವವೈವಿಧ್ಯ ಔಷಧ ಉದ್ಯಾನ ಕೊಡಗಿನಲ್ಲಿ ಆರಂಭ

ಕರ್ನಾಟಕ ಜೀವ ವೈವಿಧ್ಯ ಮಂಡಳಿ ಹಾಗೂ ಅರಣ್ಯ ಇಲಾಖೆ ವತಿಯಿಂದ ಕೊಡಗು ಜಿಲ್ಲೆಯ ಹಾರಂಗಿಯಲ್ಲಿ ರಾಜ್ಯದ ಮೊದಲ ಜೀವವೈವಿಧ್ಯ ಔಷಧ ಉದ್ಯಾನ ನಿರ್ಮಾಣವಾಗುತ್ತಿದೆ. ಶುಕ್ರವಾರ ಉದ್ಯಾನ ಕಾಮಗಾರಿಗೆ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ಶಂಕುಸ್ಥಾಪನೆ ನೆರವೇರಿಸಿದರು.

Biodiversity Medicinal Park: ರಾಜ್ಯದ ಮೊದಲ ಜೀವವೈವಿಧ್ಯ ಔಷಧ ಉದ್ಯಾನ ಕೊಡಗಿನಲ್ಲಿ ಆರಂಭ
ರಾಜ್ಯದ ಮೊದಲ ಜೀವವೈವಿಧ್ಯ ಔಷಧ ಉದ್ಯಾನ
ವಿವೇಕ ಬಿರಾದಾರ
|

Updated on:Mar 18, 2023 | 7:16 AM

Share

ಮಡಿಕೇರಿ: ಕರ್ನಾಟಕ ಜೀವ ವೈವಿಧ್ಯ ಮಂಡಳಿ ಹಾಗೂ ಅರಣ್ಯ ಇಲಾಖೆ ವತಿಯಿಂದ ಕೊಡಗು (Kodagu) ಜಿಲ್ಲೆಯ ಹಾರಂಗಿಯಲ್ಲಿ ರಾಜ್ಯದ ಮೊದಲ ಜೀವವೈವಿಧ್ಯ ಔಷಧ ಉದ್ಯಾನ (Biodiversity Medicinal Park) ನಿರ್ಮಾಣವಾಗುತ್ತಿದೆ. ನಿನ್ನೆ (ಮಾ.17) ಉದ್ಯಾನ ಕಾಮಗಾರಿಗೆ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ಶಂಕುಸ್ಥಾಪನೆ ನೆರವೇರಿಸಿದರು. ಔಷಧೀಯ ಸಸ್ಯಗಳನ್ನು ಬೆಳೆಸಿ, ಅವುಗಳ ಮಹತ್ವವನ್ನು ಸಾರ್ವಜನಿಕರು ಹಾಗೂ ಪ್ರವಾಸಿಗರಿಗೆ ತಿಳಿಸುವ ನಿಟ್ಟಿನಲ್ಲಿ 2.5 ಹೆಕ್ಟೇರ್ ಪ್ರದೇಶದಲ್ಲಿ ‘ಜೀವ ವೈವಿಧ್ಯ ಔಷಧ ಉದ್ಯಾನ’ ನಿರ್ಮಿಸಲು ಮಂಡಳಿ ಮುಂದಾಗಿದೆ.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಅಪ್ಪಚ್ಚು ರಂಜನ್ (MLA Appachu Ranja) ಉದ್ಯಾನವನ ನಿರ್ಮಾಣಕ್ಕೆ ಹಾರಂಗಿ ಉತ್ತಮವಾದ ಜಾಗವಾಗಿದೆ. ಭಾರತ ವಿವಿಧ ಔಷಧೀಯ ಗಿಡಮೂಲಿಕೆಗಳ ರಫ್ತು ಮಾಡುವ ದೇಶ. ಹೊಸ ಜೀವವೈವಿಧ್ಯ ಉದ್ಯಾನವನಿಂದ ಸಾಕಷ್ಟು ಅನುಕೂಲವಾಗಲಿದೆ. ಶೀಘ್ರದಲ್ಲೇ ಭಾಗಮಂಡಲದಲ್ಲಿಯೂ ಔಷಧೀಯ ಗಿಡಮೂಲಿಕೆಗಳ ಉದ್ಯಾನವನವನ್ನು ಸ್ಥಾಪಿಸಲಾಗುವುದು ಎಂದು ಹೇಳಿದರು.

ಮಾನವನಿಗೆ ಕಾಡುತ್ತಿರುವ ರೋಗಗಳನ್ನು ಗುಣಪಡಿಸಲು ಔಷಧೀಯ ಸಸ್ಯಗಳ ಬಳಕೆ ಅವಶ್ಯವಾಗಿದೆ. ಪ್ರತಿಯೊಬ್ಬರೂ ಹೆಚ್ಚು ಗಿಡಗಳನ್ನು ನೆಟ್ಟು ಸಂರಕ್ಷಿಸಬೇಕು. ಭಾರತೀಯರು ಪ್ರಕೃತಿ ಆರಾಧಕರು. ಈ ಮೊದಲೆಲ್ಲ ವಿದೇಶಿಗರು ನಮ್ಮ ಸಂಸ್ಕೃತಿಯನ್ನು ಲೇವಡಿ ಮಾಡಿಕೊಳ್ಳುತ್ತಿದ್ದರು. ಆದರೆ ಇಂದು ಪ್ರಕೃತಿ ಆರಾಧನೆಯ ಮಹತ್ವ ವಿದೇಶಿಗರಿಗೆ ಅರಿವಾಗಿದೆ. ಕೊಡಗಿನಲ್ಲಿ ಪ್ರತಿ ಊರಿನಲ್ಲೂ ದೇವರ ಕಾಡುಗಳು ಇವೆ. ಹಿಂದಿನಿಂದಲೂ ಆ ಕಾಡುಗಳನ್ನು ಸಂರಕ್ಷಿಸಿಕೊಂಡು ಬರಲಾಗುತ್ತಿದೆ. ಈ ಕಾಡುಗಳಲ್ಲೂ ಅಪಾರ ಔಷಧೀಯ ಗಿಡಗಳು, ಜೀವ ವೈವಿಧ್ಯಗಳಿವೆ ಎಂದು ತಿಳಿಸಿದರು.

ಇದನ್ನೂ ಓದಿ: ಇನ್ನು ಮನೆ ಬಾಗಿಲಿಗೇ ಬರಲಿದೆ ಭಗಂಡೇಶ್ವರ, ತಲಕಾವೇರಿ ದೇಗುಲಗಳ ಪ್ರಸಾದ

ಕೊಡಗಿನಲ್ಲಿ ಮಾದರಿ ಔಷಧ ಉದ್ಯಾನ ನಿರ್ಮಿಸಲು ಮಂಡಳಿ ಮಾಸ್ಟರ್ ಪ್ಲಾನ್ ಮಾಡಿದೆ. ಜಿಲ್ಲೆಯಲ್ಲಿ ಕಂಡುಬರುವ ಸಮೃದ್ಧ ಸಸ್ಯ ಸಂಕುಲವನ್ನು ಸಂರಕ್ಷಿಸಲು ಜಿಲ್ಲೆಯಲ್ಲಿ ಉದ್ಯಾನವನ ಆರಂಭಿಸಲಾಗುತ್ತಿದೆ ಎಂದು ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಹೇಳಿದರು.

ಜಿಲ್ಲೆಯ ಪ್ರತಿ ಪಂಚಾಯಿತಿಗಳಲ್ಲಿ ಜೈವಿಕ ವೈವಿಧ್ಯ ಉದ್ಯಾನವನಗಳನ್ನು ಸ್ಥಾಪಿಸಲು ಮಂಡಳಿ ಉದ್ದೇಶಿಸಿದೆ. ಕೂರ್ಗ್ ಮ್ಯಾಂಡರಿನ್ ಒಂದು ಕಾಲದಲ್ಲಿ ಜಿಲ್ಲೆಯ ವಿಶೇಷ ಸಸ್ಯವಾಗಿತ್ತು. ಆದರೆ, ಅಸ್ತಿತ್ವ ಕಳೆದುಕೊಂಡಿದ್ದು, ಈ ತಳಿಯನ್ನು ಉತ್ತೇಜಿಸಲು ಸಂಶೋಧನೆ ನಡೆಸಲಾಗುತ್ತಿದೆ ಎಂದರು.

ವಿಶ್ವದ ಹನ್ನೆರಡು ಜೀವವೈವಿಧ್ಯ ತಾಣಗಳಲ್ಲಿ ಪಶ್ಚಿಮಘಟ್ಟ ಪ್ರದೇಶವು ಪ್ರಮುಖ ಸ್ಥಳವಾಗಿದೆ. “ಪಶ್ಚಿಮ ಘಟ್ಟಗಳ ವ್ಯಾಪ್ತಿಯಲ್ಲಿ ಶೇ.70 ರಷ್ಟು ಔಷಧೀಯ ಸಸ್ಯಗಳಿವೆ. ಹಿಮಾಲಯ ಮತ್ತು ಪಶ್ಚಿಮ ಘಟ್ಟಗಳು ಇಲ್ಲದಿದ್ದರೆ ಭಾರತ ಮರುಭೂಮಿಯಾಗುತ್ತಿತ್ತು. ಅಲ್ಲದೇ ಪಶ್ಚಿಮಘಟ್ಟದಲ್ಲಿ ಹಲವು ನದಿಗಳು ಹುಟ್ಟಿಕೊಂಡಿವೆ” ಎಂದು ಕೊಡಗು ವಿಭಾಗದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬಿ.ಎನ್.ನಿರಂಜನ ಮೂರ್ತಿ ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:14 am, Sat, 18 March 23

ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ