AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಅವಧಿ ಮುಗಿಯುವ ಹಂತದಲ್ಲೇ ಸಂಕಷ್ಟ ತಂದಿಟ್ಟ ವಯಸ್ಸು: ಕೆಜಿ ಬೋಪಯ್ಯ ವಿರುದ್ಧ ದೂರು ದಾಖಲು

ಕೊಡಗು ಜಿಲ್ಲೆಯ ವಿರಾಜಪೇಟೆ ಶಾಸಕ ಕೆಜಿ ಬೋಪಯ್ಯ ಚುನಾವಣಾ ಆಯೋಗಕ್ಕೆ ತಮ್ಮ ಜನ್ಮದಿನಾಂಕವನ್ನು ತಪ್ಪಾಗಿ ನೀಡಿದ್ದಾರೆಂದು ಪಿಬಿ ತಿಮ್ಮಯ್ಯ ಎಂಬುವುವರು ಪೊಲೀಸರಿಗೆ ದೂರು ನೀಡಿದ್ದಾರೆ.

ಶಾಸಕ ಅವಧಿ ಮುಗಿಯುವ ಹಂತದಲ್ಲೇ ಸಂಕಷ್ಟ ತಂದಿಟ್ಟ ವಯಸ್ಸು: ಕೆಜಿ ಬೋಪಯ್ಯ ವಿರುದ್ಧ ದೂರು ದಾಖಲು
ಶಾಸಕ ಕೆಜಿ ಬೋಪಯ್ಯ
ವಿವೇಕ ಬಿರಾದಾರ
|

Updated on:Mar 10, 2023 | 8:45 AM

Share

ಬೆಂಗಳೂರು:  2018ರ ವಿಧಾನಸಭೆ ಚುನಾವಣೆಯಲ್ಲಿ (Assembly Election 2018) ಬಿಜೆಪಿಯಿಂದ ಸ್ಪರ್ಧಿಸಿ ವಿರಾಜಪೇಟೆ ಕ್ಷೇತ್ರದಿಂದ ಗೆದ್ದಿರುವ ಕೆಜಿ ಬೋಪಯ್ಯಗೆ (KG Bopaiah) ಸಂಕಷ್ಟ ಎದುರಾಗಿದೆ. ಇನ್ನೇನು ಶಾಸಕರ ಅವಧಿ ಮುಗಿದು 16ನೇ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗುವ ಸಂದರ್ಭದಲ್ಲೇ ಬಿಜೆಪಿ ಕೆಜಿ ಬೋಪಯ್ಯ ಅವರು ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನಿಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ಶಾಸಕ ಕೆಜಿ ಬೋಪಯ್ಯ  ಚುನಾವಣಾ ಆಯೋಗಕ್ಕೆ ತಮ್ಮ ಜನ್ಮದಿನಾಂಕವನ್ನು ತಪ್ಪಾಗಿ ನೀಡಿದ್ದಾರೆಂದು ಪಿಬಿ ತಿಮ್ಮಯ್ಯ ಎಂಬುವುವರು ವಿರಾಜಪೇಟೆ ಪೊಲೀಸ್ ಠಾಣೆಯಲ್ಲಿ (Virajpete Police Station) ದೂರು ದಾಖಖಲಿಸಿದ್ದಾರೆ.

2018ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕೆಜಿ ಬೋಪಯ್ಯ ಚುನಾವಣಾ ಆಯೋಗದ ನಾಮಪತ್ರದಲ್ಲಿ ತಮ್ಮ ವಯಸ್ಸು 65 ಎಂದು ದಾಖಲಿಸಿ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಪ್ರತಾಪ್ ಸಿಂಹ ಮಿನಿಸ್ಟ್ರೇನ್ರೀ? ಕೇವಲ ಸಂಸದ ಅಷ್ಟೇ: ಸಿದ್ದರಾಮಯ್ಯ

26-10-1979 ರಲ್ಲಿ ವಕೀಲರ ಕರ್ನಾಟಕ ಬಾರ್ ಕೌನ್ಸಿಲ್​ನ​ ಸದಸ್ಯರಾಗಿದ್ದರು. ಈ ವೇಳೆ ಬಾರ್​ ಕೌನ್ಸಿಲ್​ನಲ್ಲಿ ತಮ್ಮ ಜನ್ಮ ದಿನಾಂಕ 17-10-1951 ಎಂದು ದಾಖಲಿಸಿದ್ದರು. ಈ ಪ್ರಕಾರ 2018ರಲ್ಲಿ ಕೆ ಜಿ ಬೋಪಯ್ಯ ಅವರ ನೈಜ ವಯಸ್ಸು 67. ಆದರೆ ಬೋಪಯ್ಯ ನಾಮಪತ್ರದಲ್ಲಿ 65 ಎಂದು ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆ ಬೋಪಯ್ಯ ಸುಳ್ಳು ಮಾಹಿತಿ ನೀಡಿದ್ದಾರೆಂದು ಆರೋಪಿಸಿ ದೂರು ದಾಖಲಿಸಿದ್ದಾರೆ.

2004 ಮತ್ತು 2013ರಲ್ಲೂ ತಪ್ಪು ಮಾಹಿತಿ ನೀಡಿದ್ದ ಬೋಪಯ್ಯ

2004ರಲ್ಲಿ ಬೋಪಯ್ಯ ವಯಸ್ಸು 53 ಇದ್ದು, ಚುನಾವಣಾ ಆಯೋಗಕ್ಕೆ 49 ವರ್ಷ ಎಂದು ನೀಡಿದ್ದರು. ನಂತರ 2013ರ ಚುನಾವಣೆಯ ಸಮಯದಲ್ಲೂ ಅವರ ವಯಸ್ಸು 61 ಇದ್ದು, 58 ವರ್ಷ ಎಂದು ತಪ್ಪು ಮಾಹಿತಿ ನೀಡಿದ್ದಾರೆ ಎಂದು ತಿಮ್ಮಯ್ಯ ದೂರಿನಲ್ಲಿ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:18 am, Fri, 10 March 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!