AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

kodagu: ಹುಲ್ಲು ಮೇಯುತ್ತಿದ್ದ ಹಸುಗಳ ಮೇಲೆ ಗುಂಡು ಹಾರಿಸಿ ಕೊಂದ ಎಸ್ಟೇಟ್ ಮಾಲೀಕ

ಕೊಡಗಿನ ವಿರಾಜಪೇಟೆ ತಾಲೂಕಿನ ಗುಹ್ಯ ಗ್ರಾಮದಲ್ಲಿ ಹುಲ್ಲು ಮೇಯುತ್ತಿದ್ದ ಹಸುಗಳ ಮೇಲೆ ಗುಂಡು ಹಾರಿಸಿ ಕೊಂದಿರುವ ಘಟನೆ ನಡೆದಿದೆ.

kodagu:  ಹುಲ್ಲು ಮೇಯುತ್ತಿದ್ದ ಹಸುಗಳ ಮೇಲೆ ಗುಂಡು ಹಾರಿಸಿ ಕೊಂದ ಎಸ್ಟೇಟ್ ಮಾಲೀಕ
ಕೊಡಗು
TV9 Web
| Edited By: |

Updated on:Dec 07, 2022 | 10:29 AM

Share

ಮಡಿಕೇರಿ: ವಿರಾಜಪೇಟೆ ತಾಲೂಕಿನ ಗುಹ್ಯ ಗ್ರಾಮದಲ್ಲಿ ಮೂರು ಹಸುಗಳು ಹುಲ್ಲು ಮೇಯುತ್ತಾ,  ನರೇಂದ್ರ ನಾಯ್ಡು ಎಂಬುವವರ ಎಸ್ಟೇಟ್​ಗೆ ನುಗ್ಗಿದ್ದು, ನನ್ನ ಜಾಗದಲ್ಲಿ ಮೇಯುತ್ತಿದೆ ಎಂಬ ಕಾರಣಕ್ಕಾಗಿ ಎಸ್ಟೇಟ್ ಮಾಲೀಕ ಮೂರು ಹಸುಗಳಲ್ಲಿ ಎರಡು ಹಸುಗಳನ್ನು ಗುಂಡಿಟ್ಟು ಕೊಂದು ಹಾಕಿದ್ದಾನೆ. ಈ ಕುರಿತು ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ಈ ಹಸುಗಳು ಸಿ.ಕೆ.ಮಣಿ ಎಂಬುವರಿಗೆ ಸೇರಿವೆ. ಹಲವು ಹಸುಗಳನ್ನು ಸಾಕಿದ್ದ ಇವರು ಹಾಲು ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದರು. ಆದರೆ ಮೊನ್ನೆ (ಡಿ.5) ಮಣಿಯ ಮೂರು ಹಸುಗಳಲ್ಲಿ ಒಂದು ಮಾತ್ರ ಮನೆಗೆ ಹಿಂದಿರುಗಿತ್ತು. ಆ ಹಸು ಕೂಡ ಗಂಭೀರವಾಗಿ ಗಾಯಗೊಂಡಿರುವುದನ್ನು ಮಣಿ ಗಮನಿಸಿದ್ದಾರೆ. ನಂತರ ಹಸುವಿಗೆ ಗುಂಡು ತಗುಲಿದ್ದು ಗೊತ್ತಾಗಿ ಚಿಕಿತ್ಸೆ ನೀಡಲಾಗಿದೆ. ಇನ್ನು ಉಳಿದ ಎರಡು ಹಸುಗಳು ಪಕ್ಕದ ಎಸ್ಟೇಟ್‌ನಲ್ಲಿ ಸತ್ತು ಬಿದ್ದಿರುವ ಬಗ್ಗೆ ಮಾಹಿತಿ ಬಂದಿದ್ದು. ಮಣಿ ಅವರು ಹುಡುಕಾಡಲು ಹೋದಾಗ ನರೇಂದ್ರ ನಾಯ್ಡು ಒಡೆತನದ ಎಸ್ಟೇಟ್‌ನಲ್ಲಿ ಹಸುಗಳ ದೇಹ ಪತ್ತೆಯಾಗಿದೆ.

ಇದನ್ನೂ ಓದಿ:ಒಂದಕ್ಕಿಂತ ಹೆಚ್ಚಿನ ಬಂದೂಕು ಹೊಂದಿದ್ದರೆ ತಕ್ಷಣವೇ ಪೊಲೀಸ್​ ಠಾಣೆಗೆ ತಂದೊಪ್ಪಿಸಬೇಕು; ಕೊಡಗು ಜಿಲ್ಲಾಡಳಿತ ಕಟ್ಟಪ್ಪಣೆಗೆ ಜನಾಕ್ರೋಶ

ಹಸುಗಳ ದೇಹದ ಮೇಲೆ ಗುಂಡಿನ ಗುರುತುಗಳಿದ್ದು, ತನ್ನ ಹಸುಗಳನ್ನು ಗುಂಡಿಟ್ಟು ಕೊಲ್ಲಲಾಗಿದೆ ಎಂದು ಮಣಿ ಆರೋಪಿಸಿದ್ದಾರೆ. ಘಟನೆ ಸಂಬಂಧಿಸಿದಂತೆ ಸಿ.ಕೆ.ಮಣಿ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಎಸ್ಟೇಟ್ ಮಾಲೀಕನ ಹುಡುಕಾಟದಲ್ಲಿದ್ದಾರೆ. ಎಸ್ಟೇಟ್ ಮಾಲಿಕ ನರೇಂದ್ರ ನಾಯ್ಡು ತಲೆಮರೆಸಿಕೊಂಡಿದ್ದು, ಪೊಲೀಸರು ಅರೋಪಿಯ ಪತ್ತೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:59 am, Wed, 7 December 22

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ