Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗು: ಸೆಲ್ಫಿ ತೆಗೆದುಕೊಳ್ಳುವಾಗ ಹಾರಂಗಿ ನದಿಗೆ ಬಿದ್ದಿದ್ದ ಬೆಂಗಳೂರಿನ ಟ್ಯಾಟೂ ಕಲಾವಿದನ ಮೃತದೇಹ ಪತ್ತೆ

ಸೆಲ್ಫಿ ತೆಗೆದುಕೊಳ್ಳಲು ಹೋಗಿ ಹಾರಂಗಿ ನದಿಗೆ ಬಿದ್ದ ಬೆಂಗಳೂರಿನ ಟ್ಯಾಟೂ ಕಲಾವಿದ ಸಂದೀಪ್ ಮೃತದೇಹ ಇಂದು(ಆಗಸ್ಟ್ 04) ಪತ್ತೆಯಾಗಿದೆ.

ಕೊಡಗು: ಸೆಲ್ಫಿ ತೆಗೆದುಕೊಳ್ಳುವಾಗ ಹಾರಂಗಿ ನದಿಗೆ ಬಿದ್ದಿದ್ದ ಬೆಂಗಳೂರಿನ ಟ್ಯಾಟೂ ಕಲಾವಿದನ ಮೃತದೇಹ ಪತ್ತೆ
ಸಂದೀಪ್ ಮೃತದೇಹ‌ಪತ್ತೆ
Follow us
Gopal AS
| Updated By: ರಮೇಶ್ ಬಿ. ಜವಳಗೇರಾ

Updated on: Aug 04, 2023 | 12:55 PM

ಕೊಡಗು, (ಆಗಸ್ಟ್ 04): ಸೆಲ್ಫಿ ತೆಗೆದುಕೊಳ್ಳುವಾಗ ಹಾರಂಗಿ ನದಿಗೆ (Harangi River) ಬಿದ್ದಿದ್ದ ಬೆಂಗಳೂರಿನ(Bengaluru) ಟ್ಯಾಟೂ ಕಲಾವಿದ ಸಂದೀಪ್ (46) ಮೃತದೇಹ ಕೊನೆಗೂ ಪತ್ತೆಯಾಗಿದೆ. ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದ ಸಂದೀಪ್​ ನಿನ್ನೆ(ಆಗಸ್ಟ್ 03) ಹಾರಂಗಿ ಜಲಾಶಯದ ಎದುರಿನ‌ ಸೇತುವೆ ಬಳಿ ಸೆಲ್ಫಿ ತೆಗೆಯುವ ಸಂದರ್ಭದಲ್ಲಿ ಕಾಲು ಜಾರಿ ನದಿಗೆ ಬಿದ್ದಿದ್ದ. ಬಳಿಕ ವಿಷಯ ತಿಳಿದು  ಕುಶಾಲನಗರದ ಅಗ್ನಿಶಾಮಕ ಸಿಬ್ಬಂದಿ ದುಬಾರೆ ರಿವರ್ ರಾಪ್ಟಿಂಗ್ ತಂಡ ನಿರಂತರ ಶೋಧ ಕಾರ್ಯ ನಡೆಸಿದ್ದು, ಇಂದು (ಆಗಸ್ಟ್ 04) ಸಂದೀಪ ಮೃತದೇಹವನ್ನು ಪತ್ತೆ ಮಾಡಿದೆ.

ಇದನ್ನೂ ಓದಿ: ಸೆಲ್ಫಿ ತೆಗೆದುಕೊಳ್ಳಲು ಹೋಗಿ ಪ್ರವಾಸಿಗ ನೀರುಪಾಲು: ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ

ಹಾರಂಗಿ ಜಲಾಶಯ ಅಧಿಕಾರಿಗಳ ವಿರುದ್ಧ ಸ್ಥಳೀಯರು ಪ್ರತಿಭಟನೆಗಿಳಿದಿದ್ದು, ಸಂದೀಪ್ ಮೃತದೇಹ ತೆಗೆಯಲು ಬಿಡುವುದಿಲ್ಲವೆಂದು ಪಟ್ಟು ಹಿಡಿದಿದ್ದಾರೆ. ಸೇತುವೆ ಮೇಲೆ ಪ್ರವಾಸಿಗರನ್ನು ನಿಯಂತ್ರಿಸುವವರೆ ಇಲ್ಲ ಎಂದು ಆಕ್ರೋಶ ಹೊರಹಾಕಿದರು.

ಇನ್ನು ಈ ಬಗ್ಗೆ ಸಂದೀಪ್​ ಗೆಳೆಯ ರಂಜಿತ್‌ ಮಾಧ್ಯಮಗಳಿಗೆ ಪ್ರಕ್ರಿಯಿಸಿದ್ದು, ಮೊದಲು ನಾವೆಲ್ಲಾ ಫೋಟೋ ತೆಗೆದುಕೊಂಡ್ವಿ. ಆ ಬಳಿಕ ಸಂದೀಪ್ ಫೋಟೋ ತೆಗೆಯಲು ಮುಂದಾದರು. ಸೇತುವೆ ಬಳಿ ನಿಂತಿದ್ದಾಗ ಕಾಲು ಜಾರಿ ನದಿಗೆ ಬಿದ್ದರು.ಬಳಿಕ ಸಂದೀಪ್‌ನನ್ನ ರಕ್ಷಿಸಲು ಸ್ಥಳೀಯರು ಪ್ರಯತ್ನಿಸಿದ್ದರು. ಆದರೆ ದುರಾದೃಷ್ಟವಶಾತ್ ಸಂದೀಪ್ ಕೊಚ್ಚಿಹೋಗಿದ್ದ ಎಂದರು.

ಇನ್ನು ಸಂದೀಪ್​ ನೀರುಪಾಲು ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತದ ನಿರ್ಲಕ್ಷ್ಯ ಆರೋಪ ಕೇಳಿಬಂದಿದೆ. ಭದ್ರತಾ ಸಿಬ್ಬಂದಿ ನೇಮಿಸದೆ ಜಿಲ್ಲಾಡಳಿತ ನಿರ್ಲಕ್ಷ್ಯ ವಹಿಸಿದೆ ಎಂದು ಸ್ಥಳೀಯರು ಕೊಡಗು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ವಿರುದ್ಧ ಆರೋಪಿದ್ದಾರೆ. ಪ್ರವಾಸಿಗರನ್ನು ನಿಯಂತ್ರಿಸಲು ನಿನ್ನೆ ಯಾವುದೇ ಸಿಬ್ಬಂದಿ ಇರಲಿಲ್ಲ. ಇಲ್ಲಿ ಓರ್ವ ಸಿಬ್ಬಂದಿಯನ್ನು ನೇಮಿಸಿದ್ದರೆ ಈ ದುರ್ಘಟನೆ ನಡೆಯುತ್ತಿರಲಿಲ್ಲ ಎಂದಿದ್ದಾರೆ.

ಇನ್ನಷ್ಟು ಕೊಡಗು ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ತಂದೆ-ತಾಯಿ ಆಸೆಯಂತೆ ಹುಟ್ಟೂರಲ್ಲಿ ದೇವಸ್ಥಾನ ಜೀರ್ಣೋದ್ಧಾರ ಮಾಡಿದ ಪ್ರಭುದೇವ
ತಂದೆ-ತಾಯಿ ಆಸೆಯಂತೆ ಹುಟ್ಟೂರಲ್ಲಿ ದೇವಸ್ಥಾನ ಜೀರ್ಣೋದ್ಧಾರ ಮಾಡಿದ ಪ್ರಭುದೇವ
ಜಿಲ್ಲೆಯ ಮುಖಂಡರನ್ನು ಮನೆಗೆ ಕರೆಸಿ ಮಾತಾಡಿದ ಮಾಜಿ ಸಚಿವ ಪಟ್ಟಣಶೆಟ್ಟಿ
ಜಿಲ್ಲೆಯ ಮುಖಂಡರನ್ನು ಮನೆಗೆ ಕರೆಸಿ ಮಾತಾಡಿದ ಮಾಜಿ ಸಚಿವ ಪಟ್ಟಣಶೆಟ್ಟಿ
ಸೊಂಟದ ಕೆಳಗಿನ ಮಾತು; ಮನೆಯಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ಸ್​ಗೆ ಸಖತ್ ತೊಂದರೆ
ಸೊಂಟದ ಕೆಳಗಿನ ಮಾತು; ಮನೆಯಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ಸ್​ಗೆ ಸಖತ್ ತೊಂದರೆ
ಘಟನೆ ನಡೆದ 2 ತಾಸು ಬಳಿಕ ಬಿಎಂಅರ್​​ಸಿಎಲ್​ನವರು ಬಂದರು: ಪ್ರತ್ಯಕ್ಷದರ್ಶಿ
ಘಟನೆ ನಡೆದ 2 ತಾಸು ಬಳಿಕ ಬಿಎಂಅರ್​​ಸಿಎಲ್​ನವರು ಬಂದರು: ಪ್ರತ್ಯಕ್ಷದರ್ಶಿ
Video:ಅಕ್ರಮವಾಗಿ ನಿರ್ಮಿಸಿದ್ದ ದರ್ಗಾ ನೆಲಸಮ, ಪೊಲೀಸರ ಮೇಲೆ ಕಲ್ಲು ತೂರಾಟ
Video:ಅಕ್ರಮವಾಗಿ ನಿರ್ಮಿಸಿದ್ದ ದರ್ಗಾ ನೆಲಸಮ, ಪೊಲೀಸರ ಮೇಲೆ ಕಲ್ಲು ತೂರಾಟ
ಬೆಂಗಳೂರಿನ ವೈಟ್ ಫೀಲ್ಡ್​ನಲ್ಲಿ ರೋಡ್ ರೇಜ್: ವಿಡಿಯೋ ನೋಡಿ
ಬೆಂಗಳೂರಿನ ವೈಟ್ ಫೀಲ್ಡ್​ನಲ್ಲಿ ರೋಡ್ ರೇಜ್: ವಿಡಿಯೋ ನೋಡಿ
ಚಹಲ್​ ಚಮತ್ಕಾರ: 3 ಓವರ್​ಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಯುಝಿ
ಚಹಲ್​ ಚಮತ್ಕಾರ: 3 ಓವರ್​ಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಯುಝಿ
ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ