AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತ್ಯೇಕ ಘಟನೆ: ಮರದಿಂದ ಬಿದ್ದು ಬಿಜೆಪಿ ಮಾಜಿ ಶಾಸಕನ ಗನ್​ಮ್ಯಾನ್ ಸಾವು, ಕರಡಿ ದಾಳಿಯಿಂದ ತಪ್ಪಿಸಿಕೊಳ್ಳಲು ಹೋಗಿ ರೈತ ಬಲಿ

ಕೊಡಗಿನಲ್ಲಿ ಬಿಜೆಪಿ ಮಾಜಿ ಶಾಸಕರೊಬ್ಬರ ಗನ್​ಮ್ಯಾನ್ ಮರರಿಂದ ಕೆಳಗೆ ಬಿದ್ದು ಮೃತಪಟ್ಟಿದ್ದರೆ, ಅತ್ತ ಕೊಪ್ಪಳದಲ್ಲಿ ಕರಡಿ ದಾಳಿಯಿಂದ ತಪ್ಪಿಸಿಕೊಳ್ಳಲು ಹೋಗಿ ವ್ಯಕ್ತಿಯೋರ್ವ ಬಲಿಯಾಗಿದ್ದಾನೆ. ಈ ಪ್ರತ್ಯೇಕ ಘಟನೆಯ ವಿವರ ಇಲ್ಲಿದೆ.

ಪ್ರತ್ಯೇಕ ಘಟನೆ: ಮರದಿಂದ ಬಿದ್ದು ಬಿಜೆಪಿ ಮಾಜಿ ಶಾಸಕನ ಗನ್​ಮ್ಯಾನ್ ಸಾವು, ಕರಡಿ ದಾಳಿಯಿಂದ ತಪ್ಪಿಸಿಕೊಳ್ಳಲು ಹೋಗಿ ರೈತ ಬಲಿ
ಮೃತ ಲೋಕೇಶ್(ಎಡಬದಿ), ರೈತ ಹನುಮಂತ
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on:Aug 06, 2023 | 1:22 PM

Share

ಕೊಡಗು/ಕೊಪ್ಪಳ, (ಆಗಸ್ಟ್ 06):  ಮರದಿಂದ (Tree)ಕೆಳಗೆ ಬಿದ್ದು ಬಿಜೆಪಿ(BJP) ಮಾಜಿ ಶಾಸಕ ಅಪ್ಪಚ್ಚು ರಂಜನ್ ಗನ್​ಮ್ಯಾನ್ ಆಗಿದ್ದ ಲೋಕೇಶ್ (40) ಮೃತಪಟ್ಟಿದ್ದಾರೆ. ಕೊಡಗು Kodagu) ಜಿಲ್ಲೆಯ ಕುಶಾಲನಗರ ತಾಲೂಕಿನ ಕಾನ್​ಬೈಲು ಗ್ರಾಮದಲ್ಲಿ ಈ ದುರ್ಘಟನೆ ನಡೆದಿದ್ದು, ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಇನ್ನಷ್ಟು ಮಾಹಿತಿ ತಿಳಿದುಬರಬೇಕಿದೆ.

ಇದನ್ನೂ ಓದಿ: ಮಚ್ಚು ಹಿಡಿದು ಮೆರೆದವನು ಮಚ್ಚಿನಿಂದಲೇ ಅಂತ್ಯ, ತನ್ನ ಭವಿಷ್ಯವನ್ನು ತಾನೇ ನುಡಿದಿದ್ದ ಹತ್ಯೆಯಾದ ರೌಡಿಶೀಟರ್

ಕರಡಿಯಿಂದ ತಪ್ಪಿಸಿಕೊಳ್ಳಲು ಹೋಗಿ ರೈತ ಬಲಿ

ಕೊಪ್ಪಳ, (ಆಗಸ್ಟ್ 06):ಕರಡಿ ದಾಳಿಯಿಂದ ತಪ್ಪಿಸಿಕೊಳ್ಳಲು ಹೋಗಿ ವ್ಯಕ್ತಿ ಮೃತಪಟ್ಟಿರುವ ಘಟನೆ ಕೊಪ್ಪಳ ತಾಲ್ಲೂಕಿನ ಬೂದಗುಂಪಾ ಗ್ರಾಮದ ಸಮೀಪದಲ್ಲಿ ನಡೆದಿದೆ. ರೈತ ಹನುಮಂತ ಕಡಿಗೆಟ್ಟಿ (50) ಮೃತ ದುರ್ದೈವಿ. ಕರಡಿ ದಾಳಿಯಿಂದ ತಪ್ಪಿಸಿಕೊಳ್ಳಲು ಓಡುವ ವೇಳೆ ಆಯ ತಪ್ಪಿ ಬಿದ್ದು ಹನುಮಂತ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಇರಕಲ್ಲಗಡ ಹೋಬಳಿ ವ್ಯಾಪ್ತಿಯಲ್ಲಿ ಕರಡಿ ಹಾವಳಿ ವ್ಯಾಪಕವಾಗಿದೆ. ಇದೇ ಹೋಬಳಿ ಭಾಗದಲ್ಲಿ ಮೂರು ದಿನಗಳ ಹಿಂದೆ ರಾತ್ರಿ ವೇಳೆ ಹೊಲಕ್ಕೆ ಹೋಗಿದ್ದ ವ್ಯಕ್ತಿಯ ಕರಡಿ ದಾಳಿ ಮಾಡಿತ್ತು. ಇದೇ ರೀತಿಯ ಘಟನೆಗಳು ಮೇಲಿಂದ ಮೇಲೆ ನಡೆಯುತ್ತಿವೆ ಎಂದು ಸ್ಥಳೀಯರು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 12:23 pm, Sun, 6 August 23