AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೂ ಕುಸಿತವಾಗಿ 4 ವರ್ಷವಾದರೂ ಪರಿಹಾರ ಸಿಕ್ಕಿಲ್ಲ, ಮುಂಗಾರು ಮಳೆ ಆರಂಭಕ್ಕೂ ಮುನ್ನ ಮತ್ತೆ ಕೊಡಗಿನಲ್ಲಿ ಟೆನ್ಷನ್

ಕೊಡಗಿನಲ್ಲಿ ಕಂಡು ಕೇಳರಿಯದ ಪ್ರವಾಹ, ಭೂ ಕುಸಿತದ ಕರಾಳ ನೆನಪು ಇನ್ನೂ ಮಾಸಿಲ್ಲ. ಈಗ ಮುಂಗಾರು ಮಳೆ ಆರಂಭಕ್ಕೂ ಮುನ್ನ ಕೊಡಗಿನಲ್ಲಿ ಮತ್ತೆ ಟೆನ್ಷನ್ ಶುರುವಾಗಿದೆ.

ಭೂ ಕುಸಿತವಾಗಿ 4 ವರ್ಷವಾದರೂ ಪರಿಹಾರ ಸಿಕ್ಕಿಲ್ಲ, ಮುಂಗಾರು ಮಳೆ ಆರಂಭಕ್ಕೂ ಮುನ್ನ ಮತ್ತೆ ಕೊಡಗಿನಲ್ಲಿ ಟೆನ್ಷನ್
ರಮೇಶ್ ಬಿ. ಜವಳಗೇರಾ
|

Updated on: May 22, 2023 | 8:08 AM

Share

ಕೊಡಗು: ಪ್ರವಾಸಿಗರ ಸ್ವರ್ಗದಂತಿದ್ದ ಕೊಡಗಿನಲ್ಲಿ 3 ವರ್ಷಗಳ ಹಿಂದೆ ಮಳೆ ನರಕ ಸೃಷ್ಟಿಸಿದ್ದ. ಭೂಕುಸಿತ, ಪ್ರವಾಹದಿಂದ ಸಾವಿರಾರು ಮಂದಿ ನಿರಾಶ್ರಿತರಾಗಿದ್ದರಿ. ಆಗ ನೂರಾರು ಕೋಟಿ ರೂಪಾಯಿ ಅನುದಾನವೂ ಹರಿದು ಬಂದಿತ್ತು. ಇನ್ಫೋಸಿಸ್ ಫೌಂಡೇಷನ್ 250 ಮನೆಗಳನ್ನ ನಿರ್ಮಾಣ ಮಾಡಿತ್ತು. ಸಂತ್ರಸ್ತರಿಗೆ ಮಾತ್ರ ವಿತರಣೆಯಾಗಿಲ್ಲ. 2018-2019ರಲ್ಲಿ ಕೊಡಗು ಜಿಲ್ಲೆಯಲ್ಲಿ ಭೀಕರ ಪ್ರವಾಹ ಮತ್ತು ಭೂ ಕುಸಿತದಿಂದ ಕಂಗೆಟ್ಟಿತ್ತು. ಪೃಕೃತಿ ವಿಕೋಪಕ್ಕೆ ಸಾವಿರಾರು ಮಂದಿ ಮನೆ ಕಳೆದುಕೊಂಡಿದ್ದರು. ಇವ್ರ ಜೊತೆ ಟಿವಿ9 ಸೇರಿದಂತೆ ಇಡೀ ಕರುನಾಡೇ ನಿಂತಿತ್ತು. ಆದ್ರೆ, ಘಟನೆ ನಡೆದು 4 ವರ್ಷ ಕಳೆದ್ರೂ ಪರಿಹಾರ ಮಾತ್ರ ಸಿಕ್ಕಿಲ್ಲ.

ಹೌದು.. ಕೊಡಗಿನಲ್ಲಿ ಕಂಡು ಕೇಳರಿಯದ ಪ್ರವಾಹ, ಭೂ ಕುಸಿತದ ಕರಾಳ ನೆನಪು ಇನ್ನೂ ಮಾಸಿಲ್ಲ.. ಇದರಲ್ಲಿ ಸಾವಿರಾರು ಮಂದಿ ಬೀದಿಗೆ ಬಿದ್ದಿದ್ದರು. ಈಗಾಗಲೇ750 ಮಂದಿ ಸಂತ್ರಸ್ತರಿಗೆ ಸರ್ಕಾರ ಈಗಾಗಲೇ ಕೊಡಗಿನ ವಿವಿಧೆಡೆ ಮನೆಗಳನ್ನು ನಿರ್ಮಾಣ ಮಾಡಿಕೊಟ್ಟಿದೆ. ಇದರ ಜೊತೆಗೆ ಇನ್ಫೋಸಿಸ್ ಪ್ರತಿಷ್ಠಾನ ವತಿಯಿಂದ ಸೋಮವಾರಪೇಟೆ ತಾಲ್ಲೂಕಿನ ಜಂಬೂರಿನಲ್ಲಿ 250 ಮನೆಗಳನ್ನು ನಿರ್ಮಿಸಲಾಗಿದೆ. ಮನೆ ಕಾಮಗಾರಿ ಬಹುತೇಕ ಸಂಪೂರ್ಣಗಿದೆ. ಒಂದೊಂದು ಮನೆಗೆ 11 ಲಕ್ಷ ರೂಪಾಯಿ ವೆಚ್ಚ ಮಾಡಲಾಗಿದೆ. ಎಲ್ಲವೂ ಯೋಜನೆ ಪ್ರಕಾರ ನಡೆದಿದ್ದಲ್ಲಿ ಈಗಾಗಲೇ ಸಂತ್ರಸ್ತರು ನೆಮ್ಮದಿಯಿಂದ ಹೊಸ ಮನೆ ಪ್ರವೇಶ ಮಾಡಬೇಕಾಗಿತ್ತು. ಆದ್ರೆ, ಐದು ವರ್ಷವಾದರೂ ಈ ಮನೆಗಳು ಇನ್ನೂ ಜಿಲ್ಲಾಡಳಿತಕ್ಕೆ ಹಸ್ತಾಂತರಿಸಲಾಗಿಲ್ಲ.

ಮಳೆಗಾಲ ಆರಂಭಕ್ಕೂ ಮುನ್ನ ಮನೆ ಕೊಡಿ ಎಂದ ಜನರು

ಇನ್ನು ಕೆಲವೇ ದಿನಗಳಲ್ಲಿ ಮುಂಗಾರು ಮಳೆಗಾಲ ಆರಂಭವಾಗಲಿದೆ. ಜಿಲ್ಲೆಯ ಬಹಳಷ್ಟು ಪ್ರದೇಶವನ್ನ ಅಪಾಯಕಾರಿ ಅಂತ ಗುರುತಿಸಲಾಗಿದ್ದು, ಮಳೆಗಾಲದಲ್ಲಿ ಆ ಪ್ರದೇಶಗಳನ್ನ ತೊರೆಯಬೇಕಾಗಿದೆ. ಅದೂ ಅಲ್ಲದೆ ಇನ್ನೂ 400 ಕ್ಕೂ ಅಧಿಕ ಸಂತ್ರಸ್ತರಿಗೆ ಮನೆಗಳನ್ನು ವಿತರಿಸಬೇಕಾಗಿದೆ. ಕನಿಷ್ಠ ಇನ್ಫೋಸಿಸ್​ ನಿರ್ಮಾಣದ ಮನೆಗಳನಾದ್ರೂ ಮಳೆಗಾಲ ಆರಂಭಕ್ಕೂ ಮುನ್ನ ವಿತರಿಸಿದ್ರೆ ಸುರಕ್ಷಿತವಾಗಿರುತ್ತೇವೆ ಎನ್ನುವುದು ಸಂತ್ರಸ್ತರ ಬೇಡಿಕೆಯಾಗಿದೆ..

ಮೇಲ್ನೋಟಕ್ಕೆ ಜಿಲ್ಲಾಡಳಿತ, ಜನಪ್ರತಿನಿಧಿಗಳು ಮತ್ತು ಇನ್ಪೋಸಿಸ್​ ಮಧ್ಯೆ ಹೊಂದಾಣಿಕೆ ಇದ್ದಂತಿಲ್ಲ ಅಂತ ಸಂತ್ರಸ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಳೆಗಾಲ ಆರಂಭಕ್ಕೂ ಮುನ್ನ ಮನೆ ಕೊಡಿ ಅಂತ ಕೇಳ್ತೀದ್ದಾರೆ. ಇನ್ನಾದ್ರೂ ಜಿಲ್ಲಾಡಳಿತ ಇನ್ಫೋಸಿಸ್​ನಿಂದ ಮನೆ ಪಡೆದು ಸಂತ್ರಸ್ತರಿಗೆ ಹಸ್ತಾಂತರಿಸುತ್ತಾ ಕಾದುನೋಡಬೇಕಿದೆ.

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ