AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗು: ಸಚಿವ ಬೋಸರಾಜು ಪಿಎ ಹೆಸರಿನಲ್ಲಿ ಹಣ ವಸೂಲಿ: ಇಬ್ಬರ ಬಂಧನ

ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು ಪಿಎ ಹೆಸರಿನಲ್ಲಿ ಹಣ ವಸೂಲಿ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು  ಬಂಧಿಸಿದ್ದಾರೆ. ಮೈಸೂರು ಮೂಲದ ರಘುನಾಥ, ಶಿವಮೂರ್ತಿ ಬಂಧಿತರು. ಕುಶಾಲನಗರ ಕಂದಾಯ ನಿರೀಕ್ಷಕರಿಂದ‌ 20 ಸಾವಿರ ರೂ. ಹಣ ವಸೂಲಿ ಮಾಡಿದ್ದಾರೆ. ಕುಶಾಲನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಕೊಡಗು: ಸಚಿವ ಬೋಸರಾಜು ಪಿಎ ಹೆಸರಿನಲ್ಲಿ ಹಣ ವಸೂಲಿ: ಇಬ್ಬರ ಬಂಧನ
ಬಂಧಿತರು
Gopal AS
| Updated By: ಗಂಗಾಧರ​ ಬ. ಸಾಬೋಜಿ|

Updated on: Nov 22, 2023 | 6:43 PM

Share

ಕೊಡಗು, ನವೆಂಬರ್​​​ 22: ಸಚಿವರ ಪಿಎ ಹೆಸರಿನಲ್ಲಿ ಹಣ (money) ವಸೂಲಿ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು  ಬಂಧಿಸಿದ್ದಾರೆ. ಮೈಸೂರು ಮೂಲದ ರಘುನಾಥ, ಶಿವಮೂರ್ತಿ ಬಂಧಿತರು. ಕುಶಾಲನಗರ ಕಂದಾಯ ನಿರೀಕ್ಷಕರಿಂದ‌ 20 ಸಾವಿರ ರೂ. ಹಣ ವಸೂಲಿ ಮಾಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು ಪಿಎ ಎಂದು ಆರ್​ಐ ಸಂತೋಷ್​ಗೆ ಆರೋಪಿ ರಘುನಾಥ ಫೋನ್​ ಕರೆ ಮಾಡಿದ್ದು, ತುರ್ತಾಗಿ 20,000 ರೂ. ನೀಡುವಂತೆ ಬೇಡಿಕೆಯಿಟ್ಟಿದ್ದ. ಇತ್ತ ರೆವಿನ್ಯೂ ಇನ್ಸ್​ಪೆಕ್ಟರ್ ಸಂತೋಷ್ 20,000 ರೂ. ಗೂಗಲ್​ಪೇ ಮಾಡಿದ್ದಾರೆ. ಬಳಿಕ ಉಸ್ತುವಾರಿ ಸಚಿವರ ಕಚೇರಿಯಲ್ಲಿ ವಿಚಾರಿಸಿದಾಗ ಮೋಸ ಹೋಗಿರುವುದು ಬಯಲಾಗಿದೆ. ಕುಶಾಲನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಐಪಿಎಸ್, ಮಿಲ್ಟ್ರಿ ಅಧಿಕಾರಿಗಳ ಹೆಸರಲ್ಲಿ ವಂಚನೆ 

ಗದಗ: ಆನ್ ಲೈನ್ ವಂಚಕರು ಐಪಿಎಸ್, ಮಿಲ್ಟ್ರಿ ಅಧಿಕಾರಿಗಳ ಹೆಸರಲ್ಲಿ ಓರ್ವ ವ್ಯಕ್ತಿಗೆ ಸಾವಿರಾರೂ ರೂಪಾಯಿ ಪಂಗನಾಮ ಹಾಕಿದ್ದಾರೆ. ಚೆನ್ನಾಗಿ ಇಂಗ್ಲೀಷ್​​ನಲ್ಲಿ ಮಾತನಾಡಿ ವಂಚನೆ ಮಾಡಿದ್ದು, ವಂಚನೆಗೆ ಬಲಿಯಾದ ವ್ಯಕ್ತಿ ಹಣ ಕಳೆದುಕೊಂಡು ಈಗ ಒದ್ದಾಡುತ್ತಿದ್ದಾರೆ. ಸೈಬರ್ ಪೊಲೀಸರಿಗೆ ದೂರು ನೀಡಿದ್ದು, ಸೈಬರ್ ಪೊಲೀಸರು ನಿರ್ಲಕ್ಷ್ಯ ತೋರುತ್ತಿದ್ದಾರೆ ಅಂತ ಕಿಡಿಕಾರಿದ್ದರು.

ಇದನ್ನೂ ಓದಿ: ಜಿಲ್ಲಾ ಉಸ್ತುವಾರಿ ಸಚಿವರ ಹೆಸರಲ್ಲಿ ಬೆದರಿಕೆ ಆರೋಪ; ಕರವೇ ಜಿಲ್ಲಾಧ್ಯಕ್ಷನ ವಿರುದ್ಧ ಎಫ್​ಐಆರ್​​

ಜಿಲ್ಲೆಯಲ್ಲೊಂದು‌ ಅಂಥದ್ದೊಂದು ಪ್ರಕರಣ‌ ಇತ್ತೀಚೆಗೆ ಬೆಳಕಿಗೆ ಬಂದಿತ್ತು. ಕರ್ನಾಟಕದ ಐಪಿಎಸ್ ಅಧಿಕಾರಿ ರವಿ ಡಿ ಚೆನ್ನಣ್ಣವರ ಹಾಗೂ‌ ಸಿಆರ್‌ಪಿಎಫ್ ಯೋಧನ ಹೆಸರಲ್ಲಿ ಮೋಸ ವಂಚನೆ ಮಾಡಲಾಗಿತ್ತು. ಈ ವಂಚನೆ ಬಲಿಯಾದವ್ರೇ ಗದಗನ ಬೆಟಗೇರಿಯ ರಮೇಶ ಹತ್ತಿಕಾಳ. 55,000 ರೂಪಾಯಿ ಪಂಗನಾಮ ಹಾಕಿದ ಬಳಿಕ ಎಚ್ಚೆತ್ತುಕೊಂಡಿದ್ದಾರೆ. ಫೇಸ್ಬುಕ್ ಮೂಲಕ ರಮೇಶ ಎಂಬುವರನ್ನು ವಂಚನೆ ಮಾಡಿದ್ದರು.

ಕಾರಿನಲ್ಲಿಟ್ಟಿದ್ದ 10 ಲಕ್ಷ ರೂ. ಹಣ ಕದ್ದು ಪರಾರಿ 

ಚಿತ್ರದುರ್ಗ: ಜಿಲ್ಲೆಯ ಹೊಸದುರ್ಗದಲ್ಲಿ ಕಾರಿನಲ್ಲಿಟ್ಟಿದ್ದ 10 ಲಕ್ಷ ರೂ. ಹಣ ಕಳವು ಮಾಡಿರುವಂತಹ ಘಟನೆ ಹೊಸದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಲಕ್ಕಿಹಳ್ಳಿಯ ರೈತ ಮುದ್ದಪ್ಪ ಎಂಬುವರಿಗೆ ಸೇರಿದ್ದ 10 ಲಕ್ಷ ರೂ. ಹಣ ಕಳುವಾಗಿದೆ. ಬ್ಯಾಂಕ್​ನಿಂದ ಹಣ ಡ್ರಾ ಮಾಡಿಕೊಂಡು ಬಂದು ಕಾರಿನಲ್ಲಿಟ್ಟು, ಅಂಗಡಿಯೊಂದಕ್ಕೆ ತೆರಳಿದ್ದಾಗ ಕಳವು ಮಾಡಲಾಗಿದೆ.

ಇದನ್ನೂ ಓದಿ: ಆನ್​​​​ಲೈನ್​​​​ ಮೋಸ: 300 ರೂ. ಲಿಪ್‌ಸ್ಟಿಕ್​​ಗೆ 1 ಲಕ್ಷ ರೂ. ಕಳೆದುಕೊಂಡ ವೈದ್ಯೆ

ಹಣದ ಬ್ಯಾಗ್ ತೆಗೆದುಕೊಂಡು ಇಬ್ಬರು ಕಳ್ಳರು ಬೈಕ್​ನಲ್ಲಿ ಪರಾರಿ ಆಗಿದೆ. ಕಾರಿನಲ್ಲಿದ್ದ ಹಣ ಕಳವು ಮಾಡುತ್ತಿರುವ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆ ಆಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ
ಡಿಕೆಶಿ ಪರವೋ, ಸಿದ್ದರಾಮಯ್ಯ ಪರವೋ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದರು ನೋಡಿ!
ಡಿಕೆಶಿ ಪರವೋ, ಸಿದ್ದರಾಮಯ್ಯ ಪರವೋ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದರು ನೋಡಿ!
ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್
ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್