AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗು: ಸಚಿವ ಬೋಸರಾಜು ಪಿಎ ಹೆಸರಿನಲ್ಲಿ ಹಣ ವಸೂಲಿ: ಇಬ್ಬರ ಬಂಧನ

ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು ಪಿಎ ಹೆಸರಿನಲ್ಲಿ ಹಣ ವಸೂಲಿ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು  ಬಂಧಿಸಿದ್ದಾರೆ. ಮೈಸೂರು ಮೂಲದ ರಘುನಾಥ, ಶಿವಮೂರ್ತಿ ಬಂಧಿತರು. ಕುಶಾಲನಗರ ಕಂದಾಯ ನಿರೀಕ್ಷಕರಿಂದ‌ 20 ಸಾವಿರ ರೂ. ಹಣ ವಸೂಲಿ ಮಾಡಿದ್ದಾರೆ. ಕುಶಾಲನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಕೊಡಗು: ಸಚಿವ ಬೋಸರಾಜು ಪಿಎ ಹೆಸರಿನಲ್ಲಿ ಹಣ ವಸೂಲಿ: ಇಬ್ಬರ ಬಂಧನ
ಬಂಧಿತರು
ಗೋಪಾಲ್​ ಸೋಮಯ್ಯ
| Edited By: |

Updated on: Nov 22, 2023 | 6:43 PM

Share

ಕೊಡಗು, ನವೆಂಬರ್​​​ 22: ಸಚಿವರ ಪಿಎ ಹೆಸರಿನಲ್ಲಿ ಹಣ (money) ವಸೂಲಿ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು  ಬಂಧಿಸಿದ್ದಾರೆ. ಮೈಸೂರು ಮೂಲದ ರಘುನಾಥ, ಶಿವಮೂರ್ತಿ ಬಂಧಿತರು. ಕುಶಾಲನಗರ ಕಂದಾಯ ನಿರೀಕ್ಷಕರಿಂದ‌ 20 ಸಾವಿರ ರೂ. ಹಣ ವಸೂಲಿ ಮಾಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು ಪಿಎ ಎಂದು ಆರ್​ಐ ಸಂತೋಷ್​ಗೆ ಆರೋಪಿ ರಘುನಾಥ ಫೋನ್​ ಕರೆ ಮಾಡಿದ್ದು, ತುರ್ತಾಗಿ 20,000 ರೂ. ನೀಡುವಂತೆ ಬೇಡಿಕೆಯಿಟ್ಟಿದ್ದ. ಇತ್ತ ರೆವಿನ್ಯೂ ಇನ್ಸ್​ಪೆಕ್ಟರ್ ಸಂತೋಷ್ 20,000 ರೂ. ಗೂಗಲ್​ಪೇ ಮಾಡಿದ್ದಾರೆ. ಬಳಿಕ ಉಸ್ತುವಾರಿ ಸಚಿವರ ಕಚೇರಿಯಲ್ಲಿ ವಿಚಾರಿಸಿದಾಗ ಮೋಸ ಹೋಗಿರುವುದು ಬಯಲಾಗಿದೆ. ಕುಶಾಲನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಐಪಿಎಸ್, ಮಿಲ್ಟ್ರಿ ಅಧಿಕಾರಿಗಳ ಹೆಸರಲ್ಲಿ ವಂಚನೆ 

ಗದಗ: ಆನ್ ಲೈನ್ ವಂಚಕರು ಐಪಿಎಸ್, ಮಿಲ್ಟ್ರಿ ಅಧಿಕಾರಿಗಳ ಹೆಸರಲ್ಲಿ ಓರ್ವ ವ್ಯಕ್ತಿಗೆ ಸಾವಿರಾರೂ ರೂಪಾಯಿ ಪಂಗನಾಮ ಹಾಕಿದ್ದಾರೆ. ಚೆನ್ನಾಗಿ ಇಂಗ್ಲೀಷ್​​ನಲ್ಲಿ ಮಾತನಾಡಿ ವಂಚನೆ ಮಾಡಿದ್ದು, ವಂಚನೆಗೆ ಬಲಿಯಾದ ವ್ಯಕ್ತಿ ಹಣ ಕಳೆದುಕೊಂಡು ಈಗ ಒದ್ದಾಡುತ್ತಿದ್ದಾರೆ. ಸೈಬರ್ ಪೊಲೀಸರಿಗೆ ದೂರು ನೀಡಿದ್ದು, ಸೈಬರ್ ಪೊಲೀಸರು ನಿರ್ಲಕ್ಷ್ಯ ತೋರುತ್ತಿದ್ದಾರೆ ಅಂತ ಕಿಡಿಕಾರಿದ್ದರು.

ಇದನ್ನೂ ಓದಿ: ಜಿಲ್ಲಾ ಉಸ್ತುವಾರಿ ಸಚಿವರ ಹೆಸರಲ್ಲಿ ಬೆದರಿಕೆ ಆರೋಪ; ಕರವೇ ಜಿಲ್ಲಾಧ್ಯಕ್ಷನ ವಿರುದ್ಧ ಎಫ್​ಐಆರ್​​

ಜಿಲ್ಲೆಯಲ್ಲೊಂದು‌ ಅಂಥದ್ದೊಂದು ಪ್ರಕರಣ‌ ಇತ್ತೀಚೆಗೆ ಬೆಳಕಿಗೆ ಬಂದಿತ್ತು. ಕರ್ನಾಟಕದ ಐಪಿಎಸ್ ಅಧಿಕಾರಿ ರವಿ ಡಿ ಚೆನ್ನಣ್ಣವರ ಹಾಗೂ‌ ಸಿಆರ್‌ಪಿಎಫ್ ಯೋಧನ ಹೆಸರಲ್ಲಿ ಮೋಸ ವಂಚನೆ ಮಾಡಲಾಗಿತ್ತು. ಈ ವಂಚನೆ ಬಲಿಯಾದವ್ರೇ ಗದಗನ ಬೆಟಗೇರಿಯ ರಮೇಶ ಹತ್ತಿಕಾಳ. 55,000 ರೂಪಾಯಿ ಪಂಗನಾಮ ಹಾಕಿದ ಬಳಿಕ ಎಚ್ಚೆತ್ತುಕೊಂಡಿದ್ದಾರೆ. ಫೇಸ್ಬುಕ್ ಮೂಲಕ ರಮೇಶ ಎಂಬುವರನ್ನು ವಂಚನೆ ಮಾಡಿದ್ದರು.

ಕಾರಿನಲ್ಲಿಟ್ಟಿದ್ದ 10 ಲಕ್ಷ ರೂ. ಹಣ ಕದ್ದು ಪರಾರಿ 

ಚಿತ್ರದುರ್ಗ: ಜಿಲ್ಲೆಯ ಹೊಸದುರ್ಗದಲ್ಲಿ ಕಾರಿನಲ್ಲಿಟ್ಟಿದ್ದ 10 ಲಕ್ಷ ರೂ. ಹಣ ಕಳವು ಮಾಡಿರುವಂತಹ ಘಟನೆ ಹೊಸದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಲಕ್ಕಿಹಳ್ಳಿಯ ರೈತ ಮುದ್ದಪ್ಪ ಎಂಬುವರಿಗೆ ಸೇರಿದ್ದ 10 ಲಕ್ಷ ರೂ. ಹಣ ಕಳುವಾಗಿದೆ. ಬ್ಯಾಂಕ್​ನಿಂದ ಹಣ ಡ್ರಾ ಮಾಡಿಕೊಂಡು ಬಂದು ಕಾರಿನಲ್ಲಿಟ್ಟು, ಅಂಗಡಿಯೊಂದಕ್ಕೆ ತೆರಳಿದ್ದಾಗ ಕಳವು ಮಾಡಲಾಗಿದೆ.

ಇದನ್ನೂ ಓದಿ: ಆನ್​​​​ಲೈನ್​​​​ ಮೋಸ: 300 ರೂ. ಲಿಪ್‌ಸ್ಟಿಕ್​​ಗೆ 1 ಲಕ್ಷ ರೂ. ಕಳೆದುಕೊಂಡ ವೈದ್ಯೆ

ಹಣದ ಬ್ಯಾಗ್ ತೆಗೆದುಕೊಂಡು ಇಬ್ಬರು ಕಳ್ಳರು ಬೈಕ್​ನಲ್ಲಿ ಪರಾರಿ ಆಗಿದೆ. ಕಾರಿನಲ್ಲಿದ್ದ ಹಣ ಕಳವು ಮಾಡುತ್ತಿರುವ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆ ಆಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ