AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ತಿಂಗಳ ಬಳಿಕ ಪ್ರವಾಸಿಗರಿಗೆ ಓಪನ್ ಆಯ್ತು ಹಾರಂಗಿ, ಮತ್ತಿಗೋಡು ಆನೆ ಶಿಬಿರ: ಕಟ್ಟುನಿಟ್ಟಿನ ರೂಲ್ಸ್ ಜಾರಿ!

ದುಬಾರೆಯಲ್ಲಿ ಆನೆಗಳ ಸಂಘರ್ಷಕ್ಕೆ ಮಹಿಳೆ ಬಲಿಯಾದ ನಂತರ ಬಂದ್ ಮಾಡಲಾಗಿದ್ದ ಕೊಡಗು ಜಿಲ್ಲೆಯ ಹಾರಂಗಿ ಮತ್ತು ಮತ್ತಿಗೋಡು ಆನೆ ಶಿಬಿರಗಳು 5 ತಿಂಗಳ ಬಳಿಕ ಪ್ರವಾಸಿಗರಿಗೆ ತೆರೆದುಕೊಂಡಿವೆ. ಅರಣ್ಯ ಇಲಾಖೆಯು ಕಠಿಣ ಮಾರ್ಗಸೂಚಿ ಜಾರಿಗೊಳಿಸಿದ್ದು, ಆನೆಗಳಿಂದ 10 ಮೀಟರ್ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ ಹಾಗೂ ಸೆಲ್ಫಿ ಮತ್ತು ಸ್ಪರ್ಶಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

5 ತಿಂಗಳ ಬಳಿಕ ಪ್ರವಾಸಿಗರಿಗೆ ಓಪನ್ ಆಯ್ತು ಹಾರಂಗಿ, ಮತ್ತಿಗೋಡು ಆನೆ ಶಿಬಿರ: ಕಟ್ಟುನಿಟ್ಟಿನ ರೂಲ್ಸ್ ಜಾರಿ!
ಆನೆ ಶಿಬಿರ
ಗೋಪಾಲ್​ ಸೋಮಯ್ಯ
| Edited By: |

Updated on:Sep 12, 2026 | 11:01 AM

Share

ಮುಖ್ಯಾಂಶಗಳು

  • ಐದು ತಿಂಗಳ ಬಳಿಕ ಸಾರ್ವಜನಿಕರ ವೀಕ್ಷಣೆಗೆ ಮುಕ್ತವಾದ ಕೊಡಗಿನ ಆನೆ ಶಿಬಿರಗಳು.
  • ದುಬಾರೆಯಲ್ಲಿ ಆನೆಗಳ ಸಂಘರ್ಷಕ್ಕೆ ಮಹಿಳೆ ಬಲಿಯಾದ ಹಿನ್ನೆಲೆಯಲ್ಲಿ ಜಾರಿಯಾದ ಕಟ್ಟುನಿಟ್ಟಿನ ಮಾರ್ಗಸೂಚಿ.
  • ಆನೆಗಳಿಂದ 10 ಮೀಟರ್ ಅಂತರ ಕಡ್ಡಾಯ; ಮುಟ್ಟುವುದು, ಸೆಲ್ಫಿ ತೆಗೆಯುವುದು ನಿಷೇಧ.

ಕೊಡಗು, ಸೆಪ್ಟೆಂಬರ್ 12: ಐದು ತಿಂಗಳ ಹಿಂದೆ ದುಬಾರೆ ಆನೆ ಶಿಬಿರದಲ್ಲಿ ಆನೆಗಳ ನಡುವಿನ ಸಂಘರ್ಷಕ್ಕೆ ಪ್ರವಾಸಿ ಮಹಿಳೆ ಬಲಿಯಾಗಿದ್ದರು. ಈ ಭೀಕರ ದುರಂತದ ಬೆನ್ನಲ್ಲೇ ಭದ್ರತಾ ಹಿತದೃಷ್ಟಿಯಿಂದ ಬಂದ್ ಮಾಡಲಾಗಿದ್ದ ಕೊಡಗು ಜಿಲ್ಲೆಯ ಹಾರಂಗಿ ಹಾಗೂ ಮತ್ತಿಗೋಡು ಆನೆ ಶಿಬಿರಗಳು ಇದೀಗ ಪ್ರವಾಸಿಗರಿಗೆ ಪುನಃ ಮುಕ್ತವಾಗಿವೆ. ಆದರೆ, ಅರಣ್ಯ ಇಲಾಖೆಯು ಸಾರ್ವಜನಿಕರ ಸುರಕ್ಷತೆಗಾಗಿ ಕಟ್ಟುನಿಟ್ಟಿನ ಹೊಸ ಮಾರ್ಗಸೂಚಿಗಳನ್ನು ಜಾರಿಗೆ ತಂದಿದೆ.

ಬಹು ದಿನಗಳ ನಂತರ ಪ್ರವಾಸಿಗರಿಗೆ ಸಿಕ್ಕ ಆನೆ ವೀಕ್ಷಣೆಯ ಅವಕಾಶ

ಐದು ತಿಂಗಳ ಸುದೀರ್ಘ ವಿರಾಮದ ಬಳಿಕ ಇದೀಗ ಕುಶಾಲನಗರ ತಾಲೂಕಿನ ಹಾರಂಗಿ ಹಾಗೂ ಮತ್ತಿಗೋಡು ಆನೆ ಶಿಬಿರಗಳು ಪ್ರವಾಸಿಗರ ವೀಕ್ಷಣೆಗೆ ಪುನಃ ಮುಕ್ತಗೊಂಡಿವೆ. ಜಿಲ್ಲೆಯ ಪ್ರಸಿದ್ದ ಪ್ರವಾಸಿ ತಾಣವಾದ ದುಬಾರೆ ಆನೆ ಶಿಬಿರದಲ್ಲಿ ಐದು ತಿಂಗಳ ಹಿಂದೆ ಭೀಕರ ದುರಂತವೊಂದು ಸಂಭವಿಸಿತ್ತು. ಆನೆಗಳ ನಡುವೆ ನಡೆದ ದಿಢೀರ್ ಸಂಘರ್ಷದ ವೇಳೆ ಪ್ರವಾಸಿ ಮಹಿಳೆಯೊಬ್ಬರು ಕಾಲ್ತುಳಿತಕ್ಕೆ ಸಿಲುಕಿ ದುರಂತವಾಗಿ ಮೃತಪಟ್ಟಿದ್ದರು. ಈ ಆಘಾತಕಾರಿ ಘಟನೆಯ ನಂತರ ಪ್ರವಾಸಿಗರ ಭದ್ರತೆಯ ಹಿತದೃಷ್ಟಿಯಿಂದ ಅರಣ್ಯ ಇಲಾಖೆಯು ಜಿಲ್ಲೆಯ ಹಾರಂಗಿ ಹಾಗೂ ಮತ್ತಿಗೋಡು ಆನೆ ಶಿಬಿರಗಳನ್ನು ಸಾರ್ವಜನಿಕರ ವೀಕ್ಷಣೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಬಂದ್ ಮಾಡಿ ಆದೇಶಿಸಿತ್ತು. ಇದೀಗ ಆನೆ ಶಿಬಿರಗಳು ತೆರೆದಿದ್ದರೂ ಅರಣ್ಯ ಇಲಾಖೆಯು ಪ್ರವಾಸಿಗರ ಸುರಕ್ಷತೆಗಾಗಿ ಅತ್ಯಂತ ಕಟ್ಟುನಿಟ್ಟಿನ ಹೊಸ ಮಾರ್ಗಸೂಚಿಗಳನ್ನು ಜಾರಿಗೆ ತಂದಿದೆ.

ಹೊಸ ಮಾರ್ಗಸೂಚಿಯ ಕಠಿಣ ನಿಯಮಗಳು

  • 10 ಮೀಟರ್ ಅಂತರ ಕಡ್ಡಾಯ: ಪ್ರವಾಸಿಗರು ಆನೆಗಳಿಂದ ಕನಿಷ್ಠ 10 ಮೀಟರ್ ಸುರಕ್ಷಿತ ಅಂತರ ಕಾಯ್ದುಕೊಂಡು ಮಾತ್ರ ವೀಕ್ಷಣೆ ಮಾಡಬೇಕು.
  • ಆನೆಗಳನ್ನು ಮುಟ್ಟುವಂತಿಲ್ಲ: ಆನೆಗಳನ್ನು ಮುಟ್ಟುವುದು, ಅವುಗಳಿಗೆ ನೀರು ಹಾಕುವುದು ಅಥವಾ ಸ್ನಾನ ಮಾಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
  • ಸೆಲ್ಫಿಗೆ ತಡೆ: ಪ್ರವಾಸಿಗರು ಅಪಾಯಕಾರಿಯಾಗಿ ಆನೆಗಳ ತೀರಾ ಹತ್ತಿರ ತೆರಳಿ ಸೆಲ್ಫಿ ಅಥವಾ ಫೋಟೋ ತೆಗೆದುಕೊಳ್ಳಲು ಅವಕಾಶವಿಲ್ಲ.

ಈ ಸುಂದರ ಅನುಭವ ನಿರಂತರವಾಗಿರಬೇಕಾದರೆ, ಪ್ರವಾಸಿಗರು ಇಲಾಖೆಯ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಆನೆಗಳಿಂದ ಸುರಕ್ಷಿತ ಅಂತರ ಕಾಯ್ದುಕೊಳ್ಳುವುದು ಅತ್ಯಗತ್ಯ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:59 am, Sat, 12 September 26

Follow Us