
ಕೊಡಗು, ಸೆಪ್ಟೆಂಬರ್ 12: ಐದು ತಿಂಗಳ ಹಿಂದೆ ದುಬಾರೆ ಆನೆ ಶಿಬಿರದಲ್ಲಿ ಆನೆಗಳ ನಡುವಿನ ಸಂಘರ್ಷಕ್ಕೆ ಪ್ರವಾಸಿ ಮಹಿಳೆ ಬಲಿಯಾಗಿದ್ದರು. ಈ ಭೀಕರ ದುರಂತದ ಬೆನ್ನಲ್ಲೇ ಭದ್ರತಾ ಹಿತದೃಷ್ಟಿಯಿಂದ ಬಂದ್ ಮಾಡಲಾಗಿದ್ದ ಕೊಡಗು ಜಿಲ್ಲೆಯ ಹಾರಂಗಿ ಹಾಗೂ ಮತ್ತಿಗೋಡು ಆನೆ ಶಿಬಿರಗಳು ಇದೀಗ ಪ್ರವಾಸಿಗರಿಗೆ ಪುನಃ ಮುಕ್ತವಾಗಿವೆ. ಆದರೆ, ಅರಣ್ಯ ಇಲಾಖೆಯು ಸಾರ್ವಜನಿಕರ ಸುರಕ್ಷತೆಗಾಗಿ ಕಟ್ಟುನಿಟ್ಟಿನ ಹೊಸ ಮಾರ್ಗಸೂಚಿಗಳನ್ನು ಜಾರಿಗೆ ತಂದಿದೆ.
ಐದು ತಿಂಗಳ ಸುದೀರ್ಘ ವಿರಾಮದ ಬಳಿಕ ಇದೀಗ ಕುಶಾಲನಗರ ತಾಲೂಕಿನ ಹಾರಂಗಿ ಹಾಗೂ ಮತ್ತಿಗೋಡು ಆನೆ ಶಿಬಿರಗಳು ಪ್ರವಾಸಿಗರ ವೀಕ್ಷಣೆಗೆ ಪುನಃ ಮುಕ್ತಗೊಂಡಿವೆ. ಜಿಲ್ಲೆಯ ಪ್ರಸಿದ್ದ ಪ್ರವಾಸಿ ತಾಣವಾದ ದುಬಾರೆ ಆನೆ ಶಿಬಿರದಲ್ಲಿ ಐದು ತಿಂಗಳ ಹಿಂದೆ ಭೀಕರ ದುರಂತವೊಂದು ಸಂಭವಿಸಿತ್ತು. ಆನೆಗಳ ನಡುವೆ ನಡೆದ ದಿಢೀರ್ ಸಂಘರ್ಷದ ವೇಳೆ ಪ್ರವಾಸಿ ಮಹಿಳೆಯೊಬ್ಬರು ಕಾಲ್ತುಳಿತಕ್ಕೆ ಸಿಲುಕಿ ದುರಂತವಾಗಿ ಮೃತಪಟ್ಟಿದ್ದರು. ಈ ಆಘಾತಕಾರಿ ಘಟನೆಯ ನಂತರ ಪ್ರವಾಸಿಗರ ಭದ್ರತೆಯ ಹಿತದೃಷ್ಟಿಯಿಂದ ಅರಣ್ಯ ಇಲಾಖೆಯು ಜಿಲ್ಲೆಯ ಹಾರಂಗಿ ಹಾಗೂ ಮತ್ತಿಗೋಡು ಆನೆ ಶಿಬಿರಗಳನ್ನು ಸಾರ್ವಜನಿಕರ ವೀಕ್ಷಣೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಬಂದ್ ಮಾಡಿ ಆದೇಶಿಸಿತ್ತು. ಇದೀಗ ಆನೆ ಶಿಬಿರಗಳು ತೆರೆದಿದ್ದರೂ ಅರಣ್ಯ ಇಲಾಖೆಯು ಪ್ರವಾಸಿಗರ ಸುರಕ್ಷತೆಗಾಗಿ ಅತ್ಯಂತ ಕಟ್ಟುನಿಟ್ಟಿನ ಹೊಸ ಮಾರ್ಗಸೂಚಿಗಳನ್ನು ಜಾರಿಗೆ ತಂದಿದೆ.
ಈ ಸುಂದರ ಅನುಭವ ನಿರಂತರವಾಗಿರಬೇಕಾದರೆ, ಪ್ರವಾಸಿಗರು ಇಲಾಖೆಯ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಆನೆಗಳಿಂದ ಸುರಕ್ಷಿತ ಅಂತರ ಕಾಯ್ದುಕೊಳ್ಳುವುದು ಅತ್ಯಗತ್ಯ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:59 am, Sat, 12 September 26