AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗಿನಲ್ಲಿ ಮುಂದುವರಿದ ವ್ಯಘ್ರ ಪ್ರತಾಪ: 24 ಗಂಟೆಯಲ್ಲಿ ಹುಲಿ ದಾಳಿಗೆ ಒಂದೇ ಗ್ರಾಮದಲ್ಲಿ ಇಬ್ಬರ ಸಾವು, ಜನರಲ್ಲಿ ಭಾರೀ ಆತಂಕ

ಭಾನುವಾರ ಸಂಜೆ ಹುಲಿ ದಾಳಿಗೆ ಚೇತನ್ (18) ಎಂಬ ಯುವಕ ಮೃತಪಟ್ಟಿದ್ದ. ಇಂದು ಸೋಮವಾರ ಬೆಳಗ್ಗೆ ರಾಜು (75) ಎಂಬುವವರು ಹುಲಿ ದಾಳಿಗೆ ಬಲಿಯಾಗಿದ್ದಾರೆ.

ಕೊಡಗಿನಲ್ಲಿ ಮುಂದುವರಿದ ವ್ಯಘ್ರ ಪ್ರತಾಪ: 24 ಗಂಟೆಯಲ್ಲಿ ಹುಲಿ ದಾಳಿಗೆ ಒಂದೇ ಗ್ರಾಮದಲ್ಲಿ ಇಬ್ಬರ ಸಾವು, ಜನರಲ್ಲಿ ಭಾರೀ ಆತಂಕ
ಪ್ರಾತಿನಿಧಿಕ ಚಿತ್ರ Image Credit source: hindustantimes.com
TV9 Web
| Edited By: ಆಯೇಷಾ ಬಾನು|

Updated on:Feb 13, 2023 | 12:28 PM

Share

ಮಡಿಕೇರಿ: ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ನಾಲ್ಕೇರಿ ಗ್ರಾಮದ ಬಳಿ ಹುಲಿ ದಾಳಿಗೆ ಮತ್ತೊಂದು ಬಲಿಯಾಗಿದೆ. ಕಳೆದ 24 ಗಂಟೆಯಲ್ಲಿ ಹುಲಿ ದಾಳಿಗೆ ಒಂದೇ ಗ್ರಾಮಕ್ಕೆ ಸೇರಿದ ಇಬ್ಬರು ಮೃತಪಟ್ಟಿದ್ದಾರೆ. ಮೈಸೂರು ಜಿಲ್ಲೆಯ ಕೊಳವಿಗೆ ಹಾಡಿ ನಿವಾಸಿ ರಾಜು(75) ಹುಲಿ ದಾಳಿಗೆ ಮೃತಪಟ್ಟ ವೃದ್ಧ.

ಭಾನುವಾರ ಸಂಜೆ ಹುಲಿ ದಾಳಿಗೆ ಚೇತನ್ (18) ಎಂಬ ಯುವಕ ಮೃತಪಟ್ಟಿದ್ದ. ಇಂದು ಸೋಮವಾರ ಬೆಳಗ್ಗೆ ರಾಜು (75) ಎಂಬುವವರು ಹುಲಿ ದಾಳಿಗೆ ಬಲಿಯಾಗಿದ್ದಾರೆ. ಇನ್ನು ರಾಜು ಮೇಲೆ ನಡೆದ ಹುಲಿ ದಾಳಿ ತಡೆಯಲು ಯತ್ನಿಸಿದ ರಾಜು ಪುತ್ರ ಹಾಗೂ ಮೃತ ಚೇತನ್ ತಂದೆ ಮಧು ಅವರಿಗೂ ಗಾಯಗಳಾಗಿವೆ. ಅವರನ್ನು‌ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಹಾಡಹಗಲೇ ಹುಲಿಯೊಂದು ರಸ್ತೆ ದಾಟುತ್ತಿರುವ ವಿಡಿಯೋ ವೈರಲ್

ಮೃತ ರಾಜು ಪೂಣಚ್ಚ ಎಂಬುವರ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದರು. 24 ಗಂಟೆಗಳಲ್ಲಿ ಹುಲಿ ದಾಳಿಗೆ ಇಬ್ಬರ ಬಲಿ ಹಿನ್ನೆಲೆ ತೋಟಗಳಿಗೆ ತೆರಳಲು ಜನ ಹೆದರುತ್ತಿದ್ದಾರೆ. ನರಭಕ್ಷಕ ಹುಲಿಯನ್ನು ಕೂಡಲೇ ಸೆರೆಹಿಡಿಯುವಂತೆ ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನೀರಿನ ಟ್ಯಾಂಕ್​​ಗೆ ಬಿದ್ದಿದ್ದ ಜಿಂಕೆ ರಕ್ಷಣೆ

ಧಾರವಾಡ: ನಗರದ ಸುತ್ತೂರು ಬಡಾವಣೆಯಲ್ಲಿ ನೀರಿನ ಟ್ಯಾಂಕ್​​ಗೆ ಬಿದ್ದಿದ್ದ ಜಿಂಕೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಿಸಿದ್ದಾರೆ. ಜಿಂಕೆಯನ್ನು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:33 am, Mon, 13 February 23

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?