AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಲ್ಫಿ ತೆಗೆದುಕೊಳ್ಳಲು ಹೋಗಿ ಪ್ರವಾಸಿಗ ನೀರುಪಾಲು: ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ

Kodagu News: ಬೆಂಗಳೂರು ಮೂಲದ ಪ್ರವಾಸಿಗ ಡ್ಯಾಂ ಬಳಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ನೀರುಪಾಲಾಗಿರುವಂತಹ ಘಟನೆ ಕೊಡಗು ಜಿಲ್ಲೆಯ ಕುಶಾನಗರ ತಾಲೂಕಿನ ಹಾರಂಗಿ ಡ್ಯಾಂ ಮುಂಭಾಗದ ಸೇತುವೆ ಬಳಿ ನಡೆದಿದೆ.

ಸೆಲ್ಫಿ ತೆಗೆದುಕೊಳ್ಳಲು ಹೋಗಿ ಪ್ರವಾಸಿಗ ನೀರುಪಾಲು: ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ
ಅಗ್ನಿಶಾಮಕ ಸಿಬ್ಬಂದಿಯಿಂದ ಸಂದೀಪ್​ಗಾಗಿ ಶೋಧ
Gopal AS
| Edited By: |

Updated on:Aug 03, 2023 | 7:53 PM

Share

ಕೊಡಗು, ಆಗಸ್ಟ್​ 03: ಡ್ಯಾಂ ಬಳಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಪ್ರವಾಸಿಗ (tourist) ನೀರುಪಾಲಾಗಿರುವಂತಹ ಘಟನೆ ಜಿಲ್ಲೆಯ ಕುಶಾನಗರ ತಾಲೂಕಿನ ಹಾರಂಗಿ ಡ್ಯಾಂ ಮುಂಭಾಗದ ಸೇತುವೆ ಬಳಿ ನಡೆದಿದೆ. ಬೆಂಗಳೂರು ಮೂಲದ ಪ್ರವಾಸಿಗ ಸಂದೀಪ್​ ನೀರುಪಾಲಾದ ಪ್ರವಾಸಿಗ. ಮೂವರು ಸ್ನೇಹಿತರ ಜೊತೆ ಸಂದೀಪ್ ಹಾರಂಗಿ ಜಲಾಶಯಕ್ಕೆ ಬಂದಿದ್ದ. ಪೊಲೀಸರು, ಅಗ್ನಿಶಾಮಕ ಸಿಬ್ಬಂದಿಯಿಂದ ಸಂದೀಪ್​ಗಾಗಿ ಶೋಧ ಕಾರ್ಯ ಆರಂಭಿಸಲಾಗಿದೆ. ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಹರಿಹರ ಬಳಿ ನದಿ ನೋಡಲು ಬಂದಿದ್ದ ತಾಯಿ-ಮಗಳು ನೀರುಪಾಲು

ದಾವಣಗೆರೆ: ನದಿ‌ ನೋಡಲು ಬಂದ ತಾಯಿ ಮಗಳು‌ ನೀರುಪಾಲಾಗಿರುವಂತಹ ಘಟನೆ ಜಿಲ್ಲೆಯ ಹರಿಹರ ನಗರದ ರಾಘವೇಂದ್ರ ಮಠದ ಬಳಿಯ ತುಂಗಭದ್ರ ನದಿಯಲ್ಲಿ ನಡೆದಿದೆ. ನದಿಗೆ ಇಳಿದು ಮುಖ ತೊಳೆದು ಕೊಳ್ಳುತ್ತಿದ್ದ 25 ವರ್ಷದ ತಾಯಿ ಕಾಲು ಜಾರಿ ನೀರಿಗೆ ಬಿದಿದ್ದಾರೆ. ಈ ವೇಳೆ ಜೊತೆಗಿದ್ದ ಎಳರಿಂದ ಎಂಟು ವರ್ಷದ ಮಗಳು ತಾಯಿ ಕೈ ಹಿಡಿಯಲು ಹೋಗಿ ಆಕೆಯೂ ಸಹ ನೀರು‌ಪಾಲಾಗಿದ್ದಾಳೆ. ಘಟನೆ ಬಗ್ಗೆ ಪ್ರತ್ಯಕ್ಷ ದರ್ಶಿಗಳಿಂದ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

ಇದನ್ನೂ ಓದಿ: ಪೋಷಕರ ಮೇಲಿನ ಸೇಡಿಗೆ ಮಕ್ಕಳ ಮೇಲೆ ರಿವೇಂಜ್​​: ಕಿಡಿಗೇಡಿಗಳಿಂದ ಮಕ್ಕಳಿಗೆ ವಿಷಪ್ರಾಶನ

ಇತ್ತೀಚಿಗೆ ಉತ್ತಮ‌ ಮಳೆಯಾದ ಹಿನ್ನೆಲೆ ನದಿಯ‌ನೀರಿನ ಮಟ್ಟ ಹೆಚ್ಚಳವಾಗಿದ್ದು ನದಿ ನೋಡಲು ಸುತ್ತಮುತ್ತಲ ಪ್ರದೇಶದ ಜನ ಹರಿಹರಕ್ಕೆ ಆಗಮಿಸುತ್ತಿದ್ದಾರೆ. ಅದೇ ರೀತಿಯಾಗಿ ನದಿ ನೋಡಲು ಬಂದಾಗ ತಾಯಿ ಮಗಳು ನೀರು ಪಾಲಾಗಿದ್ದಾರೆ.

ಇದನ್ನೂ ಓದಿ: Crime News: ಇಬ್ಬರು ಹೆಣ್ಣುಮಕ್ಕಳನ್ನು ಕೊಂದು ತಾವೂ ಆತ್ಮಹತ್ಯೆಗೆ ಶರಣಾದ ತಂದೆ-ತಾಯಿ

ಬ್ಯಾಗ ಪರಿಶೀಲನೆ ವೇಳೆ ದಾವಣಗೆರೆಯಿಂದ ಹರಿಹರಕ್ಕೆ ಬಂದಿರುವ ಬಸ್ ಟಿಕೆಟ್ ಹಾಗೂ ಐದರಿಂದ ಆರು ನೂರು ರೂಪಾಯಿ ಹಣ ಪತ್ತೆಯಾಗಿದೆ. ಹರಿಹರ‌ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಶೋಧ ಕಾರ್ಯ ಆರಂಭಿಸಿದ್ದು, ಈಜು‌ ಪರಿಣಿತರು ಹಾಗೂ ಅಗ್ನಿ ಶಾಮಕ‌ದಳದ ಸಿಬ್ಬಂದಿಯಿಂದ ಕಾರ್ಯಚರಣೆ ಮಾಡಲಾಗುತ್ತಿದೆ. ತಾಯಿ-ಮಗಳ ಗುರುತು ಪತ್ತೆ ಹಚ್ಚುವ ಕೆಲಸ ಪೊಲೀಸರು ಮಾಡುತ್ತಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:45 pm, Thu, 3 August 23

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?