AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಲ್ಫಿ ತೆಗೆದುಕೊಳ್ಳಲು ಹೋಗಿ ಪ್ರವಾಸಿಗ ನೀರುಪಾಲು: ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ

Kodagu News: ಬೆಂಗಳೂರು ಮೂಲದ ಪ್ರವಾಸಿಗ ಡ್ಯಾಂ ಬಳಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ನೀರುಪಾಲಾಗಿರುವಂತಹ ಘಟನೆ ಕೊಡಗು ಜಿಲ್ಲೆಯ ಕುಶಾನಗರ ತಾಲೂಕಿನ ಹಾರಂಗಿ ಡ್ಯಾಂ ಮುಂಭಾಗದ ಸೇತುವೆ ಬಳಿ ನಡೆದಿದೆ.

ಸೆಲ್ಫಿ ತೆಗೆದುಕೊಳ್ಳಲು ಹೋಗಿ ಪ್ರವಾಸಿಗ ನೀರುಪಾಲು: ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ
ಅಗ್ನಿಶಾಮಕ ಸಿಬ್ಬಂದಿಯಿಂದ ಸಂದೀಪ್​ಗಾಗಿ ಶೋಧ
Gopal AS
| Edited By: |

Updated on:Aug 03, 2023 | 7:53 PM

Share

ಕೊಡಗು, ಆಗಸ್ಟ್​ 03: ಡ್ಯಾಂ ಬಳಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಪ್ರವಾಸಿಗ (tourist) ನೀರುಪಾಲಾಗಿರುವಂತಹ ಘಟನೆ ಜಿಲ್ಲೆಯ ಕುಶಾನಗರ ತಾಲೂಕಿನ ಹಾರಂಗಿ ಡ್ಯಾಂ ಮುಂಭಾಗದ ಸೇತುವೆ ಬಳಿ ನಡೆದಿದೆ. ಬೆಂಗಳೂರು ಮೂಲದ ಪ್ರವಾಸಿಗ ಸಂದೀಪ್​ ನೀರುಪಾಲಾದ ಪ್ರವಾಸಿಗ. ಮೂವರು ಸ್ನೇಹಿತರ ಜೊತೆ ಸಂದೀಪ್ ಹಾರಂಗಿ ಜಲಾಶಯಕ್ಕೆ ಬಂದಿದ್ದ. ಪೊಲೀಸರು, ಅಗ್ನಿಶಾಮಕ ಸಿಬ್ಬಂದಿಯಿಂದ ಸಂದೀಪ್​ಗಾಗಿ ಶೋಧ ಕಾರ್ಯ ಆರಂಭಿಸಲಾಗಿದೆ. ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಹರಿಹರ ಬಳಿ ನದಿ ನೋಡಲು ಬಂದಿದ್ದ ತಾಯಿ-ಮಗಳು ನೀರುಪಾಲು

ದಾವಣಗೆರೆ: ನದಿ‌ ನೋಡಲು ಬಂದ ತಾಯಿ ಮಗಳು‌ ನೀರುಪಾಲಾಗಿರುವಂತಹ ಘಟನೆ ಜಿಲ್ಲೆಯ ಹರಿಹರ ನಗರದ ರಾಘವೇಂದ್ರ ಮಠದ ಬಳಿಯ ತುಂಗಭದ್ರ ನದಿಯಲ್ಲಿ ನಡೆದಿದೆ. ನದಿಗೆ ಇಳಿದು ಮುಖ ತೊಳೆದು ಕೊಳ್ಳುತ್ತಿದ್ದ 25 ವರ್ಷದ ತಾಯಿ ಕಾಲು ಜಾರಿ ನೀರಿಗೆ ಬಿದಿದ್ದಾರೆ. ಈ ವೇಳೆ ಜೊತೆಗಿದ್ದ ಎಳರಿಂದ ಎಂಟು ವರ್ಷದ ಮಗಳು ತಾಯಿ ಕೈ ಹಿಡಿಯಲು ಹೋಗಿ ಆಕೆಯೂ ಸಹ ನೀರು‌ಪಾಲಾಗಿದ್ದಾಳೆ. ಘಟನೆ ಬಗ್ಗೆ ಪ್ರತ್ಯಕ್ಷ ದರ್ಶಿಗಳಿಂದ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

ಇದನ್ನೂ ಓದಿ: ಪೋಷಕರ ಮೇಲಿನ ಸೇಡಿಗೆ ಮಕ್ಕಳ ಮೇಲೆ ರಿವೇಂಜ್​​: ಕಿಡಿಗೇಡಿಗಳಿಂದ ಮಕ್ಕಳಿಗೆ ವಿಷಪ್ರಾಶನ

ಇತ್ತೀಚಿಗೆ ಉತ್ತಮ‌ ಮಳೆಯಾದ ಹಿನ್ನೆಲೆ ನದಿಯ‌ನೀರಿನ ಮಟ್ಟ ಹೆಚ್ಚಳವಾಗಿದ್ದು ನದಿ ನೋಡಲು ಸುತ್ತಮುತ್ತಲ ಪ್ರದೇಶದ ಜನ ಹರಿಹರಕ್ಕೆ ಆಗಮಿಸುತ್ತಿದ್ದಾರೆ. ಅದೇ ರೀತಿಯಾಗಿ ನದಿ ನೋಡಲು ಬಂದಾಗ ತಾಯಿ ಮಗಳು ನೀರು ಪಾಲಾಗಿದ್ದಾರೆ.

ಇದನ್ನೂ ಓದಿ: Crime News: ಇಬ್ಬರು ಹೆಣ್ಣುಮಕ್ಕಳನ್ನು ಕೊಂದು ತಾವೂ ಆತ್ಮಹತ್ಯೆಗೆ ಶರಣಾದ ತಂದೆ-ತಾಯಿ

ಬ್ಯಾಗ ಪರಿಶೀಲನೆ ವೇಳೆ ದಾವಣಗೆರೆಯಿಂದ ಹರಿಹರಕ್ಕೆ ಬಂದಿರುವ ಬಸ್ ಟಿಕೆಟ್ ಹಾಗೂ ಐದರಿಂದ ಆರು ನೂರು ರೂಪಾಯಿ ಹಣ ಪತ್ತೆಯಾಗಿದೆ. ಹರಿಹರ‌ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಶೋಧ ಕಾರ್ಯ ಆರಂಭಿಸಿದ್ದು, ಈಜು‌ ಪರಿಣಿತರು ಹಾಗೂ ಅಗ್ನಿ ಶಾಮಕ‌ದಳದ ಸಿಬ್ಬಂದಿಯಿಂದ ಕಾರ್ಯಚರಣೆ ಮಾಡಲಾಗುತ್ತಿದೆ. ತಾಯಿ-ಮಗಳ ಗುರುತು ಪತ್ತೆ ಹಚ್ಚುವ ಕೆಲಸ ಪೊಲೀಸರು ಮಾಡುತ್ತಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:45 pm, Thu, 3 August 23

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?