Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಲ್ಫಿ ತೆಗೆದುಕೊಳ್ಳಲು ಹೋಗಿ ಪ್ರವಾಸಿಗ ನೀರುಪಾಲು: ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ

Kodagu News: ಬೆಂಗಳೂರು ಮೂಲದ ಪ್ರವಾಸಿಗ ಡ್ಯಾಂ ಬಳಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ನೀರುಪಾಲಾಗಿರುವಂತಹ ಘಟನೆ ಕೊಡಗು ಜಿಲ್ಲೆಯ ಕುಶಾನಗರ ತಾಲೂಕಿನ ಹಾರಂಗಿ ಡ್ಯಾಂ ಮುಂಭಾಗದ ಸೇತುವೆ ಬಳಿ ನಡೆದಿದೆ.

ಸೆಲ್ಫಿ ತೆಗೆದುಕೊಳ್ಳಲು ಹೋಗಿ ಪ್ರವಾಸಿಗ ನೀರುಪಾಲು: ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ
ಅಗ್ನಿಶಾಮಕ ಸಿಬ್ಬಂದಿಯಿಂದ ಸಂದೀಪ್​ಗಾಗಿ ಶೋಧ
Follow us
Gopal AS
| Updated By: ಗಂಗಾಧರ​ ಬ. ಸಾಬೋಜಿ

Updated on:Aug 03, 2023 | 7:53 PM

ಕೊಡಗು, ಆಗಸ್ಟ್​ 03: ಡ್ಯಾಂ ಬಳಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಪ್ರವಾಸಿಗ (tourist) ನೀರುಪಾಲಾಗಿರುವಂತಹ ಘಟನೆ ಜಿಲ್ಲೆಯ ಕುಶಾನಗರ ತಾಲೂಕಿನ ಹಾರಂಗಿ ಡ್ಯಾಂ ಮುಂಭಾಗದ ಸೇತುವೆ ಬಳಿ ನಡೆದಿದೆ. ಬೆಂಗಳೂರು ಮೂಲದ ಪ್ರವಾಸಿಗ ಸಂದೀಪ್​ ನೀರುಪಾಲಾದ ಪ್ರವಾಸಿಗ. ಮೂವರು ಸ್ನೇಹಿತರ ಜೊತೆ ಸಂದೀಪ್ ಹಾರಂಗಿ ಜಲಾಶಯಕ್ಕೆ ಬಂದಿದ್ದ. ಪೊಲೀಸರು, ಅಗ್ನಿಶಾಮಕ ಸಿಬ್ಬಂದಿಯಿಂದ ಸಂದೀಪ್​ಗಾಗಿ ಶೋಧ ಕಾರ್ಯ ಆರಂಭಿಸಲಾಗಿದೆ. ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಹರಿಹರ ಬಳಿ ನದಿ ನೋಡಲು ಬಂದಿದ್ದ ತಾಯಿ-ಮಗಳು ನೀರುಪಾಲು

ದಾವಣಗೆರೆ: ನದಿ‌ ನೋಡಲು ಬಂದ ತಾಯಿ ಮಗಳು‌ ನೀರುಪಾಲಾಗಿರುವಂತಹ ಘಟನೆ ಜಿಲ್ಲೆಯ ಹರಿಹರ ನಗರದ ರಾಘವೇಂದ್ರ ಮಠದ ಬಳಿಯ ತುಂಗಭದ್ರ ನದಿಯಲ್ಲಿ ನಡೆದಿದೆ. ನದಿಗೆ ಇಳಿದು ಮುಖ ತೊಳೆದು ಕೊಳ್ಳುತ್ತಿದ್ದ 25 ವರ್ಷದ ತಾಯಿ ಕಾಲು ಜಾರಿ ನೀರಿಗೆ ಬಿದಿದ್ದಾರೆ. ಈ ವೇಳೆ ಜೊತೆಗಿದ್ದ ಎಳರಿಂದ ಎಂಟು ವರ್ಷದ ಮಗಳು ತಾಯಿ ಕೈ ಹಿಡಿಯಲು ಹೋಗಿ ಆಕೆಯೂ ಸಹ ನೀರು‌ಪಾಲಾಗಿದ್ದಾಳೆ. ಘಟನೆ ಬಗ್ಗೆ ಪ್ರತ್ಯಕ್ಷ ದರ್ಶಿಗಳಿಂದ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

ಇದನ್ನೂ ಓದಿ: ಪೋಷಕರ ಮೇಲಿನ ಸೇಡಿಗೆ ಮಕ್ಕಳ ಮೇಲೆ ರಿವೇಂಜ್​​: ಕಿಡಿಗೇಡಿಗಳಿಂದ ಮಕ್ಕಳಿಗೆ ವಿಷಪ್ರಾಶನ

ಇತ್ತೀಚಿಗೆ ಉತ್ತಮ‌ ಮಳೆಯಾದ ಹಿನ್ನೆಲೆ ನದಿಯ‌ನೀರಿನ ಮಟ್ಟ ಹೆಚ್ಚಳವಾಗಿದ್ದು ನದಿ ನೋಡಲು ಸುತ್ತಮುತ್ತಲ ಪ್ರದೇಶದ ಜನ ಹರಿಹರಕ್ಕೆ ಆಗಮಿಸುತ್ತಿದ್ದಾರೆ. ಅದೇ ರೀತಿಯಾಗಿ ನದಿ ನೋಡಲು ಬಂದಾಗ ತಾಯಿ ಮಗಳು ನೀರು ಪಾಲಾಗಿದ್ದಾರೆ.

ಇದನ್ನೂ ಓದಿ: Crime News: ಇಬ್ಬರು ಹೆಣ್ಣುಮಕ್ಕಳನ್ನು ಕೊಂದು ತಾವೂ ಆತ್ಮಹತ್ಯೆಗೆ ಶರಣಾದ ತಂದೆ-ತಾಯಿ

ಬ್ಯಾಗ ಪರಿಶೀಲನೆ ವೇಳೆ ದಾವಣಗೆರೆಯಿಂದ ಹರಿಹರಕ್ಕೆ ಬಂದಿರುವ ಬಸ್ ಟಿಕೆಟ್ ಹಾಗೂ ಐದರಿಂದ ಆರು ನೂರು ರೂಪಾಯಿ ಹಣ ಪತ್ತೆಯಾಗಿದೆ. ಹರಿಹರ‌ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಶೋಧ ಕಾರ್ಯ ಆರಂಭಿಸಿದ್ದು, ಈಜು‌ ಪರಿಣಿತರು ಹಾಗೂ ಅಗ್ನಿ ಶಾಮಕ‌ದಳದ ಸಿಬ್ಬಂದಿಯಿಂದ ಕಾರ್ಯಚರಣೆ ಮಾಡಲಾಗುತ್ತಿದೆ. ತಾಯಿ-ಮಗಳ ಗುರುತು ಪತ್ತೆ ಹಚ್ಚುವ ಕೆಲಸ ಪೊಲೀಸರು ಮಾಡುತ್ತಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:45 pm, Thu, 3 August 23

ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?