AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಲ್ಫಿ ತೆಗೆದುಕೊಳ್ಳಲು ಹೋಗಿ ಪ್ರವಾಸಿಗ ನೀರುಪಾಲು: ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ

Kodagu News: ಬೆಂಗಳೂರು ಮೂಲದ ಪ್ರವಾಸಿಗ ಡ್ಯಾಂ ಬಳಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ನೀರುಪಾಲಾಗಿರುವಂತಹ ಘಟನೆ ಕೊಡಗು ಜಿಲ್ಲೆಯ ಕುಶಾನಗರ ತಾಲೂಕಿನ ಹಾರಂಗಿ ಡ್ಯಾಂ ಮುಂಭಾಗದ ಸೇತುವೆ ಬಳಿ ನಡೆದಿದೆ.

ಸೆಲ್ಫಿ ತೆಗೆದುಕೊಳ್ಳಲು ಹೋಗಿ ಪ್ರವಾಸಿಗ ನೀರುಪಾಲು: ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ
ಅಗ್ನಿಶಾಮಕ ಸಿಬ್ಬಂದಿಯಿಂದ ಸಂದೀಪ್​ಗಾಗಿ ಶೋಧ
Gopal AS
| Edited By: |

Updated on:Aug 03, 2023 | 7:53 PM

Share

ಕೊಡಗು, ಆಗಸ್ಟ್​ 03: ಡ್ಯಾಂ ಬಳಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಪ್ರವಾಸಿಗ (tourist) ನೀರುಪಾಲಾಗಿರುವಂತಹ ಘಟನೆ ಜಿಲ್ಲೆಯ ಕುಶಾನಗರ ತಾಲೂಕಿನ ಹಾರಂಗಿ ಡ್ಯಾಂ ಮುಂಭಾಗದ ಸೇತುವೆ ಬಳಿ ನಡೆದಿದೆ. ಬೆಂಗಳೂರು ಮೂಲದ ಪ್ರವಾಸಿಗ ಸಂದೀಪ್​ ನೀರುಪಾಲಾದ ಪ್ರವಾಸಿಗ. ಮೂವರು ಸ್ನೇಹಿತರ ಜೊತೆ ಸಂದೀಪ್ ಹಾರಂಗಿ ಜಲಾಶಯಕ್ಕೆ ಬಂದಿದ್ದ. ಪೊಲೀಸರು, ಅಗ್ನಿಶಾಮಕ ಸಿಬ್ಬಂದಿಯಿಂದ ಸಂದೀಪ್​ಗಾಗಿ ಶೋಧ ಕಾರ್ಯ ಆರಂಭಿಸಲಾಗಿದೆ. ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಹರಿಹರ ಬಳಿ ನದಿ ನೋಡಲು ಬಂದಿದ್ದ ತಾಯಿ-ಮಗಳು ನೀರುಪಾಲು

ದಾವಣಗೆರೆ: ನದಿ‌ ನೋಡಲು ಬಂದ ತಾಯಿ ಮಗಳು‌ ನೀರುಪಾಲಾಗಿರುವಂತಹ ಘಟನೆ ಜಿಲ್ಲೆಯ ಹರಿಹರ ನಗರದ ರಾಘವೇಂದ್ರ ಮಠದ ಬಳಿಯ ತುಂಗಭದ್ರ ನದಿಯಲ್ಲಿ ನಡೆದಿದೆ. ನದಿಗೆ ಇಳಿದು ಮುಖ ತೊಳೆದು ಕೊಳ್ಳುತ್ತಿದ್ದ 25 ವರ್ಷದ ತಾಯಿ ಕಾಲು ಜಾರಿ ನೀರಿಗೆ ಬಿದಿದ್ದಾರೆ. ಈ ವೇಳೆ ಜೊತೆಗಿದ್ದ ಎಳರಿಂದ ಎಂಟು ವರ್ಷದ ಮಗಳು ತಾಯಿ ಕೈ ಹಿಡಿಯಲು ಹೋಗಿ ಆಕೆಯೂ ಸಹ ನೀರು‌ಪಾಲಾಗಿದ್ದಾಳೆ. ಘಟನೆ ಬಗ್ಗೆ ಪ್ರತ್ಯಕ್ಷ ದರ್ಶಿಗಳಿಂದ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

ಇದನ್ನೂ ಓದಿ: ಪೋಷಕರ ಮೇಲಿನ ಸೇಡಿಗೆ ಮಕ್ಕಳ ಮೇಲೆ ರಿವೇಂಜ್​​: ಕಿಡಿಗೇಡಿಗಳಿಂದ ಮಕ್ಕಳಿಗೆ ವಿಷಪ್ರಾಶನ

ಇತ್ತೀಚಿಗೆ ಉತ್ತಮ‌ ಮಳೆಯಾದ ಹಿನ್ನೆಲೆ ನದಿಯ‌ನೀರಿನ ಮಟ್ಟ ಹೆಚ್ಚಳವಾಗಿದ್ದು ನದಿ ನೋಡಲು ಸುತ್ತಮುತ್ತಲ ಪ್ರದೇಶದ ಜನ ಹರಿಹರಕ್ಕೆ ಆಗಮಿಸುತ್ತಿದ್ದಾರೆ. ಅದೇ ರೀತಿಯಾಗಿ ನದಿ ನೋಡಲು ಬಂದಾಗ ತಾಯಿ ಮಗಳು ನೀರು ಪಾಲಾಗಿದ್ದಾರೆ.

ಇದನ್ನೂ ಓದಿ: Crime News: ಇಬ್ಬರು ಹೆಣ್ಣುಮಕ್ಕಳನ್ನು ಕೊಂದು ತಾವೂ ಆತ್ಮಹತ್ಯೆಗೆ ಶರಣಾದ ತಂದೆ-ತಾಯಿ

ಬ್ಯಾಗ ಪರಿಶೀಲನೆ ವೇಳೆ ದಾವಣಗೆರೆಯಿಂದ ಹರಿಹರಕ್ಕೆ ಬಂದಿರುವ ಬಸ್ ಟಿಕೆಟ್ ಹಾಗೂ ಐದರಿಂದ ಆರು ನೂರು ರೂಪಾಯಿ ಹಣ ಪತ್ತೆಯಾಗಿದೆ. ಹರಿಹರ‌ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಶೋಧ ಕಾರ್ಯ ಆರಂಭಿಸಿದ್ದು, ಈಜು‌ ಪರಿಣಿತರು ಹಾಗೂ ಅಗ್ನಿ ಶಾಮಕ‌ದಳದ ಸಿಬ್ಬಂದಿಯಿಂದ ಕಾರ್ಯಚರಣೆ ಮಾಡಲಾಗುತ್ತಿದೆ. ತಾಯಿ-ಮಗಳ ಗುರುತು ಪತ್ತೆ ಹಚ್ಚುವ ಕೆಲಸ ಪೊಲೀಸರು ಮಾಡುತ್ತಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:45 pm, Thu, 3 August 23

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ