ಕೊಡಗು: ಆಟಿ ಸೊಪ್ಪಿನ ಪಾಯಸದ ರುಚಿ ಸವಿಯುವುದರ ಹಿಂದಿದೆ ಒಂದು ವಿಶೇಷ ನಂಬಿಕೆ!

Ati Payasa: ಆಟಿ ಸೊಪ್ಪಿನಿಂದ ತಯಾರಿಸಿದ ಪಾಯಸಕ್ಕೆ ಕಕ್ಕಡ ಪದಿನೆಟ್ಟ್ ಪಾಯಸ ಎಂದು ಕರೆಯುತ್ತಾರೆ. ಕಕ್ಕಡ ಎಂದರೇ ಆಟಿ ತಿಂಗಳು ಅಥವಾ ಕರ್ಕಾಟಕ ಮಾಸ ಎಂದು ಅರ್ಥ. ಮೂರಡಿಯಷ್ಟು ಎತ್ತರ ಬೆಳೆಯುವ ಈ ಗಿಡಕ್ಕೆ ಆಟಿ ತಿಂಗಳ ಮೊದಲ ದಿನದಿಂದ ನಾನಾ ಔಷಧೀಯ ಗುಣಗಳು ಸೇರುತ್ತವೆ.

ಕೊಡಗು: ಆಟಿ ಸೊಪ್ಪಿನ ಪಾಯಸದ ರುಚಿ ಸವಿಯುವುದರ ಹಿಂದಿದೆ ಒಂದು ವಿಶೇಷ ನಂಬಿಕೆ!
ಆಟಿ ಸೊಪ್ಪಿನ ಪಾಯಸದ
Follow us
| Updated By: preethi shettigar

Updated on:Aug 03, 2021 | 11:57 AM

ಕೊಡಗು: ಜಿಲ್ಲೆಯಲ್ಲಿ ಇಂದು ಆಟಿ ಪಾಯಸ ಸವಿಯುವ ವಿಶೇಷ ದಿನ. ಅದರಲ್ಲೂ ಆಟಿ (ಮದ್ದು) ಸೊಪ್ಪು ಎಂದು ಕರೆಯಲ್ಪಡುವ ಔಷಧೀಯ ಗಿಡದ ರಸದಿಂದ ತಯಾರಿಸಿದ ಪಾಯಸವನ್ನು ಇಂದು (ಆಗಸ್ಟ್, 3) ಎಲ್ಲರ ಮನೆಯಲ್ಲಿಯೂ ಮಾಡಿ ಸವಿಯುವುದು ವಾಡಿಕೆ. ಕೊಡಗಿನಲ್ಲಿ ಸಾಕಷ್ಟು ಔಷಧೀಯ ಗುಣಗಳುಳ್ಳ ಸಸ್ಯ ಪ್ರಭೇದಗಳಿವೆ. ಅವುಗಳಲ್ಲಿ ಆಟಿ ಸೊಪ್ಪು ಪ್ರಮುಖವಾದದ್ದು, ಇನ್ನು ವೈಜ್ಞಾನಿಕವಾಗಿ ಜಸ್ಟೀಸಿಯ ವೈನಾಡೆನ್ನಿಸ್ ಎಂದು ಕರೆಯುವ ಈ ಸಸ್ಯ ಜಿಲ್ಲೆಯ ಕಾಡುಗಳು ಮಾತ್ರವಲ್ಲದೇ, ಕಾಫಿ ತೋಟದಲ್ಲೂ ಹೇರಳವಾಗಿ ಸಿಗುತ್ತದೆ.

ಆಟಿ ಸೊಪ್ಪಿನಿಂದ ತಯಾರಿಸಿದ ಪಾಯಸಕ್ಕೆ ಕಕ್ಕಡ ಪದಿನೆಟ್ಟ್ ಪಾಯಸ ಎಂದು ಕರೆಯುತ್ತಾರೆ. ಕಕ್ಕಡ ಎಂದರೇ ಆಟಿ ತಿಂಗಳು ಅಥವಾ ಕರ್ಕಾಟಕ ಮಾಸ ಎಂದು ಅರ್ಥ. ಮೂರಡಿಯಷ್ಟು ಎತ್ತರ ಬೆಳೆಯುವ ಈ ಗಿಡಕ್ಕೆ ಆಟಿ ತಿಂಗಳ ಮೊದಲ ದಿನದಿಂದ ನಾನಾ ಔಷಧೀಯ ಗುಣಗಳು ಸೇರುತ್ತವೆ. 18 ದಿನಗಳ ಕಾಲ ದಿನಕ್ಕೊಂದು ಔಷಧ ಗುಣ ಸೇರಿ 18ನೇ ದಿನ ಪರಿಮಳ ಬೀರುತ್ತದೆ. ಹೀಗಾಗಿ ಅಂದು ಆ ಗಿಡವನ್ನು ಬೇಯಿಸಿ ರಸ ತೆಗೆದರೆ ದೇಹದಲ್ಲಿನ ನಾನಾ ಕಾಯಿಲೆಗಳು ದೂರವಾಗುತ್ತದೆ ಎಂಬ ನಂಬಿಕೆ ಹಿರಿಯರಲ್ಲಿ ಇದೆ. ಅದು ಇಂದಿಗೂ ಹಾಗೆಯೇ ಮುಂದುವರಿದುಕೊಂಡು ಬಂದಿದೆ. ಕೆಂಬಣ್ಣದ ಈ ರಸದಲ್ಲಿ ಪಾಯಸ ಸೇರಿದಂತೆ ನಾನಾ ರೀತಿಯ ಖಾದ್ಯಗಳನ್ನು ಕೂಡ ತಯಾರಿಸುತ್ತಾರೆ.

ರುಚಿಕರವಾದ ಸಿಹಿ ಪಾಯಸ ಆಟಿ ಗಿಡದ ರಸದಿಂದ ಪಾಯಸ ತಯಾರಿಸುತ್ತಾರೆ. ಅಕ್ಕಿಯಿಂದ ತಯಾರಿಸುವ ಪಾಯಸಕ್ಕೆ ಆಟಿ ರಸ, ನಂತರ ಅದಕ್ಕೆ ತೆಂಗಿನ ತುರಿ, ತುಪ್ಪ, ಜೇನು ಬೆರೆಸಿ ತಿನ್ನುತ್ತಾರೆ. ಈ ಪಾಯಸ ಸೇವಿಸಿದ ಬಳಿಕ ಮೂತ್ರ ಕೂಡ ಕೆಂಬಣ್ಣಕ್ಕೆ ತಿರುಗುತ್ತದೆ. ಮೂತ್ರ ಎಷ್ಟು ಕೆಂಪಾಗಿರುತ್ತದೆಯೋ ಅಷ್ಟು ಔಷಧೀಯ ಗುಣ ಗಿಡಕ್ಕೆ ಸೇರಿದೆ ಎಂದು ಅರ್ಥ.

ವಿವಿಧ ಅಡುಗೆ ಸಾಮಾನ್ಯವಾಗಿ ಆಟಿ ಸೊಪ್ಪಿನ ರಸದಿಂದ ಕೊಡಗಿನಲ್ಲಿ ಪಾಯಸ ಮಾಡುತ್ತಾರೆ. ಆದರೆ ಇತ್ತಿಚೇಗೆ ಅದರಿಂದ ಹಲ್ವ, ಇಡ್ಲಿ, ತಟ್ಟೆ ಇಡ್ಲಿ ಮುಂತಾದ ಅಡುಗೆಯನ್ನು ತಯಾರಿಸುತ್ತಾರೆ. ಕೆಲವರು ಈ ರಸದಿಂದ ಅನ್ನವನ್ನು ಕೂಡ ಮಾಡುತ್ತಾರೆ. ಇನ್ನೂ ಹಲವರು ಆಟಿ ರಸವನ್ನು ಜ್ಯೂಸ್ ರೀತಿಯಲ್ಲೂ ಸೇವಿಸುತ್ತಾರೆ. ಅಷ್ಟಕ್ಕೂ ಈ ರಸ ಸಿಹಿಯಾಗಿ ಇರುವುದಿಲ್ಲ. ಹಾಗಾಗಿ ಬಿಳಿ ಬೆಲ್ಲ, ಸಕ್ಕರೆ ಸೇರಿಸಿ ಇದನ್ನು ಸವಿಯಲಾಗುತ್ತದೆ.

ಪಾಯಸದ ನಂತರ ಕೋಳಿ ಊಟ ಆಟಿ ಪಾಯಸ ಸೇವಿಸಿದ ಮರು ದಿನ ಆಟಿ ಕೋಳಿ ಭಕ್ಷ್ಯ ಮಾಡುತ್ತಾರೆ. ಸಾಮಾನ್ಯವಾಗಿ ನಾಟಿ ಕೋಳಿಯನ್ನೇ ಬಳಸಲಾಗುತ್ತಿದ್ದರೂ ಪಟ್ಟಣ ಪ್ರದೇಶದಲ್ಲಿ ಅವು ಸಿಗುವುದು ಕಡಿಮೆಯಾದ ಹಿನ್ನಲೆಯಲ್ಲಿ ಫಾರಂ ಕೋಳಿಯನ್ನೇ ಈಗ ಬಳಸುತ್ತಾರೆ. ನಾಟಿ ಕೋಳಿ ಕೂಡ ಔಷಧ ಗುಣಗಳುಳ್ಳ ಆಹಾರ ತಿಂದಿರುವುದರಿಂದ ಕೋಳಿ ಮಾಂಸದಲ್ಲೂ ಔಷಧ ಗುಣ ಸೇರಿರುತ್ತದೆ ಎಂಬ ನಂಬಿಕೆಯಿದೆ. ಜತೆಗೆ ಏಡಿ ಕೂಡ ಆಟಿ ಹಬ್ಬದ ಪ್ರಮುಖ ಅಡುಗೆಯಾಗಿದೆ. ಇದರೊಂದಿಗೆ ಗದ್ದೆಯಲ್ಲಿ ಬೆಳೆದ ಅಣಬೆಯನ್ನು ಕೂಡ ಇದೇ ಸಮಯದಲ್ಲಿ ಸೇವಿಸಲಾಗುತ್ತದೆ.

ಮಳೆಯಲ್ಲಿ ಶೀತ ಕಡಿಮೆ ಮಾಡುತ್ತದೆ ಆಟಿ ಸೊಪ್ಪು ರಸ ಸೇವಿಸಲು ಒಂದು ಕಾರಣವಿದೆ. ಕೊಡಗಿನಲ್ಲಿ ಆಟಿ ತಿಂಗಳಲ್ಲಿ ಮಳೆ ಸುರಿಯುವುದರಿಂದ ಜನರು ಹೆಚ್ಚು ಶೀತಕ್ಕೊಳಗಾಗಿರುತ್ತಾರೆ. ಜತೆಗೆ ಎರಡು ತಿಂಗಳು ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವುದರಿಂದ ದೇಹದಲ್ಲಿ ರೋಗನಿರೋಧಕ ಶಕ್ತಿ ಕಡಿಮೆಯಾಗಿರುತ್ತದೆ. ಹೀಗಾಗಿ ಈ ಸೊಪ್ಪಿನ ರಸ ಸೇವಿಸುವುದರಿಂದ ದೇಹದ ಉಷ್ಣಾಂಶ ಹೆಚ್ಚಿ ರೋಗನಿರೋಧಕ ಶಕ್ತಿ ವೃದ್ಧಿಸುತ್ತದೆ. ಅಲ್ಲದೆ ಗದ್ದೆಯಲ್ಲಿ ನಾಟಿ ಮಾಡಿದ ನಂತರ, ಶರೀರದ ಉಷ್ಣತೆ ಹೆಚ್ಚಿಸಿಕೊಳ್ಳಲು ಈ ಪಾಯಸವನ್ನು ಮಾಡಿ ಕುಡಿಯಲಾಗುತ್ತದೆ.

ಇದನ್ನೂ ಓದಿ: ಕೊರೊನಾ ನಡುವೆಯೂ ಕರಾವಳಿಯ ವಿಶೇಷ ಆಚರಣೆ ಹೋಳಿ ಸುಗ್ಗಿ ಕುಣಿತಕ್ಕೆ ಚಾಲನೆ

ದಾವಣಗೆರೆ: ಅಜ್ಜಿ ಹಬ್ಬದ ವಿಶೇಷತೆ ಏನು? ಮಳೆಗಾಲದಲ್ಲಿಯೇ ಈ ಹಬ್ಬ ಆಚರಿಸಲು ಅನೇಕ ಕಾರಣಗಳಿವೆ

Published On - 11:51 am, Tue, 3 August 21

ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ