AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗು: ತಲೆ ಎತ್ತಿರುವ ಗ್ಲಾಸ್​ ಬ್ರಿಡ್ಜ್​ಗಳನ್ನು ಮುಚ್ಚುವಂತೆ ಆಗ್ರಹ, ಮಾಲೀಕರಿಗೆ ಸಂಕಷ್ಟ

ಕೊಡಗು ಜಿಲ್ಲೆಯಾದ್ಯಂತ ತಲೆ ಎತ್ತಿರುವ ಗ್ಲಾಸ್ ಬ್ರಿಡ್ಜ್​ಗಳನ್ನು ಬಂದ್​ ಮಾಡಿಸುವಂತೆ ವಿವಿಧ ಸಂಘಟನೆಗಳು ಮತ್ತು ಸಾರ್ವಜನಿಕರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲು ಮುಂದಾಗಿದ್ದಾರೆ. ಅಷ್ಟಕ್ಕೂ ಬಂದ್​ ಮಾಡಿಸಲು ಮುಂದಾಗಿರುವುದು ಏಕೆ? ಈ ಸುದ್ದಿ ಓದಿ.

ಕೊಡಗು: ತಲೆ ಎತ್ತಿರುವ ಗ್ಲಾಸ್​ ಬ್ರಿಡ್ಜ್​ಗಳನ್ನು ಮುಚ್ಚುವಂತೆ ಆಗ್ರಹ, ಮಾಲೀಕರಿಗೆ ಸಂಕಷ್ಟ
ಗ್ಲಾಸ್​ ಬ್ರಿಡ್ಜ್​
Gopal AS
| Edited By: |

Updated on: Sep 25, 2024 | 11:38 AM

Share

ಕೊಡಗು, ಸೆಪ್ಟೆಂಬರ್​ 25: ಜಿಲ್ಲೆಯಲ್ಲಿ ತಲೆ ಎತ್ತಿರುವ ಹಾಗೂ ತಲೆ ಎತ್ತಲಿರುವ ಗ್ಲಾಸ್ ಬ್ರಿಡ್ಜ್​ಗಳ (Glass Bridge) ವಿರುದ್ಧ ವಿವಿಧ ಸಂಘಟನೆಗಳು ಮತ್ತು ಸಾರ್ವಜನಿಕರು ನಡೆಸುತ್ತಿರುವ ಹೋರಾಟ ಮುಂದುವರೆದಿದೆ. ಇದೀಗ, ಹೋರಾಟಗಾರರು ಜಿಲ್ಲಾಧಿಕಾರಿಗಳಿಗೆ ದೂರು ನೀಡಲು ಮುಂದಾಗಿದ್ದಾರೆ. ತಲೆ ಎತ್ತಿರುವ ಗ್ಲಾಸ್ ಬ್ರಿಡ್ಜ್​ಗಳನ್ನು ಬಂದ್​ ಮಾಡಿಸುವಂತೆ ಆಗ್ರಹಿಸಲಿದ್ದಾರೆ. ಇದರಿಂದಾಗಿ ಕೊಟ್ಯಂತರ ರೂಪಾಯಿ ಬಂಡವಾಳ ಹೂಡಿಕೆ ಮಾಡಿರುವ ಗ್ಲಾಸ್ ಬ್ರಿಡ್ಜ್ ಮಾಲೀಕರು ಆತಂಕಕ್ಕೆ ಒಳಗಾಗಿದ್ದಾರೆ.

ಕೊಡಗು ಜಿಲ್ಲೆಯ ಪ್ರವಾಸೋಧ್ಯಮ ಕಳೆದ ಕೆಲವು ತಿಂಗಳಿನಿಂದ ಹೊಸತನಕ್ಕೆ ತೆರದುಕೊಳ್ಳುತ್ತ್ತಿದೆ. ಹಾರಂಗಿ ಅಡ್ವೆಂಚರ್ ವಾಟರ್ ಗೇಮ್ಸ್​, ಗ್ರೇಟರ್ ರಾಜಾಸೀಟ್ ಅಡ್ವೆಂಚರ್ಸ್​ ಗೇಮ್ಸ್​ ಹೀಗೆ ಹತ್ತು ಹಲವು ಚಟುವಟಿಕೆಗಳು ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿವೆ. ಇದೀಗ ಅವುಗಳ ಸಾಲಿಗೆ ಸೇರಿರುವುದು ಗ್ಲಾಸ್ ಬ್ರಿಡ್ಜ್​ಗಳು. ಈಗಾಗಲೇ ಜಿಲ್ಲೆಯ ಎರಡು ಕಡೆ ಗ್ಲಾಸ್ ಬ್ರಿಡ್ಜ್​ಗಳು ತಲೆ ಎತ್ತಿವೆ. ಈ ಗ್ಲಾಸ್​​ ಬ್ರಿಡ್ಜ್​ಗಳು ಸಹಸ್ರಾರು ಸಂಖ್ಯೆಯಲ್ಲಿ ಪ್ರವಾಸಿಗರನ್ನು ಸೆಳೆದಿವೆ.

ಆದರೆ, ಜೂನ್ ಮತ್ತು ಜುಲೈ ತಿಂಗಳಲ್ಲಿ ಭಾರೀ ಮಳೆ ಬಂದ ಸಂದರ್ಭದಲ್ಲಿ ಹಲವು ಕಡೆ ಲಘು ಭೂ ಕುಸಿತಗಳು ಸಂಬವಿಸಿದ್ದವು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವೆಂಕಟ ರಾಜಾ ಗ್ಲಾಸ್ ಬ್ರಿಡ್ಜ್​​​ಗಳನ್ನು ಮುಚ್ಚುವಂತೆ ಆದೇಶಿಸಿದ್ದರು. ಅದರಂತೆ ಜಿಲ್ಲೆಯ ಎರಡು ಗ್ಲಾಸ್​​ ಬ್ರಿಡ್ಜ್​ಗಳು ಬಂದ್ ಆಗಿದ್ದವು. ಮುಂದಿನ ಆದೇಶದವರೆಗೆ ಗ್ಲಾಸ್ ಬ್ರಿಡ್ಜ್​ಗಳನ್ನು ತೆರೆಯದಂತೆ ಸೂಚಿಸಿದ್ದರು.

ಇದನ್ನೂ ಓದಿ: ಅಕ್ಟೋಬರ್ 17ರಂದು ಕಾವೇರಿ ತೀರ್ಥೋದ್ಭವ

ಇದೀಗ, ಈ ಎರಡು ಗ್ಲಾಸ್ ಬ್ರಿಡ್ಜ್​ಗಳು ಹಾಗೂ ತಲಕಾವೇರಿ ಮತ್ತು ಭಾಗಮಂಡಲ ಬಳಿಯ ಗ್ಲಾಸ್​ ಬ್ರಿಡ್ಜ್​ಗಳನ್ನು ಸಂಪೂರ್ಣವಾಗಿ ಮುಚ್ಚುವಂತೆ ಕೊಡವ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಬಿದ್ದಾಟಂಡ ತಮ್ಮಯ್ಯ ಹಾಗೂ ಸಾಮಾಜಿಕ ಕಾರ್ಯಕರ್ತ ಧೋಳ್ಪಾಡಿ ಯಶ್ವಂತ್ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಇದಕ್ಕೆ ಪರಿಸರವಾದಿಗಳಿಂದಲೂ ಬೆಂಬಲ ವ್ಯಕ್ತವಾಗಿದೆ.

ಉಡತ್​ ಮೊಟ್ಟೆಯ ಪಪ್ಪಿಸ್ ಗ್ಲಾಸ್ ಬ್ರಿಡ್ಜ್​ನಿಂದಾಗಿ ಮಡಿಕೇರಿ-ಭಾಗಮಂಡಲ ರಸ್ತೆಯಲ್ಲಿ ವಿಪರೀತ ಟ್ರಾಫಿಕ ಜಾಮ್ ಆಗಿದೆ. ಅಪಘಾತಗಳಾಗುತ್ತಿವೆ. ಈ ಪ್ರದೇಶ 2018ರಲ್ಲಿ ಭೂ ಕುಸಿತಕ್ಕೆ ತುತ್ತಾಗಿದ್ದು, ಇಲ್ಲಿ ಗ್ಲಾಸ್ ಬ್ರಿಡ್ಜ್​ ಬೇಡವೇ ಬೇಡ ಎಂದು ದುರುದಾರರು ಒತ್ತಾಯಿಸಿದ್ದಾರೆ. ಇಲ್ಲಿನ ವಾತಾವರಣ ಗ್ಲಾಸ್ ಬ್ರಿಡ್ಜ್​ನ್ನು ತಡೆಯುವಷ್ಟು ಸಶಕ್ತವಾಗಿಲ್ಲ. ಹಾಗಾಗಿ ಇಲ್ಲಿ ಭೂ ಕುಸಿತವಾದರೆ ಬೆಟ್ಟದ ತಪ್ಪಲಿನ ಮನೆಗಳು ಕಾಫಿ ತೋಟಗಳಿಗೆ ಅಪಾರ ಹಾನಿಯಾಗುತ್ತದೆ ಎಂದು ಪರಿಸರವಾದಿಗಳು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ಮುಂದಿನ ಆದೇಶದವರೆಗೆ ಗ್ಲಾಸ್ ಬ್ರಿಡ್ಜ್​​ಗಳ ಪ್ರವೇಶ ನಿರ್ಬಂಧಿಸಿರುವುದಾಗಿ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?