ಕೊಡಗು: ತಲೆ ಎತ್ತಿರುವ ಗ್ಲಾಸ್​ ಬ್ರಿಡ್ಜ್​ಗಳನ್ನು ಮುಚ್ಚುವಂತೆ ಆಗ್ರಹ, ಮಾಲೀಕರಿಗೆ ಸಂಕಷ್ಟ

ಕೊಡಗು ಜಿಲ್ಲೆಯಾದ್ಯಂತ ತಲೆ ಎತ್ತಿರುವ ಗ್ಲಾಸ್ ಬ್ರಿಡ್ಜ್​ಗಳನ್ನು ಬಂದ್​ ಮಾಡಿಸುವಂತೆ ವಿವಿಧ ಸಂಘಟನೆಗಳು ಮತ್ತು ಸಾರ್ವಜನಿಕರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲು ಮುಂದಾಗಿದ್ದಾರೆ. ಅಷ್ಟಕ್ಕೂ ಬಂದ್​ ಮಾಡಿಸಲು ಮುಂದಾಗಿರುವುದು ಏಕೆ? ಈ ಸುದ್ದಿ ಓದಿ.

ಕೊಡಗು: ತಲೆ ಎತ್ತಿರುವ ಗ್ಲಾಸ್​ ಬ್ರಿಡ್ಜ್​ಗಳನ್ನು ಮುಚ್ಚುವಂತೆ ಆಗ್ರಹ, ಮಾಲೀಕರಿಗೆ ಸಂಕಷ್ಟ
ಗ್ಲಾಸ್​ ಬ್ರಿಡ್ಜ್​
Follow us
| Updated By: ವಿವೇಕ ಬಿರಾದಾರ

Updated on: Sep 25, 2024 | 11:38 AM

ಕೊಡಗು, ಸೆಪ್ಟೆಂಬರ್​ 25: ಜಿಲ್ಲೆಯಲ್ಲಿ ತಲೆ ಎತ್ತಿರುವ ಹಾಗೂ ತಲೆ ಎತ್ತಲಿರುವ ಗ್ಲಾಸ್ ಬ್ರಿಡ್ಜ್​ಗಳ (Glass Bridge) ವಿರುದ್ಧ ವಿವಿಧ ಸಂಘಟನೆಗಳು ಮತ್ತು ಸಾರ್ವಜನಿಕರು ನಡೆಸುತ್ತಿರುವ ಹೋರಾಟ ಮುಂದುವರೆದಿದೆ. ಇದೀಗ, ಹೋರಾಟಗಾರರು ಜಿಲ್ಲಾಧಿಕಾರಿಗಳಿಗೆ ದೂರು ನೀಡಲು ಮುಂದಾಗಿದ್ದಾರೆ. ತಲೆ ಎತ್ತಿರುವ ಗ್ಲಾಸ್ ಬ್ರಿಡ್ಜ್​ಗಳನ್ನು ಬಂದ್​ ಮಾಡಿಸುವಂತೆ ಆಗ್ರಹಿಸಲಿದ್ದಾರೆ. ಇದರಿಂದಾಗಿ ಕೊಟ್ಯಂತರ ರೂಪಾಯಿ ಬಂಡವಾಳ ಹೂಡಿಕೆ ಮಾಡಿರುವ ಗ್ಲಾಸ್ ಬ್ರಿಡ್ಜ್ ಮಾಲೀಕರು ಆತಂಕಕ್ಕೆ ಒಳಗಾಗಿದ್ದಾರೆ.

ಕೊಡಗು ಜಿಲ್ಲೆಯ ಪ್ರವಾಸೋಧ್ಯಮ ಕಳೆದ ಕೆಲವು ತಿಂಗಳಿನಿಂದ ಹೊಸತನಕ್ಕೆ ತೆರದುಕೊಳ್ಳುತ್ತ್ತಿದೆ. ಹಾರಂಗಿ ಅಡ್ವೆಂಚರ್ ವಾಟರ್ ಗೇಮ್ಸ್​, ಗ್ರೇಟರ್ ರಾಜಾಸೀಟ್ ಅಡ್ವೆಂಚರ್ಸ್​ ಗೇಮ್ಸ್​ ಹೀಗೆ ಹತ್ತು ಹಲವು ಚಟುವಟಿಕೆಗಳು ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿವೆ. ಇದೀಗ ಅವುಗಳ ಸಾಲಿಗೆ ಸೇರಿರುವುದು ಗ್ಲಾಸ್ ಬ್ರಿಡ್ಜ್​ಗಳು. ಈಗಾಗಲೇ ಜಿಲ್ಲೆಯ ಎರಡು ಕಡೆ ಗ್ಲಾಸ್ ಬ್ರಿಡ್ಜ್​ಗಳು ತಲೆ ಎತ್ತಿವೆ. ಈ ಗ್ಲಾಸ್​​ ಬ್ರಿಡ್ಜ್​ಗಳು ಸಹಸ್ರಾರು ಸಂಖ್ಯೆಯಲ್ಲಿ ಪ್ರವಾಸಿಗರನ್ನು ಸೆಳೆದಿವೆ.

ಆದರೆ, ಜೂನ್ ಮತ್ತು ಜುಲೈ ತಿಂಗಳಲ್ಲಿ ಭಾರೀ ಮಳೆ ಬಂದ ಸಂದರ್ಭದಲ್ಲಿ ಹಲವು ಕಡೆ ಲಘು ಭೂ ಕುಸಿತಗಳು ಸಂಬವಿಸಿದ್ದವು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವೆಂಕಟ ರಾಜಾ ಗ್ಲಾಸ್ ಬ್ರಿಡ್ಜ್​​​ಗಳನ್ನು ಮುಚ್ಚುವಂತೆ ಆದೇಶಿಸಿದ್ದರು. ಅದರಂತೆ ಜಿಲ್ಲೆಯ ಎರಡು ಗ್ಲಾಸ್​​ ಬ್ರಿಡ್ಜ್​ಗಳು ಬಂದ್ ಆಗಿದ್ದವು. ಮುಂದಿನ ಆದೇಶದವರೆಗೆ ಗ್ಲಾಸ್ ಬ್ರಿಡ್ಜ್​ಗಳನ್ನು ತೆರೆಯದಂತೆ ಸೂಚಿಸಿದ್ದರು.

ಇದನ್ನೂ ಓದಿ: ಅಕ್ಟೋಬರ್ 17ರಂದು ಕಾವೇರಿ ತೀರ್ಥೋದ್ಭವ

ಇದೀಗ, ಈ ಎರಡು ಗ್ಲಾಸ್ ಬ್ರಿಡ್ಜ್​ಗಳು ಹಾಗೂ ತಲಕಾವೇರಿ ಮತ್ತು ಭಾಗಮಂಡಲ ಬಳಿಯ ಗ್ಲಾಸ್​ ಬ್ರಿಡ್ಜ್​ಗಳನ್ನು ಸಂಪೂರ್ಣವಾಗಿ ಮುಚ್ಚುವಂತೆ ಕೊಡವ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಬಿದ್ದಾಟಂಡ ತಮ್ಮಯ್ಯ ಹಾಗೂ ಸಾಮಾಜಿಕ ಕಾರ್ಯಕರ್ತ ಧೋಳ್ಪಾಡಿ ಯಶ್ವಂತ್ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಇದಕ್ಕೆ ಪರಿಸರವಾದಿಗಳಿಂದಲೂ ಬೆಂಬಲ ವ್ಯಕ್ತವಾಗಿದೆ.

ಉಡತ್​ ಮೊಟ್ಟೆಯ ಪಪ್ಪಿಸ್ ಗ್ಲಾಸ್ ಬ್ರಿಡ್ಜ್​ನಿಂದಾಗಿ ಮಡಿಕೇರಿ-ಭಾಗಮಂಡಲ ರಸ್ತೆಯಲ್ಲಿ ವಿಪರೀತ ಟ್ರಾಫಿಕ ಜಾಮ್ ಆಗಿದೆ. ಅಪಘಾತಗಳಾಗುತ್ತಿವೆ. ಈ ಪ್ರದೇಶ 2018ರಲ್ಲಿ ಭೂ ಕುಸಿತಕ್ಕೆ ತುತ್ತಾಗಿದ್ದು, ಇಲ್ಲಿ ಗ್ಲಾಸ್ ಬ್ರಿಡ್ಜ್​ ಬೇಡವೇ ಬೇಡ ಎಂದು ದುರುದಾರರು ಒತ್ತಾಯಿಸಿದ್ದಾರೆ. ಇಲ್ಲಿನ ವಾತಾವರಣ ಗ್ಲಾಸ್ ಬ್ರಿಡ್ಜ್​ನ್ನು ತಡೆಯುವಷ್ಟು ಸಶಕ್ತವಾಗಿಲ್ಲ. ಹಾಗಾಗಿ ಇಲ್ಲಿ ಭೂ ಕುಸಿತವಾದರೆ ಬೆಟ್ಟದ ತಪ್ಪಲಿನ ಮನೆಗಳು ಕಾಫಿ ತೋಟಗಳಿಗೆ ಅಪಾರ ಹಾನಿಯಾಗುತ್ತದೆ ಎಂದು ಪರಿಸರವಾದಿಗಳು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ಮುಂದಿನ ಆದೇಶದವರೆಗೆ ಗ್ಲಾಸ್ ಬ್ರಿಡ್ಜ್​​ಗಳ ಪ್ರವೇಶ ನಿರ್ಬಂಧಿಸಿರುವುದಾಗಿ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಕ್ಷಣಾರ್ಧದಲ್ಲೇ ಜಲ ಸಮಾಧಿಯಾದ ಎರಡಂತಸ್ತಿನ ಮನೆ
ಕ್ಷಣಾರ್ಧದಲ್ಲೇ ಜಲ ಸಮಾಧಿಯಾದ ಎರಡಂತಸ್ತಿನ ಮನೆ
ಕೋಲಾರದಲ್ಲಿ ಅನುಮಾನಾಸ್ಪದ ಸೂಟ್​ಕೇಸ್​ ಪತ್ತೆ, ಸ್ಥಳೀಯರಿಗೆ ಆತಂಕ
ಕೋಲಾರದಲ್ಲಿ ಅನುಮಾನಾಸ್ಪದ ಸೂಟ್​ಕೇಸ್​ ಪತ್ತೆ, ಸ್ಥಳೀಯರಿಗೆ ಆತಂಕ
ಯುವ ದಸರಾ ವೇದಿಕೆ ಮೇಲೆ ನಕ್ಕ ರುಕ್ಮಿಣಿ ವಸಂತ್; ವಿಡಿಯೋ ನೋಡಿ
ಯುವ ದಸರಾ ವೇದಿಕೆ ಮೇಲೆ ನಕ್ಕ ರುಕ್ಮಿಣಿ ವಸಂತ್; ವಿಡಿಯೋ ನೋಡಿ
Daily Devotional: ಯಾವ ಗ್ರಹ ಪೂಜಿಸಿದರೆ ಏನೇನು ಫಲ ಸಿಗುತ್ತೆ?
Daily Devotional: ಯಾವ ಗ್ರಹ ಪೂಜಿಸಿದರೆ ಏನೇನು ಫಲ ಸಿಗುತ್ತೆ?
Nithya Bhavishya: ಈ ರಾಶಿಯ ಮಹಿಳೆಯರು ಇಂದು ಉದ್ಯಮದಲ್ಲಿ ಪ್ರಗತಿ ಕಾಣುವರು
Nithya Bhavishya: ಈ ರಾಶಿಯ ಮಹಿಳೆಯರು ಇಂದು ಉದ್ಯಮದಲ್ಲಿ ಪ್ರಗತಿ ಕಾಣುವರು
ರಸ್ತೆಯಲ್ಲಿ ಬಿದ್ದ ಮೀನುಗಳನ್ನು ಕವರ್​ನಲ್ಲಿ ತುಂಬಿಕೊಳ್ಳಲು ಮುಗಿಬಿದ್ದ ಜನ
ರಸ್ತೆಯಲ್ಲಿ ಬಿದ್ದ ಮೀನುಗಳನ್ನು ಕವರ್​ನಲ್ಲಿ ತುಂಬಿಕೊಳ್ಳಲು ಮುಗಿಬಿದ್ದ ಜನ
ರಾಜೀನಾಮೆ ಬಗ್ಗೆ ಕಡ್ಡಿ ಮುರಿದಂತೆ ಮಾತನಾಡಿದ ಸಿದ್ದರಾಮಯ್ಯ
ರಾಜೀನಾಮೆ ಬಗ್ಗೆ ಕಡ್ಡಿ ಮುರಿದಂತೆ ಮಾತನಾಡಿದ ಸಿದ್ದರಾಮಯ್ಯ
ನೈಸರ್ಗಿಕ ಅನಿಲ ಆಧಾರಿತ ವಿದ್ಯುತ್ ಸ್ಥಾವರ ಲೋಕಾರ್ಪಣೆ, ನೌಕರರಿಗೆ ಬೋನಸ್
ನೈಸರ್ಗಿಕ ಅನಿಲ ಆಧಾರಿತ ವಿದ್ಯುತ್ ಸ್ಥಾವರ ಲೋಕಾರ್ಪಣೆ, ನೌಕರರಿಗೆ ಬೋನಸ್
ನಾನಿನ್ನೂ ಮಾತು ನಿಲ್ಲಿಸಿಲ್ಲ..ಸಡನ್ ಸಿಟ್ಟಾದ ಸಿದ್ರಾಮಯ್ಯ ನೋಡಿ DCM ಶಾಕ್​
ನಾನಿನ್ನೂ ಮಾತು ನಿಲ್ಲಿಸಿಲ್ಲ..ಸಡನ್ ಸಿಟ್ಟಾದ ಸಿದ್ರಾಮಯ್ಯ ನೋಡಿ DCM ಶಾಕ್​
ಜಾಮೀನಿಗೆ ಹೈಕೋರ್ಟ್​ನಲ್ಲಿ ದರ್ಶನ್ ಅರ್ಜಿ ಹಾಕೋದು ಯಾವಾಗ? ವಿವರಿಸಿದ ಲಾಯರ್
ಜಾಮೀನಿಗೆ ಹೈಕೋರ್ಟ್​ನಲ್ಲಿ ದರ್ಶನ್ ಅರ್ಜಿ ಹಾಕೋದು ಯಾವಾಗ? ವಿವರಿಸಿದ ಲಾಯರ್