AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗು ಪೊಲೀಸರ ಭರ್ಜರಿ ಕಾರ್ಯಾಚರಣೆ: 25 ಜನ ಡ್ರಗ್ಸ್ ಪೆಡ್ಲರ್​ಗಳ ಬಂಧನ

ಕೊಡಗು ಜಿಲ್ಲೆಯ ವಿವಿಧಡೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಡ್ರಗ್ಸ್​ ಸೇವಿಸುತ್ತಿದ್ದ ಮತ್ತು ಮಾರುತ್ತಿದ್ದ 25 ಜನರನ್ನು ಬಂಧಿಸಿದ್ದಾರೆ.

ಕೊಡಗು ಪೊಲೀಸರ ಭರ್ಜರಿ ಕಾರ್ಯಾಚರಣೆ: 25 ಜನ ಡ್ರಗ್ಸ್ ಪೆಡ್ಲರ್​ಗಳ ಬಂಧನ
ಸಾಂದರ್ಭಿಕ ಚಿತ್ರ
ಗೋಪಾಲ್​ ಸೋಮಯ್ಯ
| Edited By: ವಿವೇಕ ಬಿರಾದಾರ|

Updated on: Jul 17, 2023 | 2:38 PM

Share

ಕೊಡಗು: ಕೊಡಗು ಜಿಲ್ಲೆ ವಿವಿಧಡೆ ಪೊಲೀಸರು (Police) ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಡ್ರಗ್ಸ್​ (Drugs) ಸೇವಿಸುತ್ತಿದ್ದ ಮತ್ತು ಮಾರುತ್ತಿದ್ದ 25 ಜನರನ್ನು ಬಂಧಿಸಿದ್ದಾರೆ. ಈ ವೇಳೆ ಆರೋಪಿಗಳ ಬಳಿ ಇದ್ದ ಗಾಂಜಾ (Ganja), ಎಲ್​ಎಸ್​ಡಿ ಡ್ರಗ್ಸ್​ ಜಪ್ತಿ ಮಾಡಿದ್ದಾರೆ. ಬಂಧಿತರಲ್ಲಿ 14 ಜನ ಪ್ರವಾಸಿಗರಿದ್ದು, ಇವರು ಹೋಂಸ್ಟೇಯೊಂದರಲ್ಲಿ ಮಾದಕವಸ್ತು ಸೇವಿಸುತ್ತಿದ್ದರು. ಅಲೀಂ ಅಹ್ಮದ್, ಮೋಸಿನ್, ಸಾಗರ್, ರೆಹಮಾನ್, ಚೇತನ್, ಶಮೀರ್, ನಿಸಾರ್, ಜಬ್ಬಾರ್, ಇಮ್ರಾನ್ ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳಿಂದ 1.700 ಕೆಜಿ ಗಾಂಜಾ, ಎಲ್​ಎಸ್​ಡಿ ಮಾತ್ರೆಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.

 ಡ್ರಗ್ಸ್ ಮಾರಾಟ ಮಾಡುತ್ತಿದ್ದ ಕೇರಳ ಮೂಲದ ವ್ಯಕ್ತಿಯ ಬಂಧನ

ಬೆಂಗಳೂರು: ಎಂಡಿಎಂಎ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಕೇರಳ ಮೂಲದ ವ್ಯಕ್ತಿಯನ್ನು ಬಸವನಗುಡಿ ಪೊಲೀಸರು ಬಂಧಿಸಿದ್ದಾರೆ. ಬಿಸ್ಟಿನ್ ರಾಯ್ ಬಂಧಿತ ಆರೋಪಿ. ಆರೋಪಿಯಿಂದ ಪೊಲೀಸರು 20 ಲಕ್ಷ ಬೆಲೆಯ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ. ಆರೋಪಿ ಬೆಂಗಳೂರಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದನು.

ಇದನ್ನೂ ಓದಿ: ಗಾಂಜಾ ಪೆಡ್ಲರ್​​ಗಳ ಬೆನ್ನತ್ತಿ ನೆರೆ ರಾಜ್ಯಕ್ಕೆ ತೆರಳಿದ ಬೆಂಗಳೂರು ಪೊಲೀಸರು: ಮಹಾರಾಷ್ಟ್ರದಲ್ಲಿ ನಡೆಯಿತು ಸಿನಿಮಿಯ ಘಟನೆ

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಕೇನ್ ಮಾರುತ್ತಿದ್ದ ವಿದೇಶಿ ಪ್ರಜೆ ಬಂಧನ

ಬೆಂಗಳೂರು:  ನಗರದಲ್ಲಿ ಕೊಕೇನ್ ಮಾರುತ್ತಿದ್ದ ವಿದೇಶಿ ಪ್ರಜೆಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನೈಜೀರಿಯಾ ಮೂಲದ ಮರ್ಕ್ ಜಸ್ಟಿಸ್​ ಬಂಧಿತ ಆರೋಪಿ. ಆರೋಪಿ ಬಳಿ ಇದ್ದ 10 ಲಕ್ಷ ಮೌಲ್ಯದ ಕೊಕೇನ್​ ಅನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ.

ಆರೋಪಿ ಪುಸ್ತಕ, ಡಿಕ್ಷನರಿಯ ಮಧ್ಯೆ ಸೀಕ್ರೆಟ್ ಲಾಕರ್​ ಮಾಡಿ ಅದರಲ್ಲಿ ಕೊಕೇನ್ ಇಟ್ಟು ಸಾಗಿಸುತ್ತಿದ್ದನು. ಇದು ಹೊರಗಿನಿಂದ ನೋಡಿದವರಿಗೆ ಪುಸ್ತಕ, ಡಿಕ್ಷನರಿಯಷ್ಟೇ ಕಾಣುತ್ತಿತ್ತು. ಇದರಿಂದ ಯಾರಿಗೂ ಅನುಮಾನ ಬಾರದ ರೀತಿ ಡ್ರಗ್ಸ್ ಪೂರೈಸುತ್ತಿದ್ದನು. ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್