AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೆಡ್ ಅಲರ್ಟ್: ಕೊಡಗು ಜಿಲ್ಲೆಯಾದ್ಯಂತ 2 ದಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಭಾರೀ ಮಳೆ ಹಿನ್ನೆಲೆ ನಾಳೆಯೂ ಕೊಡಗು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ ನಾಳೆ ಮತ್ತು ನಾಡಿದ್ದು ಅಂಗನವಾಡಿ ಮತ್ತು ಶಾಲಾ ಕಾಲೇಜುಗಳಿಗೆ 2 ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟರಾಜು ಆದೇಶ ಹೊರಡಿಸಿದ್ದಾರೆ. ಪ್ರವಾಹದ ಆತಂಕ ಇನ್ನೂ ಮುಂದುವರಿದಿದೆ. ಎನ್‌ಡಿಆರ್‌ಎಫ್ ತಂಡ ಜಿಲ್ಲೆಗೆ ಆಗಮಿಸಿದೆ.

ರೆಡ್ ಅಲರ್ಟ್: ಕೊಡಗು ಜಿಲ್ಲೆಯಾದ್ಯಂತ 2 ದಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಭಾರಿ ಮಳೆ ಸಾಧ್ಯತೆ
Gopal AS
| Edited By: |

Updated on:May 28, 2025 | 8:55 PM

Share

ಕೊಡಗು, ಮೇ 28: ಜಿಲ್ಲೆಯಲ್ಲಿ ಮಳೆ (rain) ಅಬ್ಬರ ಕೊಂಚ ಕಡಿಮೆ ಆದರೂ ಅಲ್ಲಲ್ಲಿ ಅವಾಂತರಗಳು ಮುಂದುವರೆದಿವೆ. ಬಹಳಷ್ಟು ಗ್ರಾಮಗಳಲ್ಲಿ ಇನ್ನೂ ನದಿಗಳು ಅಪಾಯ ಮಟ್ಟದಲ್ಲೇ ಹರಿಯುತ್ತಿವೆ. ಹಾಗಾಗಿ ಪ್ರವಾಹದ ಆತಂಕದಿಂದ ಇನ್ನೂ ಜನರು ದೂರವಾಗಿಲ್ಲ. ಭಾರಿ ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ನಾಳೆ, ನಾಡಿದ್ದು ಅಂದರೆ ಗುರುವಾರ, ಶುಕ್ರವಾರ ಅಂಗನವಾಡಿ ಮತ್ತು ಶಾಲಾ ಕಾಲೇಜುಗಳಿಗೆ 2 ದಿನ ರಜೆ (holiday) ನೀಡಿ ಡಿಸಿ ವೆಂಕಟರಾಜಾ ಆದೇಶಿಸಿದ್ದಾರೆ.

ಭಾರಿ ಮಳೆ ಸಾಧ್ಯತೆ ಹಿನ್ನೆಲೆ ಜಿಲ್ಲೆಯಲ್ಲಿ ನಾಳೆಯೂ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ ಅಂಗನವಾಡಿ ಮತ್ತು ಶಾಲಾ ಕಾಲೇಜುಗಳಿಗೆ ಎರಡಿ ದಿನ ರಜೆ ಘೋಷಣೆ ಮಾಡಲಾಗಿದೆ. ಮತ್ತೊಂದೆಡೆ ಜಿಲ್ಲೆಗೆ ಆಗಮಿಸಿರುವ ಎನ್​ಡಿಆರ್​ಎಫ್​ ಯಾವುದೇ ಪರಿಸ್ಥಿತಿ ಎದುರಿಸಲು ಸರ್ವ ಸನ್ನದ್ಧವಾಗಿರೋದಾಗಿ ಹೇಳಿದೆ.

ಇದನ್ನೂ ಓದಿ: ಪ್ರವಾಸಿಗರ ಗಮನಕ್ಕೆ: ಭಾರಿ ಮಳೆಯಿಂದ ಕರ್ನಾಟಕದ ಈ ಎರಡು ಕಡೆ ಅರಣ್ಯ ಸಫಾರಿ ರದ್ದು

ಇದನ್ನೂ ಓದಿ
Image
ಭಾರಿ ಮಳೆಯಿಂದ ಕರ್ನಾಟಕದ ಈ ಎರಡು ಕಡೆ ಅರಣ್ಯ ಸಫಾರಿ ರದ್ದು
Image
ಕೊಡಗು: ಭಾರಿ ಮಳೆಯಿಂದ 400ಕ್ಕೂ ಅಧಿಕ ವಿದ್ಯುತ್ ಕಂಬಗಳು ನಾಶ
Image
ಕೊಡಗು, ಉತ್ತರ ಕನ್ನಡದ ಫಾಲ್ಸ್ ಮತ್ತು ಬೀಚ್​ಗಳಿಗೆ ಪ್ರವಾಸಿಗರಿಗೆ ನಿರ್ಬಂಧ
Image
ಕರಾವಳಿ ಕರ್ನಾಟಕ, ಮಲೆನಾಡು ಭಾಗದಲ್ಲಿ ಭಾರಿ ಮಳೆ; ಎಲ್ಲೆಲ್ಲಿ ಏನೇನಾಯ್ತು?

ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಳಿಂದ ವರುಣಾರ್ಭಟದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಅವಧಿಗೆ ಮೊದಲೇ ರಾಷ್ಟ್ರೀಯ ವಿಪತ್ತು ದಳವನ್ನ ಜಿಲ್ಲೆಗೆ ಕರೆಸಿಕೊಂಡಿದೆ. ಬೆಂಗಳುರಿನ 10ನೇ ಬೆಟಾಲಿಯನ್​ನ 30 ಯೋಧರು ಈಗಾಗಲೇ ಮಡಿಕೇರಿಗೆ ಬಂದು ಇಲ್ಲಿನ ಪೊಲೀಸ್ ಮೈತ್ರಿ ಹಾಲ್​ನಲ್ಲಿ ತಂಗಿದ್ದಾರೆ. ಈಗಾಗಲೇ ಜಿಲ್ಲಾಡಳಿತದ ಜೊತೆ ಸಭೆ ನಡೆಸಿ ಸಂಭಾವ್ಯ ಅಪಾಯಕಾರಿ ಸ್ಥಳಗಳ ಮ್ಯಾಪಿಂಗ್ ಮಾಡಿದೆ. ಇನ್ನು ಕೆಲವೇ ದಿನಗಳಲ್ಲಿ ಆ ಎಲ್ಲಾ ಸ್ಥಳಗಳಿಗೆ ಖುದ್ದು ತೆರಳಿ ಅವಲೋಕನ ನಡೆಸಲು ಸಜ್ಜಾಗಿದೆ. ತುರ್ತು ಸಂದರ್ಭದಲ್ಲಿ ಬಳಸಲು ಬೇಕಾದ ಅಗತ್ಯ ರಕ್ಷಣಾ ಪರಿಕರಗಳನ್ನೂ ತಂದಿದ್ದಾರೆ. ಇನ್ಸ್​ಪೆಕ್ಟರ್​ ಹರೀಶ್ ಪಾಂಡೆ ನೇತೃತ್ವದ ತಂಡ ಏನೇ ಆದರೂ ನಾವಿದ್ದೇವೆ ಎಂದು ಅಭಯ ನೀಡಿದೆ.

ಜಲ ದಿಗ್ಬಂಧನದ ಭಯ

ಇನ್ನು ಮಡಿಕೇರಿ ತಾಲ್ಲೂಕಿನ ಬೇಂಗೂರು ಗ್ರಾಮದಲ್ಲಿ ಕಾವೇರಿ ಅಪಾಯಮಟ್ಟ ಮೀರಿ ಹರಿಯುತ್ತಿದ್ದು, ಪರಿಣಾಮ ದೋಣಿ ಕಡವು ಎಂಬಲ್ಲಿ ಮುಖ್ಯ ಸಂಪರ್ಕ ರಸ್ತೆ ಮೇಲೆ ಪ್ರವಾಹ ಬರಲಾರಂಭಿಸಿದೆ. ಮಳೆ ಜಾಸ್ತಿಯಾದರೆ ಯಾವುದೇ ಕ್ಷಣದಲ್ಲಿ ಗ್ರಾಮಗಳ ಸಂಪರ್ಕ ಕಡಿತವಾಗುವ ಆತಂಕ ಎದುರಾಗಿದೆ. ಅತ್ತ ಕೂಡಕಂಡಿ ಪೈಸಾರಿ ಪ್ರದೇಶದಲ್ಲಿ 70ಕ್ಕೂ ಅಧಿಕ ಕುಟುಂಬಗಳ 300ಕ್ಕೂ ಅಧಿಕ ಮಂದಿ ವಾಸ ಮಾಡುತ್ತಿದ್ದು, ಎಲ್ಲರಿಗೂ ಜಲ ದಿಗ್ಬಂಧನದ ಭಯ ಶುರುವಾಗಿದೆ.

ಸದ್ಯ ಜಿಲ್ಲಾಡಳಿತ ಒಂದು ದೋಣಿಯನ್ನ ನೀಡಿದ್ದು ಹೊಳೆ ದಾಟಲು ಅದನ್ನೇ ಬಳಸ್ತಾ ಇದ್ದಾರೆ. ಆದ್ರೆ ಪ್ರವಾಹ ಉಕ್ಕೇರಿದಾಗ ಆ ಧೋನಿಉ ಯಾವುದೇ ಲೆಕ್ಕಕ್ಕೆ ಬರುವುದಿಲ್ಲ. ಹಾಗಾಗಿ ಇಲ್ಲಿಗೆ ಶಾಶ್ವತವಾಗಿ ಸೇತುವೆ ನಿರ್ಮಿಸುವಂತೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ: 400ಕ್ಕೂ ಅಧಿಕ ವಿದ್ಯುತ್ ಕಂಬಗಳು ನಾಶ, ಕರೆಂಟ್ ಇಲ್ಲದೆ ಜನ ಪರದಾಟ

ಇನ್ನು ಗ್ರಾಮೀಣ ಕೊಡಗು ಸಂಪೂರ್ಣ ಕತ್ತಲಲ್ಲಿದೆ. ವಿದ್ಯುತ್ ವ್ಯವಸ್ಥೆ ಮರು ಸ್ಥಾಪಿಸಲು ಚೆಸ್ಕಾಂ ಇನ್ನಿಲ್ಲದ ಹರಸಾಸಹ ನಡೆಸಿದೆ. ಜನಜೀವನ ಸಹಜಸ್ಥಿತಿಗೆ ಬರಲು ಇನ್ನೂ ಮೂರ್ನಾಲ್ಕು ದಿನಗಳು ಬೇಕಾಗುವ ನಿರೀಕ್ಷೆ ಇದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:54 pm, Wed, 28 May 25

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್