AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೆಡ್ ಅಲರ್ಟ್: ಕೊಡಗು ಜಿಲ್ಲೆಯಾದ್ಯಂತ 2 ದಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಭಾರೀ ಮಳೆ ಹಿನ್ನೆಲೆ ನಾಳೆಯೂ ಕೊಡಗು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ ನಾಳೆ ಮತ್ತು ನಾಡಿದ್ದು ಅಂಗನವಾಡಿ ಮತ್ತು ಶಾಲಾ ಕಾಲೇಜುಗಳಿಗೆ 2 ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟರಾಜು ಆದೇಶ ಹೊರಡಿಸಿದ್ದಾರೆ. ಪ್ರವಾಹದ ಆತಂಕ ಇನ್ನೂ ಮುಂದುವರಿದಿದೆ. ಎನ್‌ಡಿಆರ್‌ಎಫ್ ತಂಡ ಜಿಲ್ಲೆಗೆ ಆಗಮಿಸಿದೆ.

ರೆಡ್ ಅಲರ್ಟ್: ಕೊಡಗು ಜಿಲ್ಲೆಯಾದ್ಯಂತ 2 ದಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಭಾರಿ ಮಳೆ ಸಾಧ್ಯತೆ
Gopal AS
| Updated By: ಗಂಗಾಧರ​ ಬ. ಸಾಬೋಜಿ|

Updated on:May 28, 2025 | 8:55 PM

Share

ಕೊಡಗು, ಮೇ 28: ಜಿಲ್ಲೆಯಲ್ಲಿ ಮಳೆ (rain) ಅಬ್ಬರ ಕೊಂಚ ಕಡಿಮೆ ಆದರೂ ಅಲ್ಲಲ್ಲಿ ಅವಾಂತರಗಳು ಮುಂದುವರೆದಿವೆ. ಬಹಳಷ್ಟು ಗ್ರಾಮಗಳಲ್ಲಿ ಇನ್ನೂ ನದಿಗಳು ಅಪಾಯ ಮಟ್ಟದಲ್ಲೇ ಹರಿಯುತ್ತಿವೆ. ಹಾಗಾಗಿ ಪ್ರವಾಹದ ಆತಂಕದಿಂದ ಇನ್ನೂ ಜನರು ದೂರವಾಗಿಲ್ಲ. ಭಾರಿ ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ನಾಳೆ, ನಾಡಿದ್ದು ಅಂದರೆ ಗುರುವಾರ, ಶುಕ್ರವಾರ ಅಂಗನವಾಡಿ ಮತ್ತು ಶಾಲಾ ಕಾಲೇಜುಗಳಿಗೆ 2 ದಿನ ರಜೆ (holiday) ನೀಡಿ ಡಿಸಿ ವೆಂಕಟರಾಜಾ ಆದೇಶಿಸಿದ್ದಾರೆ.

ಭಾರಿ ಮಳೆ ಸಾಧ್ಯತೆ ಹಿನ್ನೆಲೆ ಜಿಲ್ಲೆಯಲ್ಲಿ ನಾಳೆಯೂ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ ಅಂಗನವಾಡಿ ಮತ್ತು ಶಾಲಾ ಕಾಲೇಜುಗಳಿಗೆ ಎರಡಿ ದಿನ ರಜೆ ಘೋಷಣೆ ಮಾಡಲಾಗಿದೆ. ಮತ್ತೊಂದೆಡೆ ಜಿಲ್ಲೆಗೆ ಆಗಮಿಸಿರುವ ಎನ್​ಡಿಆರ್​ಎಫ್​ ಯಾವುದೇ ಪರಿಸ್ಥಿತಿ ಎದುರಿಸಲು ಸರ್ವ ಸನ್ನದ್ಧವಾಗಿರೋದಾಗಿ ಹೇಳಿದೆ.

ಇದನ್ನೂ ಓದಿ: ಪ್ರವಾಸಿಗರ ಗಮನಕ್ಕೆ: ಭಾರಿ ಮಳೆಯಿಂದ ಕರ್ನಾಟಕದ ಈ ಎರಡು ಕಡೆ ಅರಣ್ಯ ಸಫಾರಿ ರದ್ದು

ಇದನ್ನೂ ಓದಿ
Image
ಭಾರಿ ಮಳೆಯಿಂದ ಕರ್ನಾಟಕದ ಈ ಎರಡು ಕಡೆ ಅರಣ್ಯ ಸಫಾರಿ ರದ್ದು
Image
ಕೊಡಗು: ಭಾರಿ ಮಳೆಯಿಂದ 400ಕ್ಕೂ ಅಧಿಕ ವಿದ್ಯುತ್ ಕಂಬಗಳು ನಾಶ
Image
ಕೊಡಗು, ಉತ್ತರ ಕನ್ನಡದ ಫಾಲ್ಸ್ ಮತ್ತು ಬೀಚ್​ಗಳಿಗೆ ಪ್ರವಾಸಿಗರಿಗೆ ನಿರ್ಬಂಧ
Image
ಕರಾವಳಿ ಕರ್ನಾಟಕ, ಮಲೆನಾಡು ಭಾಗದಲ್ಲಿ ಭಾರಿ ಮಳೆ; ಎಲ್ಲೆಲ್ಲಿ ಏನೇನಾಯ್ತು?

ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಳಿಂದ ವರುಣಾರ್ಭಟದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಅವಧಿಗೆ ಮೊದಲೇ ರಾಷ್ಟ್ರೀಯ ವಿಪತ್ತು ದಳವನ್ನ ಜಿಲ್ಲೆಗೆ ಕರೆಸಿಕೊಂಡಿದೆ. ಬೆಂಗಳುರಿನ 10ನೇ ಬೆಟಾಲಿಯನ್​ನ 30 ಯೋಧರು ಈಗಾಗಲೇ ಮಡಿಕೇರಿಗೆ ಬಂದು ಇಲ್ಲಿನ ಪೊಲೀಸ್ ಮೈತ್ರಿ ಹಾಲ್​ನಲ್ಲಿ ತಂಗಿದ್ದಾರೆ. ಈಗಾಗಲೇ ಜಿಲ್ಲಾಡಳಿತದ ಜೊತೆ ಸಭೆ ನಡೆಸಿ ಸಂಭಾವ್ಯ ಅಪಾಯಕಾರಿ ಸ್ಥಳಗಳ ಮ್ಯಾಪಿಂಗ್ ಮಾಡಿದೆ. ಇನ್ನು ಕೆಲವೇ ದಿನಗಳಲ್ಲಿ ಆ ಎಲ್ಲಾ ಸ್ಥಳಗಳಿಗೆ ಖುದ್ದು ತೆರಳಿ ಅವಲೋಕನ ನಡೆಸಲು ಸಜ್ಜಾಗಿದೆ. ತುರ್ತು ಸಂದರ್ಭದಲ್ಲಿ ಬಳಸಲು ಬೇಕಾದ ಅಗತ್ಯ ರಕ್ಷಣಾ ಪರಿಕರಗಳನ್ನೂ ತಂದಿದ್ದಾರೆ. ಇನ್ಸ್​ಪೆಕ್ಟರ್​ ಹರೀಶ್ ಪಾಂಡೆ ನೇತೃತ್ವದ ತಂಡ ಏನೇ ಆದರೂ ನಾವಿದ್ದೇವೆ ಎಂದು ಅಭಯ ನೀಡಿದೆ.

ಜಲ ದಿಗ್ಬಂಧನದ ಭಯ

ಇನ್ನು ಮಡಿಕೇರಿ ತಾಲ್ಲೂಕಿನ ಬೇಂಗೂರು ಗ್ರಾಮದಲ್ಲಿ ಕಾವೇರಿ ಅಪಾಯಮಟ್ಟ ಮೀರಿ ಹರಿಯುತ್ತಿದ್ದು, ಪರಿಣಾಮ ದೋಣಿ ಕಡವು ಎಂಬಲ್ಲಿ ಮುಖ್ಯ ಸಂಪರ್ಕ ರಸ್ತೆ ಮೇಲೆ ಪ್ರವಾಹ ಬರಲಾರಂಭಿಸಿದೆ. ಮಳೆ ಜಾಸ್ತಿಯಾದರೆ ಯಾವುದೇ ಕ್ಷಣದಲ್ಲಿ ಗ್ರಾಮಗಳ ಸಂಪರ್ಕ ಕಡಿತವಾಗುವ ಆತಂಕ ಎದುರಾಗಿದೆ. ಅತ್ತ ಕೂಡಕಂಡಿ ಪೈಸಾರಿ ಪ್ರದೇಶದಲ್ಲಿ 70ಕ್ಕೂ ಅಧಿಕ ಕುಟುಂಬಗಳ 300ಕ್ಕೂ ಅಧಿಕ ಮಂದಿ ವಾಸ ಮಾಡುತ್ತಿದ್ದು, ಎಲ್ಲರಿಗೂ ಜಲ ದಿಗ್ಬಂಧನದ ಭಯ ಶುರುವಾಗಿದೆ.

ಸದ್ಯ ಜಿಲ್ಲಾಡಳಿತ ಒಂದು ದೋಣಿಯನ್ನ ನೀಡಿದ್ದು ಹೊಳೆ ದಾಟಲು ಅದನ್ನೇ ಬಳಸ್ತಾ ಇದ್ದಾರೆ. ಆದ್ರೆ ಪ್ರವಾಹ ಉಕ್ಕೇರಿದಾಗ ಆ ಧೋನಿಉ ಯಾವುದೇ ಲೆಕ್ಕಕ್ಕೆ ಬರುವುದಿಲ್ಲ. ಹಾಗಾಗಿ ಇಲ್ಲಿಗೆ ಶಾಶ್ವತವಾಗಿ ಸೇತುವೆ ನಿರ್ಮಿಸುವಂತೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ: 400ಕ್ಕೂ ಅಧಿಕ ವಿದ್ಯುತ್ ಕಂಬಗಳು ನಾಶ, ಕರೆಂಟ್ ಇಲ್ಲದೆ ಜನ ಪರದಾಟ

ಇನ್ನು ಗ್ರಾಮೀಣ ಕೊಡಗು ಸಂಪೂರ್ಣ ಕತ್ತಲಲ್ಲಿದೆ. ವಿದ್ಯುತ್ ವ್ಯವಸ್ಥೆ ಮರು ಸ್ಥಾಪಿಸಲು ಚೆಸ್ಕಾಂ ಇನ್ನಿಲ್ಲದ ಹರಸಾಸಹ ನಡೆಸಿದೆ. ಜನಜೀವನ ಸಹಜಸ್ಥಿತಿಗೆ ಬರಲು ಇನ್ನೂ ಮೂರ್ನಾಲ್ಕು ದಿನಗಳು ಬೇಕಾಗುವ ನಿರೀಕ್ಷೆ ಇದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:54 pm, Wed, 28 May 25

ಮ್ಯಾಕ್ಸ್ ನಿರ್ದೇಶಕನ ಜೊತೆ ಸುದೀಪ್ ಮತ್ತೊಂದು ಸಿನಿಮಾ; ಸುದ್ದಿಗೋಷ್ಠಿ ಲೈವ್
ಮ್ಯಾಕ್ಸ್ ನಿರ್ದೇಶಕನ ಜೊತೆ ಸುದೀಪ್ ಮತ್ತೊಂದು ಸಿನಿಮಾ; ಸುದ್ದಿಗೋಷ್ಠಿ ಲೈವ್
VIDEO: ಅದ್ಭುತ ಕ್ಯಾಚ್ ಹಿಡಿದು ಮ್ಯಾಚ್ ಗೆಲ್ಲಿಸಿದ ಚಾರ್ಲಿ
VIDEO: ಅದ್ಭುತ ಕ್ಯಾಚ್ ಹಿಡಿದು ಮ್ಯಾಚ್ ಗೆಲ್ಲಿಸಿದ ಚಾರ್ಲಿ
ಹಾಸನ ಜಿಲ್ಲಾಸ್ಪತ್ರೆಯನ್ನು ಮುಚ್ಚುವುದೇ ಒಳಿತು: ರೇವಣ್ಣ, ಶಾಸಕ
ಹಾಸನ ಜಿಲ್ಲಾಸ್ಪತ್ರೆಯನ್ನು ಮುಚ್ಚುವುದೇ ಒಳಿತು: ರೇವಣ್ಣ, ಶಾಸಕ
4 ಸಿಕ್ಸ್, 8 ಫೋರ್: 56 ಎಸೆತಗಳಲ್ಲಿ ಪಂದ್ಯ ಮುಗಿಸಿದ ಮ್ಯಾಕ್ಸಿ ಪಡೆ
4 ಸಿಕ್ಸ್, 8 ಫೋರ್: 56 ಎಸೆತಗಳಲ್ಲಿ ಪಂದ್ಯ ಮುಗಿಸಿದ ಮ್ಯಾಕ್ಸಿ ಪಡೆ
Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ