AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗು: ಕೊರೊನಾ ವಾರಿಯರ್ಸ್​ಗೆ ಊಟ ಪೂರೈಸಿದ್ದ ಹೋಟೆಲ್ ಮಹಿಳೆಗೆ ಕಿರುಕುಳ; ಅಧಿಕಾರಿಗಳ ವಿರುದ್ಧ ಆರೋಪ

ತನ್ನ ಮಗ ಸಾವನ್ನಪ್ಪಿದ ನೋವಿನ ಸಂದರ್ಭದಲ್ಲೂ ಮಾನವೀಯತೆಯಿಂದ ಅಧಿಕಾರಿಗಳಿಗೆ ಊಟ ಪೂರೈಸಿದ್ದೆ. ಆದರೆ ಅಧಿಕಾರಿಗಳು ಮಾತ್ರ ಇದೀಗ ಹಣ ನೀಡದೆ ಕಿರುಕುಳ ನೀಡುತ್ತಿದ್ದಾರೆ ಅಂತ ಆರೋಪಿಸಿದ್ದಾರೆ.

ಕೊಡಗು: ಕೊರೊನಾ ವಾರಿಯರ್ಸ್​ಗೆ ಊಟ ಪೂರೈಸಿದ್ದ ಹೋಟೆಲ್ ಮಹಿಳೆಗೆ ಕಿರುಕುಳ; ಅಧಿಕಾರಿಗಳ ವಿರುದ್ಧ ಆರೋಪ
ಹೋಟೆಲ್
TV9 Web
| Updated By: sandhya thejappa|

Updated on:Sep 29, 2021 | 2:57 PM

Share

ಕೊಡಗು: ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶಿರಂಗಾಲ ಗ್ರಾಮದಲ್ಲಿ ಸಣ್ಣ ಹೋಟೆಲ್ ನಡೆಸುತ್ತಿರುವ ಆಶಾ ಎಂಬುವರು ಅಧಿಕಾರಿಗಳ ವಿರುದ್ಧ ಕಿರುಕುಳ ನೀಡಿರುವ ಆರೋಪ ಮಾಡಿದ್ದಾರೆ. ಕೊರೊನಾ ಲಾಕ್​ಡೌನ್​ ಅವಧಿಯಲ್ಲಿ ಇವರು ಚೆಕ್ ಪೋಸ್ಟ್ ಕರ್ತವ್ಯದಲ್ಲಿದ್ದ ಪೊಲೀಸರು, ಆರೋಗ್ಯ ಇಲಾಖೆ ಸಿಬ್ಬಂದಿ, ಕಂದಾಯ ಇಲಾಖೆ ಸಿಬ್ಬಂದಿ ಸೇರಿದಂತೆ ಕೊರೊನಾ ವಾರಿಯರ್ಸ್​ಗೆ ಊಟ ಪೂರೈಸಿದ್ದರು. ಇದಕ್ಕೆ ಪ್ರತಿಯಾಗಿ ಪ್ರತಿ ತಿಂಗಳು ಸರ್ಕಾರದಿಂದ ಹಣವನ್ನೂ ಪಡೆದಿದ್ದಾರೆ. ಆದರೆ ಇದೀಗ ಕಳೆದ ಎರಡು ತಿಂಗಳಿನಿಂದ ಸುಮಾರು 43 ಸಾವಿರ ರೂ. ಬಿಲ್ ಮೊತ್ತ ಪಡೆಯಲು ಬಾಕಿ ಇದೆ. ಸ್ಥಳೀಯ ಗ್ರಾಮ ಪಂಚಾಯಿತಿ ಗ್ರಾಮಲೆಕ್ಕಿಗರಾಗಿರುವ ಉಷಾ ಎಂಬುವರು ಬಿಲ್ ಬಿಡುಗಡೆ ಮಾಡದೆ ಕಿರುಕುಳ ನೀಡುತ್ತಿದ್ದಾರೆ ಎಂದು ಹೋಟೆಲ್ ಮಾಲಕಿ ಆಶಾ ಆರೋಪಿಸಿದ್ದಾರೆ.

ತನ್ನ ಮಗ ಸಾವನ್ನಪ್ಪಿದ ನೋವಿನ ಸಂದರ್ಭದಲ್ಲೂ ಮಾನವೀಯತೆಯಿಂದ ಅಧಿಕಾರಿಗಳಿಗೆ ಊಟ ಪೂರೈಸಿದ್ದೆ. ಆದರೆ ಅಧಿಕಾರಿಗಳು ಮಾತ್ರ ಇದೀಗ ಹಣ ನೀಡದೆ ಕಿರುಕುಳ ನೀಡುತ್ತಿದ್ದಾರೆ ಅಂತ ಆರೋಪಿಸಿದ್ದಾರೆ. ಇದೀಗ ಹೋಟೆಲ್ ನಡೆಸಲು ಹಣವಿಲ್ಲದೆ ಹೋಟೆಲ್ ಮುಚ್ಚುವ ಪರಿಸ್ಥಿತಿ ಬಂದಿದೆ ಎಂದು ಗೋಳಾಡುತ್ತಿದ್ದಾರೆ. ಅಧಿಕಾರಿಗಳ ವರ್ತನೆಗೆ ಶಿರಂಗಾಲ ಗ್ರಾಮಸ್ಥರು ಕೂಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಿಲ್ ಪಾವತಿಸುವ ಭರವಸೆ ನೀಡಿದ ತಹಶೀಲ್ದಾರ್ ಪ್ರಕರಣ ಕುರಿತು ಟಿವಿ9 ಗೆ ಪ್ರತಿಕ್ರಿಯೆ ನೀಡಿರುವ ಸೋಮವಾರಪೇಟೆ ತಹಶೀಲ್ದಾರ್ ಗೋವಿಂದರಾಜು, ಹೋಟೆಲ್ ಬಿಲ್ ತಕ್ಷಣವೇ ಪಾವತಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

ಇದನ್ನೂ ಓದಿ

ವದಂತಿ ವಿಚಾರದಲ್ಲಿ ಮೌನ ಮುರಿದ ಸಮಂತಾ ಅಕ್ಕಿನೇನಿ; ಅಭಿಮಾನಿಗಳಿಗೆ ಎಲ್ಲವನ್ನೂ ಸ್ಪಷ್ಟಪಡಿಸಿದ ನಟಿ

ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಮುಳ್ಳಿನ ಪೊದೆಯಲ್ಲಿ ಸಿಲುಕಿ ಪ್ರಾಣಾಪಾಯದಿಂದ ಪಾರು, ಮಗುವಿಗಾಗಿ ಶೋಧ

(Kodagu woman accused against official of not paying money)

Published On - 2:49 pm, Wed, 29 September 21

ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ಫ್ಯಾನ್ಸ್- ಪೊಲೀಸರ ನಡುವೆ ಚೇರ್ ಎಸೆದಾಟ
ಫ್ಯಾನ್ಸ್- ಪೊಲೀಸರ ನಡುವೆ ಚೇರ್ ಎಸೆದಾಟ
ಮೆಸ್ಸಿ ಜೊತೆ ಮಗನನ್ನು ನಿಲ್ಲಿಸಿ ಫೋಟೋ ಕ್ಲಿಕ್ಕಿಸಿದ ಶಾರುಖ್ ಖಾನ್
ಮೆಸ್ಸಿ ಜೊತೆ ಮಗನನ್ನು ನಿಲ್ಲಿಸಿ ಫೋಟೋ ಕ್ಲಿಕ್ಕಿಸಿದ ಶಾರುಖ್ ಖಾನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್​; ಆಗಸದಲ್ಲೇ ಮದುವೆ
‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್​; ಆಗಸದಲ್ಲೇ ಮದುವೆ