AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗನನ್ನು ಪತಿಯೇ ಕಿಡ್ನಾಪ್ ಮಾಡಿದ್ದಾನೆಂದು ಪೊಲೀಸ್ ಠಾಣೆ ಮೆಟ್ಟಿಲೇರಿದ ತಾಯಿ!

ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಕಾಂತೂರು ಮೂರ್ನಾಡು ಗ್ರಾಮದಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆ, ಪತಿಯೇ ತನ್ನ 5 ವರ್ಷದ ಮಗನನ್ನು ಅಪಹರಿಸಿರುವ ಘಟನೆ ಬೆಳಕಿಗೆ ಬಂದಿದೆ. ಗಾಂಜಾ ವ್ಯಸನಿ ಪತಿ ತಿಮ್ಮಯ್ಯನ ಕಿರುಕುಳ ತಾಳಲಾರದೆ ತಾಯಿ ಭವ್ಯ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಸದ್ಯ ಮಗುವಿನ ಜೀವಕ್ಕೆ ಹಾನಿಯಾಗಬಹುದೆಂದು ಹೆದರಿ ತಾಯಿ ಕೊಡಗು ಎಸ್‌ಪಿ ಬಿಂದು ಮಣಿ ಅವರಿಗೆ ದೂರು ನೀಡಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮಗನನ್ನು ಪತಿಯೇ ಕಿಡ್ನಾಪ್ ಮಾಡಿದ್ದಾನೆಂದು ಪೊಲೀಸ್ ಠಾಣೆ ಮೆಟ್ಟಿಲೇರಿದ ತಾಯಿ!
ಸಾಂದರ್ಭಿಕ ಚಿತ್ರImage Credit source: gettyimages.com
Gopal AS
| Edited By: |

Updated on: Jun 14, 2026 | 10:44 AM

Share

ಕೊಡಗು, ಜೂನ್ 14: ಕೌಟುಂಬಿಕ ಕಲಹದ ಹಿನ್ನೆಲೆ ನನ್ನ ಪತಿಯೇ ಮಗನನ್ನು ಕಿಡ್ನಾಪ್ ಮಾಡಿದ್ದಾನೆ, ದಯವಿಟ್ಟು ನನ್ನ ಮಗನನ್ನು ಹುಡುಕಿಕೊಡಿ ಎಂದು ತಾಯಿಯೊಬ್ಬಳು ಕಣ್ಣೀರಿಡುತ್ತಾ ಪೊಲೀಸ್ ಠಾಣೆಯ ಮೆಟ್ಟಿಲೇರಿರುವ ಘಟನೆ ಕೊಡಗು (Kodagu) ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಮಹಿಳೆ ಆರು ತಿಂಗಳ ಹಿಂದೆ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಮಹಿಳೆ ತನ್ನ ಮಗುವಿನೊಂದಿಗೆ ತಾಯಿಯ ಮನೆಯಲ್ಲಿ ವಾಸ ಮಾಡುತ್ತಿದ್ದಳು. ಈ ವೇಳೆ ಆಕೆಯ ಮನೆಗೆ ಬಂದ ಪತಿ, ಮಗುವನ್ನು ಕರೆದುಕೊಂಡು ಪರಾರಿಯಾಗಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ.

ಮುಖ್ಯಾಂಶಗಳು

  • ಪತಿಯೇ ತನ್ನ ಐದು ವರ್ಷದ ಮಗನನ್ನು ಅಪಹರಿಸಿದ್ದಾನೆಂದು ತಾಯಿ ಆರೋಪಿಸಿದ್ದಾಳೆ.
  • ಕೊಡಗಿನ ಭವ್ಯ ಕೌಟುಂಬಿಕ ಕಲಹದಿಂದಾಗಿ ಆರು ತಿಂಗಳ ಹಿಂದೆ ವಿಚ್ಛೇದನ ಕೋರಿದ್ದರು.
  • ಮಗುವಿನ ಪತ್ತೆಗಾಗಿ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಲಾಗಿದೆ.

ಕೌಟುಂಬಿಕ ಕಲಹ ಮತ್ತು ವಿಚ್ಛೇದನ ಅರ್ಜಿ

ಮಡಿಕೇರಿ ತಾಲ್ಲೂಕಿನ ಕಾಂತೂರು ಮೂರ್ನಾಡು ಗ್ರಾಮದ ನಿವಾಸಿ ಭವ್ಯ ಎಂಬಾಕೆಗೆ ಆರು ವರ್ಷಗಳ ಹಿಂದೆ ತಿಮ್ಮಯ್ಯ ಎಂಬುವರ ಜೊತೆ ವಿವಾಹವಾಗಿತ್ತು. ದಂಪತಿಗೆ 5 ವರ್ಷದ ಗಂಡು ಮಗನಿದ್ದಾನೆ. ಆದರೆ, ಕಳೆದ ಒಂದೆರಡು ವರ್ಷಗಳಿಂದ ಇವರಿಬ್ಬರ ಮಧ್ಯೆ ತೀವ್ರ ಜಗಳ ನಡೆಯುತ್ತಿತ್ತು. ಪತಿ ತಿಮ್ಮಯ್ಯ ಗಾಂಜಾ ಮತ್ತು ಮದ್ಯದ ವ್ಯಸನಿಯಾಗಿದ್ದು, ಕೆಲಸಕ್ಕೂ ಹೋಗದೆ, ನಿತ್ಯ ಹೆಂಡತಿಯ ಮೇಲೆ ಅನುಮಾನ ಪಡುತ್ತಾ ದೈಹಿಕ ಹಾಗೂ ಮಾನಸಿಕ ಹಿಂಸೆ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ. ಪತಿಯ ಕಾಟ ತಡೆಯಲಾರದೆ ಭವ್ಯ ಆರು ತಿಂಗಳ ಹಿಂದೆ ವಿಚ್ಛೇದನ ಕೋರಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಸದ್ಯ ಮಗನೊಂದಿಗೆ ತಾಯಿ ಮನೆಯಲ್ಲಿ ವಾಸಿಸುತ್ತಿದ್ದರು.

ಮಗನನ್ನು ಅಪಹರಿಸಿದ ಗಾಂಜಾ ವ್ಯಸನಿ ಪತಿ?

ಜೂನ್ 10 ರಂದು ಭವ್ಯ ಅವರ ತಾಯಿ ಮನೆ ಸಮೀಪ ಬಂದ ಪತಿ ತಿಮ್ಮಯ್ಯ, ಬಲವಂತವಾಗಿ 5 ವರ್ಷದ ಮಗನನ್ನು ಕರೆದುಕೊಂಡು ಹೋಗಿದ್ದಾನೆ. ಭವ್ಯ ಗಂಡನ ಮನೆಗೆ ಹೋಗಿ ನೋಡಿದಾಗ ಅಲ್ಲಿ ಪತಿಯಾಗಲಿ, ಮಗನಾಗಲಿ ಇರಲಿಲ್ಲ. ಪತಿ ಗಾಂಜಾ ವ್ಯಸನಿಯಾಗಿದ್ದರಿಂದ ಮಗುವಿಗೆ ಏನಾದರೂ ಹೆಚ್ಚು ಕಡಿಮೆ ಮಾಡಬಹುದು ಎಂಬ ಭೀತಿಯಲ್ಲಿ ತಾಯಿ ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಈ ಹಿಂದೆ ತಿಮ್ಮಯ್ಯ ಮಚ್ಚು, ಲಾಂಗು ಹಿಡಿದು ಹಲ್ಲೆಗೆ ಮುಂದಾಗಿದ್ದರಿಂದ ಮಗುವಿಗೆ ಏನಾಗಿದೆಯೋ ಎಂಬ ಭಯದಿಂದಲೇ ಆಕೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಮಗುವಿನ ಪತ್ತೆಗಾಗಿ ಭವ್ಯ ಸದ್ಯ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದು ಮಣಿ ಅವರಿಗೆ ದೂರು ನೀಡಿದ್ದಾರೆ. ದೂರು ಸ್ವೀಕರಿಸಿರುವ ಎಸ್‌ಪಿ ಅವರು ತನಿಖೆಗೆ ಆದೇಶಿಸಿದ್ದು, ಪೊಲೀಸರು ಮಗುವಿನ ಪತ್ತೆಗೆ ತನಿಖೆ ಆರಂಭಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
Gopal AS
Gopal AS
ಮನೆಗೆ ಹಾವು ಬಂದ್ರೆ ಕೊಲ್ಲಬಾರದು ಯಾಕೆ?
ಮನೆಗೆ ಹಾವು ಬಂದ್ರೆ ಕೊಲ್ಲಬಾರದು ಯಾಕೆ?
ಇಂದು ಈ ರಾಶಿಯವರು ಕೆಲಸಗಳಲ್ಲಿ ಅವಸರ ಮಾಡಬೇಡಿ
ಇಂದು ಈ ರಾಶಿಯವರು ಕೆಲಸಗಳಲ್ಲಿ ಅವಸರ ಮಾಡಬೇಡಿ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗೆ ಮರು ಅರ್ಜಿ: ಸಿಎಂ ಡಿಕೆಶಿ ಮಾಹಿತಿ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗೆ ಮರು ಅರ್ಜಿ: ಸಿಎಂ ಡಿಕೆಶಿ ಮಾಹಿತಿ
ಫುಟ್​​ಬಾಲ್ ವಿಶ್ವಕಪ್ ಉದ್ಘಾಟನೆಯಲ್ಲಿ ಹೀಗಿತ್ತು ನೋರಾ ಫತೇಹಿ ಪ್ರದರ್ಶನ
ಫುಟ್​​ಬಾಲ್ ವಿಶ್ವಕಪ್ ಉದ್ಘಾಟನೆಯಲ್ಲಿ ಹೀಗಿತ್ತು ನೋರಾ ಫತೇಹಿ ಪ್ರದರ್ಶನ
ಸಾವಿನ ಬಗ್ಗೆ ಪದೇ ಪದೇ ಸುಳ್ಳು ಸುದ್ದಿ: ನಟ ದೊಡ್ಡಣ್ಣ ಹೇಳಿದ್ದೇನು?
ಸಾವಿನ ಬಗ್ಗೆ ಪದೇ ಪದೇ ಸುಳ್ಳು ಸುದ್ದಿ: ನಟ ದೊಡ್ಡಣ್ಣ ಹೇಳಿದ್ದೇನು?
ನಿರುದ್ಯೋಗಿಗಳಿಗೆ ಗುಡ್​ನ್ಯೂಸ್​​ ನೀಡಿದ ಸಿಎಂ ಡಿಕೆ ಶಿವಕುಮಾರ್​
ನಿರುದ್ಯೋಗಿಗಳಿಗೆ ಗುಡ್​ನ್ಯೂಸ್​​ ನೀಡಿದ ಸಿಎಂ ಡಿಕೆ ಶಿವಕುಮಾರ್​
ವೆನೆಜುವೆಲಾ ದರೋಡೆಕೋರನ ಮೇಲಿನ ವೈಮಾನಿಕ ದಾಳಿಯ ವಿಡಿಯೋ ಹಂಚಿಕೊಂಡ ಟ್ರಂಪ್
ವೆನೆಜುವೆಲಾ ದರೋಡೆಕೋರನ ಮೇಲಿನ ವೈಮಾನಿಕ ದಾಳಿಯ ವಿಡಿಯೋ ಹಂಚಿಕೊಂಡ ಟ್ರಂಪ್
ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರಬೇಕು: ಅಧಿಕಾರಿಗಳಿಗೆ ಸಿಎಂ ಸೂಚನೆ
ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರಬೇಕು: ಅಧಿಕಾರಿಗಳಿಗೆ ಸಿಎಂ ಸೂಚನೆ
ಮತ್ತೆ ವಿದೇಶಕ್ಕೆ ತೆರಳಿದ ಪ್ರಧಾನಿ ಮೋದಿ; ಫ್ರಾನ್ಸ್​, ಸ್ಲೋವಾಕಿಯಾಗೆ ಭೇಟಿ
ಮತ್ತೆ ವಿದೇಶಕ್ಕೆ ತೆರಳಿದ ಪ್ರಧಾನಿ ಮೋದಿ; ಫ್ರಾನ್ಸ್​, ಸ್ಲೋವಾಕಿಯಾಗೆ ಭೇಟಿ
ಮನಾಲಿಗೆ ಹೊರಟ ಪ್ರವಾಸಿಗರಿಂದ ಕುಲು-ಮಂಡಿ ಮಾರ್ಗದಲ್ಲಿ ಟ್ರಾಫಿಕ್ ಜಾಮ್
ಮನಾಲಿಗೆ ಹೊರಟ ಪ್ರವಾಸಿಗರಿಂದ ಕುಲು-ಮಂಡಿ ಮಾರ್ಗದಲ್ಲಿ ಟ್ರಾಫಿಕ್ ಜಾಮ್