AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಶಾಲನಗರ ಖಾಸಗಿ ಶಾಲೆಯ 26 ವಿದ್ಯಾರ್ಥಿಗಳಿಗೆ ಕೊರೊನಾ ದೃಢ; ಒಮಿಕ್ರಾನ್ ಆತಂಕ ಹಿನ್ನೆಲೆ ಭಾನುವಾರ ಸಿಎಂ ಸಭೆ

ರಾಜ್ಯದಲ್ಲಿ ಒಮಿಕ್ರಾನ್ ಎರಡನೇ ಹಂತದಲ್ಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ವಿದೇಶದಿಂದ ಬಂದವರಿಗಷ್ಟೇ ಅಲ್ಲ ಸ್ಥಳೀಯವಾಗಿ ಹರಡುತ್ತಿದೆ ಎಂದು ತಜ್ಞರು ಮಾಹಿತಿ ನೀಡಿದ್ದಾರೆ. ಹೀಗಾಗಿ ತಜ್ಞರಿಂದ ಚರ್ಚಿಸಿ ಮತ್ತಷ್ಟು ಟಫ್ ರೂಲ್ಸ್ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಕುಶಾಲನಗರ ಖಾಸಗಿ ಶಾಲೆಯ 26 ವಿದ್ಯಾರ್ಥಿಗಳಿಗೆ ಕೊರೊನಾ ದೃಢ; ಒಮಿಕ್ರಾನ್ ಆತಂಕ ಹಿನ್ನೆಲೆ ಭಾನುವಾರ ಸಿಎಂ ಸಭೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Dec 25, 2021 | 5:27 PM

Share

ಮಡಿಕೇರಿ: ಜಿಲ್ಲೆಯ ಕುಶಾಲನಗರದ ಖಾಸಗಿ ಶಾಲೆಯ 26 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಸುಮಾರು 680 ಕ್ಕೂ ಹೆಚ್ಚು ವಿದ್ಯಾರ್ಥಿಗಳಿರುವ ಖಾಸಗಿ ಶಾಲೆಯಲ್ಲಿ 385 ವಿದ್ಯಾರ್ಥಿಗಳ ಕೊರೊನಾ ಪರೀಕ್ಷೆ ವರದಿ ಬಂದಿದೆ. ಆ ಪೈಕಿ 26 ವಿದ್ಯಾರ್ಥಿಗಳಿಗೆ ಕೊವಿಡ್19 ವರದಿ ಪಾಸಿಟಿವ್ ಎಂದು ಬಂದಿದೆ. ಇಂದು ಇನ್ನೂ 300 ವಿದ್ಯಾರ್ಥಿಗಳ ಟೆಸ್ಟ್ ರಿಪೋರ್ಟ್ ಬರಲಿದೆ ಎಂದು ಮಾಹಿತಿ ಲಭ್ಯವಾಗಿದೆ.

ಕರ್ನಾಟಕ ರಾಜ್ಯದಲ್ಲಿ ಒಮಿಕ್ರಾನ್ ಹೆಚ್ಚಳದ ಆತಂಕದ ಹಿನ್ನಲೆ ನಾಳೆ (ಡಿಸೆಂಬರ್ 26) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಗೃಹ ಕಚೇರಿ ಕೃಷ್ಣಾದಲ್ಲಿ 9 ಗಂಟೆಗೆ ಮಹತ್ವದ ಸಭೆ ನಡೆಯಲಿದೆ ಎಂದು ತಿಳಿದುಬಂದಿದೆ. ರಾಜ್ಯದಲ್ಲಿ ಒಮಿಕ್ರಾನ್ ಎರಡನೇ ಹಂತದಲ್ಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ವಿದೇಶದಿಂದ ಬಂದವರಿಗಷ್ಟೇ ಅಲ್ಲ ಸ್ಥಳೀಯವಾಗಿ ಹರಡುತ್ತಿದೆ ಎಂದು ತಜ್ಞರು ಮಾಹಿತಿ ನೀಡಿದ್ದಾರೆ. ಹೀಗಾಗಿ ತಜ್ಞರಿಂದ ಚರ್ಚಿಸಿ ಮತ್ತಷ್ಟು ಟಫ್ ರೂಲ್ಸ್ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಓಮಿಕ್ರಾನ್ ವೇಗವಾಗಿ ಹರಡಿದ್ರು ತೀವ್ರತೆ ಕಡಿಮೆ ಇರಲಿದೆ. ಸಾವಿನ ಆತಂಕ ಕಡಿಮೆ ಇದ್ದರೂ ಕೊರೊನಾ ವೇಗವಾಗಿ ಹರಡುವ ಭೀತಿ ಇದೆ. ಹೀಗಾಗಿ ಕೆಲವೊಂದು ಸಭೆ ಸಮಾರಂಭಗಳಿಗೆ ಮತ್ತೆ ಇಂತಿಷ್ಟೇ ಜನ ಅಂತಾ ಸೀಮಿತಗೊಳಿಸಲುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ನೈಟ್ ಕರ್ಫ್ಯೂ ವಿಚಾರವನ್ನ ತಜ್ಞರು ಸಿಎಂ ಮುಂದೆ ಪ್ರಸ್ತಾಪಿಸುವುದು ಖಚಿತವಾಗಿದೆ. ಬಾರ್, ರೆಸ್ಟೋರೆಂಟ್, ಪಬ್, ಹೋಟೆಲ್​ಗಳಲ್ಲಿ 50:50 ರೂಲ್ಸ್ ನಿಯಮ ಜಾರಿ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಕರ್ನಾಟಕ ರಾಜ್ಯದ ಗಡಿ ಜಿಲ್ಲೆಗಳಲ್ಲಿ ತೀವ್ರ ಕಟ್ಟೇಚ್ಚರಕ್ಕೆ ಸೂಚಿಸಲಾಗುತ್ತೆ. ಎರಡನೇ ಡೋಸ್ ಎಲ್ಲರಿಗೂ ಬೇಗ ಕಂಪ್ಲೀಟ್ ಮಾಡಲು ಸಿಎಂ ಸೂಚಿಸಲಿದ್ದಾರೆ. ಹೊಸ ವರ್ಷಚಾರಣೆ ಹಿನ್ನಲೆ ಮುಂದಿನ 15 ದಿನ ಕಠಿಣ ನಿಯಮ ಜಾರಿಮಾಡಲಿದ್ದಾರೆ. ಇದರ ಜೊತೆ ನೈಟ್ ಪಾರ್ಟಿಗಳಿಗೆ ಮುಂದಿನ 15 ದಿನ ಬ್ರೇಕ್ ಹಾಕುವ ಸಾಧ್ಯತೆ ಇದೆ. ಈ ಬಗ್ಗೆ ನಾಳೆ ತಜ್ಞರ ಜೊತೆ ಸಭೆ ಬಳಿಕ ಮತ್ತೊಂದು ಹೊಸ ಮಾರ್ಗಸೂಚಿ ಬಿಡುಗಡೆಯಾಗಲಿದೆ ಎಂದು ಮಾಹಿತಿ ಲಭ್ಯವಾಗಿದೆ. ನಾಳಿನ ಸಭೆಯಲ್ಲಿ ತಜ್ಞರ ಜೊತೆಗೆ ಆರೋಗ್ಯ ಇಲಾಖೆ ಸಚಿವರು, ಕಂದಾಯ ಸಚಿವರು, ಗೃಹ ಇಲಾಖೆ ಹಾಗೂ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಬಿಬಿಎಂಪಿ ಆಯುಕ್ತರು ಭಾಗವಹಿಸಲಿದ್ದಾರೆ.

ಇದನ್ನೂ ಓದಿ: ಕೊರೊನಾ ರೂಪಾಂತರ ಆಗುವ ಲಕ್ಷಣ ಇದೆ; ಸಂಶಯ, ಅಸಹನೆ, ದ್ವೇಷ, ರಾಜಕೀಯ ಕಲಹ ಹೆಚ್ಚಾಗುತ್ತೆ: ಕೋಡಿಮಠ ಶ್ರೀ ಭವಿಷ್ಯ

ಇದನ್ನೂ ಓದಿ: ವಿಶ್ವದಲ್ಲಿ ಕೊರೊನಾ 4 ಬಾರಿ ಉಲ್ಬಣವಾಗಿದೆ: ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 358 ಕ್ಕೆ ಏರಿಕೆಯಾಗುತ್ತಿದ್ದಂತೆ ಕೇಂದ್ರದಿಂದ ಎಚ್ಚರಿಕೆ

Published On - 2:44 pm, Sat, 25 December 21

Follow Us
Web contact
Web contact

TV9 Kannada

Read More
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್