AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗು ಜಿಲ್ಲೆಯಲ್ಲಿ ಮತ್ತೆ ಭಾರಿ ಭೂಕುಸಿತ! 18 ಕುಟುಂಬಗಳು ಸ್ಥಳಾಂತರ

ಕೆಸರು ಮಿಶ್ರಿತ ನೀರು ಕೊಚ್ಚಿಕೊಂಡು ಜೋಡುಪಾಲದವರೆಗೂ ಬಂದಿದೆ. ಈ ಹಿನ್ನೆಲೆ ಬೆಟ್ಟದ ತಪ್ಪಲಿನಲ್ಲಿದ್ದ 18 ಕುಟುಂಬಗಳನ್ನ ಸ್ಥಳಾಂತರ ಮಾಡಲಾಗಿದೆ.

ಕೊಡಗು ಜಿಲ್ಲೆಯಲ್ಲಿ ಮತ್ತೆ ಭಾರಿ ಭೂಕುಸಿತ! 18 ಕುಟುಂಬಗಳು ಸ್ಥಳಾಂತರ
ಕೆಸರು ನೀರು ಕೊಚ್ಚಿ ಬಂದಿದೆ
TV9 Web
| Edited By: |

Updated on:Jul 23, 2022 | 11:55 AM

Share

ಕೊಡಗು: ಜಿಲ್ಲೆಯಲ್ಲಿ ಮಳೆ (Rain) ನಿಂತರೂ, ಮಳೆ ಅವಾಂತರಗಳು ಇನ್ನು ಕಡಿಮೆ ಆಗಿಲ್ಲ. ಕ್ಷಣ ಕ್ಷಣಕ್ಕೂ ಭೂಕುಸಿತದ (Landslide) ಆತಂಕ ಹೆಚ್ಚಾಗುತ್ತಿದೆ. ಇಂದು (ಜುಲೈ 23) ಮಡಿಕೇರಿ ತಾಲೂಕಿನ ಮದೆನಾಡು ಸಮೀಪದ ಸೀಮೆಹುಲ್ಲುಕಜೆ ಬೆಟ್ಟದಲ್ಲಿ ಭೂಕುಸಿತ ಆಗಿದ್ದು, ಭೂಮಿಯೊಳಗೆ ಭಾರಿ ಶಬ್ದದೊಂದಿಗೆ ಕೆಸರು ಕೊಚ್ಚಿ ಬಂದಿದೆ. ಕೆಸರು ಮಿಶ್ರಿತ ನೀರು ಕೊಚ್ಚಿಕೊಂಡು ಜೋಡುಪಾಲದವರೆಗೂ ಬಂದಿದೆ. ಈ ಹಿನ್ನೆಲೆ ಬೆಟ್ಟದ ತಪ್ಪಲಿನಲ್ಲಿದ್ದ 18 ಕುಟುಂಬಗಳನ್ನ ಸ್ಥಳಾಂತರ ಮಾಡಲಾಗಿದೆ. ದಟ್ಟ ಮಂಜುಕವಿದ ವಾತಾವರಣದ ನಡುವೆ ಭೂಕುಸಿತದ ತೀವ್ರತೆ ಗೋಚರಿಸಿದ್ದು, ಮದೆನಾಡು, ಜೋಡುಪಾಲ, ಮೊಣ್ಣಂಗೇರಿ ಗ್ರಾಮಸ್ಥರಲ್ಲಿ ಆತಂಕ ಶುರುವಾಗಿದೆ.

ಇನ್ನು ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಬನವಾಸಿಯ ಮೊಗಳ್ಳಿಯಲ್ಲಿ ಪ್ರವಾಹದಿಂದ ಲಕ್ಷಾಂತರ ರೂ. ಸಾಲ ಮಾಡಿ ಬೆಳೆದಿದ್ದ ಬೆಳೆ ನೀರುಪಾಲಾಗಿದೆ. ಭತ್ತ, ಅನಾನಸ್, ಜೋಳ, ಕಬ್ಬು, ಮೆಕ್ಕೆಜೋಳ ಬೆಳೆ ನಾಶವಾಗಿದ್ದು, ಸೂಕ್ತ ಪರಿಹಾರ ನೀಡುವಂತೆ ರೈತರು ಸರ್ಕಾರಕ್ಕೆ ಆಗ್ರಹಿಸುತ್ತಿದ್ದಾರೆ.

ಇದನ್ನೂ ಓದಿ: ಉದ್ಘಾಟನೆಗೂ ಮುನ್ನ ಕಟ್ಟಡದ ಗೋಡೆಗಳಲ್ಲಿ ನೀರು ಸೋರಿಕೆ; ಕಳಪೆ ಕಾಮಗಾರಿ ‌ನಡುವೆ ಪಾರ್ಕಿಂಗ್ ನಿರ್ವಹಣೆ ಟೆಂಡರ್ ಕರೆದ ಬಿಬಿಎಂಪಿ

ಇದನ್ನೂ ಓದಿ
Image
ಮೊದಲು ಕೆಲಸ ಮಾಡಿ, 224 ಅಭ್ಯರ್ಥಿಗಳೂ ಸಿಎಂ ಕ್ಯಾಂಡಿಡೇಟ್​ಗಳೇ: ಜಮೀರ್ ಅಹಮದ್​ಗೆ ಡಿಕೆಶಿ ತಾಕೀತು
Image
ಉದ್ಘಾಟನೆಗೂ ಮುನ್ನ ಕಟ್ಟಡದ ಗೋಡೆಗಳಲ್ಲಿ ನೀರು ಸೋರಿಕೆ; ಕಳಪೆ ಕಾಮಗಾರಿ ‌ನಡುವೆ ಪಾರ್ಕಿಂಗ್ ನಿರ್ವಹಣೆ ಟೆಂಡರ್ ಕರೆದ ಬಿಬಿಎಂಪಿ
Image
Refugees and Migrants Health: ನಿರಾಶ್ರಿತರು ಮತ್ತು ವಲಸಿಗರು ಎದುರಿಸುತ್ತಿರುವ ಸಮಸ್ಯೆಗಳ ಸುತ್ತ​​
Image
CWG 2022: ಕಾಮನ್​ವೆಲ್ತ್​ ಗೇಮ್ಸ್​ಗೆ ಹೊರಡುವ ಮುನ್ನ ಬೆಂಗಳೂರಿನಲ್ಲಿ ಪೂಜೆ ಸಲ್ಲಿಸಿದ ಭಾರತೀಯ ಹಾಕಿ ತಂಡ

ಮನೆಗಳಿಗೆ ನುಗ್ಗಿದ ನೀರು: ಬೀದರ್​​ನಲ್ಲಿ ನಿನ್ನೆ ರಾತ್ರಿ ಸುರಿದ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಬೀದರ್​ನ ಓಂನಗರ ಬಡಾವಣೆ ಸಂಪೂರ್ಣ ರಸ್ತೆ ಜಲಾವೃತವಾಗಿದ್ದು, 10ಕ್ಕೂ ಹೆಚ್ಚು ಕುಟುಂಬಗಳು ಹೊರಗೆ ಬಾರದಂತ ಪರಿಸ್ಥಿತಿ ನಿರ್ಮಾಣವಾಗಿದೆ. ತಗ್ಗು ಪ್ರದೇಶದ 4-5 ಮನೆಗಳಿಗೆ ನೀರು ನುಗ್ಗಿದೆ. ಜಿಲ್ಲೆಯಲ್ಲಿ ನಿರಂತರ ಮಳೆ ಹಿನ್ನೆಲೆ ಶಾಲೆಗಳಿಗೆ ರಜೆ ನೀಡಲಾಗಿದೆ. ಅಂಗನವಾಡಿ, 1-5ನೇ ತರಗತಿವರೆಗಿನ ಶಾಲೆಗೆ ರಜೆ ನೀಡಿ ಬೀದರ್ ಡಿಸಿ ಗೋವಿಂದರೆಡ್ಡಿ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಫೋನ್ ಕಳೆದುಕೊಂಡರೆ ಅದರಲ್ಲಿದ್ದ ಫೋನ್ ಪೇ, ಗೂಗಲ್ ಪೇ ಅಕೌಂಟ್ ಬ್ಲಾಕ್ ಮಾಡುವುದು ಹೇಗೆ?

Published On - 11:46 am, Sat, 23 July 22

ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ