AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಡಿಕೇರಿ: ಭೂಕುಸಿತ ಸಂತ್ರಸ್ತರ ಗೋಳಾಟ ಕೇಳೋರೇ ಇಲ್ಲ; ಸಿಡಿದೆದ್ದ ಗ್ರಾಮ ಪಂಚಾಯಿತಿ ಸದಸ್ಯರು

ಈ ಪ್ರದೇಶ ವಾಸಿಸಲು ಯೋಗ್ಯವಾಗಿಲ್ಲ ಅಂತ ತಜ್ಞರು ವರದಿ ನೀಡಿದ್ದಾರೆ. ಆದರೂ ಇಲ್ಲಿನ ನಿವಾಸಿಗಳಿಗೆ ಸರ್ಕಾರ ಮನೆ ನೀಡಿಲ್ಲ. ಹಾಗಾಗಿ ಆ ಮನೆಗಳಲ್ಲೇ ಏಳು ಕುಟುಂಬಗಳು ವಾಸವಿದೆ. ಮಳೆ ಬಂದಾಗ ಮನೆಯ ಪಕ್ಕದಲ್ಲೇ ಬೆಟ್ಟಗಳು ಜರೆಯುತ್ತಿವೆ.

ಮಡಿಕೇರಿ: ಭೂಕುಸಿತ ಸಂತ್ರಸ್ತರ ಗೋಳಾಟ ಕೇಳೋರೇ ಇಲ್ಲ; ಸಿಡಿದೆದ್ದ ಗ್ರಾಮ ಪಂಚಾಯಿತಿ ಸದಸ್ಯರು
ಅಪಾಯದ ಸ್ಥಿತಿಯಲ್ಲಿರುವ ಮನೆಗಳು
TV9 Web
| Edited By: sandhya thejappa|

Updated on: Aug 01, 2021 | 12:01 PM

Share

ಮಡಿಕೇರಿ: 2018ರಲ್ಲಿ ಸಂಭವಿಸಿದ ಭಾರೀ ಭೂಕುಸಿತದಿಂದ ಮಡಿಕೇರಿ ತಾಲೂಕಿನ ಉದಯಗಿರಿ ಮತ್ತು ಜಾಂಗೀರ್ ಪೈಸಾರಿ ಗ್ರಾಮಗಳು ತತ್ತರಿಸಿ ಹೋಗಿದ್ದವು. ಭೂಕುಸಿತದಲ್ಲಿ ಸುಮಾರು 10ಕ್ಕೂ ಅಧಿಕ ಮನೆಗಳು ಕೊಚ್ಚಿ ಹೋಗಿದ್ದವು. ಈ ಗ್ರಾಮಗಳಲ್ಲಿ ಸುಮಾರು 21 ಕುಟುಂಬಗಳಿದ್ದು, ಬೆಟ್ಟದ ಆಳ ಪ್ರಪಾತದಲ್ಲಿ ವಾಸಿಸುತ್ತಿವೆ. ತೀರಾ ಅಪಾಯಕಾರಿ ಪರಿಸ್ಥಿತಿಯಲ್ಲೇ ವಾಸಿಸುತ್ತಿವೆ. ಕಡಿದಾದ ಬೆಟ್ಟದ ಅಂಚಿನಲ್ಲೇ ಹಲವು ಮನೆಗಳು ಇವೆ. ಆದರೂ ಸಂತ್ರಸ್ತರ ಗೋಳಾಟ ಕೇಳೋರು ಯಾರು ಇಲ್ಲದಂತಾಗಿದೆ.

ಈ ಪ್ರದೇಶ ವಾಸಿಸಲು ಯೋಗ್ಯವಾಗಿಲ್ಲ ಅಂತ ತಜ್ಞರು ವರದಿ ನೀಡಿದ್ದಾರೆ. ಆದರೂ ಇಲ್ಲಿನ ನಿವಾಸಿಗಳಿಗೆ ಸರ್ಕಾರ ಮನೆ ನೀಡಿಲ್ಲ. ಹಾಗಾಗಿ ಆ ಮನೆಗಳಲ್ಲೇ ಏಳು ಕುಟುಂಬಗಳು ವಾಸವಿದೆ. ಮಳೆ ಬಂದಾಗ ಮನೆಯ ಪಕ್ಕದಲ್ಲೇ ಬೆಟ್ಟಗಳು ಜರೆಯುತ್ತಿವೆ. ಈ ಮಳೆಗಾಲದಲ್ಲೂ ಎರಡು ಮನೆಗಳ ಮೇಲೆ ಗುಡ್ಡ ಕುಸಿದಿದೆ. ಇಲ್ಲಿ ವಾಸಿಸುವರು ಪ್ರತಿ ವರ್ಷ ಜೀವ ಭಯದಲ್ಲೇ ಇರುತ್ತಾರೆ.

ಮಳೆಗಾಲದಲ್ಲಿ ಗ್ರಾಮಗಳಲ್ಲಿ ಇರಲಾಗದೆ, ಹೊರಗೂ ಹೋಗಲಾಗದೆ ಪರಿಸ್ಥಿತಿ ಹದಗೆಟ್ಟಿದೆ. ಕೇವಲ ಮೂರು ತಿಂಗಳಿಗಾಗಿ ಯಾರೂ ಬಾಡಿಗೆ ಮನೆ ಕೊಡುವುದಿಲ್ಲ. ಕಾಳಜಿ ಕೇಂದ್ರಕ್ಕೆ ಹೋಗಲು ಕೊರೊನಾ ಭಯವಿದೆ. ಮನೆ ಖಾಲಿ ಮಾಡಿ ಅಂತ ಜಿಲ್ಲಾಡಳಿತ ತಿಳಿಸಿದೆ. ಕಳೆದ ಮೂರು ವರ್ಷಗಳಿಂದ ಪರ್ಯಾಯ ಸೂರಿಗಾಗಿ ಅಲೆದಾಟ ನಡೆಸುತ್ತಿದ್ದೇವೆ. ಸಂತ್ರಸ್ತರು ಕಣ್ಣೀರಿಟ್ಟು ಗೋಳಾಡಿದ್ರೂ ಅಧಿಕಾರಿಗಳ ಮನಸ್ಸು ಕರಗುತ್ತಿಲ್ಲ ಅಂತ ಅಧಿಕಾರಿಗಳ ವಿರುದ್ಧ ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯರು ಸಿಡಿದೆದ್ದಿದ್ದಾರೆ.

ಇನ್ಫೋಸಿಸ್ನವರು ಮನೆ ನಿರ್ಮಿಸಿಕೊಡುವುದಾಗಿ ಹೇಳಿದ್ದಾರೆ. 250 ಮನೆಗಳನ್ನು ಅವರು ಕೊಡುವವರೆಗೆ ಕಾಯಲೇಬೇಕು ಅಂತ ಟಿವಿ9ಗೆ ಮಡಿಕೇರಿ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ತಿಳಿಸಿದ್ದಾರೆ. ಮಳೆಗಾಲ ಬಂದಾಗ ಮಾತ್ರ ಸಮಸ್ಯೆ ಆಗುತ್ತಿರುವುದು. ಮಳೆಗಾಲ ಬಂದಾಗ ಕಾಳಜಿ ಕೇಂದ್ರಕ್ಕೆ ಶಿಫ್ಟ್ ಮಾಡುತ್ತಿದ್ದೇವೆ. ಮನೆಗಳ ಬಗ್ಗೆ ಉಸ್ತುವಾರಿ ಸಚಿವರ ಬಳಿಯೂ ಹೇಳಿದ್ದೇನೆ ಎಂದು ಅಪ್ಪಚ್ಚು ರಂಜನ್ ಹೇಳಿದರು.

ಇದನ್ನೂ ಓದಿ

ದೇಗುಲಗಳಲ್ಲಿ ಹೆಚ್ಚಿನ ಜನ ಸೇರ್ತಿದ್ದಾರೆ, ನೀವೇನು ಮಾಡುತ್ತಿದ್ದೀರಿ ಎಂದು ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಮಹಾಂತೇಶ ಬೀಳಗಿ

ಹಿರಣ್ಯಕೇಶಿ ನದಿ ಪ್ರವಾಹದಲ್ಲಿ ಪುಸ್ತಕ, ಆಟ ಸಾಮಾಗ್ರಿಗಳು ಕೊಚ್ಚಿ ಹೋಗಿವೆ; ಟಿವಿ9 ಕ್ಯಾಮೆರಾ ಮುಂದೆ ಬಿಕ್ಕಿ ಬಿಕ್ಕಿ ಅತ್ತ 8 ವರ್ಷದ ಬಾಲಕಿ

(Landslide victims are struggling during the rainy season from 2018 at Madikeri)

Follow Us
Web contact
Web contact

TV9 Kannada

Read More
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ