AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಕೊಡಗು ಜಿಲ್ಲೆಯಲ್ಲಿ 12 ಕ್ಕೂ ಅಧಿಕ ಕಡೆಗಳಲ್ಲಿ ಭೂ ಕುಸಿತ; 50 ಮನೆಗಳಿಗೆ ಹಾನಿ

ಕೊಡಗು ಜಿಲ್ಲೆಯಲ್ಲಿ 12 ಕ್ಕೂ ಅಧಿಕ ಕಡೆಗಳಲ್ಲಿ ಭೂ ಕುಸಿತವಾಗಿದ್ದು, 50 ಮನೆಗಳಿಗೆ ಹಾನಿಯಾಗಿದೆ. ಯಾವುದೇ ಬೆಳೆ ಹಾನಿಯಾಗಿಲ್ಲ. 

Karnataka Rain: ಕೊಡಗು ಜಿಲ್ಲೆಯಲ್ಲಿ 12 ಕ್ಕೂ ಅಧಿಕ ಕಡೆಗಳಲ್ಲಿ ಭೂ ಕುಸಿತ; 50 ಮನೆಗಳಿಗೆ ಹಾನಿ
ಕೊಡಗಿನಲ್ಲಿ 12 ಕಡೆಗಳಲ್ಲಿ ಭೂಕುಸಿತ
TV9 Web
| Edited By: |

Updated on:Jul 10, 2022 | 8:32 PM

Share

ಕೊಡಗು: ಕೊಡಗು (Kodagu) ಜಿಲ್ಲೆಯಲ್ಲಿ 12 ಕ್ಕೂ ಅಧಿಕ ಕಡೆಗಳಲ್ಲಿ ಭೂ ಕುಸಿತವಾಗಿದ್ದು (Land Slide) , 50 ಮನೆಗಳಿಗೆ (House) ಹಾನಿಯಾಗಿದೆ. ಯಾವುದೇ ಬೆಳೆ ಹಾನಿಯಾಗಿಲ್ಲ. ಜುಲೈ 8 ರಂದು ಮೊಣ್ಣಂಗೇರಿ ಗ್ರಾಮದಲ್ಲಿ ಒಂದು ಕಡೆ ಭೂಕುಸಿತವಾಗಿದೆ. ಇದೇ ದಿನ ಮಡಿಕೇರಿ-ಮಂಗಳೂರು (Mangalore) ರಾಷ್ಟ್ರೀಯ ಹೆದ್ದಾರಿಯಲ್ಲಿ (National Highway) ಕೂಡ 10 ಕಡೆಗಳಲ್ಲಿ ಭೂ ಕುಸಿತ ಸಂಭವಿಸಿದೆ. ಜುಲೈ 9 ರಂದು ಚೆಂಬು ಗ್ರಾಮದಲ್ಲಿ ಒಂದು ಕಡೆ ಭೂಕುಸಿತ ಸಂಭವಿಸಿ ಮನೆ ಮೇಲೆ ಮಣ್ಣು ಬಿದ್ದಿದೆ. ಇಂದು ಕೊಯನಾಡಿನಲ್ಲಿ ಭೂ ಕುಸಿತ ಸಂಭವಿಸಿ ಶಾಲೆ ಮೇಲೆ ಮಣ್ಣು ಬಿದ್ದಿದೆ.

ಜಿಲ್ಲೆಯಲ್ಲಿನ ಮಳೆರಾಯನ ಆರ್ಭಟಕ್ಕೆ ನಾಳೆಯೂ ಕೂಡ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್​ ಆದೇಶ ಹೊರಡಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ರಜೆ

ಉಡುಪಿ: ಹವಾಮಾನ ಇಲಾಖೆಯಿಂದ ಉಡುಪಿ ಜಿಲ್ಲೆಯಲ್ಲಿ ರೆಡ್​ ಅಲರ್ಟ್​ ಘೋಷಣೆಯಾದ ಹಿನ್ನೆಲೆ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ರಜೆ ಘೋಷಣೆ ಮಾಡಲಾಗಿದೆ. ಪಿಯುಸಿ, ಪದವಿ, ಇತರೆ ಕಾಲೇಜುಗಳು ಎಂದಿನಂತೆಯೇ ನಡೆಯಲಿವೆ ಎಂದು ಟಿವಿ9ಗೆ ಉಡುಪಿ ಜಿಲ್ಲಾಡಳಿತದಿಂದ ಮಾಹಿತಿ ದೊರೆತಿದೆ.

ಬೀದರ್ ಜಿಲ್ಲೆಯ ‌ಎಲ್ಲಾ ಅಂಗನವಾಡಿ ಶಾಲಾ-ಕಾಲೇಜಿಗೆ ರಜೆ

ಬೀದರ್: ಬೀದರ್  ಜಿಲ್ಲೆಯಲ್ಲಿ ನಾಳೆ (ಜುಲೈ 11) ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇರುವುದರಿಂದ ಬೀದರ್ ಜಿಲ್ಲೆಯ ‌ಎಲ್ಲಾ ಅಂಗನವಾಡಿ ಶಾಲಾ-ಕಾಲೇಜಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಆದೇಶ ಹೊರಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆಗಳಿಗೆ ಮಾತ್ರ ರಜೆ ಘೋಷಣೆ

ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, 1ನೇ ತರಗತಿಯಿಂದ 10ನೇ ತರಗತಿವರೆಗೆ ಶಾಲೆಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಪಿಯುಸಿ, ಪಧವಿ, ಸ್ನಾತಕೋತ್ತರ ಇತರೆ ಕಾಲೇಜುಗಳಿಗೆ ರಜೆ ಇರುವುದಿಲ್ಲ. ಮುಂದಿನ ದಿನಗಳಲ್ಲಿ ಶನಿವಾರ ಪೂರ್ತಿ ತರಗತಿಗಳನ್ನು ನಡೆಸಿ ತರಗತಿಗಳನ್ನು ಸರಿದೂಗಿಸಲು ಸೂಚಿಸಿದ್ದಾರೆ.

ಕಲಬುರಗಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಾಳೆ (ಜುಲೈ 11) ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಯಶವಂತ್ ಗುರುಕಾರ್​ ಆದೇಶ ಹೊರಡಿಸಿದ್ದಾರೆ.

Published On - 8:20 pm, Sun, 10 July 22

‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ