AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವರಾತ್ರಿ ಉತ್ಸವ ಹಿನ್ನೆಲೆ ಮಡಿಕೇರಿ ಕಡೆ ಯಾರೂ ಪ್ರವಾಸಕ್ಕೆ ಬರಬೇಡಿ, ಜಿಲ್ಲಾಡಳಿತದ ಆದೇಶದ ವಿರುದ್ಧ ಸ್ಥಳೀಯ ವ್ಯಾಪಾರಿಗಳ ಆಕ್ರೋಶ

ಅಕ್ಟೋಬರ್ 17 ರವರೆಗೆ ಮಡಿಕೇರಿ ನಗರ ವ್ಯಾಪ್ತಿಯ ಪ್ರವಾಸೀತಾಣಗಳನ್ನು ಬಂದ್ ಮಾಡಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಇದು ಸ್ಥಳೀಯರಿಗೆ ಆಘಾತ ತಂದಿದೆ.

ನವರಾತ್ರಿ ಉತ್ಸವ ಹಿನ್ನೆಲೆ ಮಡಿಕೇರಿ ಕಡೆ ಯಾರೂ ಪ್ರವಾಸಕ್ಕೆ ಬರಬೇಡಿ, ಜಿಲ್ಲಾಡಳಿತದ ಆದೇಶದ ವಿರುದ್ಧ ಸ್ಥಳೀಯ ವ್ಯಾಪಾರಿಗಳ ಆಕ್ರೋಶ
ಅಕ್ಟೋಬರ್ 17 ರವೆಗೆ ಪ್ರವಾಸಿ ಕೇಂದ್ರ ಬಂದ್
TV9 Web
| Edited By: |

Updated on: Oct 10, 2021 | 8:30 AM

Share

ಕೊಡಗು: ಕೊಡಗು ಜಿಲ್ಲಾಡಳಿತದ ಒಂದೊಂದು ನಿರ್ಧಾರಗಳು ಕೊಡಗಿನ ಪ್ರವಾಸೋದ್ಯಮಿಗಳು ಮತ್ತು ಪ್ರವಾಸೋದ್ಯಮದ ಮೇಲೆ ಅವಲಂಬಿತರಾಗಿರುವವರನ್ನು ತತ್ತರಿಸುವಂತೆ ಮಾಡ್ತಿವೆ. ಪ್ರವಾಸಿಗರು ಅಧಿಕವಾಗಿ ಬರುವ ದಸರಾ ಸಂದರ್ಭದಲ್ಲೇ ಮಡಿಕೇರಿಯ ಪ್ರವಾಸಿ ತಾಣಗಳನ್ನ ಜಿಲ್ಲಾಡಳಿತ ಬಂದ್ ಮಾಡಿಸಿದ್ದು, ಈ ನಿರ್ಧಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ಪ್ರತಿ ವರ್ಷ ದಸರಾ ರಜೆ ಬಂದ್ರೆ ಸಾಕು ಮಡಿಕೇರಿಯಲ್ಲಿ ಪ್ರವಾಸಿಗರ ಪ್ರವಾಹ ಇರುತ್ತೆ. ಈ ಬಾರಿಯೂ ಕೊರೊನಾ ಕಡಿಮೆ ಇರೋದ್ರಿಂದ ಮಡಿಕೇರಿಯತ್ತ ಬಹಳಷ್ಟು ಪ್ರವಾಸಿಗರು ಆಗಮಿಸ್ತಿದ್ದಾರೆ. ಹೀಗಾಗಿ ಸಹಜವಾಗಿ ಪ್ರವಾಸೋದ್ಯಮಿಗಳು ಮತ್ತು ಪ್ರವಾಸೋದ್ಯಮದ ಮೇಲೆ ಅವಲಂಬಿತರಾಗಿರು ಹಾಗೂ ವ್ಯಾಪಾರಿಗಳು ಒಂದಷ್ಟು ಖುಷಿಯಾಗಿದ್ರು. ಲಾಕ್ಡೌನ್ನ ವೇಳೆ ಆದ ನಷ್ಟವನ್ನ ಈ 10 ದಿನಗಳಲ್ಲಿ ಸ್ವಲ್ಪವಾದ್ರು ಸರಿದೂಗಿಸಿಕೊಳ್ಳುವ ವಿಶ್ವಾಸದಲ್ಲಿದ್ದರು. ಆದ್ರೆ ಜಿಲ್ಲಾಡಳಿತ ಆ ಒಂದು ನಿರ್ಧಾರ ಇವರ ಆಸೆಗೆ ತಣ್ಣೀರು ಎರಚಿದೆ. ಅಕ್ಟೋಬರ್ 17 ರವರೆಗೆ ಮಡಿಕೇರಿ ನಗರ ವ್ಯಾಪ್ತಿಯ ಪ್ರವಾಸೀತಾಣಗಳನ್ನು ಬಂದ್ ಮಾಡಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಇದು ಸ್ಥಳೀಯರಿಗೆ ಆಘಾತ ತಂದಿದೆ.

ಮಡಿಕೇರಿ ನಗರದಲ್ಲಿ ಪವ್ರಾಸಿ ತಾಣ ಬಂದ್ ಆಗಿದ್ದೇ ತಡ, ಮಡಿಕೇರಿಗೆ ಆಗಮಿಸುವ ಪ್ರವಾಸಿಗರ ಸಂಖ್ಯೆಯಲ್ಲೂ ಇಳಿಮುಖವಾಗಿದೆ. ಪ್ರಮುಖ ಪ್ರವಾಸಿ ತಾಣಗಳಾದ ರಾಜಾಸೀಟ್, ಗದ್ದುಗೆ, ಕೋಟೆ, ನೆಹರೂ ಮಂಟಪಗಳು ಪ್ರವಾಸಿಗರಿಲ್ದೆ ಬಣಗುಡುತ್ತಿವೆ. ಪ್ರವಾಸಿಗರೆನ್ನೇ ನಂಬಿ ಸಣ್ಣಪುಟ್ಟ ಅಂಗಡಿ ಇಟ್ಟಿದ್ದ ವ್ಯಾಪಾರಿಗಳು ನಷ್ಟ ಅನುಭವಿಸುತ್ತಿದ್ದಾರೆ. ಅಬ್ಬಿಫಾಲ್ಸ್ಗೆ, ಮಾಂದಲಪಟ್ಟಿಗೆ ಪ್ರವಾಸಿಗರು ಹೋದ್ರೆ ಕೊರೊನಾ ಬರೋದಿಲ್ವಾ? ಬರೀ ಮಡಿಕೇರಿ ನಗರಕ್ಕೆ ಪ್ರವಾಸಿಗರು ಬಂದ್ರೆ ಮಾತ್ರ ಕೊರೊನಾ ಬರೋದಾ ಅಂತ ಖಾರವಾಗಿ ಪ್ರಶ್ನಿಸ್ತಿದ್ದಾರೆ.

ನವರಾತ್ರಿಯ ಸಂದರ್ಭದಲ್ಲಿ 10ರಿಂದ 15 ದಿನ ಪ್ರವಾಸಿಗರಿಂದ ಕೋಟಿಕೋಟಿ ವ್ಯಾಪಾರ-ವಹಿವಾಟು ನಡೆಯುತ್ತೆ. ಆದರೆ ಲಾಕ್ಡೌನ್ ಹಾಗೂ ಕೊರೊನಾ ಕಂಟಕದ ಬಳಿಕ ಮಡಿಕೇರಿಯ ಹೋಟೆಲ್ ಉದ್ಯಮ ರೆಸ್ಟೋರೆಂಟ್ಗಳು ನಷ್ಟದ ಹಾದಿಯಲ್ಲಿವೆ. ಇಂಥ ಹೊತ್ತಲ್ಲೇ ವ್ಯತಿರಿಕ್ತ ನಿರ್ಧಾರ ಕೈಗೊಂಡಿರುವುದೇಕೆ ಎಂಬುದು ಸ್ಥಳೀಯ ವ್ಯಾಪಾರಿಗಳ ಪ್ರಶ್ನೆ. ಆದ್ರೆ ಈ ಪ್ರಶ್ನೆಗೆ ಸರ್ಕಾರವೇ ಸೂಕ್ತ ಉತ್ತರ ನೀಡಬೇಕಿದೆ.

ಇದನ್ನೂ ಓದಿ: ನವರಾತ್ರಿ ಉತ್ಸವ ಹಿನ್ನೆಲೆ: ಮಡಿಕೇರಿ ಕಡೆ ಯಾರೂ ಪ್ರವಾಸಕ್ಕೆ ಬರಬೇಡಿ- ಕೊಡಗು ಜಿಲ್ಲಾಡಳಿತದಿಂದ ಮಹತ್ವದ ಆದೇಶ

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ