AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಾಯುಕ್ತ ಮತ್ತೊಂದು ACB ಆಗಬಾರದು; ಪ್ರಾಮಾಣಿಕ ಅಧಿಕಾರಿಗಳು ಬೇಕು: ಉಪಲೋಕಾಯಕ್ತ ಕೆ.ಎನ್ ಫಣೀಂದ್ರ

ರಾಜ್ಯದಲ್ಲಿ ಭ್ರಷ್ಟಾಚಾರ ಇದೆ ನಿಜ, ಆದರೆ ಭ್ರಷ್ಟ ಅಧಿಕಾರಿಗಳು ಈಗ ಪೊಲಿಸರಿಗಿಂತ ಜಾಣರಿದ್ದಾರೆ. ಭ್ರಷ್ಟಾಚಾರ ಕಂಟ್ರೋಲ್ ಮಾಡುವುದಕ್ಕೆ ಪ್ರಾಮಾಣಿಕ ಅಧಿಕಾರಿಗಳು ಬೇಕು ಎಂದು ಉಪ ಲೋಕಾಯಕ್ತ ಕೆ.ಎನ್ ಫಣೀಂದ್ರ ಹೇಳಿದ್ದಾರೆ.

ಲೋಕಾಯುಕ್ತ ಮತ್ತೊಂದು ACB ಆಗಬಾರದು; ಪ್ರಾಮಾಣಿಕ ಅಧಿಕಾರಿಗಳು ಬೇಕು: ಉಪಲೋಕಾಯಕ್ತ ಕೆ.ಎನ್ ಫಣೀಂದ್ರ
ಉಪಲೋಕಾಯಕ್ತ ಕೆ.ಎನ್ ಫಣೀಂದ್ರ
TV9 Web
| Updated By: ವಿವೇಕ ಬಿರಾದಾರ|

Updated on:Jan 22, 2023 | 4:52 PM

Share

ಕೊಡಗು: ರಾಜ್ಯದಲ್ಲಿ ಭ್ರಷ್ಟಾಚಾರ ಇದೆ ನಿಜ, ಆದರೆ ಭ್ರಷ್ಟ ಅಧಿಕಾರಿಗಳು ಈಗ ಪೊಲಿಸರಿಗಿಂತ ಜಾಣರಿದ್ದಾರೆ. ಭ್ರಷ್ಟಾಚಾರ ಕಂಟ್ರೋಲ್ ಮಾಡುವುದಕ್ಕೆ ಪ್ರಾಮಾಣಿಕ ಅಧಿಕಾರಿಗಳು ಬೇಕು ಎಂದು ಉಪ ಲೋಕಾಯಕ್ತ ಕೆ.ಎನ್ ಫಣೀಂದ್ರ ಹೇಳಿದ್ದಾರೆ. ಲೋಕಾಯುಕ್ತಕ್ಕೆ ಎಲ್ಲರೂ ದೂರು ನೀಡುತ್ತಾರೆ. ಆದರೆ ಆ ಪ್ರಕರಣ ನ್ಯಾಯಾಲಯಕ್ಕೆ ಬರುವ ವೇಳೆಗೆ ದೂರು ನೀಡಿದವರೇ ಉಲ್ಟಾ ಹೊಡೆಯುತ್ತಾರೆ. ಈಗಿನ ಅಧಿಕಾರಿಗಳು ಪೊಲೀಸರಿಗಿಂತ ಹುಷಾರಾಗಿದ್ದು, ಕಾನೂನಿನ ಬಲೆಯಿಂದ ತಪ್ಪಿಸಿಕೊಳ್ಳುವುದನ್ನು ಚೆನ್ನಾಗಿ ಅರಿತಿದ್ದಾರೆ ಎಂದು ವಾಸ್ತವ ಬಿಚ್ಚಿಟ್ಟರು.

ಕೊಡಗಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಲೋಕಾಯುಕ್ತ ಮತ್ತೊಂದು ಎಸಿಬಿ ಆಗಬಾರದು. ಭ್ರಷ್ಟಾಚಾರ ಸುಧಾರಿಸಬೇಕಾದರೆ ಲೋಕಾಯುಕ್ತಕ್ಕೆ ಪ್ರಾಮಾಣಿಕ ಅಧಿಕಾರಿಗಳು ಬರಬೇಕು. ಅಷ್ಟೇ ಅಲ್ಲದೆ, ಲೋಕಾಯುಕ್ತಕ್ಕೆ ತಪ್ಪಿತಸ್ಥರಿಗೆ ಶಿಕ್ಷೆ ನೀಡುವ ಅಧಿಕಾರವಿಲ್ಲ, ಬದಲಿಗೆ ಶಿಕ್ಷೆ ನೀಡುವಂತೆ ಸರ್ಕಾರಕ್ಕೆ ಶಿಫಾರಸ್ಸು ಮಾಡುವ ಅಧಿಕಾರ ಮಾತ್ರ ಇದೆ. ಹೀಗಾಗಿ ಲೋಕಾಯುಕ್ತ ಶಿಫಾರಸ್ಸು ಮಾಡುವುದನ್ನು ಸರ್ಕಾರ ಸಂಪೂರ್ಣ ಪಾಲಿಸಿದರೆ ಭ್ರಷ್ಟಾಚಾರ ತಡೆಗಟ್ಟಬಹುದು ಎಂದು ಅಸಹಾಯಕತೆ ತೋಡಿಕೊಂಡರು.

ಭ್ರಷ್ಟಾಚಾರ ನಿಯಂತ್ರಿಸುವಲ್ಲಿ ಜನರ ಪಾತ್ರವೂ ಬಹಳ ಮುಖ್ಯ ಇದೆ. ಸಾಕ್ಷ್ಯಗಳ ಸಮೇತ ದೂರು ನೀಡಿದರೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಒಟ್ಟಾರೆಯಾಗಿ ಲೋಕಾಯುಕ್ತ ನ್ಯಾಯಮೂರ್ತಿಗಳೇ ಭ್ರಷ್ಟ ವ್ಯವಸ್ಥೆ ಮತ್ತು ಅದನ್ನು ನಿಯಂತ್ರಿಸುವಲ್ಲಿ ಲೋಕಾಯುಕ್ತದ ಅಸಮರ್ಥತೆಯನ್ನು ಬಿಚ್ಚಿಟ್ಟಿರುವುದು ನಿಜಕ್ಕೂ ಸಮಾಜ ಚಿಂತಿಸುವಂತೆ ಮಾಡಿದೆ.

ಗೋಪಾಲ್ ಸೋಮಯ್ಯ, ಟಿವಿ9 ಕೊಡಗು

Published On - 4:52 pm, Sun, 22 January 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ