AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಾಯುಕ್ತ ಮತ್ತೊಂದು ACB ಆಗಬಾರದು; ಪ್ರಾಮಾಣಿಕ ಅಧಿಕಾರಿಗಳು ಬೇಕು: ಉಪಲೋಕಾಯಕ್ತ ಕೆ.ಎನ್ ಫಣೀಂದ್ರ

ರಾಜ್ಯದಲ್ಲಿ ಭ್ರಷ್ಟಾಚಾರ ಇದೆ ನಿಜ, ಆದರೆ ಭ್ರಷ್ಟ ಅಧಿಕಾರಿಗಳು ಈಗ ಪೊಲಿಸರಿಗಿಂತ ಜಾಣರಿದ್ದಾರೆ. ಭ್ರಷ್ಟಾಚಾರ ಕಂಟ್ರೋಲ್ ಮಾಡುವುದಕ್ಕೆ ಪ್ರಾಮಾಣಿಕ ಅಧಿಕಾರಿಗಳು ಬೇಕು ಎಂದು ಉಪ ಲೋಕಾಯಕ್ತ ಕೆ.ಎನ್ ಫಣೀಂದ್ರ ಹೇಳಿದ್ದಾರೆ.

ಲೋಕಾಯುಕ್ತ ಮತ್ತೊಂದು ACB ಆಗಬಾರದು; ಪ್ರಾಮಾಣಿಕ ಅಧಿಕಾರಿಗಳು ಬೇಕು: ಉಪಲೋಕಾಯಕ್ತ ಕೆ.ಎನ್ ಫಣೀಂದ್ರ
ಉಪಲೋಕಾಯಕ್ತ ಕೆ.ಎನ್ ಫಣೀಂದ್ರ
TV9 Web
| Edited By: |

Updated on:Jan 22, 2023 | 4:52 PM

Share

ಕೊಡಗು: ರಾಜ್ಯದಲ್ಲಿ ಭ್ರಷ್ಟಾಚಾರ ಇದೆ ನಿಜ, ಆದರೆ ಭ್ರಷ್ಟ ಅಧಿಕಾರಿಗಳು ಈಗ ಪೊಲಿಸರಿಗಿಂತ ಜಾಣರಿದ್ದಾರೆ. ಭ್ರಷ್ಟಾಚಾರ ಕಂಟ್ರೋಲ್ ಮಾಡುವುದಕ್ಕೆ ಪ್ರಾಮಾಣಿಕ ಅಧಿಕಾರಿಗಳು ಬೇಕು ಎಂದು ಉಪ ಲೋಕಾಯಕ್ತ ಕೆ.ಎನ್ ಫಣೀಂದ್ರ ಹೇಳಿದ್ದಾರೆ. ಲೋಕಾಯುಕ್ತಕ್ಕೆ ಎಲ್ಲರೂ ದೂರು ನೀಡುತ್ತಾರೆ. ಆದರೆ ಆ ಪ್ರಕರಣ ನ್ಯಾಯಾಲಯಕ್ಕೆ ಬರುವ ವೇಳೆಗೆ ದೂರು ನೀಡಿದವರೇ ಉಲ್ಟಾ ಹೊಡೆಯುತ್ತಾರೆ. ಈಗಿನ ಅಧಿಕಾರಿಗಳು ಪೊಲೀಸರಿಗಿಂತ ಹುಷಾರಾಗಿದ್ದು, ಕಾನೂನಿನ ಬಲೆಯಿಂದ ತಪ್ಪಿಸಿಕೊಳ್ಳುವುದನ್ನು ಚೆನ್ನಾಗಿ ಅರಿತಿದ್ದಾರೆ ಎಂದು ವಾಸ್ತವ ಬಿಚ್ಚಿಟ್ಟರು.

ಕೊಡಗಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಲೋಕಾಯುಕ್ತ ಮತ್ತೊಂದು ಎಸಿಬಿ ಆಗಬಾರದು. ಭ್ರಷ್ಟಾಚಾರ ಸುಧಾರಿಸಬೇಕಾದರೆ ಲೋಕಾಯುಕ್ತಕ್ಕೆ ಪ್ರಾಮಾಣಿಕ ಅಧಿಕಾರಿಗಳು ಬರಬೇಕು. ಅಷ್ಟೇ ಅಲ್ಲದೆ, ಲೋಕಾಯುಕ್ತಕ್ಕೆ ತಪ್ಪಿತಸ್ಥರಿಗೆ ಶಿಕ್ಷೆ ನೀಡುವ ಅಧಿಕಾರವಿಲ್ಲ, ಬದಲಿಗೆ ಶಿಕ್ಷೆ ನೀಡುವಂತೆ ಸರ್ಕಾರಕ್ಕೆ ಶಿಫಾರಸ್ಸು ಮಾಡುವ ಅಧಿಕಾರ ಮಾತ್ರ ಇದೆ. ಹೀಗಾಗಿ ಲೋಕಾಯುಕ್ತ ಶಿಫಾರಸ್ಸು ಮಾಡುವುದನ್ನು ಸರ್ಕಾರ ಸಂಪೂರ್ಣ ಪಾಲಿಸಿದರೆ ಭ್ರಷ್ಟಾಚಾರ ತಡೆಗಟ್ಟಬಹುದು ಎಂದು ಅಸಹಾಯಕತೆ ತೋಡಿಕೊಂಡರು.

ಭ್ರಷ್ಟಾಚಾರ ನಿಯಂತ್ರಿಸುವಲ್ಲಿ ಜನರ ಪಾತ್ರವೂ ಬಹಳ ಮುಖ್ಯ ಇದೆ. ಸಾಕ್ಷ್ಯಗಳ ಸಮೇತ ದೂರು ನೀಡಿದರೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಒಟ್ಟಾರೆಯಾಗಿ ಲೋಕಾಯುಕ್ತ ನ್ಯಾಯಮೂರ್ತಿಗಳೇ ಭ್ರಷ್ಟ ವ್ಯವಸ್ಥೆ ಮತ್ತು ಅದನ್ನು ನಿಯಂತ್ರಿಸುವಲ್ಲಿ ಲೋಕಾಯುಕ್ತದ ಅಸಮರ್ಥತೆಯನ್ನು ಬಿಚ್ಚಿಟ್ಟಿರುವುದು ನಿಜಕ್ಕೂ ಸಮಾಜ ಚಿಂತಿಸುವಂತೆ ಮಾಡಿದೆ.

ಗೋಪಾಲ್ ಸೋಮಯ್ಯ, ಟಿವಿ9 ಕೊಡಗು

Published On - 4:52 pm, Sun, 22 January 23

ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ