Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡವಾಮೆ ಬಾಳೋ ಪಾದಯಾತ್ರೆ: ನಾಳೆ ಮದ್ಯ ಮಾರಾಟ‌ ನಿಷೇಧ, ಪಾರ್ಕಿಂಗ್‌ ನಿರ್ಬಂಧ

ಮಡಿಕೇರಿಯಲ್ಲಿ ನಾಳೆ ನಡೆಯುವ ಕೊಡವಾಮೆ ಬಾಳೋ ಪಾದಯಾತ್ರೆಯ ಹಿನ್ನೆಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಬೃಹತ್ ಸಮಾವೇಶಕ್ಕಾಗಿ ಜಿಲ್ಲಾ ಕ್ರೀಡಾಂಗಣದಲ್ಲಿ ವ್ಯವಸ್ಥೆ ಮಾಡಲಾಗಿದೆ. ಸುಗಮ ಸಂಚಾರಕ್ಕಾಗಿ ವಾಹನ ಪಾರ್ಕಿಂಗ್‌ಗೆ ನಿರ್ಬಂಧ ಹೇರಲಾಗಿದೆ. ಕೊಡವ ಸಂಸ್ಕೃತಿ ಮತ್ತು ಭಾಷಿಕರ ಹಕ್ಕುಗಳ ರಕ್ಷಣೆಗಾಗಿ ಈ ಪಾದಯಾತ್ರೆ ನಡೆಯುತ್ತಿದೆ.

ಕೊಡವಾಮೆ ಬಾಳೋ ಪಾದಯಾತ್ರೆ: ನಾಳೆ ಮದ್ಯ ಮಾರಾಟ‌ ನಿಷೇಧ, ಪಾರ್ಕಿಂಗ್‌ ನಿರ್ಬಂಧ
ಕೊಡವಾಮೆ ಬಾಳೋ ಪಾದಯಾತ್ರೆ: ನಾಳೆ ಮದ್ಯ ಮಾರಾಟ‌ ನಿಷೇಧ, ಪಾರ್ಕಿಂಗ್‌ ನಿರ್ಬಂಧ
Follow us
Gopal AS
| Updated By: ಗಂಗಾಧರ​ ಬ. ಸಾಬೋಜಿ

Updated on: Feb 06, 2025 | 7:43 PM

ಕೊಡಗು, ಫೆಬ್ರವರಿ 06: ಸಂಸ್ಕೃತಿ ರಕ್ಷಣೆ ಹೆಸರಲ್ಲಿ ನಡೆಯುತ್ತಿರೋ ಕೊಡವ ಹಾಗೂ ಕೊಡವ ಭಾಷಿಕರ ಬೃಹತ್ ಪಾದಯಾತ್ರೆ (Padayatra) ಶುರುವಾಗಿ ಇಂದಿಗೆ ನಾಲ್ಕನೇ ದಿನ. ಈ ದಿನವೂ ಪಾದಯಾತ್ರೆಯಲ್ಲಿ‌ ಜನಸಾಗರ ಕಂಡುಬಂತು. ಇನ್ನು ಮಡಿಕೇರಿ ಜಿಲ್ಲಾ‌ ಕ್ರೀಡಾಂಗಣದಲ್ಲಿ ನಾಳೆ ಬೃಹತ್‌ ಸಮಾವೇಶ ಕೂಡ ನಡೆಯಲಿದ್ದು, ಹೀಗಾಗಿ ಜಿಲ್ಲೆಯ ಮಡಿಕೇರಿ ನಗರದಲ್ಲಿ ನಾಳೆ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆವರೆಗೆ ನಿಷೇಧಿಸಲಾಗಿದೆ. ಜೊತೆಗೆ ನಗರದಲ್ಲಿ ವಾಹನಗಳ ಪಾರ್ಕಿಂಗ್‌ಗೆ ನಿರ್ಬಂಧಿಸಲಾಗಿದೆ.

ಸಂಸ್ಕೃತಿ ರಕ್ಷಣೆಗಾಗಿ ಕೊಡವಾಮೆ ಬಾಳೋ ಪಾದಯಾತ್ರೆ ನಡೆಯುತ್ತಿದೆ. ನಾಲ್ಕನೇ ದಿನವೂ ಪಾದಯಾತ್ರೆಯಲ್ಲಿ‌ ಸಾಕಷ್ಟು ಜನರು ಭಾಗವಹಿಸಿದ್ದರು. ಕುಟ್ಟದಿಂದ‌ ಮಡಿಕೇರಿವರೆಗೆ ಮೆರವಣಿಗೆ ಸಾಗುತ್ತಿದೆ. ಕೊಡವ ಸಂಸ್ಕೃತಿ ಉಳಿಸಲು ಪಾದಯಾತ್ರೆ ನಡೆಯುತ್ತಿದೆ. ನಾಳೆಯ ಬೃಹತ್ ಸಮಾವೇಶದಲ್ಲಿ 30 ಸಾವಿರ ಮಂದಿ ಸೇರುವ ನಿರೀಕ್ಷೆ ಇದೆ.

ಇದನ್ನೂ ಓದಿ: ಕೊಡಗಿನಲ್ಲಿ ಮತ್ತೆ ತಾರಕಕ್ಕೇರಿದ ಕೊಡವ, ಗೌಡ ಸಮುದಾಯಗಳ ಸಂಘರ್ಷ: ಅರ್ಚಕನ ಮೇಲೆ ದಾಳಿ

ಕೊಡಗು ಜಿಲ್ಲೆಯಲ್ಲಿ ಕೊಡವ ಹಾಗೂ ಕೊಡವ ಸಂಸ್ಕೃತಿ ಆಚರಿಸುವ 18 ಮೂಲ ನಿವಾಸಿಗಳಿವೆ. ಕಳೆದ ಕೆಲವು ವರ್ಷಗಳಿಂದ ಈ ಜನಾಂಗಗಳ ಮೇಲೆ ದಬ್ಬಾಳಿಕೆ ಜಾಸ್ತಿಯಾಗಿದ್ದೂ ಮಾತ್ರವಲ್ಲದೆ ಜಿಲ್ಲೆಯ ಅತಿವಿಶಿಷ್ಟ ಸಂಸ್ಕೃತಿ ನಾಶದ ಅಂಚಿಗೆ ತೆರಳುತ್ತಿದೆ ಅನ್ನೋದು ಜನವಲಯದಲ್ಲಿ ಕೇಳಿ ಬರ್ತಾ ಇರೋ ಮಾತು.

ಇದನ್ನೂ ಓದಿ: ಧಾರ್ಮಿಕ ಉಡುಪು ವಿಚಾರಕ್ಕೆ ಕೊಡಗಿನಲ್ಲಿ ತಾರಕಕ್ಕೇರಿದ ಜನಾಂಗೀಯ ಸಂಘರ್ಷ: ನಿಷೇಧಾಜ್ಞೆ ಜಾರಿ

ಹಾಗಾಗಿ ಜಿಲ್ಲೆಯ ಅತಿವಿಶಿಷ್ಟ ಸಂಸ್ಕೃತಿ ರಕ್ಷಣೆಗಾಗಿ ಜಿಲ್ಲೆಯ ಕೊಡವ ಜನಾಂಗ ಹಾಗೂ ಕೊಡವ ಭಾಷಿಕ ಜನಾಂಗದ 10 ಸಾವಿರಕ್ಕೂ ಅಧಿಕ ಮಂದಿ ಕಳೆದ ಮೂರು ದಿನಗಳಿಂದ ಸಾಂಸ್ಕೃತಿಕ ಉಡುಪಿನಲ್ಲಿ ಪಾದಯಾತ್ರೆ ನಡೆಸುತ್ತಿದ್ದಾರೆ. ಸದ್ಯ ಪಾದಯಾತ್ರೆ ನಡೆದಿದ್ದು, ಮಹಿಳೆಯರು, ಮಕ್ಕಳು, ಪುರುಷರು, ವೃದ್ಧರು ಮತ್ತು ಕ್ರಿಡಾಪಟುಗಳು ಸೇರಿದಂತೆ ಹತ್ತು ಹಲವು ವರ್ಗದ ಜನರು ಪಾಲ್ಗೊಂಡು ಶಕ್ತಿ ತುಂಬುತ್ತಿದ್ದಾರೆ.

ಕೊಡವಾಮೆ ಬಾಳೋ ಪಾದಯಾತ್ರೆ ಉದ್ದೇಶ ಮತ್ತು ಬೇಡಿಕೆಗಳು

  • ಕೊಡವ ಹಾಗೂ ಕೊಡವ ಭಾಷಿಕ ಸಮುದಾಯಗಳನ್ನು ಒಗ್ಗೂಡಿಸುವುದು.
  • ಕೊಡವ ಸಂಸ್ಕೃತಿ ಕುರಿತು ಸರ್ಕಾರದ ಗಮನ ಸೆಳೆಯುವುದು.
  • ಕೊಡವ ಸಂಸ್ಕೃತಿ ರಕ್ಷಣೆಗಾಗಿ ಪಾದಯಾತ್ರೆ.
  • ಕೊಡವ ಜನಾಂಗದ ಮೇಲಿನ ದಬ್ಬಾಳಿಕೆಯನ್ನು ಖಂಡಿಸುವುದು.
  • ಕೊಡವ, ಕೊಡವ ಭಾಷಿಕ ಸಮುದಾಯಗಳ ಏಳಿಗೆಗೆ ಸರ್ಕಾರದಿಂದ‌ ವಿಶೇಷ ಪ್ಯಾಕೇಜ್​ಗೆ ಆಗ್ರಹಿಸಲಾಗಿದೆ.

ಕರ್ನಾಟಕ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!