AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡವಾಮೆ ಬಾಳೋ ಪಾದಯಾತ್ರೆ: ನಾಳೆ ಮದ್ಯ ಮಾರಾಟ‌ ನಿಷೇಧ, ಪಾರ್ಕಿಂಗ್‌ ನಿರ್ಬಂಧ

ಮಡಿಕೇರಿಯಲ್ಲಿ ನಾಳೆ ನಡೆಯುವ ಕೊಡವಾಮೆ ಬಾಳೋ ಪಾದಯಾತ್ರೆಯ ಹಿನ್ನೆಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಬೃಹತ್ ಸಮಾವೇಶಕ್ಕಾಗಿ ಜಿಲ್ಲಾ ಕ್ರೀಡಾಂಗಣದಲ್ಲಿ ವ್ಯವಸ್ಥೆ ಮಾಡಲಾಗಿದೆ. ಸುಗಮ ಸಂಚಾರಕ್ಕಾಗಿ ವಾಹನ ಪಾರ್ಕಿಂಗ್‌ಗೆ ನಿರ್ಬಂಧ ಹೇರಲಾಗಿದೆ. ಕೊಡವ ಸಂಸ್ಕೃತಿ ಮತ್ತು ಭಾಷಿಕರ ಹಕ್ಕುಗಳ ರಕ್ಷಣೆಗಾಗಿ ಈ ಪಾದಯಾತ್ರೆ ನಡೆಯುತ್ತಿದೆ.

ಕೊಡವಾಮೆ ಬಾಳೋ ಪಾದಯಾತ್ರೆ: ನಾಳೆ ಮದ್ಯ ಮಾರಾಟ‌ ನಿಷೇಧ, ಪಾರ್ಕಿಂಗ್‌ ನಿರ್ಬಂಧ
ಕೊಡವಾಮೆ ಬಾಳೋ ಪಾದಯಾತ್ರೆ: ನಾಳೆ ಮದ್ಯ ಮಾರಾಟ‌ ನಿಷೇಧ, ಪಾರ್ಕಿಂಗ್‌ ನಿರ್ಬಂಧ
Gopal AS
| Edited By: |

Updated on: Feb 06, 2025 | 7:43 PM

Share

ಕೊಡಗು, ಫೆಬ್ರವರಿ 06: ಸಂಸ್ಕೃತಿ ರಕ್ಷಣೆ ಹೆಸರಲ್ಲಿ ನಡೆಯುತ್ತಿರೋ ಕೊಡವ ಹಾಗೂ ಕೊಡವ ಭಾಷಿಕರ ಬೃಹತ್ ಪಾದಯಾತ್ರೆ (Padayatra) ಶುರುವಾಗಿ ಇಂದಿಗೆ ನಾಲ್ಕನೇ ದಿನ. ಈ ದಿನವೂ ಪಾದಯಾತ್ರೆಯಲ್ಲಿ‌ ಜನಸಾಗರ ಕಂಡುಬಂತು. ಇನ್ನು ಮಡಿಕೇರಿ ಜಿಲ್ಲಾ‌ ಕ್ರೀಡಾಂಗಣದಲ್ಲಿ ನಾಳೆ ಬೃಹತ್‌ ಸಮಾವೇಶ ಕೂಡ ನಡೆಯಲಿದ್ದು, ಹೀಗಾಗಿ ಜಿಲ್ಲೆಯ ಮಡಿಕೇರಿ ನಗರದಲ್ಲಿ ನಾಳೆ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆವರೆಗೆ ನಿಷೇಧಿಸಲಾಗಿದೆ. ಜೊತೆಗೆ ನಗರದಲ್ಲಿ ವಾಹನಗಳ ಪಾರ್ಕಿಂಗ್‌ಗೆ ನಿರ್ಬಂಧಿಸಲಾಗಿದೆ.

ಸಂಸ್ಕೃತಿ ರಕ್ಷಣೆಗಾಗಿ ಕೊಡವಾಮೆ ಬಾಳೋ ಪಾದಯಾತ್ರೆ ನಡೆಯುತ್ತಿದೆ. ನಾಲ್ಕನೇ ದಿನವೂ ಪಾದಯಾತ್ರೆಯಲ್ಲಿ‌ ಸಾಕಷ್ಟು ಜನರು ಭಾಗವಹಿಸಿದ್ದರು. ಕುಟ್ಟದಿಂದ‌ ಮಡಿಕೇರಿವರೆಗೆ ಮೆರವಣಿಗೆ ಸಾಗುತ್ತಿದೆ. ಕೊಡವ ಸಂಸ್ಕೃತಿ ಉಳಿಸಲು ಪಾದಯಾತ್ರೆ ನಡೆಯುತ್ತಿದೆ. ನಾಳೆಯ ಬೃಹತ್ ಸಮಾವೇಶದಲ್ಲಿ 30 ಸಾವಿರ ಮಂದಿ ಸೇರುವ ನಿರೀಕ್ಷೆ ಇದೆ.

ಇದನ್ನೂ ಓದಿ: ಕೊಡಗಿನಲ್ಲಿ ಮತ್ತೆ ತಾರಕಕ್ಕೇರಿದ ಕೊಡವ, ಗೌಡ ಸಮುದಾಯಗಳ ಸಂಘರ್ಷ: ಅರ್ಚಕನ ಮೇಲೆ ದಾಳಿ

ಕೊಡಗು ಜಿಲ್ಲೆಯಲ್ಲಿ ಕೊಡವ ಹಾಗೂ ಕೊಡವ ಸಂಸ್ಕೃತಿ ಆಚರಿಸುವ 18 ಮೂಲ ನಿವಾಸಿಗಳಿವೆ. ಕಳೆದ ಕೆಲವು ವರ್ಷಗಳಿಂದ ಈ ಜನಾಂಗಗಳ ಮೇಲೆ ದಬ್ಬಾಳಿಕೆ ಜಾಸ್ತಿಯಾಗಿದ್ದೂ ಮಾತ್ರವಲ್ಲದೆ ಜಿಲ್ಲೆಯ ಅತಿವಿಶಿಷ್ಟ ಸಂಸ್ಕೃತಿ ನಾಶದ ಅಂಚಿಗೆ ತೆರಳುತ್ತಿದೆ ಅನ್ನೋದು ಜನವಲಯದಲ್ಲಿ ಕೇಳಿ ಬರ್ತಾ ಇರೋ ಮಾತು.

ಇದನ್ನೂ ಓದಿ: ಧಾರ್ಮಿಕ ಉಡುಪು ವಿಚಾರಕ್ಕೆ ಕೊಡಗಿನಲ್ಲಿ ತಾರಕಕ್ಕೇರಿದ ಜನಾಂಗೀಯ ಸಂಘರ್ಷ: ನಿಷೇಧಾಜ್ಞೆ ಜಾರಿ

ಹಾಗಾಗಿ ಜಿಲ್ಲೆಯ ಅತಿವಿಶಿಷ್ಟ ಸಂಸ್ಕೃತಿ ರಕ್ಷಣೆಗಾಗಿ ಜಿಲ್ಲೆಯ ಕೊಡವ ಜನಾಂಗ ಹಾಗೂ ಕೊಡವ ಭಾಷಿಕ ಜನಾಂಗದ 10 ಸಾವಿರಕ್ಕೂ ಅಧಿಕ ಮಂದಿ ಕಳೆದ ಮೂರು ದಿನಗಳಿಂದ ಸಾಂಸ್ಕೃತಿಕ ಉಡುಪಿನಲ್ಲಿ ಪಾದಯಾತ್ರೆ ನಡೆಸುತ್ತಿದ್ದಾರೆ. ಸದ್ಯ ಪಾದಯಾತ್ರೆ ನಡೆದಿದ್ದು, ಮಹಿಳೆಯರು, ಮಕ್ಕಳು, ಪುರುಷರು, ವೃದ್ಧರು ಮತ್ತು ಕ್ರಿಡಾಪಟುಗಳು ಸೇರಿದಂತೆ ಹತ್ತು ಹಲವು ವರ್ಗದ ಜನರು ಪಾಲ್ಗೊಂಡು ಶಕ್ತಿ ತುಂಬುತ್ತಿದ್ದಾರೆ.

ಕೊಡವಾಮೆ ಬಾಳೋ ಪಾದಯಾತ್ರೆ ಉದ್ದೇಶ ಮತ್ತು ಬೇಡಿಕೆಗಳು

  • ಕೊಡವ ಹಾಗೂ ಕೊಡವ ಭಾಷಿಕ ಸಮುದಾಯಗಳನ್ನು ಒಗ್ಗೂಡಿಸುವುದು.
  • ಕೊಡವ ಸಂಸ್ಕೃತಿ ಕುರಿತು ಸರ್ಕಾರದ ಗಮನ ಸೆಳೆಯುವುದು.
  • ಕೊಡವ ಸಂಸ್ಕೃತಿ ರಕ್ಷಣೆಗಾಗಿ ಪಾದಯಾತ್ರೆ.
  • ಕೊಡವ ಜನಾಂಗದ ಮೇಲಿನ ದಬ್ಬಾಳಿಕೆಯನ್ನು ಖಂಡಿಸುವುದು.
  • ಕೊಡವ, ಕೊಡವ ಭಾಷಿಕ ಸಮುದಾಯಗಳ ಏಳಿಗೆಗೆ ಸರ್ಕಾರದಿಂದ‌ ವಿಶೇಷ ಪ್ಯಾಕೇಜ್​ಗೆ ಆಗ್ರಹಿಸಲಾಗಿದೆ.

ಕರ್ನಾಟಕ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು