AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡವಾಮೆ ಬಾಳೋ ಪಾದಯಾತ್ರೆ: ನಾಳೆ ಮದ್ಯ ಮಾರಾಟ‌ ನಿಷೇಧ, ಪಾರ್ಕಿಂಗ್‌ ನಿರ್ಬಂಧ

ಮಡಿಕೇರಿಯಲ್ಲಿ ನಾಳೆ ನಡೆಯುವ ಕೊಡವಾಮೆ ಬಾಳೋ ಪಾದಯಾತ್ರೆಯ ಹಿನ್ನೆಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಬೃಹತ್ ಸಮಾವೇಶಕ್ಕಾಗಿ ಜಿಲ್ಲಾ ಕ್ರೀಡಾಂಗಣದಲ್ಲಿ ವ್ಯವಸ್ಥೆ ಮಾಡಲಾಗಿದೆ. ಸುಗಮ ಸಂಚಾರಕ್ಕಾಗಿ ವಾಹನ ಪಾರ್ಕಿಂಗ್‌ಗೆ ನಿರ್ಬಂಧ ಹೇರಲಾಗಿದೆ. ಕೊಡವ ಸಂಸ್ಕೃತಿ ಮತ್ತು ಭಾಷಿಕರ ಹಕ್ಕುಗಳ ರಕ್ಷಣೆಗಾಗಿ ಈ ಪಾದಯಾತ್ರೆ ನಡೆಯುತ್ತಿದೆ.

ಕೊಡವಾಮೆ ಬಾಳೋ ಪಾದಯಾತ್ರೆ: ನಾಳೆ ಮದ್ಯ ಮಾರಾಟ‌ ನಿಷೇಧ, ಪಾರ್ಕಿಂಗ್‌ ನಿರ್ಬಂಧ
ಕೊಡವಾಮೆ ಬಾಳೋ ಪಾದಯಾತ್ರೆ: ನಾಳೆ ಮದ್ಯ ಮಾರಾಟ‌ ನಿಷೇಧ, ಪಾರ್ಕಿಂಗ್‌ ನಿರ್ಬಂಧ
Gopal AS
| Edited By: |

Updated on: Feb 06, 2025 | 7:43 PM

Share

ಕೊಡಗು, ಫೆಬ್ರವರಿ 06: ಸಂಸ್ಕೃತಿ ರಕ್ಷಣೆ ಹೆಸರಲ್ಲಿ ನಡೆಯುತ್ತಿರೋ ಕೊಡವ ಹಾಗೂ ಕೊಡವ ಭಾಷಿಕರ ಬೃಹತ್ ಪಾದಯಾತ್ರೆ (Padayatra) ಶುರುವಾಗಿ ಇಂದಿಗೆ ನಾಲ್ಕನೇ ದಿನ. ಈ ದಿನವೂ ಪಾದಯಾತ್ರೆಯಲ್ಲಿ‌ ಜನಸಾಗರ ಕಂಡುಬಂತು. ಇನ್ನು ಮಡಿಕೇರಿ ಜಿಲ್ಲಾ‌ ಕ್ರೀಡಾಂಗಣದಲ್ಲಿ ನಾಳೆ ಬೃಹತ್‌ ಸಮಾವೇಶ ಕೂಡ ನಡೆಯಲಿದ್ದು, ಹೀಗಾಗಿ ಜಿಲ್ಲೆಯ ಮಡಿಕೇರಿ ನಗರದಲ್ಲಿ ನಾಳೆ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆವರೆಗೆ ನಿಷೇಧಿಸಲಾಗಿದೆ. ಜೊತೆಗೆ ನಗರದಲ್ಲಿ ವಾಹನಗಳ ಪಾರ್ಕಿಂಗ್‌ಗೆ ನಿರ್ಬಂಧಿಸಲಾಗಿದೆ.

ಸಂಸ್ಕೃತಿ ರಕ್ಷಣೆಗಾಗಿ ಕೊಡವಾಮೆ ಬಾಳೋ ಪಾದಯಾತ್ರೆ ನಡೆಯುತ್ತಿದೆ. ನಾಲ್ಕನೇ ದಿನವೂ ಪಾದಯಾತ್ರೆಯಲ್ಲಿ‌ ಸಾಕಷ್ಟು ಜನರು ಭಾಗವಹಿಸಿದ್ದರು. ಕುಟ್ಟದಿಂದ‌ ಮಡಿಕೇರಿವರೆಗೆ ಮೆರವಣಿಗೆ ಸಾಗುತ್ತಿದೆ. ಕೊಡವ ಸಂಸ್ಕೃತಿ ಉಳಿಸಲು ಪಾದಯಾತ್ರೆ ನಡೆಯುತ್ತಿದೆ. ನಾಳೆಯ ಬೃಹತ್ ಸಮಾವೇಶದಲ್ಲಿ 30 ಸಾವಿರ ಮಂದಿ ಸೇರುವ ನಿರೀಕ್ಷೆ ಇದೆ.

ಇದನ್ನೂ ಓದಿ: ಕೊಡಗಿನಲ್ಲಿ ಮತ್ತೆ ತಾರಕಕ್ಕೇರಿದ ಕೊಡವ, ಗೌಡ ಸಮುದಾಯಗಳ ಸಂಘರ್ಷ: ಅರ್ಚಕನ ಮೇಲೆ ದಾಳಿ

ಕೊಡಗು ಜಿಲ್ಲೆಯಲ್ಲಿ ಕೊಡವ ಹಾಗೂ ಕೊಡವ ಸಂಸ್ಕೃತಿ ಆಚರಿಸುವ 18 ಮೂಲ ನಿವಾಸಿಗಳಿವೆ. ಕಳೆದ ಕೆಲವು ವರ್ಷಗಳಿಂದ ಈ ಜನಾಂಗಗಳ ಮೇಲೆ ದಬ್ಬಾಳಿಕೆ ಜಾಸ್ತಿಯಾಗಿದ್ದೂ ಮಾತ್ರವಲ್ಲದೆ ಜಿಲ್ಲೆಯ ಅತಿವಿಶಿಷ್ಟ ಸಂಸ್ಕೃತಿ ನಾಶದ ಅಂಚಿಗೆ ತೆರಳುತ್ತಿದೆ ಅನ್ನೋದು ಜನವಲಯದಲ್ಲಿ ಕೇಳಿ ಬರ್ತಾ ಇರೋ ಮಾತು.

ಇದನ್ನೂ ಓದಿ: ಧಾರ್ಮಿಕ ಉಡುಪು ವಿಚಾರಕ್ಕೆ ಕೊಡಗಿನಲ್ಲಿ ತಾರಕಕ್ಕೇರಿದ ಜನಾಂಗೀಯ ಸಂಘರ್ಷ: ನಿಷೇಧಾಜ್ಞೆ ಜಾರಿ

ಹಾಗಾಗಿ ಜಿಲ್ಲೆಯ ಅತಿವಿಶಿಷ್ಟ ಸಂಸ್ಕೃತಿ ರಕ್ಷಣೆಗಾಗಿ ಜಿಲ್ಲೆಯ ಕೊಡವ ಜನಾಂಗ ಹಾಗೂ ಕೊಡವ ಭಾಷಿಕ ಜನಾಂಗದ 10 ಸಾವಿರಕ್ಕೂ ಅಧಿಕ ಮಂದಿ ಕಳೆದ ಮೂರು ದಿನಗಳಿಂದ ಸಾಂಸ್ಕೃತಿಕ ಉಡುಪಿನಲ್ಲಿ ಪಾದಯಾತ್ರೆ ನಡೆಸುತ್ತಿದ್ದಾರೆ. ಸದ್ಯ ಪಾದಯಾತ್ರೆ ನಡೆದಿದ್ದು, ಮಹಿಳೆಯರು, ಮಕ್ಕಳು, ಪುರುಷರು, ವೃದ್ಧರು ಮತ್ತು ಕ್ರಿಡಾಪಟುಗಳು ಸೇರಿದಂತೆ ಹತ್ತು ಹಲವು ವರ್ಗದ ಜನರು ಪಾಲ್ಗೊಂಡು ಶಕ್ತಿ ತುಂಬುತ್ತಿದ್ದಾರೆ.

ಕೊಡವಾಮೆ ಬಾಳೋ ಪಾದಯಾತ್ರೆ ಉದ್ದೇಶ ಮತ್ತು ಬೇಡಿಕೆಗಳು

  • ಕೊಡವ ಹಾಗೂ ಕೊಡವ ಭಾಷಿಕ ಸಮುದಾಯಗಳನ್ನು ಒಗ್ಗೂಡಿಸುವುದು.
  • ಕೊಡವ ಸಂಸ್ಕೃತಿ ಕುರಿತು ಸರ್ಕಾರದ ಗಮನ ಸೆಳೆಯುವುದು.
  • ಕೊಡವ ಸಂಸ್ಕೃತಿ ರಕ್ಷಣೆಗಾಗಿ ಪಾದಯಾತ್ರೆ.
  • ಕೊಡವ ಜನಾಂಗದ ಮೇಲಿನ ದಬ್ಬಾಳಿಕೆಯನ್ನು ಖಂಡಿಸುವುದು.
  • ಕೊಡವ, ಕೊಡವ ಭಾಷಿಕ ಸಮುದಾಯಗಳ ಏಳಿಗೆಗೆ ಸರ್ಕಾರದಿಂದ‌ ವಿಶೇಷ ಪ್ಯಾಕೇಜ್​ಗೆ ಆಗ್ರಹಿಸಲಾಗಿದೆ.

ಕರ್ನಾಟಕ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ