AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Madikeri Dasara 2021: ಮಡಿಕೇರಿ ದಸರಾ: ಕರಗಗಳಿಗೆ ಪೂಜೆ ಸಲ್ಲಿಸಿ ವಿದ್ಯುಕ್ತ ಚಾಲನೆ

Navaratri 2021: ಈ ಕರಗಗಳು ಇನ್ನೂ ಒಂಭತ್ತು ದಿನಗಳ ಕಾಲ ನಗರ ಪ್ರದಕ್ಷಿಣೆ ಮಾಡಿ ಭಕ್ತರಿಗೆ ಆಶೀರ್ವಾದ ನೀಡುತ್ತವೆ. ನಾಡಿಗೆ ತಲೆದೋರಿರುವ ಕೊರೊನಾ ಮಹಾಮಾರಿಯನ್ನು ತೊಲಗಿಸುವಂತೆ ಈ‌ಸಂದರ್ಭ ಭಕ್ತರು ಬೇಡಿಕೊಂಡರು.

Madikeri Dasara 2021: ಮಡಿಕೇರಿ ದಸರಾ: ಕರಗಗಳಿಗೆ ಪೂಜೆ ಸಲ್ಲಿಸಿ ವಿದ್ಯುಕ್ತ ಚಾಲನೆ
ಮಡಿಕೇರಿ ದಸರಾ
TV9 Web
| Edited By: |

Updated on: Oct 07, 2021 | 8:04 PM

Share

ಮಡಿಕೇರಿ: ಐತಿಹಾಸಿಕ ಮಡಿಕೇರಿ ದಸರಾಕ್ಕೆ (Madikeri Dasara 2021)  ವಿದ್ಯುಕ್ತ ಚಾಲನೆ ದೊರೆತಿದೆ. ಮಡಿಕೇರಿ ನಗರದ ಪಂಪಿನ ಕೆರೆ ಬಳಿ ನಾಲ್ಕು ಶಕ್ತಿ ದೇವತೆಗಳಿಗೆ ಪೂಜೆ ಸಲ್ಲಿಸುವ ಮೂಲಕ ದಸರಾಕ್ಕೆ ಸಾಂಪ್ರದಾಯಿಕ ಚಾಲನೆ ನೀಡಲಾಗಿದೆ. ದಸರಾ ಪ್ರಯುಕ್ತ ಕಂಚಿ ಕಾಮಾಕ್ಷಿ, ಕುಂದುರುಮೊಟ್ಟೆ ಚೌಟಿಮಾರಿಯಮ್ಮ, ದಂಡಿನ ಮಾರಿಯಮ್ಮ, ಕೋಟೆ ಮಾರಿಯಮ್ಮ ದೇವತೆಗಳ ಕರಗಗಳನ್ನು ಹೂವಿನಿಂದ‌ ಅಲಂಕರಿಸಲಾಯಿತು. ಈ ಸಂದರ್ಭ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ ಹಾಜರಿದ್ದು ಪೂಜೆಯಲ್ಲಿ ಭಾಗಿಯಾಗಿದ್ದರು.

ಶಕ್ತಿದೇವತೆಗಳ ಆರಾಧನೆಯ ಇತಿಹಾಸ ಸುಮಾರು‌ 300 ವರ್ಷಗಳ ಹಿಂದೆ ಮಡಿಕೇರಿಗೆ ಭಾರೀ ಸಾಂಕ್ರಮಿಕ ರೋಗ ತಲೆದೋರಿ ನೂರಾರು ಮಂದಿ ಸಾವನ್ಬಪ್ಪಿದ್ದರಂತೆ. ಆಗ ಜನರೆಲ್ಲಾ ಶಕ್ತಿದೇವತೆಗಳ ಮೊರೆಹೋದರಂತೆ. ಭಕ್ತರ ಮೊರೆ ಆಲಿಸಿದ ಶಕ್ತಿದೇವತೆಗಳು ರೋಗ ದೂರ ಮಾಡಿದವು ಎಂದು ಪ್ರತೀತಿಯಿದೆ. ಹಾಗಾಗಿಯೇ ಇಂದಿಗೂ ಪ್ರತಿವರ್ಷ ವಿಜಯದಶಮಿಯ ಮುನ್ನಾ ದಿನ ಶಕ್ತಿದೇವತೆಗಳ ಆರಾಧನೆ ಮಾಡಲಾಗುತ್ತದೆ. ಈ ಕರಗಗಳು ಇನ್ನೂ ಒಂಭತ್ತು ದಿನಗಳ ಕಾಲ ನಗರ ಪ್ರದಕ್ಷಿಣೆ ಮಾಡಿ ಭಕ್ತರಿಗೆ ಆಶೀರ್ವಾದ ನೀಡುತ್ತವೆ. ನಾಡಿಗೆ ತಲೆದೋರಿರುವ ಕೊರೊನಾ ಮಹಾಮಾರಿಯನ್ನು ತೊಲಗಿಸುವಂತೆ ಈ‌ಸಂದರ್ಭ ಭಕ್ತರು ಬೇಡಿಕೊಂಡರು.

ಕೊರೊನಾ ನಿಯಮ‌ ಉಲ್ಲಂಘಿಸಿ ಸೇರಿದ ನೂರಾರು ಜನ ಕೊರೊನಾ ಕಾರಣದಿಂದಾಗಿ ಕರಗೋತ್ಸವಕ್ಕೆ ಹಲವು ನಿರ್ಬಂಧಗಳನ್ನು ಹೇರಲಾಗಿತ್ತು. ಒಂದು ಕರಗಕ್ಕೆ 25 ಮಂದಿ ಭಾಗವಹಿಸಲು ಮಾತ್ರ ಸೀಮಿತಗೊಳಿಸಲಾಗಿತ್ತು. ಆದರೆ ಕರಗ ಪೂಜೆಯ ಸಂದರ್ಭ 500 ಕ್ಕೂ ಅಧಿಕ ಭಕ್ತರು ಆಗಮಿಸಿದ್ದರು. ಹಾಗಾಗಿ ಸಾಮಾಜಿಕ ಅಂತರ ಮಾಯವಾಗಿತ್ತು.

ವರದಿ: ಗೋಪಾಲ್ ಐಮಂಡ, ಮಡಿಕೇರಿ

ಇದನ್ನೂ ಓದಿ:

 17 ವರ್ಷದಿಂದ ಕಾಡಲ್ಲೇ ವಾಸ, ಕಾರೇ ಮನೆ! ನಾಗರಿಕ ಸಮಾಜವನ್ನು ಧಿಕ್ಕರಿಸಿ ಬದುಕುತ್ತಿರುವ ಸುಳ್ಯದ ವ್ಯಕ್ತಿಯ ಕಥೆಯಿದು

ಮಹಾಲಯ ಅಮವಾಸ್ಯೆಯಂದು ಸಮಾಧಿಗಳಿಗಾಗಿ ನೀರಲ್ಲಿಳಿದು ಹುಡುಕಾಡಿದ ಕೋಲಾರದ ಜನರು!

Follow Us
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
ಹವಾಮಾನ ಇಲಾಖೆಯ ಯಾವ ಅಲರ್ಟ್ ಏನನ್ನು ಸೂಚಿಸುತ್ತೆ?
ಹವಾಮಾನ ಇಲಾಖೆಯ ಯಾವ ಅಲರ್ಟ್ ಏನನ್ನು ಸೂಚಿಸುತ್ತೆ?
ಯುವ ರೈತ ಚೇತನ್ ನಟನೆಯ ‘ದೇವಿ’ ಸಿನಿಮಾಗೆ ಸಿಕ್ತು ಹಿರಿಯರ ಆಶೀರ್ವಾದ
ಯುವ ರೈತ ಚೇತನ್ ನಟನೆಯ ‘ದೇವಿ’ ಸಿನಿಮಾಗೆ ಸಿಕ್ತು ಹಿರಿಯರ ಆಶೀರ್ವಾದ
ಗಡಿ ಜಿಲ್ಲೆಗಳ ಎಸ್‌ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಅಮಿತ್ ಶಾ
ಗಡಿ ಜಿಲ್ಲೆಗಳ ಎಸ್‌ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಅಮಿತ್ ಶಾ