AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಂಪಿ ಘಟನೆ ಮಾಸುವ ಮುನ್ನವೇ ಮಡಕೇರಿಯಲ್ಲೂ ಮಹಿಳಾ ಪ್ರವಾಸಿಗರಿಗೆ ಕಿರುಕುಳ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿಯಿರುವ ತುಂಗಭದ್ರಾ ಎಡದಂಡೆ ಕಾಲುವೆ ಬಳಿ ವಿದೇಶಿ ಮಹಿಳೆ, ಹೋಂ ಸ್ಟೇ ಮಾಲಕಿ ಮೇಲೆ ನಡೆದ ಸಾಮೂಹಿಕ ಅತ್ಯಾಚರಾ ದೇಶಾದ್ಯಂತ ಸುದ್ದಿಯಾಗಿತ್ತು. ಈ ಪ್ರಕರಣ ಮಾಸುವ ಮುನ್ನವೇ ಮಡಿಕೇರಿಯಲ್ಲಿ ಪ್ರವಾಸಿಗರಿಗೆ ಕಿರುಕುಳ ನೀಡಲಾಗಿದೆ. ರಾಜ್ಯದಲ್ಲಿ ಪ್ರವಾಸಿಗರಿಗೆ ಸುರಕ್ಷತೆ ಇಲ್ಲವೇ? ಎಂಬ ಪ್ರಶ್ನೆ ಉದ್ಭವಾಗಿದೆ.

ಹಂಪಿ ಘಟನೆ ಮಾಸುವ ಮುನ್ನವೇ ಮಡಕೇರಿಯಲ್ಲೂ ಮಹಿಳಾ ಪ್ರವಾಸಿಗರಿಗೆ ಕಿರುಕುಳ
ಈಶ್ವರ ನಿಲಯ ಹೋಂಸ್ಟೇ
Follow us
Gopal AS
| Updated By: ವಿವೇಕ ಬಿರಾದಾರ

Updated on: Apr 07, 2025 | 4:56 PM

ಮಡಿಕೇರಿ, ಏಪ್ರಿಲ್​ 07: ಹೋಮ್ ಸ್ಟೇ (Home Stay) ನಿರ್ವಾಹಕನೊಬ್ಬನ ವಿಕೃತಿಯಿಂದಾಗಿ ಮಡಿಕೇರಿ (Madikeri) ತೆರಳಿದ್ದ ಪ್ರವಾಸಿಗರು (Tourists) ಇನ್ನಿಲ್ಲದ ಹಿಂಸೆ ಅನುಭವಿಸಿದ್ದಾರೆ. ಈ ಸಂಬಂಧ ಮಡಿಕೆರಿ ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಂಗಳೂರು ಮೂಲದ ಮಮತಾ ಎಂಬುವರು ತಮ್ಮ ಮಗಳ ಜೊತೆ ಸಮಯ ಸಿಕ್ಕಾಗಲೆಲ್ಲ ಪ್ರವಾಸ ಹೋಗುವುದನ್ನು ಹವ್ಯಾಸವಾಗಿಸಿಕೊಂಡಿದ್ದಾರೆ. ಅದರಂತೆ, ಈ ಬಾರಿ ಊಟಿಗೆ ತೆರಳಿ ಬಳಿಕ ಮಡಿಕೇರಿಯಲ್ಲಿ ಕೆಲವು ದಿನಗಳ ಕಾಲ ತಂಗಲು ಆಗಮಿಸಿದ್ದರು.

ಮಡಿಕೇರಿ ನಗರದ ಈಶ್ವರ ನಿಲಯ ಎಂಬ ಹೋಂಸ್ಟೇಯಲ್ಲಿ ಶನಿವಾರ (ಏ.05) ರ ರಾತ್ರಿ ತಂಗಿದ್ದರು. ಅಲ್ಲಿಯವರೆಗೂ ಎಲ್ಲವೂ ಸರಿಯಾಗಿಯೇ ಇತ್ತು. ಆದರೆ, ನಸುಕಿನ ಜಾವ 3 ಗಂಟೆಯ ಸುಮಾರಿಗೆ ಹೋಂಸ್ಟೇ ನಿರ್ವಾಹಕ ಪ್ರವೀಣ್ ಎಂಬಾತ ತನ್ನ ಮತ್ತೊಬ್ಬ ಸಹಚರನೊಂದಿಗೆ ಬಂದು ಮಮತಾ ಅವರು ಇದ್ದ ಕೋಣೆಯ ಬಾಗಿಲು ಬಡಿದಿದ್ದಾನೆ. ಬಾಗಿಲು ತೆಗೆಯುವಂತೆ ಕಿರುಚಿದ್ದಾನೆ. ಇವರು ಇಬ್ಬರು ಮಹಿಳೆಯರೇ ಇದ್ದಿದ್ದರಿಂದ ಬಾಗಿಲು ತಗೆದಿಲ್ಲ.

ಆದರೆ, ಹಠ ಬಿಡದ ಪ್ರವೀಣ್ ನಾಲ್ಕು ಗಂಟೆಯವರೆಗೂ ಬಾಗಿಲು ಬಡಿದು ಬೆದರಿಕೆ ಹಾಕಿದ್ದಾನೆ. ಬಾಗಿಲು ತಗೆಯದೆ ಇದ್ದರೇ ಬಾಗಿಲು ಮುರಿದು ಒಳಗೆ ಬರುವುದಾಗಿ ಬೆದರಿಸಿದ್ದಾನೆ. ಆದರೆಮ ಮಮತಾ ಮಾತ್ರ ತೀವ್ರ ಭಯದಿಂದ ಬಾಗಿಲು ತೆಗೆಯದೆ ಒಳಗಡೆಯೇ ಉಳಿದಿದ್ದಾರೆ. ಬೆಳಕಾದ ಮೇಲೆ ಬಾಗಿಲು ತೆಗೆದು ಹೊರಗೆ ಬಂದು ನೋಡಿದರೇ ಮತ್ತೊಂದು ಆಘಾತ ಕಾದಿತ್ತು.

ಇದನ್ನೂ ಓದಿ
Image
ಕೊಪ್ಪಳ ರೇಪ್​ ಕೇಸ್​: ಹೋಂ ಸ್ಟೇ, ರೆಸಾರ್ಟ್​ಗಳ ಮೇಲೆ ಪೊಲೀಸರ ದಾಳಿ
Image
ಅಕ್ರಮ ದಂಧೆಗಳ ಅಡ್ಡೆಯಾದ ಕೊಪ್ಪಳದ ರೆಸಾರ್ಟ್, ಹೋಮ್ ಸ್ಟೇ, ಆರೋಪ
Image
ಕೊಪ್ಪಳ ಅತ್ಯಾಚಾರ ಪ್ರಕರಣದಿಂದ ಹಂಪಿ ಪ್ರವಾಸೋದ್ಯಮಕ್ಕೆ ತೀವ್ರ ಹೊಡೆತ
Image
ಪ್ರವಾಸಿಗರ ಮೇಲೆ ಹಲ್ಲೆ, ಮಹಿಳೆಯರಿಬ್ಬರ ಮೇಲೆ ಗ್ಯಾಂಗ್​ರೇಪ್: ​ಇಬ್ಬರ ಬಂಧನ

ಮಮತಾ ಅವರ ಕಾರಿನ ನಾಲ್ಕೂ ಚಕ್ರಗಳನ್ನ ಡ್ಯಾಮೇಜ್ ಮಾಡಿ ಗಾಳಿ ತೆಗೆಯಲಾಗಿತ್ತು. ಇದರಿಂದ ರೋಸಿ ಹೋದ ಮಮತಾ, ಮಡಿಕೇರಿ ನಗರ ಪೊಲಿಸರಿಗೆ ದೂರು ನೀಡಿದ್ದಾರೆ. ದೂರು ದಾಖಲಾದ ತಕ್ಷಣ ಕಾರ್ಯಾಚರಣೆ ನಡೆಸಿದ ಮಡಿಕೇರಿ ನಗರ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಮಹಿಳೆಗೆ ಕಿರುಕುಳ ನೀಡಿದ ಆರೋಪಿ ಪ್ರವೀಣ್ ಮತ್ತು ಆತನ ಸಹಚರ ಬಾಬುವನ್ನು ಪೊಲೀಸರು ಜೈಲಿಗಟ್ಟಿದ್ದಾರೆ.

ಹೋಂಸ್ಟೇ ಮಾಲೀಕ ಕಾವೇರಪ್ಪ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ. ಆರೋಪಿ ಆರೋಪಿ ಪ್ರವೀಣ್ ಕ್ರಿಮಿನಲ್ ಹಿನ್ನೆಲೆ ಹೊಂದಿದ್ದು, ಆತನ ಮೇಲೆ ಅದಾಗಲೇ ರೌಡಿಶೀಟರ್​ ತೆರೆಯಲಾಗಿದೆ ಎಂದು ಕೊಡಗು ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ತಿಳಿಸಿದ್ದಾರೆ. ಸದ್ಯ, ಈ ಹೋಂಸ್ಟೇಯ ಲೈಸೆನ್ಸ್​ ರದ್ದತಿ ಮಾಡಲು ಪೊಲಿಸ್ ಇಲಾಖೆ ಪ್ರವಾಸೋಧ್ಯಮ ಇಲಾಖೆಗೆ ಪತ್ರ ಬರೆದಿದೆ.

ಇದನ್ನೂ ಓದಿ: ಕೊಪ್ಪಳ ಘಟನೆ ಬಳಿಕ ಎಚ್ಚೆತ್ತ ಸರ್ಕಾರ: ರೆಸಾರ್ಟ್-ಹೋಮ್​ಸ್ಟೇಗಳಲ್ಲಿ ಭದ್ರತೆ, ಸುರಕ್ಷತೆ ಕುರಿತು ಸುತ್ತೋಲೆ

ಕೊಪ್ಪಳದಲ್ಲಿ ಪ್ರವಾಸಿಗರ ಮೇಲೆ ದೌರ್ಜನ್ಯ ನಡೆದ ಬಳಿಕ ಎಲ್ಲ ಪ್ರವಾಸಿ ಕೇಂದ್ರಗಳಲ್ಲಿ ಪ್ರವಾಸಿಗರ ಸುರಕ್ಷತೆಗೆ ಗರಿಷ್ಟ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ಸೂಚಿಸಿದ್ದರು. ಪ್ರವಾಸಿಗರಿಗೆ ಹೋಂಸ್ಟೇ ನಿರ್ವಾಹಕರು ಈ ರೀತಿ ಹಿಂಸೆ ನೀಡಿದ್ರೆ ಪ್ರವಾಸಕ್ಕೆ ಬರುವುದಾದರೂ ಹೇಗೆ ಎಂಬ ಪ್ರಶ್ನೆಯನ್ನು ಪ್ರವಾಸಿಗರು ಕೇಳುತ್ತಿದ್ದಾರೆ. ಆದರೆ, ಎಷ್ಟೇ ಮುನ್ನೆಚ್ಚರಿಕೆ ವಹಿಸಿದರೂ ಇಂತಹ ದೌರ್ಜನ್ಯಗಳಾಗುತ್ತಿರುವುದು ವಿಪರ್ಯಾಸವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ