AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಡಿಕೇರಿ: ಪತ್ನಿಯ ಕೊಲೆಗೆ ಜೈಲುಪಾಲಾಗಿದ್ದ ಪತಿಗೆ ಶಾಕ್, 5 ವರ್ಷದ ಬಳಿಕ ಪ್ರಿಯಕರನ ಜತೆ ರೆಡ್​ಹ್ಯಾಂಡ್ ಆಗಿ ಸಿಕ್ಕ ಹೆಂಡತಿ!

ಆಕೆಯನ್ನು ಗಂಡನೇ ಬರ್ಬರವಾಗಿ ಕೊಲೆ ಮಾಡಿದ್ದಾನೆ ಎಂದು ಭಾವಿಸಲಾಗಿತ್ತು. ಆ ತಪ್ಪಿಗಾಗಿ ಗಂಡ ಎರಡು ವರ್ಷ ಜೈಲುಪಾಲಾಗಿದ್ದ. ಮಾತ್ರವಲ್ಲ ಗಂಡನೇ ಹೆಂಡತಿಯ ಅಸ್ಥಿಪಂಜರದ ಅಂತ್ಯಸಂಸ್ಕಾರ ಕೂಡ ಮಾಡಿದ್ದ. ಶಿಕ್ಷೆ ಅನುಭವಿಸಿದ ಬಳಿಕ ಜೈಲಿನಿಂದ ಹೊರಬಂದಿದ್ದ. ಆದರೆ, ಸೋಮವಾರ ಸಂಜೆ ಆತನಿಗೆ, ಕೊಲೆಯಾಗಿದ್ದಾಳೆ ಎಂದು ಭಾವಿಸಲಾಗಿದ್ದಅದೇ ಹೆಂಡತಿ ಹೋಟೆಲ್​​ನಲ್ಲಿ ಕುಳಿತುಕೊಂಡು ತಿಂಡಿ ತಿನ್ನುತ್ತಿರುವುದು ಕಾಣಿಸಿದೆ! ಅದೂ ಕೂಡ ಪ್ರಿಯಕರನ​ ಜೊತೆ! ಇದೇನು ಸಿನಿಮಾ ಕಥೆ ಅಂದುಕೊಂಡಿರಾ? ಖಂಡಿತಾ ಅಲ್ಲ. ಕೊಡಗಿನ ಕುಶಾಲನಗರದ ಮಲ್ಲಿಗೆ ಎಂಬವಳ ಸಿನಿಮೀಯ ವಿದ್ಯಮಾನದ ವಿವರ ಇಲ್ಲಿದೆ.

ಮಡಿಕೇರಿ: ಪತ್ನಿಯ ಕೊಲೆಗೆ ಜೈಲುಪಾಲಾಗಿದ್ದ ಪತಿಗೆ ಶಾಕ್, 5 ವರ್ಷದ ಬಳಿಕ ಪ್ರಿಯಕರನ ಜತೆ ರೆಡ್​ಹ್ಯಾಂಡ್ ಆಗಿ ಸಿಕ್ಕ ಹೆಂಡತಿ!
ಸಾಂದರ್ಭಿಕ ಚಿತ್ರ
Follow us
Gopal AS
| Updated By: Ganapathi Sharma

Updated on:Apr 03, 2025 | 12:27 PM

ಮಡಿಕೇರಿ, ಏಪ್ರಿಲ್ 3: ಕೊಡಗು ಜಿಲ್ಲೆ (Kodagu) ಕುಶಾಲನಗರ (Kushalanagar) ತಾಲ್ಲೂಕಿನ ಬಸವನಹಳ್ಳಿ ಗ್ರಾಮದಲ್ಲಿ ಐದು ವರ್ಷಗಳ ಹಿಂದೆ ನಡೆದಿದೆ ಎನ್ನಲಾಗಿದ್ದ ಕೊಲೆ ಪ್ರಕರಣವೊಂದಕ್ಕೆ (Murder Case) ಇದೀಗ ಭಾರಿ ಟ್ವಿಸ್ಟ್ ದೊರೆತಿದೆ. ಅಷ್ಟೇ ಅಲ್ಲ, ಯಾವ ಸಸ್ಪೆನ್ಸ್​, ಹಾರರ್, ಥ್ರಿಲ್ಲರ್, ರೊಮ್ಯಾಂಟಿಕ್ ಸಿನಿಮಾಗೂ ಕಡಿಮೆ ಇಲ್ಲದ ರೀತಿಯಲ್ಲಿ ಇದೀಗ ಅನಾವರಣಗೊಂಡಿದೆ. ಪೊಲೀಸರ ದಾಖಲೆಗಳ ಪ್ರಕಾರ ಮಲ್ಲಿಗೆ ಎಂಬಾಕೆ ಆಕೆಯ ಗಂಡನ ಕೈಯಿಂದಲೇ ಹತ್ಯೆ ಆಗಿ ಅದಾಗಲೇ ಐದು ವರ್ಷ ಆಗಿ ಹೋಗಿದೆ. ಆಕೆಯನ್ನು ಕೊಲೆ ಮಾಡಿದ್ದಾಕ್ಕಾಗಿ ಗಂಡ ಸುರೇಶ್​ ಎರಡು ವರ್ಷ ಜೈಲೂಟ ಕೂಡ ಮಾಡಿ ಬಂದಿದ್ದಾರೆ. ಆದರೆ, ವಿಚಿತ್ರ ಎಂದರೆ, ಕೊಲೆಯಾಗಿದ್ದಾಳೆ ಎಂದು ಭಾವಿಸಲಾಗಿದ್ದ ಮಲ್ಲಿಗೆ ಮಂಗಳವಾರ ಸಂಜೆ ಮಡಿಕೇರಿ ನಗರದ ಹೋಟೆಲ್​ ಒಂದರಲ್ಲಿ ತಿಂಡಿ ತಿನ್ನುತ್ತಾ ಇರುವುದು ಸುರೇಶ್​ಗೆ ಕಾಣಿಸಿದೆ. ಅದೂ ಕೂಡ ಆಕೆಯ ಪ್ರಿಯಕರನ ಜತೆ! ಇದನ್ನು ಗಂಡ ಸುರೇಶ್​ನ ಸ್ನೇಹಿತರು ನೋಡಿ, ತಕ್ಷಣವೇ ಪೊಲಿಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಮಡಿಕೇರಿ ನಗರ ಪೊಲಿಸರು ಆಕೆಯನ್ನು ವಶಕ್ಕೆ ಪಡೆದಿದ್ದಾರೆ. ಇಲ್ಲೇ ನೋಡಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ದೊರೆತಿದ್ದು.

ಐದು ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಮಲ್ಲಿಗೆ

ಕುಶಾಲನಗರ ತಾಲ್ಲೂಕಿನ ಬಸವನಹಳ್ಳಿ ಗ್ರಾಮದ ಆದಿವಾಸಿ ಜನಾಂಗದ ಯುವಕ ಸುಮಾರು 18 ವರ್ಷಗಳ ಹಿಂದೆ ಮಲ್ಲಿಗೆ ಎಂಬಾಕೆಯನ್ನು ವಿವಾಹವಾಗಿರುತ್ತಾರೆ. ದಂಪತಿಗೆ ಇಬ್ಬರು ಮಕ್ಕಳೂ ಜನಿಸಿದ್ದರು. ಆದರೆ, 2020 ರ ನವೆಂಬರ್​ನಲ್ಲಿ ಇದ್ದಕ್ಕಿದ್ದಂತೆ ಒಂದಿನ ಪತ್ನಿ ಮಲ್ಲಿಗೆ ನಾಪತ್ತೆಯಾಗಿದ್ದಾಳೆ. ಹಾಗಾಗಿ ಸುರೇಸ್​ ಕುಶಾಲನಗರ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರು. ಪೊಲಿಸರು ಒಂದಷ್ಟು ದಿನ ಹುಡುಕಿದರೂ ಮಲ್ಲಿಗೆ ಸಿಕ್ಕಿಲ್ಲ. ಹಾಗಾಗಿ ಎಲ್ಲರೂ ಸುಮ್ಮನಾಗಿದ್ದರು. ಪತ್ನಿ ಗಣೇಶ್​ ಎಂಬಾತನ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡು ಓಡಿ ಹೋಗಿರುವುದು ಗೊತ್ತಿದ್ದರೂ ಸುರೇಶ್​ ಮನನೊಂದು ಸುಮ್ಮನಾಗಿದ್ದರು.

ಸುರೇಶ್​ ದುರಾದೃಷ್ಟ: ವಕ್ಕರಿಸಿತು ಕೊಲೆ ಆರೋಪ

ಆದರೆ ಸುರೇಶ್​ಗೆ ದುರಾದೃಷ್ಟ ವಕ್ಕರಿಸಿತು. 2021ರ ಜೂನ್​ ಮೂರನೇ ವಾರದಲ್ಲಿ ಕುಶಾಲನಗರಕ್ಕೆ ಖಾಸಗಿ ಕಾರಿನಲ್ಲಿ ಒಂದಷ್ಟು ಮಂದಿ ಪೊಲೀಸರು ಬಂದಿದ್ದಾರೆ. ಬಂದವರು, ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಪೊಲಿಸ್ ಠಾಣೆಯ ಸಿಬ್ಬಂದಿಯಾಗಿರುತ್ತಾರೆ. ಅವರು ಸುರೇಶನನ್ನು ಬರ ಹೇಳಿ, ಮಹಿಳೆಯೊಬ್ಬಳ ಮೃತದೇಹ ಸಿಕ್ಕಿದೆ, ಬಂದು ಗುರುತುಪತ್ತೆ ಮಾಡು ಎಂದು ಬಲವಂತದಿಂದ ಬೆಟ್ಟದಪುರಕ್ಕೆ ಕರೆದುಕೊಂಡು ಹೋಗಿದ್ದಾರೆ.

ಇದನ್ನೂ ಓದಿ
Image
ನಾಲ್ವರನ್ನು ಹತ್ಯೆಗೈದು ಶವಗಳ ಜತೆ ರಾತ್ರಿ ಕಳೆದ, ಬೆಳಗ್ಗೆ ಬಾಡೂಟ ಉಂಡು ಹೋದ
Image
ಹತ್ಯೆಯಾದ ಮಹಿಳೆಯ ಮೂರನೇ ಗಂಡ ಪತ್ನಿ ಮತ್ತು ಇತರರನ್ನು ಕೊಂದನೇ?
Image
ಕೊಡಗು: ಒಂದೇ ಕುಟುಂಬದ ‌ನಾಲ್ವರ ಹತ್ಯೆ, ಒಬ್ಬನೇ ನಾಲ್ವರನ್ನು ಕೊಚ್ಚಿ ಕೊಂದ
Image
ಮೈಸೂರು ಕುಶಾಲನಗರ ಹೆದ್ದಾರಿ ನಿರ್ಮಾಣ: ಕೇಂದ್ರದಿಂದ ಗುಡ್ ನ್ಯೂಸ್
Victim Suresh

ಪ್ರಕರಣದ ಸಂತ್ರಸ್ತ ಸುರೇಶ್

ಅಲ್ಲಿ ಯಾವುದೋ ಮಹಿಳೆಯ ಸೀರೆ ಲಂಗ, ಒಳ ಉಡುಪು ಚಪ್ಪಲಿ ಎಲ್ಲಾ ತೋರಿಸಿ, ‘ಇದು ನಿನ್ನದೇ ಹೆಂಡತಿಯದ್ದು. ನೀನೇ ಕೊಲೆ ಮಾಡಿದ್ದೀ, ಒಪ್ಪಿಕೋ’ ಎಂದು ಚಿತ್ರ ಹಿಂಸೆ ಕೊಟ್ಟಿದ್ದರಂತೆ. ಇದೇ ಪ್ರಕರಣದಲ್ಲಿ 18-07-2021ರಲ್ಲಿ ಬೆಟ್ಟದಪುರ ಠಾಣೆಯಲ್ಲಿ ಸುರೇಶ್ ವಿರುದ್ಧ ಪ್ರಕರಣ ಕೂಡ ದಾಖಲಾಗಿ ನಂತರ ಅವರು ಜೈಲು ಸೇರಿದ್ದಾರೆ.

ಸಿಕ್ಕಿತು ವಕೀಲರ ನೆರವು: ಡಿಎನ್​ಎ ಪರೀಕ್ಷೆ ಮಾಡಿದಾಗ ಹೊರಬಂತು ರಹಸ್ಯ

ಜೈಲುಪಾಲಾದ ಸುರೇಶ್​ಗೆ ಮೈಸೂರಿನ ಪಾಂಡು ಪೂಜಾರಿ ಎಂಬ ವಕೀಲರ ರೂಪದಲ್ಲಿ ಸಹಾಯ ಬರುತ್ತದೆ. 2022ರ ಜನವರಿಯಲ್ಲಿ ವಕೀಲರ ಕೊರಿಕೆ ಮೇರೆಗೆ ಮಲ್ಲಿಗೆ ಅಸ್ತಿ ಪಂಜರ ಹಾಗೂ ಆಕೆಯ ತಾಯಿಯ ರಕ್ತದ ಮಾದರಿ ಸಂಗ್ರಹಿಸಿ ಡಿಎನ್​ಎ ಪರೀಕ್ಷೆಗೆ ಕಳುಹಿಸಲಾಗುತ್ತದೆ. ಆದರೆ ಅಲ್ಲಿ ಬೆಟ್ಟದಪುರ ಪೊಲಿಸರು ಮಲ್ಲಿಗೆಯದ್ದು ಎಂದು ಪ್ರತಿಪಾದಿಸಿದ ದೇಹ ಆಕೆಯದ್ದಲ್ಲ ಎಂಬ ವರದಿ ಬರುತ್ತದೆ. ಆದರೂ ಬೆಟ್ಟದಪುರ ಪೊಲೀಸರು ಸುರೇಶನನ್ನು ಎರಡು ವರ್ಷ ಜೈಲಿನಲ್ಲಿ ಕೊಳೆಯುವಂತೆ ಮಾಡಿರುತ್ತಾರೆ. ಇದಾದ ಬಳಿಕ ವಕೀಲ ಪಾಂಡು, ಹರಸಾಸಹಪಟ್ಟು ಹೈಕೋರ್ಟ್​ ಮೊರೆ ಹೋಗಿ 2024ರಲ್ಲಿ ಸುರೇಶ್​​ ಅವರನ್ನು ಜಾಮೀನಿನ ಮೇಲೆ ಬಿಡಿಸಿಕೊಂಡು ಬಂದಿದ್ದರು.

ಪತ್ನಿಯ ಹುಡುಕಿಕೊಡುವಂತೆ ಮತ್ತೆ ಪೊಲೀಸ್ ಮೊರೆ ಹೋಗಿದ್ದ ಸುರೇಶ್

ಇಷ್ಟೆಲ್ಲ ಆದ ಬಳಿಕ, ಕೊಲೆಯಾಗಿರುವ ಮಹಿಳೆ ತನ್ನ ಹೆಂಡತಿಯಲ್ಲ. ತಾನು ಕೊಲೆ ಮಾಡಿಲ್ಲ, ಹೆಂಡತಿಯನ್ನು ಹುಡುಕಿಕೊಡಿ ಎಂದು ಸುರೇಶ್ ಮತ್ತೆ ಪೊಲೀಸರಿಗೆ ದೂರು ನೀಡಿದ್ದಾರೆ. ಆದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿರುವುದಿಲ್ಲ ಎಂದು ವಕೀಲರು ಆರೋಪಿಸಿದ್ದಾರೆ.

ಮಡಿಕೇರಿಯಲ್ಲಿ ಪ್ರಿಯಕರನ ಜತೆ ಮಲ್ಲಿಗೆ ಪ್ರತ್ಯಕ್ಷ: ಸುರೇಶ್ ಸ್ನೇಹಿತರು ಶಾಕ್

ಇಷ್ಟೆಲ್ಲ ಬೆಳವಣಿಗೆಗಳು ನಡೆಯುತ್ತಿರುವಾಗ ಇದ್ದಕ್ಕಿದ್ದ ಹಾಗೆ ಕೊಲೆಯಾಗಿದ್ದಾಳೆ ಎಂಬುದಾಗಿ ಭಾವಿಸಲಾಗಿದ್ದ ಮಲ್ಲಿಗೆ ಜೀವಂತವಾಗಿ ಮಡಿಕೇರಿ ಹೋಟೆಲ್​​ನಲ್ಲಿ ತಿಂಡಿ ತಿನ್ನುತ್ತಾ ಇರುವುದು ಸುರೇಶ್ ಹಾಗೂ ಅವರ ಸ್ನೇಹಿತರ ಕಣ್ಣಿಗೆ ಬಿದ್ದಿದೆ. ಈ ಅವಕಾಶ ಬಿಟ್ಟರೆ ಮತ್ತೆ ಸಿಗಲ್ಲ ಎಂದು ಯೋಚಿಸಿದ ಸುರೇಶ್​ ಮತ್ತು ಆತನ ಸ್ನೇಹಿತರು ಮಡಿಕೇರಿ ಪೊಲಿಸರ ಸಹಾಯ ಪಡೆದು ಮಲ್ಲಿಗೆಯನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಆಕೆ ತನ್ನ ಪ್ರಿಯಕರ ಗಣೇಶನ ಹೊತೆ ವಿರಾಜಪೇಟೆ ತಾಲ್ಲೂಕಿನ ಟಿಶೆಟ್ಟಿಗೇರಿ ಗ್ರಾಮದಲ್ಲಿ ವಾಸವಿರುವುದಾಗಿ ಹೇಳಿದ್ದಾಳೆ.

ಇದನ್ನೂ ಓದಿ: ಮಡಿಕೇರಿ: ನಾಲ್ವರನ್ನು ಹತ್ಯೆಗೈದು ಶವಗಳ ಜತೆ ರಾತ್ರಿ ಕಳೆದ, ಬೆಳಗ್ಗೆ ಬಾಡೂಟ ಉಂಡು ಹೋದ

ಸದ್ಯ ಮಲ್ಲಿಗೆಯನ್ನು ಕುಶಾಲನಗರ ಗ್ರಾಮಾಂತರ ಠಾಣಾ ಪೊಲೀಸರು ಬೆಟ್ಟದಪುರ ಪೊಲೀಸರಿಗೆ ಒಪ್ಪಿಸಿದ್ದಾರೆ. ವಕೀಲ ಪಾಂಡು ಅವರ ಶ್ರಮದಿಂದಾಗಿ ಮಲ್ಲಿಗೆಯನ್ನು ಇದೀಗ ಮೈಸೂರು ಐದನೇ ಹೆಚ್ಚುವರಿ ಜಿಲ್ಲಾ ಸೆಷನ್ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯ ಇದೀಗ ಸುಳ್ಳು ಆರೋಪ ಪಟ್ಟಿ ದಾಖಲಿಸಿದ ಬೆಟ್ಟದಪುರ ಠಾಣೆ ತನಿಖಾಧಿಕಾರಿ, ಮೈಸೂರು ಎಸ್​ಪಿ ಸೇರಿದಂತೆ ಹಲವು ಅಧಿಕಾರಿಗಳನ್ನು ವಿಚಾರಣೆಗೆ ಕರೆದಿದೆ. ಕುಶಾಲನಗರ ಗ್ರಾಮಾಂತರ ಠಾಣೆ ಪೊಲಿಸರು ಯಾಕೆ ಮಲ್ಲಿಗೆಯನ್ನು ಹುಡುಕಲಿಲ್ಲ, ಇತ್ತ ಬೆಟ್ಟದ ಪುರ ಠಾಣೆ ಪೊಲಿಸರು ಯಾವುದೋ ಮಹಿಳೆಯ ಮೃತದೇಹವನ್ನು ಮಲ್ಲಿಗೆಯದ್ದೇ ದೇಹ ಎಂದು ಯಾಕೆ ಕೇಸ್ ದಾಖಲಿಸಿದ್ದರು, ಹಾಗೆಯೇ ಅಂದು ಪತ್ತೆಯಾದ ದೇಹ ಯಾರದ್ದು, ಆಕೆಯನ್ನು ಯಾರು ಕೊಲೆ ಮಾಡಿದ್ದು ಈ ಎಲ್ಲಾ ವಿಚಾರಗಳು ಇದೀಗ ಹೊಸ ತನಿಖೆಯಿಂದ ಬೆಳಕಿಗೆ ಬರಬೇಕಿದೆ. ಹಾಗೇಯೇ ಈ ಮೂಲಕ ಅಮಾಯಕ ಆದಿವಾಸಿ ಸುರೇಶ್​ ಮತ್ತು ಆತನ ಕುಟುಂಬಕ್ಕೆ ನ್ಯಾಯ ದೊರಕಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:19 am, Thu, 3 April 25

ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ
ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ
ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ