AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಡಿಕೇರಿ ಮಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆಗೋಡೆಯಲ್ಲಿ ಭಾರೀ ಬಿರುಕು: ಯಾವುದೇ ಕ್ಷಣ ಭೂಕುಸಿತ ಸಂಭವಿಸುವ ಭೀತಿ

ಮಡಿಕೇರಿ ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವವರು ಎಚ್ಚರ ವಹಿಸಲೇಬೇಕು. ಹೆದ್ದಾರಿ ಬದಿಗೆ ಕಟ್ಟಲಾಗಿರುವ ಬೃಹತ್ ತಡೆಗೋಡೆ ಬಾಯ್ದೆರೆದು ನಿಂತಿದೆ. ಹಾಗಾಗಿ ಯಾವುದೇ ಕ್ಷಣದಲ್ಲಿ ಈ ತಡೆಗೋಡೆ ಕುಸಿದು ಭೂ ಕುಸಿತವಾಗುವ ಭೀತಿ ತಲೆದೋರಿದೆ. ಇದರಿಂದಾಗಿ ಮಡಿಕೇರಿ ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರಯಾಣಿಸುವವರು ಜೀವ ಕೈಯಲ್ಲಿ ಹಿಡಿದುಕೊಂಡೇ ಓಡಾಡುವಂತಾಗಿದೆ.

ಮಡಿಕೇರಿ ಮಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆಗೋಡೆಯಲ್ಲಿ ಭಾರೀ ಬಿರುಕು: ಯಾವುದೇ ಕ್ಷಣ ಭೂಕುಸಿತ ಸಂಭವಿಸುವ ಭೀತಿ
ಮಡಿಕೇರಿ ಮಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆಗೋಡೆಯಲ್ಲಿ ಭಾರೀ ಬಿರುಕು
Gopal AS
| Edited By: |

Updated on:Aug 01, 2025 | 10:21 AM

Share

ಮಡಿಕೇರಿ, ಆಗಸ್ಟ್ 1: ಮಡಿಕೇರಿ ಮಂಗಳೂರು ಮಧ್ಯೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 275 ರಲ್ಲಿ (Madikeri Mangaluru National Highway) 2018ರ ವೇಳೆ ಭಾರೀ ಭೂಕುಸಿತ ಸಂಭವಿಸಿ ಸಂಚಾರವೇ ಬಂದ್ ಆಗಿತ್ತು. ಅದಾದ ಬಳಿಕ ನಾಲ್ಕೈದು ವರ್ಷ ಕಾಮಗಾರಿ ಮಾಡಿ ಮೂರು ಕೋಟಿ ರೂ. ವೆಚ್ಚದಲ್ಲಿ ಬೃಹತ್ ತಡೆಗೋಡೆ ನಿರ್ಮಾಣ ಮಾಡಲಾಗಿತ್ತು. ಆದರೆ, ಈ ತಡೆಗೋಡೆ ನಿರ್ಮಾಣವಾಗಿ ಒಂದು ಮಳೆಗಾಲ ಕಳೆಯುವುದರ ಒಳಗೆಯೇ ಬಿರುಕು ಬಿಟ್ಟು ಯಾವುದೇ ಕ್ಷಣದಲ್ಲಿ ಕುಸಿಯುವ ಭೀತಿ ಎದುರಾಗಿದೆ. ಮಡಿಕೇರಿ (Madikeri) ನಗರದಿಂದ ಕೇವಲ ಅರ್ಧ ಕಿಲೋಮೀಟರ್ ದೂರದಲ್ಲಿ ಈ ಹೆದ್ದಾರಿ ತಡೆಗೋಡೆ ಬಾಯ್ಬಿಟ್ಟು ಕುಳಿತಿದೆ. ಸುಮಾರು ನಾಲ್ಕು ಹಂತಗಳಲ್ಲಿ 80 ಮೀಟರ್ ಎತ್ತರದಲ್ಲಿ ಈ ತಡೆಗೋಡೆಯನ್ನು ಬಲಿಷ್ಠವಾಗಿ ಕಟ್ಟಲಾಗಿದೆ. ಆದರೆ, ನೀರು ಮತ್ತು ಮಣ್ಣಿನ ವಿಪರೀತ ಒತ್ತಡದಿಂದ ಈ ತಡೆಗೋಡೆ ಬಿರುಕು ಬಿಟ್ಟಿದೆ. ಸದ್ಯಕ್ಕೆ ಹೆದ್ದಾರಿಗೆ ಯಾವುದೇ ಅಪಾಯ ಇಲ್ಲ ಅಂತ ಜಿಲ್ಲಾಧಿಕಾರಿ ಹೇಳಿದ್ದಾರೆ.

ನಿವಾಸಿಗಳ ಸ್ಥಳಾಂತರಕ್ಕೆ ಸೂಚನೆ

ತಡೆಗೋಡೆಯ ಕೆಳಗೆ ಹಲವು ಮನೆಗಳಿದ್ದು ಎಲ್ಲಾ ಮನೆಗಳೂ ಅಪಾಯಕ್ಕೆ ಸಿಲುಕಿವೆ. ತಡೆಗೋಡೆ ಕುಸಿದು ಹೋದರೆ ಮನೆಗಳು ಮತ್ತು ಅವುಗಳಲ್ಲಿರುವ ನಿವಾಸಿಗಳೂ ಅಪಾಯಕ್ಕೆ ಸಿಲುಕಲಿದ್ದಾರೆ. ಹಾಗಾಗಿ ಈ ನಿವಾಸಿಗಳ ಸ್ಥಳಾಂತರ ಮಾಡುವಂತೆ ಸೂಚನೆ ನೀಡಲಾಗಿದೆ. ತಡೆಗೋಡೆ ಬಿರುಕು ಬಿಟ್ಟ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಎಂಜಿನಿಯರ್​​ಗಳು ಸ್ಥಳ ಪರಿಶೀಲನೆ ಮಾಡಿ ಹಿರಿಯ ಅಧಿಕಾರಿಗಳಿಗೆ ವರದಿ ನೀಡಿದ್ದಾರೆ. ಸದ್ಯ ಹೆದ್ದಾರಿಯಲ್ಲಿ ಬ್ಯಾರಿಕೇಡ್ ಹಾಕಿ ಸಂಚಾರ ನಿಯಂತ್ರಣ ಮಾಡಿದ್ದಾರೆ. ಇದರಿಂದ ಸಂಚಾರಕ್ಕೆ ಅಡಚಣೆ ಯಾಗಿದೆ.

ಇದನ್ನೂ ಓದಿ: ಕಾರ್ಮಿಕರಿಗೆ ಒತ್ತಡ ಹೇರಿ 10 ಗಂಟೆ ಕೆಲಸ ಮಾಡಿಸ್ಬೇಡಿ: ಕಂಪನಿಗಳಿಗೆ ಸರ್ಕಾರ ಖಡಕ್ ಎಚ್ಚರಿಕೆ

ಇದನ್ನೂ ಓದಿ
Image
ಫೋನ್​ನಲ್ಲಿ ಹರಟೆ ಹೊಡೆಯುತ್ತಾ ಜನರ ಸತಾಯಿಸಿದ ಕ್ಲರ್ಕ್: ವಿಡಿಯೋ ವೈರಲ್
Image
ಬಾಲಕನ ಅಪಹರಿಸಿ ಹತ್ಯೆ ಮಾಡಿದ ದುಷ್ಕರ್ಮಿಗಳ ಕಾಲಿಗೆ ಗುಂಡೇಟು, ಇಬ್ಬರ ಬಂಧನ
Image
ಕಾರ್ಮಿಕರಿಗೆ ಒತ್ತಡ ಹೇರಿ 10 ಗಂಟೆ ಕೆಲಸ ಮಾಡಿಸ್ಬೇಡಿ: ಸರ್ಕಾರ ಎಚ್ಚರಿಕೆ
Image
ಚಾಲಕರಿಗೆ ಕಡ್ಡಾಯ ಹೆಲ್ತ್ ಕಾರ್ಡ್: ಹೊಸ ನಿಯಮ ಕಡ್ಡಾಯಕ್ಕೆ ಚಿಂತನೆ

ಒಟ್ಟಿನಲ್ಲಿ ಈ ಹೆದ್ದಾರಿ ಸದ್ಯದ ಮಟ್ಟಿಗೆ ಟೈಂ ಬಾಂಬ್​​ನಂತಾಗಿದ್ದು,​ ಯಾವುದೇ ಕ್ಷಣದಲ್ಲಿ ಅಪಾಯ ಸಂಭವಿಸಬಹುದು. 3 ಕೋಟಿ ರೂ. ವೆಚ್ಚ ಮಾಡಿ ನಿರ್ಮಾಣ ಮಾಡಲಾಗಿರುವ ಈ ತಡೆಗೋಡೆ ಒಂದು ಮಳೆಗಾಲ ಕಳೆಯುವದರೊಳಗೆಯೇ ಹೀಗೆ ಬಾಯ್ಬಿಟ್ಟು ನಿಂತಿರುವುದು ಕಾಮಗಾರಿ ಬಗ್ಗೆಯೂ ಅನುಮಾನ ಮೂಡವಂತಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:17 am, Fri, 1 August 25

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್