AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಶಾಲನಗರ: ಹಿಟ್ ಆ್ಯಂಡ್ ರನ್​ಗೆ ಬಿಜೆಪಿ ಕಾರ್ಯಕರ್ತ ಬಲಿ, ಒಬ್ಬನ ಬಂಧನ

ಹಿಟ್ ​ಆ್ಯಂಡ್​ ರನ್​ಗೆ ಬಿಜೆಪಿ ಕಾರ್ಯಕರ್ತ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್​ ಪಕ್ಷಕ್ಕೆ ಮತ ಹಾಕಿದರೆ ಕನ್ನಡಿಗರ ಸರ್ಕಾರ ರಚನೆಯಾಗಲ್ಲ. ತಾಲಿಬಾನ್ ಸರ್ಕಾರ ರಚನೆ ಆಗುತ್ತೆ ಎಂದು ಹೇಳಿದ್ದೆ. ಅದರಂತೆ, ಕರ್ನಾಟಕದಲ್ಲಿ ತಾಲಿಬಾನ್ ಸರ್ಕಾರವೇ ಅಧಿಕಾರದಲ್ಲಿದೆ ಎಂದು ಟೀಕಿಸಿದ್ದಾರೆ.

ಕುಶಾಲನಗರ: ಹಿಟ್ ಆ್ಯಂಡ್ ರನ್​ಗೆ ಬಿಜೆಪಿ ಕಾರ್ಯಕರ್ತ ಬಲಿ, ಒಬ್ಬನ ಬಂಧನ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Apr 19, 2024 | 2:49 PM

Share

ಕೊಡಗು, ಏಪ್ರಿಲ್ 19: ಕೊಡಗು ಜಿಲ್ಲೆಯಲ್ಲಿ ಕುಶಾಲನಗರ ತಾಲೂಕಿನ ವಾಲ್ನೂರು ಗ್ರಾಮದಲ್ಲಿ ಶುಕ್ರವಾರ ರಾತ್ರಿ ಚುನಾವಣಾ ಪ್ರಚಾರದ ವೇಳೆ ಹಿಟ್ ಅಂಡ್ ರನ್​ಗೆ (Hit And Run) ಬಿಜೆಪಿ ಕಾರ್ಯಕರ್ತರೊಬ್ಬರು (BJP Worker) ಮೃತಪಟ್ಟಿದ್ದಾರೆ. ಘಟನೆಯ ನಂತರ ಸ್ಥಳದಲ್ಲಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಇದೊಂದು ಉದ್ದೇಶಪೂರ್ವಕ ಕೃತ್ಯ ಎಂದು ಆರೋಪಿಸಿರುವ ಬಿಜೆಪಿ ಬೆಂಬಲಿಗರು ಮತ್ತು ಕಾರ್ಯಕರ್ತರು ರಸ್ತೆಯಲ್ಲಿ ಕುಳಿತು ಘೋಷಣೆ ಕೂಗಿದರು. ಗೊಂದಲದ ನಡುವೆಯೇ ಪೊಲೀಸ್ ಅಧಿಕಾರಿಗಳು ಪ್ರತಿಭಟನಾಕಾರರನ್ನು ಸಮಾಧಾನಪಡಿಸಲು ಯತ್ನಿಸಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ವಿರುದ್ಧ ಐಪಿಸಿಯ ಸೆಕ್ಷನ್ 302 (ಕೊಲೆಗೆ ಶಿಕ್ಷೆ) ಅಡಿಯಲ್ಲಿ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಲಾಗಿದೆ. ಒಬ್ಬನನ್ನು ಬಂಧಿಸಲಾಗಿದೆ.

ಕಾಂಗ್ರೆಸ್​ ಪಕ್ಷಕ್ಕೆ ಮತ ಹಾಕಿದರೆ ತಾಲಿಬಾನ್ ಸರ್ಕಾರ: ಪ್ರತಾಪ್ ಸಿಂಹ

ಹಿಟ್ ​ಆ್ಯಂಡ್​ ರನ್​ಗೆ ಬಿಜೆಪಿ ಕಾರ್ಯಕರ್ತ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್​ ಪಕ್ಷಕ್ಕೆ ಮತ ಹಾಕಿದರೆ ಕನ್ನಡಿಗರ ಸರ್ಕಾರ ರಚನೆಯಾಗಲ್ಲ. ತಾಲಿಬಾನ್ ಸರ್ಕಾರ ರಚನೆ ಆಗುತ್ತೆ ಎಂದು ಹೇಳಿದ್ದೆ. ಅದರಂತೆ, ಕರ್ನಾಟಕದಲ್ಲಿ ತಾಲಿಬಾನ್ ಸರ್ಕಾರವೇ ಅಧಿಕಾರದಲ್ಲಿದೆ ಎಂದು ಟೀಕಿಸಿದರು. ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹಾನಬಾಳು ಗ್ರಾಮದಲ್ಲಿ ಮಾತನಾಡಿದ ಅವರು, ಈ ಸರ್ಕಾರ ಬಂದ ಮೇಲೆ ಸಮಾಜಘಾತಕ ಶಕ್ತಿಗೆ ಆತ್ಮಸ್ಥೈರ್ಯ ಸಿಕ್ಕಿದೆ. ಮತದಾರರು ಈಗಲಾದರೂ ಎಚ್ಚೆತ್ತುಕೊಳ್ಳಬೇಕು ಎಂದರು.

ಇದನ್ನೂ ಓದಿ: ರಾಜ್ಯದಲ್ಲಿ ಪಾ‘ಕೈ’ಸ್ತಾನ್ ಸರ್ಕಾರದಿಂದ‌ ತಾಲಿಬಾನ್‌ ಮಾಡೆಲ್‌ ಜಾರಿ: ಅಪರಾಧ ಪ್ರಕರಣಗಳ ಪಟ್ಟಿ ಮಾಡಿ ಬಿಜೆಪಿ ಕಿಡಿ

ಈ ಲೋಕಸಭೆ ಚುನಾವಣೆಯಲ್ಲಿ 28 ಕ್ಷೇತ್ರದಲ್ಲೂ ಮೈತ್ರಿ ಅಭ್ಯರ್ಥಿಗಳು ಗೆಲ್ಲಬೇಕು. ರಾಜ್ಯದ ಜನತೆ ಬಿಜೆಪಿ ಗೆಲ್ಲಿಸುವ ಮೂಲಕ ಸರ್ಕಾರವನ್ನು ಎಚ್ಚರಿಸಬೇಕು ಎಂದು ಅವರು ಕರೆ ನೀಡಿದರು.

ಪ್ರೀತಂ ಗೌಡ ಖಂಡನೆ

ರಾಜ್ಯದಲ್ಲಿ ಸರ್ಕಾರ, ಕಾನೂನು ಸುವ್ಯವಸ್ಥೆ ಅನ್ನೋದು ಸತ್ತುಹೋಗಿದೆ. ಕಳೆದ 24 ಗಂಟೆಗಳಲ್ಲಿ 8ಕ್ಕೂ ಹೆಚ್ಚು ಕೊಲೆಗಳಾಗಿವೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಕೊಡಗು ಜಿಲ್ಲೆಯ ಸಿದ್ದಾಪುರದ ತ್ಯಾಗತ್ತೂರಿನಲ್ಲಿ ಬಿಜೆಪಿ ಪರ ಚುನಾವಣಾ ಪ್ರಚಾರ ನಡೆಸುತ್ತಿದ್ದ ನಮ್ಮ ಕಾರ್ಯಕರ್ತರ ಮೇಲೆ ಕಾರು ಹರಿಸಿ ಒಬ್ಬರ ಬಲಿ ಪಡೆದು ಇನ್ನಿಬ್ಬರ ಸ್ಥಿತಿ ಗಂಭೀರವಾಗುವಂತೆ ಅಪಘಾತ ನಡೆಸಿದ್ದಾರೆ. ಕಾರು ಹರಿಸಿದವರಲ್ಲಿ ಒಬ್ಬ ‘ಅರ್ಷದ್ ಶೌಕತ್’, ಇನ್ನೂ ನಾಲ್ವರು ಪಾರಿಯಾಗಿದ್ದಾರೆ. ನಿಮ್ಮ ಅತಿಯಾದ ಓಲೈಕೆಯಿಂದ ರಾಜ್ಯದಲ್ಲಿ ಮತಾಂಧ ಯುವಕರ ಪುಂಡಾಟಕ್ಕೆ ಕಡಿವಾಣವೇ ಇಲ್ಲ. ಮೊನ್ನೆ ಜೈ ಶ್ರೀರಾಮ್ ಎಂದಿದ್ದಕ್ಕೆ ಹಲ್ಲೆ, ನಿನ್ನೆ ಕೇಸರಿ ಶಾಲು ಧರಿಸಿ ಪ್ರಚಾರ ಮಾಡಿದವರ ಮೇಲೆ ಕೊಲೆ ಪ್ರಯತ್ನ. ಸಿಎಂ ಸಿದ್ದರಾಮಯ್ಯ, ಗೃಹ ಸಚಿವರಾದ ಜಿ ಪರಮೇಶ್ವ ಅವರೇ ವೆಂಟಿಲೇಟರ್​​ನಲ್ಲಿರುವ ಗೃಹ ಇಲಾಖೆಗೆ ಸೂಕ್ತ ಚಿಕಿತ್ಸೆ ನೀಡಿ ರಾಜ್ಯವನ್ನು ಉಳಿಸಿ, ಇಲ್ಲದಿದ್ದಲ್ಲಿ ಜನತೆಯೇ ನಿಮ್ಮ ಸರ್ಕಾರಕ್ಕೆ ಚಿಕಿತ್ಸೆ ನೀಡಲಿದ್ದಾರೆ’ ಎಂದು ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಪ್ರೀತಂ ಗೌಡ ಉಲ್ಲೇಖಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ