AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗು; ಅರೆಕಾಡು ಗ್ರಾಮದಲ್ಲಿ ಟ್ರ್ಯಾಕ್ಟರ್ ಚಾಲಕನ ಕೊಂದ ಆನೆ ಕೊನೆಗೂ ಸೆರೆ, ದುಬಾರೆ ಶಿಬಿರಕ್ಕೆ ಸ್ಥಳಾಂತರ

Elephant Captured in Kodagu; 18 ರಿಂದ 20 ವರ್ಷದ ಗಂಡು ಆನೆಯನ್ನು ಸೆರೆ ಹಿಡಿಯಲಾಗಿದೆ. ನಾಲ್ಕು ಪಳಗಿದ ಆನೆಗಳೊಂದಿಗೆ ಮಡಿಕೇರಿ ವಿಭಾಗದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿದ್ದರು ಎಂದು ಮಡಿಕೇರಿ ವಿಭಾಗದ ಡಿಸಿಎಫ್ ಎಟಿ ಪೂವಯ್ಯ ಖಚಿತಪಡಿಸಿದ್ದಾರೆ. ಸೆರೆ ಹಿಡಿದ ಆನೆಯನ್ನು ದುಬಾರೆ ಆನೆ ಶಿಬಿರಕ್ಕೆ ಸ್ಥಳಾಂತರಿಸಲಾಗಿದೆ.

ಕೊಡಗು; ಅರೆಕಾಡು ಗ್ರಾಮದಲ್ಲಿ ಟ್ರ್ಯಾಕ್ಟರ್ ಚಾಲಕನ ಕೊಂದ ಆನೆ ಕೊನೆಗೂ ಸೆರೆ, ದುಬಾರೆ ಶಿಬಿರಕ್ಕೆ ಸ್ಥಳಾಂತರ
ಮಡಿಕೇರಿ ತಾಲೂಕಿನ ಅರೆಕಾಡು ಸಮೀಪದ ಮದರ ಕುಪ್ಪೆಯಲ್ಲಿ ಸೆರೆಯಾದ ಕಾಡಾನೆ
TV9 Web
| Edited By: |

Updated on: Aug 15, 2023 | 10:03 PM

Share

ಮಡಿಕೇರಿ, ಆಗಸ್ಟ್ 15: ಕೊಡಗಿನಲ್ಲಿ (Kodagu) ಟ್ರ್ಯಾಕ್ಟರ್ ಚಾಲಕ ಕಟ್ಟೆಮಾಡು ದೇವಪ್ಪ ಅವರನ್ನು ಬಲಿತೆಗೆದುಕೊಂಡಿದ್ದ ಆನೆಯನ್ನು (Wild Elephant) ಹಲವು ಸಾಕಾನೆಗಳ ಸಹಾಯದಿಂದ ಅರಣ್ಯ ಇಲಾಖೆಯ ಸಿಬ್ಬಂದಿ (Forest Department) ಮಂಗಳವಾರ ಸೆರೆಹಿಡಿದಿದ್ದಾರೆ. ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆಯ ಸುಮಾರು 150 ಸಿಬ್ಬಂದಿ ತೊಡಗಿಸಿಕೊಂಡಿದ್ದಾರೆ. ದಕ್ಷಿಣ ಕೊಡಗಿನ ಅರೆಕಾಡು ಪ್ರದೇಶದಲ್ಲಿ ಆನೆಯನ್ನು ಸೆರೆ ಹಿಡಿಯಲಾಗಿದೆ. ಭಾನುವಾರ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ಆನೆ ದಾಳಿಗೆ ಕಟ್ಟೆಮಾಡು ದೇವಪ್ಪ(58) ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಮಡಿಕೇರಿ ವಿಭಾಗದ ಅರಣ್ಯ ಇಲಾಖೆ ಅಧಿಕಾರಿಗಳು ಅರೆಕಾಡು ಅಭ್ಯತ್​ ಮಂಗಲ ವ್ಯಾಪ್ತಿಯಲ್ಲಿ ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆ ಆರಂಭಿಸಿದ್ದರು.

ದುಬಾರೆ ಮತ್ತು ಮತ್ತಿಗೋಡು ಆನೆ ಶಿಬಿರಗಳಿಂದ ಪಳಗಿದ ಆನೆಗಳ ನೆರವಿನೊಂದಿಗೆ ಸೋಮವಾರ ಸೆರೆ ಹಿಡಿಯುವ ಕಾರ್ಯಾಚರಣೆ ಆರಂಭವಾಯಿತು. ಅರಣ್ಯ ಇಲಾಖೆಯ ಸುಮಾರು 150 ಸಿಬ್ಬಂದಿ ಸೋಮವಾರದಿಂದ ಕಾರ್ಯಾಚರಣೆಯಲ್ಲಿ ತೊಡಗಿದ್ದರು. ಆದರೆ, ಆನೆ ಪತ್ತೆಯಾಗಿರಲಿಲ್ಲ. ಮಂಗಳವಾರ ಮಧ್ಯಾಹ್ನದ ವೇಳೆಗೆ ಆನೆಯನ್ನು ಪತ್ತೆ ಹಚ್ಚಲಾಗಿದ್ದು, ಯಶಸ್ವಿಯಾಗಿ ಸೆರೆ ಹಿಡಿಯಲಾಗಿದೆ.

18 ರಿಂದ 20 ವರ್ಷದ ಗಂಡು ಆನೆಯನ್ನು ಸೆರೆ ಹಿಡಿಯಲಾಗಿದೆ. ನಾಲ್ಕು ಪಳಗಿದ ಆನೆಗಳೊಂದಿಗೆ ಮಡಿಕೇರಿ ವಿಭಾಗದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿದ್ದರು ಎಂದು ಮಡಿಕೇರಿ ವಿಭಾಗದ ಡಿಸಿಎಫ್ ಎಟಿ ಪೂವಯ್ಯ ಖಚಿತಪಡಿಸಿದ್ದಾರೆ.

ನಂತರ ಸೆರೆ ಹಿಡಿದ ಆನೆಯನ್ನು ದುಬಾರೆ ಆನೆ ಶಿಬಿರಕ್ಕೆ ಸ್ಥಳಾಂತರಿಸಲಾಯಿತು.

ಈ ಮಧ್ಯೆ, ಸೆರೆ ಸಿಕ್ಕ ಆನೆ ಕಟ್ಟೆಮಾಡು ದೇವಪ್ಪ ಅವರನ್ನು ಕೊಂದ ಆನೆ ಅಲ್ಲ ಎಂದು ಅರೆಕಾಡು ನಿವಾಸಿಗಳು ಪ್ರತಿಪಾದಿಸಿದ್ದಾರೆ. ಆದರೆ, ದೇವಪ್ಪನನ್ನು ಕೊಂದಿದ್ದು ಇದೇ ಆನೆ ಎಂದು ಅರಣ್ಯಾಧಿಕಾರಿಗಳು ಖಚಿತಪಡಿಸಿದ್ದು, ಪ್ರತ್ಯಕ್ಷದರ್ಶಿಗಳಿಂದ ದೃಢಪಟ್ಟಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಆನೆ ದಾಳಿಗೆ ಟ್ರ್ಯಾಕ್ಟರ್ ಚಾಲಕ ಸಾವು, ಕೊಡಗು ಜಿಲ್ಲೆಯ ಹಲವು ಶಾಲೆಗಳಿಗೆ ಇಂದು ರಜೆ ಘೋಷಣೆ

ಘಟನಾ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎನ್ಎಸ್ ಬೋಸರಾಜು ಭೇಟಿ ನೀಡಿದ್ದು, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಈ ಬಗ್ಗೆ ಮಾತನಾಡುವುದಾಗಿ ಭರವಸೆ ನೀಡಿದ್ದಾರೆ. ಹೆಚ್ಚುತ್ತಿರುವ ವನ್ಯಜೀವಿ ಸಂಘರ್ಷದ ಕುರಿತು ಮುಖ್ಯಮಂತ್ರಿಯೊಂದಿಗೆ ಚರ್ಚಿಸಿ ಶಾಶ್ವತ ಪರಿಹಾರವನ್ನು ವಿಸ್ತರಿಸುವುದಾಗಿ ಸಚಿವರು ಭರವಸೆ ನೀಡಿದ್ದಾರೆ.

ಕಟ್ಟೆಮಾಡು ದೇವಪ್ಪ ಆನೆ ದಾಳಿಯಿಂದ ನಿಧನರಾದ ಕಾರಣ ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಮುನ್ನೆಚ್ಚರಿಕಾ ಕ್ರಮವಾಗಿ ಸೋಮವಾರಪೇಟೆ ತಾಲೂಕಿನ ನೆಲ್ಲಿಹುದಿಕೇರಿ, ಅಭ್ಯತ್​ ಮಂಗಲ, ಮಡಿಕೇರಿ ತಾಲೂಕಿನ ಹೊಸ್ಕೇರಿ, ಮುರಗೋಡ, ಕಟ್ಟೆಮಾಡು, ಅರೆಕಾಡು, ಗುಯ್ಯ, ಸಿದ್ದಾಪುರದ ಶಾಲೆಗಳಿಗೆ ಸೋಮವಾರ ರಜೆ ಘೋಷಿಸಲಾಗಿತ್ತು.

ಕೊಡಗು ಜಿಲ್ಲೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ