AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಡಿಕೇರಿ: ಅಪಾಯದ ಸ್ಥಳ ಲೆಕ್ಕಿಸದೆ ಸೆಲ್ಫಿಗಾಗಿ ಮುಗಿಬಿದ್ದ ಪ್ರವಾಸಿಗರು

ಸೆಲ್ಫಿ ಹುಚ್ಚಿಗೆ ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ. ಬೆಟ್ಟದ ತುತ್ತ ತುದಿಯಲ್ಲಿ, ಜಲಪಾತ ಮತ್ತು ಇನ್ನಿತರೆ ಅಪಯಾದ ಸ್ಥಳದಲ್ಲಿ ನಿಂತು ಸೆಲ್ಫಿ ತೆಗೆದುಕೊಳ್ಳುವ ಹುಂಬುತನದಲ್ಲಿ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಇದೀಗ, ಮಡಿಕೇರಿಯಲ್ಲೊಂದು ಮಾನವ ನಿರ್ಮಿತ ಸೆಲ್ಫಿ ಪಾಯಿಂಟ್ ನಿರ್ಮಾಣವಾಗಿದೆ.​

ಮಡಿಕೇರಿ: ಅಪಾಯದ ಸ್ಥಳ ಲೆಕ್ಕಿಸದೆ ಸೆಲ್ಫಿಗಾಗಿ ಮುಗಿಬಿದ್ದ ಪ್ರವಾಸಿಗರು
ಅಪಾಯದ ಸ್ಥಳದಲ್ಲಿ ಪ್ರವಾಸಿಗರ ಸೆಲ್ಫಿ
Gopal AS
| Edited By: ವಿವೇಕ ಬಿರಾದಾರ|

Updated on:Jun 15, 2024 | 11:20 AM

Share

ಕೊಡಗು, ಜೂನ್​ 15: ಮಳೆಗಾಲ (Mansoon) ಆರಂಭವಾಗಿದೆ, ವಾರಾಂತ್ಯ ಹಿನ್ನೆಲೆಯಲ್ಲಿ ಸಾಕಷ್ಟು ಜನರು ಮಡಿಕೇರಿಗೆ (Madikeri) ಪ್ರವಾಸಕ್ಕೆ ಹೋಗುತ್ತಿದ್ದಾರೆ. ಹೀಗೆ ಹೋದ ಪ್ರವಾಸಿಗರು, ಅಪಯಾದ ಸ್ಥಳಗಳಲ್ಲಿ ನಿಂತು ಸೆಲ್ಫಿ (Selfie) ತೆಗೆದುಕೊಳ್ಳವ ಆಸೆಯಲ್ಲಿ ಜೀವಕ್ಕೆ ಕುತ್ತು ತಂದುಕೊಳ್ಳವ ಸಾಧ್ಯತೆ ಇದೆ. ಹೌದು, ಮಡಿಕೇರಿ ನಗರದಿಂದ ಮಂಗಳೂರು (Madikeri to Mangaluru) ರಸ್ತೆಯಲ್ಲಿ ಎರಡು ಕಿಮಿ ಸಂಚರಿಸಿದರೆ ಸೆಲ್ಫಿ ಪಾಯಿಂಟ್ ಇದೆ. ಇದು ನೈಸರ್ಗಿಕ ಸೆಲ್ಫಿ ಪಾಯಿಂಟ್​ ಅಲ್ಲ. ಬದಲಿಗೆ 2018ರಲ್ಲಿ ಇಲ್ಲಿ ಭೂ ಕುಸಿತವಾಗಿ ರಾಷ್ಟ್ರೀಯ ಹೆದ್ದಾರಿಯೇ ಕೊಚ್ಚಿ ಹೋಗುವ ಆತಂಕ ಎದುರಾಗಿತ್ತು.

ಹೀಗಾಗಿ ರಸ್ತೆ ಅಂಚಿನ ಪ್ರಪಾತಕ್ಕೆ 100 ಅಡಿಗೂ ಅಧಿಕ ಎತ್ತರದಲ್ಲಿ ಬೃಹತ್ ತಡೆಗೋಡೆ ಕಟ್ಟಿ ಮಣ್ಣು ತುಂಬಿಸಿ, ರಸ್ತೆ ಕೊಚ್ಚಿ ಹೋಗದಂತೆ ತಡೆಯಲು ಕಾಮಗಾರಿ ಮಾಡಲಾಗಿದೆ. ಈ ತಡೆಗೋಡೆಯ ಅಂಚಿನಲ್ಲೇ ಇದೀಗ ಸೆಲ್ಫಿ ಪಾಯಿಂಟ್ ಸೃಷ್ಟಿಯಾಗಿದೆ. ಯಾಕಂದರೆ ತಡೆಗೋಡೆಯ ಅಂಚಿನಲ್ಲಿ 300 ಅಡಿಗೂ ಹೆಚ್ಚು ಆಳ ಪ್ರಪಾತವಿದ್ದು ಅತ್ತ ಬದಿ ಸುಂದರ ಬೆಟ್ಟ ಗುಡ್ಡಗಳಿವೆ. ಇಲ್ಲಿ ನಿಂತು ಫೋಟೋ ತೆಗೆಸಿಕೊಳ್ಳುವುದೆ ಇದೀಗ ಎಲ್ಲರಿಗೂ ಆನಂದ.

ಪ್ರವಾಸಿಗರ ಸೆಲ್ಫಿ

ಇದನ್ನೂ ಓದಿ: ಕೊಡಗಿಗೆ ಪ್ರವಾಸಕ್ಕೆ ತೆರಳುವವರಿಗೆ ಸಿಹಿ ಸುದ್ದಿ, ಕಾವೇರಿ ನದಿಯಲ್ಲಿ ರಾಫ್ಟಿಂಗ್ ಆರಂಭ

ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡುವ ಪ್ರವಾಸಿಗರು ಈ ಸ್ಥಳ ಬಂದೊಡನೆ ಅಲ್ಲೇ ವಾಹನಗಳನ್ನು ನಿಲ್ಲಿಸಿ ಸೆಲ್ಫಿ ತೆಗೆದುಕೊಳ್ಳಲು ಮುಂದಾಗುತ್ತಿದ್ದಾರೆ. ಇಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಆಳ ಪ್ರಪಾತಕ್ಕೆ ಉರುಳಿ ಬೀಳುವ ಸಂಭವವಿದೆ. ತಡೆಗೋಡೆಯ ಅಂಚಿನಲ್ಲಿ ಯಾವುದೇ ಸುರಕ್ಷತಾ ಕ್ರಮಗಳಿಲ್ಲ. ಹಾಗೆ ನೋಡಿದರೆ ಇದು ಅಧಿಕೃತ ಪ್ರವಾಸಿ ತಾಣವೇ ಅಲ್ಲ. ಹೀಗಾಗಿ ಇಲ್ಲಿ ಸುರಕ್ಷತಾ ಕ್ರಮ ಅನುಸರಿಸುವ ಅಗತ್ಯವೂ ಇಲ್ಲ. ಆದರೆ, ಪ್ರವಾಸಿಗರು ಮಾತ್ರ ಅಪಾಯ ಲೆಕ್ಕಿಸದೆ ಫೋಟೋ ತೆಗಯಲು ಮುಂದಾಗುತ್ತಿದ್ದಾರೆ. ಇದನ್ನು ತಡೆಯುವಂತೆ ನಿಯಂತ್ರಿಸುವಂತೆ ಸ್ಥಳೀಯರು ಮನವಿ ಮಾಡಿದ್ದಾರೆ.

ಯಾವಾಗ ಸ್ಥಳೀಯರ ವಿರೋಧ ಹೆಚ್ಚಾಯಿತು, ಇದೀಗ ಪೊಲೀಸರು ಕಾರ್ಯಾಚರಣೆಗೆ ಇಳಿದು ಪ್ರವಾಸಿಗರನ್ನು ಅಲ್ಲಿಂದ ಕಳುಹಿಸುತ್ತಿದ್ದಾರೆ. ಆದರೆ, ಎಲ್ಲ ಸಮಯದಲ್ಲಿ ಪೊಲೀಸರು ಅಲ್ಲಿ ಕರ್ತವ್ಯದಲ್ಲಿ ಇರುವುದಿಲ್ಲ. ಬ್ಯಾರಿಕೇಡ್​ಗಳನ್ನ ಹಾಕಿ ಎಚ್ಚರಿಕೆ ಫಲಕ ಕೂಡ ಅಳವಡಿಸಿಲ್ಲ. ಹೀಗಾಗಿ ಈಗಲೂ ಪ್ರವಾಸಿಗರು ಅಲ್ಲಿ ಸೆಲ್ಫಿಗೆ ಮುಂದಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇಲ್ಲಿಗೆ ಭದ್ರತಾ ಸಿಬ್ಬಂದಿಯೊಬ್ಬರನ್ನು ನೇಮಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:20 am, Sat, 15 June 24

Follow Us
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?