AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Madikeri: ಚೆಕ್​ಪೋಸ್ಟ್​ಗಳಲ್ಲಿ ತಹಶೀಲ್ದಾರ್​ಗೇ ಲಂಚ ಕೊಡಲು ಬರುತ್ತಾರೆ: ಶಾಸಕ ಕೆಜಿ ಬೋಪಯ್ಯ ಆರೋಪ

Kodagu: ಡಿಸಿ ಕೂಡ ಸರಿಯಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ ಎಂದು ಆರೋಪ ವ್ಯಕ್ತಪಡಿಸಿದ್ದಾರೆ. ನಮ್ಮದೇ ಸರ್ಕಾರವಿದ್ದರೂ ನಮಗೆ ಅಧಿಕಾರವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Madikeri: ಚೆಕ್​ಪೋಸ್ಟ್​ಗಳಲ್ಲಿ ತಹಶೀಲ್ದಾರ್​ಗೇ ಲಂಚ ಕೊಡಲು ಬರುತ್ತಾರೆ: ಶಾಸಕ ಕೆಜಿ ಬೋಪಯ್ಯ ಆರೋಪ
ಸಭೆಯಲ್ಲಿ ಕೆ.ಜಿ. ಬೋಪಯ್ಯ
TV9 Web
| Edited By: |

Updated on:Aug 06, 2021 | 7:59 PM

Share

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕೊವಿಡ್ ಪ್ರಕರಣಗಳು ಏರಿಕೆಯಾಗುತ್ತಿರುವ ಮಧ್ಯೆಯೇ ವಿರಾಜಪೇಟೆ ಶಾಸಕ ಕೆಜಿ ಬೋಪಯ್ಯ ಚೆಕ್​ಪೋಸ್ಟ್​ನ್ನು ಅಕ್ರಮವಾಗಿ ದಾಟಿ ಬರಲು ಯತ್ನಿಸುವವರ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ. ಇತ್ತಿಚೆಗೆ ವಿರಾಜಪೇಟೆ ತಾಲ್ಲೂಕಿನ ತಹಶೀಲ್ದಾರ್ ಯೋಗಾನಂದ್ ಚೆಕ್​ಪೋಸ್ಟ್​ಗೆ ಭೇಟಿ ನೀಡಿದ್ದಾಗ ಕೆಲವರು ಅವರಿಗೇ ಸಾವಿರ ರೂಪಾಯಿ ಲಂಚ ನೀಡಲು ಮುಂದಾಗಿದ್ದರು ಎಂದು ಅಕ್ರಮವನ್ನು ಬಿಚ್ಚಿಟ್ಟಿದ್ದಾರೆ.

ಕೊಡಗು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನೂತನ ಉಸ್ತವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ನೇತೃತ್ವದಲ್ಲಿ ಕೋವಿಡ್ ಪರಾಮರ್ಷನಾ ಸಭೆಯ ವೇಳೆ ಈ ಪ್ರಸಂಗವನ್ನು ಅವರು ನೆನೆಸಿಕೊಂಡಿದ್ದಾರೆ. ಮಾತ್ರವಲ್ಲ ಜಿಲ್ಲೆಯಲ್ಲಿ ಅಧಿಕಾರಿಗಳ ಕೊವಿಡ್ ನಿರ್ವಹಣೆ ಬಗ್ಗೆಯೂ ಕೆಜಿ ಬೋಪಯ್ಯ ಗರಂ ಆಗಿದ್ದಾರೆ. ಕೇರಳ ಗಡಿಗೆ ಹೊಂದಿಕೊಂಡಿರುವ ಚೆಕ್ ಪೋಸ್ಟ್​ಗಳಲ್ಲಿ ಕೊವಿಡ್ ಮಾರ್ಗಸೂಚಿ ಪಾಲನೆ ಆಗ್ತಾ ಇಲ್ಲ ಎಂದು ದೂರಿದ್ದಾರೆ.

ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಲು ಯಾರೂ ಇಲ್ಲ, ಡಿಸಿ ಕೂಡ ಸರಿಯಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ. ಬೋಪಯ್ಯ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಡಿಸಿ ಚಾರುಲತಾ ಸೋಮಲ್, ಹಾಗೆಲ್ಲಾ ಆರೋಪ ಮಾಡಬೇಡಿ ಸರ್ ಎಂದು ಹೇಳಿದ್ದಾರೆ. ಅದಕ್ಕೆ ಬೋಪಯ್ಯ ಸುಮ್ಮನೆ ಆರೋಪ ಮಾಡುತ್ತಿಲ್ಲ, ಅದು ಫ್ಯಾಕ್ಟ್ ಅಂತ ಕುಟುಕಿದ್ದಾರೆ. ಒಟ್ಟಾರೆ ಜಿಲ್ಲೆಯಲ್ಲಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮಧ್ಯೆ ತಾಳಮೇಳ ತಪ್ಪಿದೆ ಅಂತ ನಾಗರಿಕರು ದೂರುವಂತಾಗಿದೆ. ಬಹುಶಃ ಸಚಿವ ಸ್ಥಾನ ಸಿಗದ ಹತಾಶೆಯೋ ಏನೋ ನಮ್ಮದೇ ಸರ್ಕಾರವಿದ್ದರೂ ನಮಗೆ ಅಧಿಕಾರವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ರು ಎಂದು ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಆಷಾಡ ಶುಕ್ರವಾರವೂ ಚಾಮುಂಡಿ ಬೆಟ್ಟಕ್ಕೆ ಭಕ್ತರಿಗೆ ಪ್ರವೇಶ ನಿರ್ಬಂಧ ಕೊರೊನಾ ಎರಡನೇ ಅಲೆ ತೀವ್ರತೆ ಇನ್ನೂ ಕೂಡ ಕಡಿಮೆ ಆಗಿಲ್ಲ. ಅನ್​ಲಾಕ್ ಬಳಿಕವೂ ದೇಶದಲ್ಲಿ ಮತ್ತು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕೊವಿಡ್-19 ಪ್ರಕರಣಗಳು ಇಳಿಮುಖ ಆಗಿಲ್ಲ. ಕರ್ನಾಟಕ ಸಂಪೂರ್ಣ ಅನ್​ಲಾಕ್ ಆಗುವ ಮೊದಲೇ ಮತ್ತೆ ವೀಕೆಂಡ್ ಕರ್ಫ್ಯೂ, ರಾತ್ರಿ ಕರ್ಫ್ಯೂ ಘೋಷಿಸುವಂತಾಗಿದೆ. ಈ ಪರಿಣಾಮ ರಾಜ್ಯದ ಧಾರ್ಮಿಕ ಕ್ಷೇತ್ರಗಳಿಗೆ ಭಕ್ತರ ಪ್ರವೇಶಕ್ಕೂ ಸಮಸ್ಯೆ ಉಂಟಾಗಿದೆ. ಇಂದು (ಆಗಸ್ಟ್ 6) ಈ ವರ್ಷದ ಕೊನೆಯ ಆಷಾಡ ಶುಕ್ರವಾರ. ಆದರೆ, ಕೊರೊನಾ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ಇಂದು ಸಹ ನಿರ್ಬಂಧ ವಿಧಿಸಲಾಗಿದೆ.

ಚಾಮುಂಡಿ ಬೆಟ್ಟದ ಮೇಲ್ಬಾಗಕ್ಕೆ ತೆರಳಲು ಸಂಪರ್ಕ ಕಲ್ಪಿಸುವ ಎಲ್ಲಾ ಮಾರ್ಗಗಳನ್ನು ಬಂದ್ ಮಾಡಲಾಗಿದೆ. ಚಾಮುಂಡಿ ಬೆಟ್ಟದ ನಿವಾಸಿಗಳು ಹಾಗೂ ಶಿಷ್ಟಾಚಾರದ ಪ್ರಕಾರ ನಿಗದಿತ ಜನರಿಗೆ ಮಾತ್ರ ದೇವಾಲಯ ಪ್ರವೇಶಕ್ಕೆ ಅವಕಾಶ ಕೊಡಲಾಗಿದೆ. ಚಾಮುಂಡಿ ಬೆಟ್ಟದಲ್ಲಿ ಪೊಲೀಸ್ ಬಿಗಿ ಭದ್ರತೆ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ: ಪ್ರವಾಸಿಗರಿಗೆ ಆರ್​ಟಿಪಿಸಿಆರ್​ ವರದಿ ಕಡ್ಡಾಯವಿಲ್ಲ; ಹೊಸ ಆದೇಶ ಹೊರಡಿಸಿದ ಕೊಡಗು ಡಿಸಿ ಚಾರುಲತಾ

ಮಡಿಕೇರಿ: ಭೂಕುಸಿತ ಸಂತ್ರಸ್ತರ ಗೋಳಾಟ ಕೇಳೋರೇ ಇಲ್ಲ; ಸಿಡಿದೆದ್ದ ಗ್ರಾಮ ಪಂಚಾಯಿತಿ ಸದಸ್ಯರು

(Madikeri Virajpet MLA KG Bopayya slams against Coronavirus Covid19 Test Check Post administration at Kerala Borders)

Published On - 5:42 pm, Fri, 6 August 21

ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​