AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಿಲಿಗೆ ಬೀಗ ಹಾಕಿ, ಬೆಂಕಿಯಿಟ್ಟು ಏಳು ಜನರನ್ನು ಕೊಂದ‌ ವ್ಯಕ್ತಿ ಆತ್ಮಹತ್ಯೆ; ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಆರು ಜನರನ್ನ ಬೆಂಕಿ ಹಚ್ಚಿ ಅಮಾನುಷವಾಗಿ ಕೊಂದ ಬಳಿಕ ಆರೋಪಿ ಬೋಜ ತನ್ನ ಮಗಳಿಗೆ ಕರೆ ಮಾಡಿ ಮಾತನಾಡಿದ ಆಡಿಯೋ ಇದೀಗ ವೈರಲ್ ಆಗಿದೆ. ರಾತ್ರಿ ತನ್ನ ಪತ್ನಿ ಮಲಗಿದ್ದ ಅಳಿಯನ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಆತ ರಾತ್ರಿಯೇ ಮಗಳು ಸುಜಾಳಿಗೆ ಕರೆ ಮಾಡಿದ್ದಾನೆ.

ಬಾಗಿಲಿಗೆ ಬೀಗ ಹಾಕಿ, ಬೆಂಕಿಯಿಟ್ಟು ಏಳು ಜನರನ್ನು ಕೊಂದ‌ ವ್ಯಕ್ತಿ ಆತ್ಮಹತ್ಯೆ; ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ
ಎರವರ ಬೋಜ
preethi shettigar
| Updated By: Skanda|

Updated on: Apr 06, 2021 | 12:06 PM

Share

ಕೊಡಗು: ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ನಾಕೂರು ಸಮೀಪದ ಮುಗುಟಕೇರಿ ಗ್ರಾಮದಲ್ಲಿ ಮೊನ್ನೆ ಏಪ್ರಿಲ್ 3ಕ್ಕೆ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಆರು ಜನರನ್ನು ಕೊಲೆ ಮಾಡಿದ್ದ ಆರೋಪಿ ಎರವರ ಬೋಜ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಾಕೂರು ನರೇಶ್ ಎಂಬುವರ ಕಾಫಿ ತೋಟದಲ್ಲಿ ಇಂದು ಬೆಳಗ್ಗೆ ಬೋಜನ ಮೃತ ದೇಹ ಪತ್ತೆಯಾಗಿದೆ. ಘಟನೆ ಬಳಿಕ ಈತ ವಿಷಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಅಳಿಯನ‌ ಮನೆಯಲ್ಲಿ ಮಲಗಿದ್ದ ತನ್ನ ಪತ್ನಿ ಮತ್ತು ಇತರ ಐವರನ್ನು ಪೆಟ್ರೋಲ್ ಸುರಿದು ಈತ ಬರ್ಬರವಾಗಿ ಕೊಂದಿದ್ದ. ಘಟನೆ ಬಳಿಕ ಬೋಜ ತಲೆಮರೆಸಿಕೊಂಡಿದ್ದ. ಈತನ ಪತ್ತೆಗಾಗಿ ಕೊಡಗು ಪೊಲೀಸ್ ಕಾರ್ಯಾಚರಣೆ ನಡೆಸಿತ್ತು. ಇದರ ಮಧ್ಯೆಯೇ ಬೋಜನ ದೇಹ ಪತ್ತೆಯಾಗಿದೆ. ದೇಹ ಕೊಳೆತ ಸ್ಥಿತಿಯಲ್ಲಿದ್ದು ಘಟನೆ ನಡೆದ ದಿನವೇ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ.

ಕೊಲೆ‌ಪಾತಕಿಯ ಲಾಸ್ಟ್ ಆಡಿಯೋ ಕಾಲ್ ವೈರಲ್ ಆರು ಜನರನ್ನ ಬೆಂಕಿ ಹಚ್ಚಿ ಅಮಾನುಷವಾಗಿ ಕೊಂದ ಬಳಿಕ ಆರೋಪಿ ಬೋಜ ತನ್ನ ಮಗಳಿಗೆ ಕರೆ ಮಾಡಿ ಮಾತನಾಡಿದ ಆಡಿಯೋ ಇದೀಗ ವೈರಲ್ ಆಗಿದೆ. ರಾತ್ರಿ ತನ್ನ ಪತ್ನಿ ಮಲಗಿದ್ದ ಅಳಿಯನ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಆತ ರಾತ್ರಿಯೇ ಮಗಳು ಸುಜಾಳಿಗೆ ಕರೆ ಮಾಡಿದ್ದಾನೆ. ” ನಿನ್ನ ಅಮ್ಮ ಎರಡು ವಾರ ಕರೆದರೂ ಬಂದಿಲ್ಲ, ಅದಕ್ಕೆ ಅವಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದೇನೆ, ಈಗ ಅವಳ ಗೋಳಾಟ ನೋಡು ಹೋಗು” ಎಂದು ಹೇಳಿದ್ದಾನೆ. ಈ ಆಡಿಯೋ ಇದೀಗ ಸಾಮಾಜಿಕ‌ ಜಾಲ‌ತಾಣದಲ್ಲಿ ವೈರಲ್ ಆಗಿದೆ.

ಮತ್ತೋರ್ವ ಗಾಯಾಳು ಸಾವು, ಏಳಕ್ಕೇರಿದ ಸಾವಿನ‌ಸಂಖ್ಯೆ ಜೀವಂತ ದಹನ ಪ್ರಕರಣದಲ್ಲಿ ತೀವ್ರ ಗಾಯಗೊಂಡಿದ್ದ ಭಾಗ್ಯ(40) ಮತ್ತು ಪಾಚೆ(60) ಎಂಬುವವರನ್ನು ಮೈಸೂರಿನ‌ ಕೆ.ಆರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆ ಪೈಕಿ ಭಾಗ್ಯ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇವರ ಇಬ್ಬರು ಮಕ್ಕಳು ಘಟನೆ ನಡೆದ ದಿನವೇ ಸಾವನ್ನಪ್ಪಿದ್ದರು. ಇದೀಗ ಪತ್ನಿ‌ ಮತ್ತು ಇಬ್ಬರು ಮಕ್ಕಳನ್ನು ಕಳೆದುಕೊಂಡು‌ ಅನಾಥವಾಗಿರುವ ಪತಿ ತೋಲನ ಗೋಳು ಮುಗಿಲು ಮುಟ್ಟಿದೆ.

ಇದನ್ನೂ ಓದಿ:

ಪಾನಮತ್ತ ವ್ಯಕ್ತಿಯಿಂದ ಮನೆಗೆ ಬೀಗ ಹಾಕಿ ಬೆಂಕಿ; 6 ವರ್ಷದ ಬಾಲಕಿ ಸೇರಿ ಆರು ಜನರು ಬೆಂಕಿಗೆ ಆಹುತಿ

ಆಸ್ಪತ್ರೆಗೆ ಬೆಂಕಿ ತಗುಲಿ ಹೊತ್ತಿ ಉರಿಯುತ್ತಿದ್ದರೂ.. ರೋಗಿಯನ್ನು ಬಿಟ್ಟು ಹೊರ ಬಾರದ ವೈದ್ಯರು; ಜೀವವನ್ನೇ ಪಣಕ್ಕಿಟ್ಟು ಸರ್ಜರಿ ನಡೆಸಿದರು

(Man Committed suicide after he killed 7 people in Kodagu

ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್