ಕೊಡಗು: ದನಗಳನ್ನು ಕರೆತರಲು ಹೋದ ವ್ಯಕ್ತಿ ಮೇಲೆ ಎರಗಿದ ಕಾಡಾನೆ; ಏಕಾಏಕಿ ದಾಳಿಯಿಂದ ಕಾರ್ಮಿಕ ಸಾವು

ದನಗಳನ್ನು ಕರೆತರಲು ತೋಟಕ್ಕೆ ತೆರಳಿದ್ದಾಗ ಏಕಾಏಕಿ ಆನೆ ದಾಳಿ ಮಾಡಿದೆ ತೀವ್ರವಾಗಿ ಗಾಯಗೊಂಡ ಉಲ್ಲಾಸ್​ರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಉಲ್ಲಾಸ್​ ಮೃತಪಟ್ಟಿದ್ದಾರೆ.

ಕೊಡಗು: ದನಗಳನ್ನು ಕರೆತರಲು ಹೋದ ವ್ಯಕ್ತಿ ಮೇಲೆ ಎರಗಿದ ಕಾಡಾನೆ; ಏಕಾಏಕಿ ದಾಳಿಯಿಂದ ಕಾರ್ಮಿಕ ಸಾವು
ಪ್ರಾತಿನಿಧಿಕ ಚಿತ್ರ
Follow us
| Updated By: preethi shettigar

Updated on:Jul 26, 2021 | 10:07 AM

ಕೊಡಗು: ಆನೆ ದಾಳಿಗೆ ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ನಂಜರಾಯಪಟ್ಟಣ ಪೈಸಾರಿಯಲ್ಲಿ ನಡೆದಿದೆ. ಕೂಲಿ ಕಾರ್ಮಿಕರಾದ ಉಲ್ಲಾಸ್​ (63) ಸಾವನ್ನಪ್ಪಿದ ದುರ್ದೈವಿ. ದನಗಳನ್ನು ಕರೆತರಲು ತೋಟಕ್ಕೆ ತೆರಳಿದ್ದಾಗ ಏಕಾಏಕಿ ಆನೆ ದಾಳಿ ಮಾಡಿದೆ ತೀವ್ರವಾಗಿ ಗಾಯಗೊಂಡ ಉಲ್ಲಾಸ್​ರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಉಲ್ಲಾಸ್​ ಮೃತಪಟ್ಟಿದ್ದಾರೆ. ಸದ್ಯ ಕುಶಾಲನಗರ ಗ್ರಾ‌ಮಾಂತರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಕಾಫಿ ತೋಟಗಳಿಗೆ ಕಾಡಾನೆಗಳ ಲಗ್ಗೆ, ಬೆಳೆ ನಾಶ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಾಳೂರು ಗ್ರಾಮದಲ್ಲಿನ ತೋಟಗಳಿಗೆ ಕಾಡನೆ ದಾಳಿ ಮಾಡಿದ್ದು, ಬೆಳೆ ನಾಶವಾಗಿದೆ. ಬಾಲಕೃಷ್ಣ, ಶರಣು ಪಟೇಲ್ ಎಂಬುವರ ಕಾಫಿ ತೋಟಗಳಲ್ಲಿ ಕಾಡಾನೆಗಳು ಬೀಡುಬಿಟ್ಟಿದ್ದು, ಮೋಟಾರ್, ಪೈಪುಗಳು ಸೇರಿದಂತೆ ಕೃಷಿ ಸಲಕರಣೆಗಳನ್ನು ನಾಶ ಮಾಡಿವೆ. ಕಾಡಾನೆಗಳನ್ನು ಬೇರೆಡೆಗೆ ಸ್ಥಳಾಂತರ ಮಾಡುವಂತೆ ರೈತರು ಆಗ್ರಹಿಸಿದ್ದಾರೆ. ಆದರೆ ಕಾಡಾನೆಗಳನ್ನು ಓಡಿಸಲು ಅರಣ್ಯ ಇಲಾಖೆ ಸಿಬ್ಬಂದಿಗಳು ಹರಸಾಹಸ ಪಡುವಂತಾಗಿದೆ.

ನೆಲಮಂಗಲ: ಮನೆಯ ಮುಂದೆ ಕಟ್ಟಿದ್ದ ನಾಯಿ ಮೇಲೆ ಚಿರತೆಗಳ ದಾಳಿ ಮನೆಯ ಮುಂದೆ ಕಟ್ಟಿದ್ದ ನಾಯಿ ಮೇಲೆ ಚಿರತೆಗಳು ದಾಳಿ ಮಾಡಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ‌ಯ ನೆಲಮಂಗಲ ತಾಲೂಕಿನ ತೊರೆಕೆಂಪೋಹಳ್ಳಿಯಲ್ಲಿ ನಡೆದಿದೆ. ಅನಿಲ್ ಎಂಬುವರಿಗೆ ಸೇರಿದ ನಾಯಿ ಮೇಲೆ ಮುಂಜಾನೆ ಐದು ಗಂಟೆ ವೇಳೆಗೆ ಚಿರತೆಗಳು ದಾಳಿ ನಡೆಸಿವೆ. ಸಾಕು ಪ್ರಾಣಿಗಳ ಮೇಲೆ ಚಿರತೆ ಉಪಟಳಕ್ಕೆ ಗ್ರಾಮಸ್ಥರು ಆತಂಕಗೊಂಡಿದ್ದು, ಮಾಹಿತಿ ನೀಡಿದರೂ ಅರಣ್ಯ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರಾಮನಗರ ಬಿಡದಿ ಬಳಿ 2 ಕಾಡಾನೆಗಳು ಪ್ರತ್ಯಕ್ಷ; ಒಂದು ಆನೆಗೆ ರೈಲು ಗುದ್ದಿರುವ ಅನುಮಾನ

Mumbai: ನಿರ್ಮಾಣ ಹಂತದಲ್ಲಿದ್ದ ಲಿಫ್ಟ್​ ಕುಸಿದುಬಿದ್ದು 6 ಮಂದಿ ಸಾವು; ಗುತ್ತಿಗೆದಾರ, ಮೇಲ್ವಿಚಾರಕ ಅರೆಸ್ಟ್​

Published On - 9:54 am, Mon, 26 July 21

ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು