AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Earthquake: ಕೊಡಗು, ದಕ್ಷಿಣ ಕನ್ನಡ ಜಿಲ್ಲೆಯ ಗಡಿಯಲ್ಲಿ ಮತ್ತೆ ಲಘು ಭೂಕಂಪದ ಅನುಭವ

ಕೊಡಗು, ದಕ್ಷಿಣ ಕನ್ನಡ ಜಿಲ್ಲೆಯ ಗಡಿಯಲ್ಲಿ ಮತ್ತೆ ಭೂಕಂಪದ ಅನುಭವವಾಗಿದೆ. ಚೆಂಬು, ಪೆರಾಜೆ, ಗೂನಡ್ಕ ವ್ಯಾಪ್ತಿಯಲ್ಲಿ ಲಘು ಭೂಕಂಪ ಸಂಭವಿದೆ.

Earthquake: ಕೊಡಗು, ದಕ್ಷಿಣ ಕನ್ನಡ ಜಿಲ್ಲೆಯ ಗಡಿಯಲ್ಲಿ ಮತ್ತೆ ಲಘು ಭೂಕಂಪದ ಅನುಭವ
Earthquake
TV9 Web
| Edited By: |

Updated on:Jul 11, 2022 | 5:04 PM

Share

ಕೊಡಗು, ದಕ್ಷಿಣ ಕನ್ನಡ ಜಿಲ್ಲೆಯ ಗಡಿಯಲ್ಲಿ ಮತ್ತೆ ಭೂಕಂಪದ ಅನುಭವವಾಗಿದೆ. ಚೆಂಬು, ಪೆರಾಜೆ, ಗೂನಡ್ಕ ವ್ಯಾಪ್ತಿಯಲ್ಲಿ ಲಘು ಭೂಕಂಪ ಸಂಭವಿದೆ. ಸಂಜೆ 4.01 ನಿಮಿಷಕ್ಕೆ ಭೂಮಿ ಕಂಪಿಸಿದ ಅನುಭವವವಾಗಿದ್ದು, ನಿನ್ನೆಯೂ ಇದೇ ಭಾಗದಲ್ಲಿ ಭೂಮಿ ಕಂಪಿಸಿದ ಅನುಭವವಾಗಿತ್ತು.

ಇದು ಈ ಭಾಗದಲ್ಲಿ ನಡೆಯುತ್ತಿರುವ 9ನೇ ಕಂಪನವಾಗಿದೆ. ದೊಡ್ಡ ಸದ್ದಿನೊಂದಿಗೆ ಭೂಮಿ ಕಂಪಿಸಿದ್ದು, ಮನೆಯಲ್ಲಿದ್ದವರು ಭಯದಿಂದ ಹೊರಗೋಡಿ ಬಂದರು ಎಂದು ತಿಳಿದುಬಂದಿದೆ.

ಕಳೆದ ಕೆಲವು ದಿನಗಳಿಂದ ಕೊಡಗು ಹಾಗೂ ದಕ್ಷಿಣ ಕನ್ನಡ ಭಾಗಗಳಲ್ಲಿ ವ್ಯಾಪಕ ಮಳೆ ಸುರಿಯುತ್ತಿದೆ. ಜುಲೈ 10ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕು ಹಾಗೂ ಕೊಡಗು ಜಿಲ್ಲೆ ಮಡಿಕೇರಿ ಪ್ರದೇಶದ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿತ್ತು.

ಬೆಳಗ್ಗೆ 6.22ಕ್ಕೆ ಸಂಭವಿಸಿದ ಲಘು ಭೂಕಂಪದ ಕೇಂದ್ರ ಸುಳ್ಯ ತಾಲೂಕಿನ ಅರಂತೋಡು ಎಂದು ಕರ್ನಾಟಕ ಸ್ಟೇಟ್‌ ಡಿಸಾಸ್ಟರ್‌ ಮಾನಿಟರಿಂಗ್‌ ಸೆಂಟರ್‌  ಮಾಹಿತಿ ನೀಡಿತ್ತು.

ಬೆಳಗ್ಗೆ 6 ಗಂಟೆ 22 ನಿಮಿಷ 30 ಸೆಕೆಂಡ್‌ಗೆ ಕಂಪನದ ಅನುಭವವಾಗಿತ್ತು, ಕಂಪನದ ಪರಿಮಾಣ 1.8 ಇತ್ತು. ಅರಂತೋಡು ಗ್ರಾಮದ 1.1 ಕಿ.ಮೀ. ಪರಿಸರದಲ್ಲಿ 10 ಕಿ.ಮೀ. ಆಳದಲ್ಲಿ ಕಂಪನ ಉಂಟಾಗಿದೆ ಎಂದು ರಿಕ್ಟರ್‌ ಮಾಪಕದ ಅಂಕಿ ಅಂಶಗಳ ಪ್ರಕಾರ ಕೆಎಸ್‌ಎನ್‌ಡಿಎಂಸಿ ಹೇಳಿದೆ.

Published On - 5:00 pm, Mon, 11 July 22

Follow Us
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ