AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾಂತ ಶಿವಾಚಾರ್ಯ ಘರ್ ವಾಪಸಿ ಕೆಲಸ ಮಾಡಲಿ: ಸಂಸದ ಪ್ರತಾಪ್ ಸಿಂಹ ಸವಾಲು

ಮಡಿಕೇರಿಯಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ಸ್ವಾಮೀಜಿಗಳು ಒಂದೊಂದು ಮಠಕ್ಕೆ ಸೀಮಿತವಾಗಬಾರದು. ಹಿಂದೂ ಸಮಾಜವನ್ನು ಸಂಘಟಿಸಿ, ಮತಾಂತರದ ವಿರುದ್ಧ ಧ್ವನಿ ಎತ್ತಬೇಕು ಎಂದು ಆಗ್ರಹಿಸಿದರು.

ಮಹಾಂತ ಶಿವಾಚಾರ್ಯ ಘರ್ ವಾಪಸಿ ಕೆಲಸ ಮಾಡಲಿ: ಸಂಸದ ಪ್ರತಾಪ್ ಸಿಂಹ ಸವಾಲು
ಸುಲಫಲ ಮಠದ ಮಹಾಂತ ಶಿವಾಚಾರ್ಯ ಸ್ವಾಮೀಜಿ ಮತ್ತು ಸಂಸದ ಪ್ರತಾಪ್ ಸಿಂಹ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Nov 23, 2021 | 9:46 PM

Share

ಮಡಿಕೇರಿ: ಮಹಾಂತ ಶಿವಾಚಾರ್ಯ ಸ್ವಾಮೀಜಿ ಘರ್ ವಾಪಸಿ ಕೆಲಸ ಮಾಡಲಿ. ಕಲಬುರ್ಗಿಯಲ್ಲಿ ಬಹಳಷ್ಟು ಜನರು ಮತಾಂತರವಾಗಿದ್ದಾರೆ. ಅವರನ್ನು ಮರಳಿ ಮಾತೃ ಧರ್ಮಕ್ಕೆ ಕರೆತರಲಿ. ಆಗ ನಾನೇ ಕಲಬುರ್ಗಿಗೆ ತೆರಳಿ ಶ್ರೀಗಳ ಪಾದಪೂಜೆ ಮಾಡುತ್ತೇನೆ. ಅವರ ಪಾದುಕೆಯನ್ನು ತಲೆ ಮೇಲಿಟ್ಟುಕೊಂಡು ಮೆರವಣಿಗೆ ಮಾಡುತ್ತೇನೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು. ಮಡಿಕೇರಿಯಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ಸ್ವಾಮೀಜಿಗಳು ಒಂದೊಂದು ಮಠಕ್ಕೆ ಸೀಮಿತವಾಗಬಾರದು. ಹಿಂದೂ ಸಮಾಜವನ್ನು ಸಂಘಟಿಸಿ, ಮತಾಂತರದ ವಿರುದ್ಧ ಧ್ವನಿ ಎತ್ತಬೇಕು ಎಂದು ಆಗ್ರಹಿಸಿದರು.

ಕ್ರಿಪ್ಟೊಕರೆನ್ಸಿ ವಿಚಾರವಾಗಿ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಹೆಸರಿನ ಬಗ್ಗೆ ಸಂಸದ ಪ್ರತಾಪ್​ ಸಿಂಹ ಮಾಡಿದ್ದ ಆರೋಪಗಳನ್ನು ಖಂಡಿಸಿ ಕಲಬುರ್ಗಿಯ ಕಾಂಗ್ರೆಸ್ ಕಾರ್ಯಕರ್ತರು ಕೆಲ ದಿನಗಳ ಹಿಂದೆ ಪ್ರತಿಭಟನಾ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಪಾಲ್ಗೊಂಡಿದ್ದ ಸುಲಫಲ ಮಠದ ಮಹಾಂತ ಶಿವಾಚಾರ್ಯ ಸ್ವಾಮೀಜಿ ‘ಪ್ರತಾಪ್ ಸಿಂಹ 15 ದಿನಗಳಲ್ಲಿ ಕ್ಷಮೆ ಕೇಳದಿದ್ದರೆ ಮೈಸೂರಿನ ಅವರ ಮನೆಗೇ ಹೋಗಿ ಅವರಿಗೆ …. ಹೊಡೆಯಬೇಕಾಗುತ್ತದೆ’ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು.

‘ದಲಿತರ ಬಗ್ಗೆ ಮಾತನಾಡುವಾಗ ನಿಮ್ಮ ನಾಲಿಗೆಯನ್ನು ಹಿಡಿತದಲ್ಲಿಟ್ಟುಕೊಂಡು ಮಾತನಾಡಬೇಕು. ನನ್ನದು ಆವೇಶದ ಮಾತುಗಳಲ್ಲ. ದಲಿತರು ಸಾವಿರಾರು ವರ್ಷಗಳ ಕಾಲ ಶೋಷಣೆಗೊಳಗಾದವರು’ ಎಂದು ಹೇಳಿದ್ದರು. ಸ್ವಾಮೀಜಿ ಮಾತು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಸುಲಫಲ ಶ್ರೀಗಳ ಮಾತಿಗೆ ವ್ಯಾಪಕ ಖಂಡನೆಯೂ ವ್ಯಕ್ತವಾಗಿತ್ತು. ಆಂದೋಲಾ ಮಠದ ಸಿದ್ದಲಿಂಗ ಸ್ವಾಮೀಜಿ ಪ್ರತಿಕ್ರಿಯಿಸಿ, ಪ್ರತಾಪ ಸಿಂಹಗೆ … ಹೊಡೀರಿ ನೋಡೋಣ. ಅವರಿಗೆ ಹೊಡೆದು ಬಂದರೆ ನಿಮ್ಮ ಕಾವಿಗೆ ಗೌರವ ಕೊಡ್ತೀನಿ. ಬೇಡರತ್ತಾಗಿ ಕ್ಷಮೆ ಕೇಳದಿದ್ದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದರು.

ಇದನ್ನೂ ಓದಿ: ‘ಪ್ರಧಾನಿ ಮೋದಿ ಹುಟ್ಟಿನ ಬಗ್ಗೆ ಪ್ರಿಯಾಂಕ್ ಅವಹೇಳಕಾರಿಯಾಗಿ ಮಾತಾಡಿದ್ದರು, ಆಗ ಎಲ್ಲಿ ಹೋಗಿದ್ದಿರಿ ಸಾರಂಗಧರ ಸ್ವಾಮಿಗಳೇ?’ ಇದನ್ನೂ ಓದಿ: ಕಾಂಗ್ರೆಸ್​ಗೆ ಅಧಿಕಾರ ಕೊಟ್ಟರೆ ಕನ್ನಡಿಗರ ಸರ್ಕಾರ ಇರಲ್ಲ, ತಾಲಿಬಾನ್ ಸರ್ಕಾರ ಬರುತ್ತೆ -ಸಂಸದ ಪ್ರತಾಪ್ ಸಿಂಹ

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು