AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾಂತ ಶಿವಾಚಾರ್ಯ ಘರ್ ವಾಪಸಿ ಕೆಲಸ ಮಾಡಲಿ: ಸಂಸದ ಪ್ರತಾಪ್ ಸಿಂಹ ಸವಾಲು

ಮಡಿಕೇರಿಯಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ಸ್ವಾಮೀಜಿಗಳು ಒಂದೊಂದು ಮಠಕ್ಕೆ ಸೀಮಿತವಾಗಬಾರದು. ಹಿಂದೂ ಸಮಾಜವನ್ನು ಸಂಘಟಿಸಿ, ಮತಾಂತರದ ವಿರುದ್ಧ ಧ್ವನಿ ಎತ್ತಬೇಕು ಎಂದು ಆಗ್ರಹಿಸಿದರು.

ಮಹಾಂತ ಶಿವಾಚಾರ್ಯ ಘರ್ ವಾಪಸಿ ಕೆಲಸ ಮಾಡಲಿ: ಸಂಸದ ಪ್ರತಾಪ್ ಸಿಂಹ ಸವಾಲು
ಸುಲಫಲ ಮಠದ ಮಹಾಂತ ಶಿವಾಚಾರ್ಯ ಸ್ವಾಮೀಜಿ ಮತ್ತು ಸಂಸದ ಪ್ರತಾಪ್ ಸಿಂಹ
TV9 Web
| Edited By: |

Updated on: Nov 23, 2021 | 9:46 PM

Share

ಮಡಿಕೇರಿ: ಮಹಾಂತ ಶಿವಾಚಾರ್ಯ ಸ್ವಾಮೀಜಿ ಘರ್ ವಾಪಸಿ ಕೆಲಸ ಮಾಡಲಿ. ಕಲಬುರ್ಗಿಯಲ್ಲಿ ಬಹಳಷ್ಟು ಜನರು ಮತಾಂತರವಾಗಿದ್ದಾರೆ. ಅವರನ್ನು ಮರಳಿ ಮಾತೃ ಧರ್ಮಕ್ಕೆ ಕರೆತರಲಿ. ಆಗ ನಾನೇ ಕಲಬುರ್ಗಿಗೆ ತೆರಳಿ ಶ್ರೀಗಳ ಪಾದಪೂಜೆ ಮಾಡುತ್ತೇನೆ. ಅವರ ಪಾದುಕೆಯನ್ನು ತಲೆ ಮೇಲಿಟ್ಟುಕೊಂಡು ಮೆರವಣಿಗೆ ಮಾಡುತ್ತೇನೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು. ಮಡಿಕೇರಿಯಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ಸ್ವಾಮೀಜಿಗಳು ಒಂದೊಂದು ಮಠಕ್ಕೆ ಸೀಮಿತವಾಗಬಾರದು. ಹಿಂದೂ ಸಮಾಜವನ್ನು ಸಂಘಟಿಸಿ, ಮತಾಂತರದ ವಿರುದ್ಧ ಧ್ವನಿ ಎತ್ತಬೇಕು ಎಂದು ಆಗ್ರಹಿಸಿದರು.

ಕ್ರಿಪ್ಟೊಕರೆನ್ಸಿ ವಿಚಾರವಾಗಿ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಹೆಸರಿನ ಬಗ್ಗೆ ಸಂಸದ ಪ್ರತಾಪ್​ ಸಿಂಹ ಮಾಡಿದ್ದ ಆರೋಪಗಳನ್ನು ಖಂಡಿಸಿ ಕಲಬುರ್ಗಿಯ ಕಾಂಗ್ರೆಸ್ ಕಾರ್ಯಕರ್ತರು ಕೆಲ ದಿನಗಳ ಹಿಂದೆ ಪ್ರತಿಭಟನಾ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಪಾಲ್ಗೊಂಡಿದ್ದ ಸುಲಫಲ ಮಠದ ಮಹಾಂತ ಶಿವಾಚಾರ್ಯ ಸ್ವಾಮೀಜಿ ‘ಪ್ರತಾಪ್ ಸಿಂಹ 15 ದಿನಗಳಲ್ಲಿ ಕ್ಷಮೆ ಕೇಳದಿದ್ದರೆ ಮೈಸೂರಿನ ಅವರ ಮನೆಗೇ ಹೋಗಿ ಅವರಿಗೆ …. ಹೊಡೆಯಬೇಕಾಗುತ್ತದೆ’ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು.

‘ದಲಿತರ ಬಗ್ಗೆ ಮಾತನಾಡುವಾಗ ನಿಮ್ಮ ನಾಲಿಗೆಯನ್ನು ಹಿಡಿತದಲ್ಲಿಟ್ಟುಕೊಂಡು ಮಾತನಾಡಬೇಕು. ನನ್ನದು ಆವೇಶದ ಮಾತುಗಳಲ್ಲ. ದಲಿತರು ಸಾವಿರಾರು ವರ್ಷಗಳ ಕಾಲ ಶೋಷಣೆಗೊಳಗಾದವರು’ ಎಂದು ಹೇಳಿದ್ದರು. ಸ್ವಾಮೀಜಿ ಮಾತು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಸುಲಫಲ ಶ್ರೀಗಳ ಮಾತಿಗೆ ವ್ಯಾಪಕ ಖಂಡನೆಯೂ ವ್ಯಕ್ತವಾಗಿತ್ತು. ಆಂದೋಲಾ ಮಠದ ಸಿದ್ದಲಿಂಗ ಸ್ವಾಮೀಜಿ ಪ್ರತಿಕ್ರಿಯಿಸಿ, ಪ್ರತಾಪ ಸಿಂಹಗೆ … ಹೊಡೀರಿ ನೋಡೋಣ. ಅವರಿಗೆ ಹೊಡೆದು ಬಂದರೆ ನಿಮ್ಮ ಕಾವಿಗೆ ಗೌರವ ಕೊಡ್ತೀನಿ. ಬೇಡರತ್ತಾಗಿ ಕ್ಷಮೆ ಕೇಳದಿದ್ದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದರು.

ಇದನ್ನೂ ಓದಿ: ‘ಪ್ರಧಾನಿ ಮೋದಿ ಹುಟ್ಟಿನ ಬಗ್ಗೆ ಪ್ರಿಯಾಂಕ್ ಅವಹೇಳಕಾರಿಯಾಗಿ ಮಾತಾಡಿದ್ದರು, ಆಗ ಎಲ್ಲಿ ಹೋಗಿದ್ದಿರಿ ಸಾರಂಗಧರ ಸ್ವಾಮಿಗಳೇ?’ ಇದನ್ನೂ ಓದಿ: ಕಾಂಗ್ರೆಸ್​ಗೆ ಅಧಿಕಾರ ಕೊಟ್ಟರೆ ಕನ್ನಡಿಗರ ಸರ್ಕಾರ ಇರಲ್ಲ, ತಾಲಿಬಾನ್ ಸರ್ಕಾರ ಬರುತ್ತೆ -ಸಂಸದ ಪ್ರತಾಪ್ ಸಿಂಹ

ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?