AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾಂತ ಶಿವಾಚಾರ್ಯ ಘರ್ ವಾಪಸಿ ಕೆಲಸ ಮಾಡಲಿ: ಸಂಸದ ಪ್ರತಾಪ್ ಸಿಂಹ ಸವಾಲು

ಮಡಿಕೇರಿಯಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ಸ್ವಾಮೀಜಿಗಳು ಒಂದೊಂದು ಮಠಕ್ಕೆ ಸೀಮಿತವಾಗಬಾರದು. ಹಿಂದೂ ಸಮಾಜವನ್ನು ಸಂಘಟಿಸಿ, ಮತಾಂತರದ ವಿರುದ್ಧ ಧ್ವನಿ ಎತ್ತಬೇಕು ಎಂದು ಆಗ್ರಹಿಸಿದರು.

ಮಹಾಂತ ಶಿವಾಚಾರ್ಯ ಘರ್ ವಾಪಸಿ ಕೆಲಸ ಮಾಡಲಿ: ಸಂಸದ ಪ್ರತಾಪ್ ಸಿಂಹ ಸವಾಲು
ಸುಲಫಲ ಮಠದ ಮಹಾಂತ ಶಿವಾಚಾರ್ಯ ಸ್ವಾಮೀಜಿ ಮತ್ತು ಸಂಸದ ಪ್ರತಾಪ್ ಸಿಂಹ
TV9 Web
| Edited By: |

Updated on: Nov 23, 2021 | 9:46 PM

Share

ಮಡಿಕೇರಿ: ಮಹಾಂತ ಶಿವಾಚಾರ್ಯ ಸ್ವಾಮೀಜಿ ಘರ್ ವಾಪಸಿ ಕೆಲಸ ಮಾಡಲಿ. ಕಲಬುರ್ಗಿಯಲ್ಲಿ ಬಹಳಷ್ಟು ಜನರು ಮತಾಂತರವಾಗಿದ್ದಾರೆ. ಅವರನ್ನು ಮರಳಿ ಮಾತೃ ಧರ್ಮಕ್ಕೆ ಕರೆತರಲಿ. ಆಗ ನಾನೇ ಕಲಬುರ್ಗಿಗೆ ತೆರಳಿ ಶ್ರೀಗಳ ಪಾದಪೂಜೆ ಮಾಡುತ್ತೇನೆ. ಅವರ ಪಾದುಕೆಯನ್ನು ತಲೆ ಮೇಲಿಟ್ಟುಕೊಂಡು ಮೆರವಣಿಗೆ ಮಾಡುತ್ತೇನೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು. ಮಡಿಕೇರಿಯಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ಸ್ವಾಮೀಜಿಗಳು ಒಂದೊಂದು ಮಠಕ್ಕೆ ಸೀಮಿತವಾಗಬಾರದು. ಹಿಂದೂ ಸಮಾಜವನ್ನು ಸಂಘಟಿಸಿ, ಮತಾಂತರದ ವಿರುದ್ಧ ಧ್ವನಿ ಎತ್ತಬೇಕು ಎಂದು ಆಗ್ರಹಿಸಿದರು.

ಕ್ರಿಪ್ಟೊಕರೆನ್ಸಿ ವಿಚಾರವಾಗಿ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಹೆಸರಿನ ಬಗ್ಗೆ ಸಂಸದ ಪ್ರತಾಪ್​ ಸಿಂಹ ಮಾಡಿದ್ದ ಆರೋಪಗಳನ್ನು ಖಂಡಿಸಿ ಕಲಬುರ್ಗಿಯ ಕಾಂಗ್ರೆಸ್ ಕಾರ್ಯಕರ್ತರು ಕೆಲ ದಿನಗಳ ಹಿಂದೆ ಪ್ರತಿಭಟನಾ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಪಾಲ್ಗೊಂಡಿದ್ದ ಸುಲಫಲ ಮಠದ ಮಹಾಂತ ಶಿವಾಚಾರ್ಯ ಸ್ವಾಮೀಜಿ ‘ಪ್ರತಾಪ್ ಸಿಂಹ 15 ದಿನಗಳಲ್ಲಿ ಕ್ಷಮೆ ಕೇಳದಿದ್ದರೆ ಮೈಸೂರಿನ ಅವರ ಮನೆಗೇ ಹೋಗಿ ಅವರಿಗೆ …. ಹೊಡೆಯಬೇಕಾಗುತ್ತದೆ’ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು.

‘ದಲಿತರ ಬಗ್ಗೆ ಮಾತನಾಡುವಾಗ ನಿಮ್ಮ ನಾಲಿಗೆಯನ್ನು ಹಿಡಿತದಲ್ಲಿಟ್ಟುಕೊಂಡು ಮಾತನಾಡಬೇಕು. ನನ್ನದು ಆವೇಶದ ಮಾತುಗಳಲ್ಲ. ದಲಿತರು ಸಾವಿರಾರು ವರ್ಷಗಳ ಕಾಲ ಶೋಷಣೆಗೊಳಗಾದವರು’ ಎಂದು ಹೇಳಿದ್ದರು. ಸ್ವಾಮೀಜಿ ಮಾತು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಸುಲಫಲ ಶ್ರೀಗಳ ಮಾತಿಗೆ ವ್ಯಾಪಕ ಖಂಡನೆಯೂ ವ್ಯಕ್ತವಾಗಿತ್ತು. ಆಂದೋಲಾ ಮಠದ ಸಿದ್ದಲಿಂಗ ಸ್ವಾಮೀಜಿ ಪ್ರತಿಕ್ರಿಯಿಸಿ, ಪ್ರತಾಪ ಸಿಂಹಗೆ … ಹೊಡೀರಿ ನೋಡೋಣ. ಅವರಿಗೆ ಹೊಡೆದು ಬಂದರೆ ನಿಮ್ಮ ಕಾವಿಗೆ ಗೌರವ ಕೊಡ್ತೀನಿ. ಬೇಡರತ್ತಾಗಿ ಕ್ಷಮೆ ಕೇಳದಿದ್ದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದರು.

ಇದನ್ನೂ ಓದಿ: ‘ಪ್ರಧಾನಿ ಮೋದಿ ಹುಟ್ಟಿನ ಬಗ್ಗೆ ಪ್ರಿಯಾಂಕ್ ಅವಹೇಳಕಾರಿಯಾಗಿ ಮಾತಾಡಿದ್ದರು, ಆಗ ಎಲ್ಲಿ ಹೋಗಿದ್ದಿರಿ ಸಾರಂಗಧರ ಸ್ವಾಮಿಗಳೇ?’ ಇದನ್ನೂ ಓದಿ: ಕಾಂಗ್ರೆಸ್​ಗೆ ಅಧಿಕಾರ ಕೊಟ್ಟರೆ ಕನ್ನಡಿಗರ ಸರ್ಕಾರ ಇರಲ್ಲ, ತಾಲಿಬಾನ್ ಸರ್ಕಾರ ಬರುತ್ತೆ -ಸಂಸದ ಪ್ರತಾಪ್ ಸಿಂಹ

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?