AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾರಾಯಣ ಆಚಾರರ ಮನೆಯಲ್ಲಿ ಚಿನ್ನ ಸಿಕ್ಕಿಲ್ಲ, ಸುಳ್ಳು ಸುದ್ದಿ ನಂಬಬೇಡಿ: ಸೋಮಣ್ಣ

ಕಳೆದ ಕೆಲವು ದಿನಗಳಿಂದ ಕೊಡಗಿನಲ್ಲಿ ವಾಸ್ತವ್ಯ ಹೂಡಿ ನೆರೆ ಪರಿಹಾರ ಕೆಲಸಗಳನ್ನು ನೋಡಿಕೊಳ್ಳುತ್ತಿರುವ ಸಚಿವ ವಿ ಸೋಮಣ್ಣ ಇಂದು ಟಿವಿ9ನೊಂದಿಗೆ ಮಾತಾಡಿ ಜಿಲ್ಲೆಯಲ್ಲಿನ ಪರಿಸ್ಥಿತಿ ಹಾಗೂ ತಲಕಾವೇರಿಯಲ್ಲಿ ಬ್ರಹ್ಮಗಿರಿಬೆಟ್ಟ ಕುಸಿತದಿಂದಾದ ದುರಂತದ ಬಗ್ಗೆ ವಿವರಿಸಿದರು. ರವಿವಾರದಂದು ಆನಂದ ತೀರ್ಥ ಅವರ ಮೃತದೇಹ ಪತ್ತೆಯಾದ ನಂತರ ನಾರಾಯಣ ಆಚಾರ್ ಅವರ ಬಗ್ಗೆ ಒಂದಿಷ್ಟು ಕುರುಹು ಸಿಕ್ಕಿತ್ತು. ಆನಂದರ ದೇಹ ದೊರೆತ ಸುಮಾರು ಎರಡು ಕಿಲೊಮೀಟರುಗಳಷ್ಟು ದೂರ ನಾಗತೀರ್ಥ ಎಂಬಲ್ಲಿ ನಾರಾಯಣ ಆಚಾರರ ದೇಹ ಸಿಕ್ಕಿದೆ, ಎಂದು ಸೋಮಣ್ಣ ಹೇಳಿದರು. […]

ನಾರಾಯಣ ಆಚಾರರ ಮನೆಯಲ್ಲಿ ಚಿನ್ನ ಸಿಕ್ಕಿಲ್ಲ, ಸುಳ್ಳು ಸುದ್ದಿ ನಂಬಬೇಡಿ: ಸೋಮಣ್ಣ
ಅರುಣ್​ ಕುಮಾರ್​ ಬೆಳ್ಳಿ
|

Updated on: Aug 11, 2020 | 7:00 PM

Share

ಕಳೆದ ಕೆಲವು ದಿನಗಳಿಂದ ಕೊಡಗಿನಲ್ಲಿ ವಾಸ್ತವ್ಯ ಹೂಡಿ ನೆರೆ ಪರಿಹಾರ ಕೆಲಸಗಳನ್ನು ನೋಡಿಕೊಳ್ಳುತ್ತಿರುವ ಸಚಿವ ವಿ ಸೋಮಣ್ಣ ಇಂದು ಟಿವಿ9ನೊಂದಿಗೆ ಮಾತಾಡಿ ಜಿಲ್ಲೆಯಲ್ಲಿನ ಪರಿಸ್ಥಿತಿ ಹಾಗೂ ತಲಕಾವೇರಿಯಲ್ಲಿ ಬ್ರಹ್ಮಗಿರಿಬೆಟ್ಟ ಕುಸಿತದಿಂದಾದ ದುರಂತದ ಬಗ್ಗೆ ವಿವರಿಸಿದರು.

ರವಿವಾರದಂದು ಆನಂದ ತೀರ್ಥ ಅವರ ಮೃತದೇಹ ಪತ್ತೆಯಾದ ನಂತರ ನಾರಾಯಣ ಆಚಾರ್ ಅವರ ಬಗ್ಗೆ ಒಂದಿಷ್ಟು ಕುರುಹು ಸಿಕ್ಕಿತ್ತು. ಆನಂದರ ದೇಹ ದೊರೆತ ಸುಮಾರು ಎರಡು ಕಿಲೊಮೀಟರುಗಳಷ್ಟು ದೂರ ನಾಗತೀರ್ಥ ಎಂಬಲ್ಲಿ ನಾರಾಯಣ ಆಚಾರರ ದೇಹ ಸಿಕ್ಕಿದೆ, ಎಂದು ಸೋಮಣ್ಣ ಹೇಳಿದರು.

ಆಚಾರರ ದೇಹ ಹುಡುಕುವಲ್ಲಿ ಎನ್.ಡಿ.ಆರ್.ಎಫ್ ತಂಡ ಪಟ್ಟ ಶ್ರಮ ಶ್ಲಾಘನೀಯ ಎಂದು ಸೋಮಣ್ಣ ತಂಡವನ್ನು ಕೊಂಡಾಡಿದರು.

ಇವತ್ತೇ ನಾರಾಯಣ ಆಚಾರ್ಯರ ಅಂತ್ಯ ಸಂಸ್ಕಾರ ನಡೆಯಲಿದೆ, ಕಾಣೆಯಾಗಿರುವ ಇತರ ಮೂವರಿಗಾಗಿ ಶೋಧಕಾರ್ಯ ಮುಂದುವರಿದಿದೆ. ನಾರಾಯಣ ಆಚಾರ್ ಅವರ ಮನೆಯಲ್ಲಿ ಅಪಾರ ಚಿನ್ನ ಇದೆ ಅನ್ನೋದು ಊಹಾಪೋಹ. ಹಳೆ ನಾಣ್ಯಗಳು ಸಿಕ್ಕಿರೋದು ನಿಜ. ಅವರು ಸಾಮಾನ್ಯ ಜೀವನ ಮಾಡುತ್ತಿದ್ದರು, ಅವರ ಕುಟುಂಬ ತಂಬಾ ದುಖಃದಲ್ಲಿದೆ, ಸುಳ್ಳು ಆರೋಪಗಳು ಅವರಿಗೆ ಇನ್ನಷ್ಟು ನೋವುಂಟು ಮಾಡುತ್ತವೆ. ದಯವಿಟ್ಟು ಇಲ್ಲ ಸಲ್ಲದ ಅಪವಾದಗಳಿಗೆ ಕಿವಿಗೊಡಬೇಡಿ,” ಎಂದು ಸಚಿವರು ಹೇಳಿದರು.

ಬುಧವಾರ ಮತ್ತು ಗುರುವಾರ ಬೆಂಗಳೂರಿನಲ್ಲಿ ಕೊವಿಡ್ ಸಭೆ ನಿಗದಿಯಾಗಿರುವುದರಿಂದ ತಾನು ರಾಜಧಾನಿಗೆ ಮರಳತ್ತಿರುವ ಬಗ್ಗೆ ಹೇಳಿದ ಸಚಿವರು, ಶುಕ್ರವಾರವಾರದಂದು ಕೊಡಗಿಗೆ ವಾಪಸ್ಸಾಗುವುದಾಗಿ ಹೇಳಿದರು. ಅವರ ಅನುಪಸ್ಥಿತಿಯಲ್ಲಿ ಶಾಸಕ ಬೋಪಯ್ಯ ನೆರೆ ಪರಿಹಾರ ಕೆಲಸಗಳನ್ನು ನೋಡಿಕೊಳ್ಳುತ್ತಾರೆಂದು ಸಹ ಸೋಮಣ್ಣ ಟಿವಿ9ಗೆ ತಿಳಿಸಿದರು

         

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು